Homeಮುಖಪುಟಮರೆಯಲಾಗದ ಮಿನುಗುತಾರೆ ಕಲ್ಪನಾ ನಮ್ಮನಗಲಿದ ದಿನವಿಂದು

ಮರೆಯಲಾಗದ ಮಿನುಗುತಾರೆ ಕಲ್ಪನಾ ನಮ್ಮನಗಲಿದ ದಿನವಿಂದು

ಹಣ್ಣೆಲೆ ಚಿಗುರಿದಾಗ, ಮುಕ್ತಿ, ಶರಪಂಜರ, ಮಿನುಗುತಾರೆ ಚಿತ್ರಗಳ ಮೂಲಕ ಗಮನ ಸೆಳೆದ ನಟಿ ಕಲ್ಪನಾರವರು ಕಣ್ಮರೆಯಾಗಿ ಇಂದಿಗೆ 41 ವರ್ಷ. ಆ ನೆನಪಿನಲ್ಲಿ ಅವರ ಕುರಿತು ಒಂದಿಷ್ಟು...

- Advertisement -
- Advertisement -

ಅಪರೂಪದ ಪಾತ್ರಗಳ ಮೂಲಕ ಕನ್ನಡ ನಾಡಿನಾಚೆಗೂ ತಮ್ಮ ಛಾಪು ಮೂಡಿಸಿದ ಮೇರು ತಾರೆ ಕಲ್ಪನಾ. ಅವರು ನಮ್ಮನ್ನಗಲಿ ಈ ಹೊತ್ತಿಗೆ (ಮೇ 12) ನಲವತ್ತೊಂದು ವರ್ಷ.

***

“ನನ್ನ ಇದುವರೆಗಿನ ಈ ಚಿತ್ರರಂಗದ ಅನುಭವವನ್ನು ಯಾವುದಾದರೊಂದು ಶಿಲ್ಪದಲ್ಲಿ ಕಡೆಯಬೇಕೆಂಬ ಮಹದಾಸೆ ಇತ್ತು. ಆ ಯೋಗ್ಯತೆಯನ್ನು ಕಲ್ಪನಾಳಲ್ಲಿ ಗುರುತಿಸಿದೆ. ಆಕೆಗೆ ನನ್ನ ಶಕ್ತಿಯನ್ನು ಧಾರೆ ಎರೆದೆ. ಅವಳು ಅದನ್ನು ಪ್ರೀತಿ, ಭಕ್ತಿಯಿಂದ ಸ್ವೀಕರಿಸಿ ನನ್ನ ಕಲ್ಪನೆಯ ಶಿಲ್ಪವಾಗಿದ್ದಾಳೆ. ಅಲ್ಲದೆ ನನ್ನ ಬಗ್ಗೆ ಅತ್ಯಂತ ಕೃತಜ್ಞತಾ ಭಾವ ಇರಿಸಿದ್ದಾಳೆ’ ಎಂದು ಕಲ್ಪನಾ ಕುರಿತಾಗಿ ಹೇಳಿದ್ದರು ನಿರ್ದೇಶಕ ಪುಟ್ಟಣ್ಣ ಕಣಗಾಲ್. ಕನ್ನಡ ಚಿತ್ರರಂಗ ಕಂಡ ಪ್ರಮುಖ ನಾಯಕನಟಿ ಕಲ್ಪನಾ ಕಣ್ಮರೆಯಾಗಿ (1979, ಮೇ 12) ಇಂದಿಗೆ 41 ವರ್ಷಗಳು ಸಂದವು.

‘ಸಾಕುಮಗಳು’ (1963) ಚಿತ್ರದೊಂದಿಗೆ ಬೆಳ್ಳಿತೆರೆ ಪ್ರವೇಶಿಸಿದ ಕಲ್ಪನಾ ಸುಮಾರು ಒಂದು ದಶಕಗಳ ಕಾಲ ಕನ್ನಡ ಚಿತ್ರಜಗತ್ತಿನಲ್ಲಿ ರಾರಾಜಿಸಿದರು. ಏಕಮೇವಾದ್ವಿತೀಯ ನಟಿ ಎನಿಸಿಕೊಂಡ ನಟಿ ’ಮಿನುಗುತಾರೆ’ಯಾಗಿದ್ದು ದುರಂತ ಪಾತ್ರಗಳ ಮೂಲಕವೇ. ನಿರ್ದೇಶಕ ಎಂ.ಆರ್.ವಿಠ್ಠಲ್ ತಮ್ಮ ’ಹಣ್ಣೆಲೆ ಚಿಗುರಿದಾಗ’ (1968) ಚಿತ್ರದ ’ಮಾಲತಿ’ ಪಾತ್ರಕ್ಕೆ ಕಲ್ಪನಾರನ್ನು ಆಯ್ಕೆ ಮಾಡಿಕೊಂಡಿದ್ದರು. ಕಲ್ಪನಾರ ಪ್ರತಿಭೆಯ ಬಗ್ಗೆ ಅರಿವಿದ್ದ ಅವರು ವಸ್ತ್ರಾಲಂಕಾರ, ವರ್ಣಾಲಂಕಾರದ ಬಗ್ಗೆ ಆಕೆಗೆ ಸಂಪೂರ್ಣ ಸ್ವಾತಂತ್ರ ನೀಡಿದ್ದರು. ಚಿತ್ರ ಯಶಸ್ವಿಯಾಗಿ ಕಲ್ಪನಾರ ಪಾತ್ರನಿರ್ವಹಣೆ ಪ್ರಶಂಸೆಗೆ ಪ್ರಾಪ್ತವಾಯಿತು.

ಚಿನ್ನದ ಗೊಂಬೆ ಚಿತ್ರದಲ್ಲಿ ಬಿ.ಜಯಾ, ಕಲ್ಪನ (ಫೋಟೋ: ಪ್ರಗತಿ ಅಶ್ವತ್ಥ ನಾರಾಯಣ)

ಆದರೆ, ’ಸಂಪ್ರದಾಯಸ್ಥರ ಮನೆತದಲ್ಲಿನ ತರುಣ ವಿಧವೆ ಹಾಗೆ ಕಾಣಿಸಿಕೊಳ್ಳುವುದು ಸಾಧ್ಯವಿಲ್ಲ’ ಎಂಬ ವಿವಾದದ ಬಿರುಗಾಳಿಯನ್ನೇ ಎಬ್ಬಿಸಿತು. ಈ ಟೀಕೆಯನ್ನು ಒಂದು ಸವಾಲಾಗಿ ಪರಿಗಣಿಸಿದ ಕಲ್ಪನಾ ಚಲನಚಿತ್ರ ಪತ್ರಿಕೆಯೊಂದಕ್ಕೆ ಸುದೀರ್ಘ ಲೇಖನವನ್ನೇ ಬರೆದರು. ಒಂದು ಪ್ರೌಢ ಪ್ರಬಂಧದಂತಿದ್ದ ಆ ಲೇಖನ ಕಲ್ಪನಾ ಅವರ ಅಧ್ಯಯನಶೀಲತೆ, ವಾದ-ವೈಖರಿ, ದಿಟ್ಟತನ ಮುಂತಾದವು ಟೀಕಾಕಾರರನ್ನು ಮೌನವಾಗಿಸಿತ್ತು. ಅಂದಿನ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಆಸಕ್ತಿಯಿಂದ ಚಿತ್ರವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಖ್ಯಾತ ಹಿಂದಿ ನಿರ್ದೇಶಕ, ನಿರ್ಮಾಪಕ ವಿ.ಶಾಂತಾರಾಂ, ’ನಾನು ನೋಡಿದ ಅತ್ಯುತ್ತಮ ಭಾರತೀಯ ಚಿತ್ರಗಳಲ್ಲಿ ಇದೂ ಒಂದು’ ಎಂದು ನುಡಿದಿದ್ದರು.

ವೇಶ್ಯೆಯೊಬ್ಬಳ ಮಗಳಾಗಿ ನಟಿಸಿದ ಕಲ್ಪನಾರ ’ಮುಕ್ತಿ’ ಚಿತ್ರವೂ ಅಪಾರ ಮನ್ನಣೆ ಪಡೆದುಕೊಂಡಿತು. ಲಂಡನ್ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಚಿತ್ರದ ಬಗ್ಗೆ ಅಲ್ಲಿನ ಪತ್ರಿಕೆಗಳು ಹೃದಯಸ್ಪರ್ಶಿ ವಿಮರ್ಶೆ ಬರೆದಿದ್ದವು. ಅಮೆರಿಕಾದಲ್ಲಿ ವಿದ್ಯಾರ್ಥಿಗಳಿಗೆಂದೇ ವಿಶೇಷವಾಗಿ ಪ್ರದರ್ಶಿಸಿದ 23 ಭಾರತೀಯ ಚಿತ್ರಗಳಲ್ಲಿ ಈ ಚಿತ್ರವೂ ಇತ್ತು ಎನ್ನುವುದು ಮತ್ತೊಂದು ಹೆಗ್ಗಳಿಕೆ. ಎನ್.ಲಕ್ಷ್ಮೀನಾರಾಯಣ ಅವರಂತಹ ಉತ್ಕೃಷ್ಟ ನಿರ್ದೇಶಕರ ಮನಸ್ಸಿನಲ್ಲಿ ನಾಯಕಿ ಪಾತ್ರವೆಂದರೆ ಅದು ಕಲ್ಪನಾ ಎನ್ನುವಷ್ಟರ ಮಟ್ಟಿಗೆ ಪ್ರಭಾವ ಬೀರಿದ ನಟಿಯಾಗಿದ್ದರು ಆಕೆ. ಲಕ್ಷ್ಮೀನಾರಾಯಣ ಅವರು ನಿರ್ದೇಶಿಸಿದ ಆರು ಚಿತ್ರಗಳಲ್ಲಿ ಮೂರು ಚಿತ್ರಗಳಲ್ಲಷ್ಟೇ ನಾಯಕಿ ಪಾತ್ರಗಳಿದ್ದುದು. ಈ ಮೂರೂ ಚಿತ್ರಗಳಿಗೆ ಕಲ್ಪನಾ ನಾಯಕಿಯಾಗಿದ್ದರು!

“ನಾ ಬಂದೆ, ನಾ ನೋಡ್ದೆ, ನಾ ಗೆದ್ದೆ…’ ಎನ್ನುತ್ತಲೇ ಪ್ರೇಕ್ಷಕರನ್ನು ದಟ್ಟವಾಗಿ ಸೆರೆ ಹಿಡಿದ ಚಿತ್ರ ’ಶರಪಂಜರ’. ಈ ಚಿತ್ರದ ಮೊದಲ ಪ್ರತಿ ಮದರಾಸಿನಲ್ಲಿ ಪ್ರದರ್ಶಿತವಾದಾಗ ಅನೇಕ ಹಿಂದಿ, ತಮಿಳು, ತೆಲುಗು ಕಲಾವಿದರು ಹಾಗೂ ತಂತ್ರಜ್ಞರಿಂದ ಚಿತ್ರಮಂದಿರ ಭರ್ತಿಯಾಗಿತ್ತು. ಚಿತ್ರ ವೀಕ್ಷಿಸಿದ ಹಿಂದಿ ತಾರೆ ಶರ್ಮಿಳಾ ಟ್ಯಾಗೋರ್, ’ಕಲ್ಪನಾರ ಪಾತ್ರವನ್ನು ಅಷ್ಟೇ ಚೆನ್ನಾಗಿ ಮಾಡಲು ನನ್ನಿಂದ ಆದೀತೋ, ಇಲ್ಲವೋ?’ ಎಂದು ಉದ್ಘರಿಸಿದ್ದರು. ನೇರ, ನಿಷ್ಠುರ ವ್ಯಕ್ತಿತ್ವದ ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ.ಶಿವರಾಮ ಕಾರಂತರು ಯಾರನ್ನೂ ಸುಮ್ಮನೆ ಹೊಗಳುವವರಲ್ಲ. ಅಂತಹ ಕಾರಂತರು, ’ಕೋಟಿ ಚೆನ್ನಯ’ ತುಳು ಚಿತ್ರದಲ್ಲಿನ ಕಲ್ಪನಾರ ಪಾತ್ರವನ್ನು ಮೆಚ್ಚಿಕೊಂಡು ಕಲ್ಪನಾರಿಗೊಂದು ಸುದೀರ್ಘ ಪತ್ರ ಬರೆದಿದ್ದರು. ಚಿತ್ರವೊಂದನ್ನು ನಿರ್ದೇಶಿಸುತ್ತಿರುವುದಾಗಿಯೂ, ತಾವು ಅದರಲ್ಲಿ ಮುಖ್ಯ ಪಾತ್ರ ವಹಿಸಲು ಸಾಧ್ಯವೇ?’ ಎಂದು ಪತ್ರದಲ್ಲಿ ಬರೆದಿದ್ದರಂತೆ. ಕಾರಂತರ ಕರೆಗೆ ಮನ್ನಣೆ ನೀಡಿದ ಕಲ್ಪನಾ, ಅವರು ನಿರ್ದೇಶಿಸಿದ ಏಕೈಕ ವಾಕ್ಚಿತ್ರ ’ಮಲಯ ಮಕ್ಕಳು’ಗೆ ನಾಯಕಿಯಾದರು.

ಹೀಗೆ, ನಾಡಿನ ಹಾಗೂ ದೇಶ-ವಿದೇಶಗಳಲ್ಲಿಯೂ ತಮ್ಮ ಪಾತ್ರಗಳಿಗೆ ಮನ್ನಣೆ ಪಡೆದ ನಟಿ ಬದುಕಿಗೆ ವಿದಾಯ ಹೇಳಿದಾಗ ಅವರಿಗೆ ಮೂವತ್ತಾರು ವರ್ಷವಷ್ಟೆ. 1963ರಲ್ಲಿ ಚಿತ್ರಜಗತ್ತನ್ನು ಪ್ರವೇಶಿಸಿ 1978ರವರೆಗೆ ಹದಿನೈದು ವರ್ಷಗಳಲ್ಲಿ 51 ನಿರ್ದೇಶಕರ 78 ಚಿತ್ರಗಳಲ್ಲಿ ನಟಿಸಿದರು. ಈ ಪಟ್ಟಿಯಲ್ಲಿ ತಮಿಳು, ತೆಲುಗು, ಮಲಯಾಳಂ, ತುಳು ಚಿತ್ರಗಳೂ ಸೇರಿವೆ. ಪಂಚಭಾಷೆಗಳಲ್ಲಿ ಅಭಿನಯಿಸಿದ ನಟಿ ಬೆಳ್ಳಿತೆರೆಯ ಧ್ರುವತಾರೆಯಾಗಿ ಮಿಂಚಿದರು.

***


ಇದನ್ನೂ ಓದಿ: ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ‘ಅಮ್ಮ’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...