Homeಮುಖಪುಟಮರೆಯಲಾಗದ ಮಿನುಗುತಾರೆ ಕಲ್ಪನಾ ನಮ್ಮನಗಲಿದ ದಿನವಿಂದು

ಮರೆಯಲಾಗದ ಮಿನುಗುತಾರೆ ಕಲ್ಪನಾ ನಮ್ಮನಗಲಿದ ದಿನವಿಂದು

ಹಣ್ಣೆಲೆ ಚಿಗುರಿದಾಗ, ಮುಕ್ತಿ, ಶರಪಂಜರ, ಮಿನುಗುತಾರೆ ಚಿತ್ರಗಳ ಮೂಲಕ ಗಮನ ಸೆಳೆದ ನಟಿ ಕಲ್ಪನಾರವರು ಕಣ್ಮರೆಯಾಗಿ ಇಂದಿಗೆ 41 ವರ್ಷ. ಆ ನೆನಪಿನಲ್ಲಿ ಅವರ ಕುರಿತು ಒಂದಿಷ್ಟು...

- Advertisement -
- Advertisement -

ಅಪರೂಪದ ಪಾತ್ರಗಳ ಮೂಲಕ ಕನ್ನಡ ನಾಡಿನಾಚೆಗೂ ತಮ್ಮ ಛಾಪು ಮೂಡಿಸಿದ ಮೇರು ತಾರೆ ಕಲ್ಪನಾ. ಅವರು ನಮ್ಮನ್ನಗಲಿ ಈ ಹೊತ್ತಿಗೆ (ಮೇ 12) ನಲವತ್ತೊಂದು ವರ್ಷ.

***

“ನನ್ನ ಇದುವರೆಗಿನ ಈ ಚಿತ್ರರಂಗದ ಅನುಭವವನ್ನು ಯಾವುದಾದರೊಂದು ಶಿಲ್ಪದಲ್ಲಿ ಕಡೆಯಬೇಕೆಂಬ ಮಹದಾಸೆ ಇತ್ತು. ಆ ಯೋಗ್ಯತೆಯನ್ನು ಕಲ್ಪನಾಳಲ್ಲಿ ಗುರುತಿಸಿದೆ. ಆಕೆಗೆ ನನ್ನ ಶಕ್ತಿಯನ್ನು ಧಾರೆ ಎರೆದೆ. ಅವಳು ಅದನ್ನು ಪ್ರೀತಿ, ಭಕ್ತಿಯಿಂದ ಸ್ವೀಕರಿಸಿ ನನ್ನ ಕಲ್ಪನೆಯ ಶಿಲ್ಪವಾಗಿದ್ದಾಳೆ. ಅಲ್ಲದೆ ನನ್ನ ಬಗ್ಗೆ ಅತ್ಯಂತ ಕೃತಜ್ಞತಾ ಭಾವ ಇರಿಸಿದ್ದಾಳೆ’ ಎಂದು ಕಲ್ಪನಾ ಕುರಿತಾಗಿ ಹೇಳಿದ್ದರು ನಿರ್ದೇಶಕ ಪುಟ್ಟಣ್ಣ ಕಣಗಾಲ್. ಕನ್ನಡ ಚಿತ್ರರಂಗ ಕಂಡ ಪ್ರಮುಖ ನಾಯಕನಟಿ ಕಲ್ಪನಾ ಕಣ್ಮರೆಯಾಗಿ (1979, ಮೇ 12) ಇಂದಿಗೆ 41 ವರ್ಷಗಳು ಸಂದವು.

‘ಸಾಕುಮಗಳು’ (1963) ಚಿತ್ರದೊಂದಿಗೆ ಬೆಳ್ಳಿತೆರೆ ಪ್ರವೇಶಿಸಿದ ಕಲ್ಪನಾ ಸುಮಾರು ಒಂದು ದಶಕಗಳ ಕಾಲ ಕನ್ನಡ ಚಿತ್ರಜಗತ್ತಿನಲ್ಲಿ ರಾರಾಜಿಸಿದರು. ಏಕಮೇವಾದ್ವಿತೀಯ ನಟಿ ಎನಿಸಿಕೊಂಡ ನಟಿ ’ಮಿನುಗುತಾರೆ’ಯಾಗಿದ್ದು ದುರಂತ ಪಾತ್ರಗಳ ಮೂಲಕವೇ. ನಿರ್ದೇಶಕ ಎಂ.ಆರ್.ವಿಠ್ಠಲ್ ತಮ್ಮ ’ಹಣ್ಣೆಲೆ ಚಿಗುರಿದಾಗ’ (1968) ಚಿತ್ರದ ’ಮಾಲತಿ’ ಪಾತ್ರಕ್ಕೆ ಕಲ್ಪನಾರನ್ನು ಆಯ್ಕೆ ಮಾಡಿಕೊಂಡಿದ್ದರು. ಕಲ್ಪನಾರ ಪ್ರತಿಭೆಯ ಬಗ್ಗೆ ಅರಿವಿದ್ದ ಅವರು ವಸ್ತ್ರಾಲಂಕಾರ, ವರ್ಣಾಲಂಕಾರದ ಬಗ್ಗೆ ಆಕೆಗೆ ಸಂಪೂರ್ಣ ಸ್ವಾತಂತ್ರ ನೀಡಿದ್ದರು. ಚಿತ್ರ ಯಶಸ್ವಿಯಾಗಿ ಕಲ್ಪನಾರ ಪಾತ್ರನಿರ್ವಹಣೆ ಪ್ರಶಂಸೆಗೆ ಪ್ರಾಪ್ತವಾಯಿತು.

ಚಿನ್ನದ ಗೊಂಬೆ ಚಿತ್ರದಲ್ಲಿ ಬಿ.ಜಯಾ, ಕಲ್ಪನ (ಫೋಟೋ: ಪ್ರಗತಿ ಅಶ್ವತ್ಥ ನಾರಾಯಣ)

ಆದರೆ, ’ಸಂಪ್ರದಾಯಸ್ಥರ ಮನೆತದಲ್ಲಿನ ತರುಣ ವಿಧವೆ ಹಾಗೆ ಕಾಣಿಸಿಕೊಳ್ಳುವುದು ಸಾಧ್ಯವಿಲ್ಲ’ ಎಂಬ ವಿವಾದದ ಬಿರುಗಾಳಿಯನ್ನೇ ಎಬ್ಬಿಸಿತು. ಈ ಟೀಕೆಯನ್ನು ಒಂದು ಸವಾಲಾಗಿ ಪರಿಗಣಿಸಿದ ಕಲ್ಪನಾ ಚಲನಚಿತ್ರ ಪತ್ರಿಕೆಯೊಂದಕ್ಕೆ ಸುದೀರ್ಘ ಲೇಖನವನ್ನೇ ಬರೆದರು. ಒಂದು ಪ್ರೌಢ ಪ್ರಬಂಧದಂತಿದ್ದ ಆ ಲೇಖನ ಕಲ್ಪನಾ ಅವರ ಅಧ್ಯಯನಶೀಲತೆ, ವಾದ-ವೈಖರಿ, ದಿಟ್ಟತನ ಮುಂತಾದವು ಟೀಕಾಕಾರರನ್ನು ಮೌನವಾಗಿಸಿತ್ತು. ಅಂದಿನ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಆಸಕ್ತಿಯಿಂದ ಚಿತ್ರವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಖ್ಯಾತ ಹಿಂದಿ ನಿರ್ದೇಶಕ, ನಿರ್ಮಾಪಕ ವಿ.ಶಾಂತಾರಾಂ, ’ನಾನು ನೋಡಿದ ಅತ್ಯುತ್ತಮ ಭಾರತೀಯ ಚಿತ್ರಗಳಲ್ಲಿ ಇದೂ ಒಂದು’ ಎಂದು ನುಡಿದಿದ್ದರು.

ವೇಶ್ಯೆಯೊಬ್ಬಳ ಮಗಳಾಗಿ ನಟಿಸಿದ ಕಲ್ಪನಾರ ’ಮುಕ್ತಿ’ ಚಿತ್ರವೂ ಅಪಾರ ಮನ್ನಣೆ ಪಡೆದುಕೊಂಡಿತು. ಲಂಡನ್ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಚಿತ್ರದ ಬಗ್ಗೆ ಅಲ್ಲಿನ ಪತ್ರಿಕೆಗಳು ಹೃದಯಸ್ಪರ್ಶಿ ವಿಮರ್ಶೆ ಬರೆದಿದ್ದವು. ಅಮೆರಿಕಾದಲ್ಲಿ ವಿದ್ಯಾರ್ಥಿಗಳಿಗೆಂದೇ ವಿಶೇಷವಾಗಿ ಪ್ರದರ್ಶಿಸಿದ 23 ಭಾರತೀಯ ಚಿತ್ರಗಳಲ್ಲಿ ಈ ಚಿತ್ರವೂ ಇತ್ತು ಎನ್ನುವುದು ಮತ್ತೊಂದು ಹೆಗ್ಗಳಿಕೆ. ಎನ್.ಲಕ್ಷ್ಮೀನಾರಾಯಣ ಅವರಂತಹ ಉತ್ಕೃಷ್ಟ ನಿರ್ದೇಶಕರ ಮನಸ್ಸಿನಲ್ಲಿ ನಾಯಕಿ ಪಾತ್ರವೆಂದರೆ ಅದು ಕಲ್ಪನಾ ಎನ್ನುವಷ್ಟರ ಮಟ್ಟಿಗೆ ಪ್ರಭಾವ ಬೀರಿದ ನಟಿಯಾಗಿದ್ದರು ಆಕೆ. ಲಕ್ಷ್ಮೀನಾರಾಯಣ ಅವರು ನಿರ್ದೇಶಿಸಿದ ಆರು ಚಿತ್ರಗಳಲ್ಲಿ ಮೂರು ಚಿತ್ರಗಳಲ್ಲಷ್ಟೇ ನಾಯಕಿ ಪಾತ್ರಗಳಿದ್ದುದು. ಈ ಮೂರೂ ಚಿತ್ರಗಳಿಗೆ ಕಲ್ಪನಾ ನಾಯಕಿಯಾಗಿದ್ದರು!

“ನಾ ಬಂದೆ, ನಾ ನೋಡ್ದೆ, ನಾ ಗೆದ್ದೆ…’ ಎನ್ನುತ್ತಲೇ ಪ್ರೇಕ್ಷಕರನ್ನು ದಟ್ಟವಾಗಿ ಸೆರೆ ಹಿಡಿದ ಚಿತ್ರ ’ಶರಪಂಜರ’. ಈ ಚಿತ್ರದ ಮೊದಲ ಪ್ರತಿ ಮದರಾಸಿನಲ್ಲಿ ಪ್ರದರ್ಶಿತವಾದಾಗ ಅನೇಕ ಹಿಂದಿ, ತಮಿಳು, ತೆಲುಗು ಕಲಾವಿದರು ಹಾಗೂ ತಂತ್ರಜ್ಞರಿಂದ ಚಿತ್ರಮಂದಿರ ಭರ್ತಿಯಾಗಿತ್ತು. ಚಿತ್ರ ವೀಕ್ಷಿಸಿದ ಹಿಂದಿ ತಾರೆ ಶರ್ಮಿಳಾ ಟ್ಯಾಗೋರ್, ’ಕಲ್ಪನಾರ ಪಾತ್ರವನ್ನು ಅಷ್ಟೇ ಚೆನ್ನಾಗಿ ಮಾಡಲು ನನ್ನಿಂದ ಆದೀತೋ, ಇಲ್ಲವೋ?’ ಎಂದು ಉದ್ಘರಿಸಿದ್ದರು. ನೇರ, ನಿಷ್ಠುರ ವ್ಯಕ್ತಿತ್ವದ ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ.ಶಿವರಾಮ ಕಾರಂತರು ಯಾರನ್ನೂ ಸುಮ್ಮನೆ ಹೊಗಳುವವರಲ್ಲ. ಅಂತಹ ಕಾರಂತರು, ’ಕೋಟಿ ಚೆನ್ನಯ’ ತುಳು ಚಿತ್ರದಲ್ಲಿನ ಕಲ್ಪನಾರ ಪಾತ್ರವನ್ನು ಮೆಚ್ಚಿಕೊಂಡು ಕಲ್ಪನಾರಿಗೊಂದು ಸುದೀರ್ಘ ಪತ್ರ ಬರೆದಿದ್ದರು. ಚಿತ್ರವೊಂದನ್ನು ನಿರ್ದೇಶಿಸುತ್ತಿರುವುದಾಗಿಯೂ, ತಾವು ಅದರಲ್ಲಿ ಮುಖ್ಯ ಪಾತ್ರ ವಹಿಸಲು ಸಾಧ್ಯವೇ?’ ಎಂದು ಪತ್ರದಲ್ಲಿ ಬರೆದಿದ್ದರಂತೆ. ಕಾರಂತರ ಕರೆಗೆ ಮನ್ನಣೆ ನೀಡಿದ ಕಲ್ಪನಾ, ಅವರು ನಿರ್ದೇಶಿಸಿದ ಏಕೈಕ ವಾಕ್ಚಿತ್ರ ’ಮಲಯ ಮಕ್ಕಳು’ಗೆ ನಾಯಕಿಯಾದರು.

ಹೀಗೆ, ನಾಡಿನ ಹಾಗೂ ದೇಶ-ವಿದೇಶಗಳಲ್ಲಿಯೂ ತಮ್ಮ ಪಾತ್ರಗಳಿಗೆ ಮನ್ನಣೆ ಪಡೆದ ನಟಿ ಬದುಕಿಗೆ ವಿದಾಯ ಹೇಳಿದಾಗ ಅವರಿಗೆ ಮೂವತ್ತಾರು ವರ್ಷವಷ್ಟೆ. 1963ರಲ್ಲಿ ಚಿತ್ರಜಗತ್ತನ್ನು ಪ್ರವೇಶಿಸಿ 1978ರವರೆಗೆ ಹದಿನೈದು ವರ್ಷಗಳಲ್ಲಿ 51 ನಿರ್ದೇಶಕರ 78 ಚಿತ್ರಗಳಲ್ಲಿ ನಟಿಸಿದರು. ಈ ಪಟ್ಟಿಯಲ್ಲಿ ತಮಿಳು, ತೆಲುಗು, ಮಲಯಾಳಂ, ತುಳು ಚಿತ್ರಗಳೂ ಸೇರಿವೆ. ಪಂಚಭಾಷೆಗಳಲ್ಲಿ ಅಭಿನಯಿಸಿದ ನಟಿ ಬೆಳ್ಳಿತೆರೆಯ ಧ್ರುವತಾರೆಯಾಗಿ ಮಿಂಚಿದರು.

***


ಇದನ್ನೂ ಓದಿ: ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ‘ಅಮ್ಮ’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...