Homeಕರ್ನಾಟಕವಿಧಾನ ಪರಿಷತ್‌ ಕೋಲಾಹಲ: ಬಿಜೆಪಿ-ಜೆಡಿಎಸ್‌ನ ‍ಷಡ್ಯಂತ್ರ ಎಂದ ಸಿದ್ದರಾಮಯ್ಯ - ಸರಣಿ ಟ್ವೀಟ್

ವಿಧಾನ ಪರಿಷತ್‌ ಕೋಲಾಹಲ: ಬಿಜೆಪಿ-ಜೆಡಿಎಸ್‌ನ ‍ಷಡ್ಯಂತ್ರ ಎಂದ ಸಿದ್ದರಾಮಯ್ಯ – ಸರಣಿ ಟ್ವೀಟ್

ಬಿಜೆಪಿ ಸದಸ್ಯರು ನನ್ನ ಕೈಹಿಡಿದು ಪೀಠದಲ್ಲಿ ಕೂರಿಸಿದರು. ಆದರೆ ಕಾಂಗ್ರೆಸ್ ಸದಸ್ಯರು ಬೇಡ ಎಂದು ಎಳೆದಾಡಿದರು. ಹೀಗಾಗಿ ನಾನು ಒಬ್ಬನೇ ಏನು ಮಾಡಲಿ- ಉಪಸಭಾಪತಿ ಧರ್ಮೇಗೌಡ

- Advertisement -
- Advertisement -

ಇಂದು ಆರಂಭವಾಗಬೆಕಿದ್ದ ವಿಧಾನ ಪರಿಷತ್ ಅಧಿವೇಶನ ಬಿಜೆಪಿ-ಕಾಂಗ್ರೆಸ್ ನಾಯಕರ ಮೇಲಾಟಗಳಿಂದ ಸ್ಥಗಿತಗೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಆಡಳಿತ ಮತ್ತು ವಿರೋಧ ಪಕ್ಷಗಳು ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡಿಕೊಳ್ಳುತ್ತಿವೆ. ಸಭಾಪತಿಗಳು ಸದನ ಪ್ರವೇಶಿಸದಂತೆ ಬಲವಂತವಾಗಿ ಬಾಗಿಲು ಹಾಕಿಕೊಂಡು ತಡೆಯೊಡ್ಡಿದ ಬಿಜೆಪಿ, ಉಪಸಭಾಪತಿಯವರನ್ನು ಅಕ್ರಮವಾಗಿ ಪೀಠದಲ್ಲಿ ಕೂರಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಕಡೆ, ಕಾಂಗ್ರೆಸ್ ನಾಯಕರು ಉಪಸಭಾಪತಿಗಳನ್ನು ಎಳೆದಾಡಿ ಗೂಂಡಾಗಿರಿ ಮಾಡಿದ್ದಾರೆ ಎಂದು ಬಿಜೆಪಿ ಪ್ರತ್ಯಾರೋಪ ಮಾಡಿದೆ. ಈಗ ಜೆಡಿಎಸ್-ಬಿಜೆಪಿ ನಾಯಕರು ಒಟ್ಟುಗೂಡಿ ರಾಜ್ಯಪಾಲರಿಗೆ ದೂರು ನೀಡಿದ್ದು, ರಾಜ್ಯಪಾಲರ ಆದೇಶಕ್ಕಾಗಿ ಕಾಯುತ್ತಿದ್ದಾರೆ.

ಈ ಬೆಳವಣಿಗೆಗಳ ಕುರಿತು ತೀವ್ರ ಆಕ್ರೋಶಗೊಂಡಿರುವ ಸಿದ್ದರಾಮಯ್ಯ, “ಅವರೇ ಉಪಸಭಾಪತಿಯವರನ್ನು ಅಕ್ರಮವಾಗಿ ಪೀಠದಲ್ಲಿ ಕೂರಿಸಿ ತಾವೇ ನಿರ್ಧರಿಸಿದ ಅಜೆಂಡಾ ಮೂಲಕ ಕಲಾಪ ನಡೆಸಲು ಇದೇನು ‘ಬನಾನ ರಿಪಬ್ಲಿಕಾ’ನಾ?” ಎಂದು ಕಿಡಿಕಾರಿದ್ದು ಸರಣಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಜಪಾನ್‌ನ ’ಟ್ವಿಟರ್ ಕಿಲ್ಲರ್’ಗೆ ಮರಣದಂಡನೆ ವಿಧಿಸಿದ ಟೋಕಿಯೊ ನ್ಯಾಯಾಲಯ

“ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಸಚಿವರು ಮತ್ತು ಸದಸ್ಯರಿಂದ ನಡೆದಿರುವ ಗೂಂಡಾಗಿರಿ ರಾಜ್ಯದ ಮಾತ್ರವಲ್ಲ, ದೇಶದ ಸಂಸದೀಯ ಪ್ರಜಾಪ್ರಭುತ್ವ ಇತಿಹಾಸದ ಕಪ್ಪು ಅಧ್ಯಾಯ. ಇದು ಖಂಡಿತ ಸಾಂವಿಧಾನಿಕ ಪ್ರಜಾಪ್ರಭುತ್ವ ಅಲ್ಲ, ಇದು ನರೇಂದ್ರ ಮೋದಿಯವರ
ಪ್ರಜಾಪ್ರಭುತ್ವ. ಇದು ಅಪರಾಧ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ನ 36 ವಿದೇಶಿಗರೂ ದೋಷಮುಕ್ತ ಎಂದ ಹೈಕೋರ್ಟ್: ಬಿಜೆಪಿಗೆ ಮುಖಭಂಗ

“ವಿಧಾನ ಪರಿಷತ್ ಸಭಾಪತಿಗಳನ್ನು ಅವರ ಕಚೇರಿಯಲ್ಲಿ ಬಲತ್ಕಾರದಿಂದ ಕೂಡಿಹಾಕಿ, ಅವರ ಅನುಮತಿ ಇಲ್ಲದೆ ಉಪಸಭಾಪತಿಗಳನ್ನು ಸಭಾಪತಿ ಪೀಠದ ಮೇಲೆ ಕೂರಿಸಿ ಕಲಾಪ ನಡೆಸಲು ಹೊರಟಿರುವ ಬಿಜೆಪಿ ಸದಸ್ಯರು ಹಾಡಹಗಲೇ ಸಂವಿಂಧಾನಕ್ಕೆ ಅಪಚಾರ ಎಸಗಿದ್ದಾರೆ. ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದ್ದಾರೆ. ವಿಧಾನಸಭೆ ಮತ್ತು ವಿಧಾನಪರಿಷತ್ ಕಲಾಪ ನಡೆಸಲು ಸರ್ವಸಮ್ಮತಿಯಿಂದ ರಚಿಸಲಾದ ನಿಯಮಾವಳಿಗಳಿವೆ. ಬಿಜೆಪಿ ಸದಸ್ಯರ ಇಂದಿನ ನಡವಳಿಕೆ ಆ ನಿಯಮಾಳಿಗಳಿಗೆ ಅನುಗುಣವಾಗಿತ್ತೇ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತು ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ತಿಳಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಏಮ್ಸ್ ನರ್ಸಿಂಗ್ ನೌಕರರ ಪ್ರತಿಭಟನೆಗೆ ಹೈಕೋರ್ಟ್ ತಡೆ: ಪ್ರತಿಭಟನಾಕಾರರಿಗೆ ನೋಟಿಸ್

“ವಿಧಾನ ಪರಿಷತ್ ಸಭಾಪತಿ, ವಿದೇಶ ಪ್ರವಾಸ, ಅನಾರೋಗ್ಯ ಇಲ್ಲವೇ ಇನ್ನು ಯಾವುದೋ ಕಾರಣಕ್ಕೋ ಕರ್ತವ್ಯ ನಿರ್ವಹಣೆ ಮಾಡಲು ಸಾಧ್ಯವಾಗದೆ ಇದ್ದಾಗ ಸಭಾಪತಿಯಾಗಿ ಕಾರ್ಯನಿರ್ವಹಿಸಲು ಅವರು ಉಪಸಭಾಪತಿಯವರಿಗೆ ಅವಕಾಶವನ್ನು ನೀಡಬಹುದೆಂದು ಸದನದ ನಿಯಮಾವಳಿ ಹೇಳಿದೆ. ಇದರ ಪಾಲನೆಯಾಗಿದೆಯೇ? ಮುಖ್ಯಂತ್ರಿಗಳೇ. ಬಿಜೆಪಿಯವರು ವಿಧಾನಪರಿಷತ್ ಸಭಾಪತಿ ವಿರುದ್ದ ಅವಿಶ್ವಾಸ ನಿರ್ಣಯಕ್ಕೆ ನೋಟೀಸ್ ನೀಡಿದ್ದರು. ನಿಯಮಾವಳಿ ಪ್ರಕಾರ ಅದರ ಇತ್ಯರ್ಥಕ್ಕೆ 14 ದಿನಗಳ ಕಾಲಾವಕಾಶ ಇದೆ. ಆದರೆ ನೋಟೀಸ್ ಕ್ರಮಬದ್ದವಾಗಿಲ್ಲ ಎಂದು ಸಭಾಪತಿಯವರು ತಿರಸ್ಕರಿಸಿದ್ದ ಕಾರಣ ಆ ವಿಷಯ ಇಂದಿನ ಅಜೆಂಡಾದಲ್ಲಿ ಇರಲಿಲ್ಲ. ಅವಿಶ್ವಾಸ ನಿರ್ಣಯ ಅಜೆಂಡಾದಲ್ಲಿ ಸೇರ್ಪಡೆಯಾದ ನಂತರ ಸದನದಲ್ಲಿ ಅದನ್ನು ಕನಿಷ್ಠ ಹತ್ತು ಜನ ಯಾವುದೇ ಚರ್ಚೆ ಇಲ್ಲದೆ ಬೆಂಬಲಿಸಬೇಕು. ಅದರ ಆಧಾರದಲ್ಲಿ ಮುಂದಿನ ಐದು ದಿನಗಳೊಳಗೆ ನಿರ್ಣಯದ ಚರ್ಚೆಗೆ ಸಭಾಪತಿಗಳು ದಿನ ಗೊತ್ತುಪಡಿಸಬೇಕು. ಈ ನಿಯಮ ಪಾಲನೆಯಾಗಿದೆಯೇ? ಮುಖ್ಯಮಂತ್ರಿಗಳೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿಗೆ 14 ದಿನಗಳ ನ್ಯಾಯಾಂಗ ಬಂಧನ

“ಬಿಜೆಪಿ ಸದಸ್ಯರ ಅವಿಶ್ವಾಸ ನಿರ್ಣಯದ ನೊಟೀಸ್ ಸಭಾಪತಿಯವರಿಂದ ತಿರಸ್ಕೃತಗೊಂಡಿದೆ ಮತ್ತು ಅಜೆಂಡಾದಲ್ಲಿಯೂ ಇರಲಿಲ್ಲ. ಹೀಗಿದ್ದಾಗ ಅವರೇ ಉಪಸಭಾಪತಿಯವರನ್ನು ಅಕ್ರಮವಾಗಿ ಪೀಠದಲ್ಲಿ ಕೂರಿಸಿ ತಾವೇ ನಿರ್ಧರಿಸಿದ ಅಜೆಂಡಾ ಮೂಲಕ ಕಲಾಪ ನಡೆಸಲು ಇದೇನು ಬನಾನ ರಿಪಬ್ಲಿಕಾ? ವಿಧಾನಪರಿಷತ್ ಅಧಿವೇಶನ ನಡೆಸಲು ಸಂಸದೀಯ ವ್ಯವಹಾರಗಳ ಖಾತೆಯ ಕಾರ್ಯದರ್ಶಿಗಳು ಸಭಾಪತಿಯವರಿಗೆ ನೇರವಾಗಿ ಪತ್ರಬರೆದಿದ್ದೇ ಅಕ್ರಮ ನಡವಳಿಕೆ. ಹೀಗಿದ್ದರೂ ಸಭಾಪತಿಗಳು ಸಂಘರ್ಷಕ್ಕಿಳಿಯದೆ ಸೌಜನ್ಯಪೂರ್ವಕವಾಗಿ ಅಧಿವೇಶನ ಕರೆದಿದ್ದಾರೆ. ಈ ಸೌಜನ್ಯವೇ ತಪ್ಪಾಯಿತೇ?” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ರಜನಿಯ ಹೊಸ ರಾಜಕೀಯ ಪಕ್ಷದ ಹೆಸರು ಮಕ್ಕಳ್ ಸೇವೈ ಕಚ್ಚಿ? ಚಿಹ್ನೆ ಆಟೋ ರಿಕ್ಷಾ?

“ನಿಯಮಾವಳಿಯಂತೆ ಸದನದಲ್ಲಿ ಕೋರಮ್ ಬಗ್ಗೆ ಮಾರ್ಷಲ್ ಗಳಿಂದ ದೃಡೀಕರಿಸಿಕೊಂಡ ನಂತರ ಸೂಚನಾ ಗಂಟೆ ನಿಲ್ಲಿಸಲು ತಿಳಿಸಿ ಸಭಾಪತಿಗಳು ಬಂದು ಪೀಠವನ್ನು ಅಲಂಕರಿಸಬೇಕಾಗುತ್ತದೆ. ಇಂದು ಸೂಚನಾ ಗಂಟೆ ನಿಲ್ಲಿಸುವ ಮೊದಲೇ ಬಿಜೆಪಿ ಸದಸ್ಯರು ಉಪಸಭಾಪತಿಯವರನ್ನು ಕೂರಿಸಿ ಕಲಾಪ ನಡೆಸಲು ಹೊರಟಿದ್ದು ಅಕ್ರಮ‌ ಅಲ್ಲವೇ? ರಾಜ್ಯದ ಸಚಿವರಾದ ಅಶ್ವತ್ ನಾರಾಯಣ್
ಅವರು ಖುದ್ದಾಗಿ ಸಭಾಪತಿ ಪೀಠದಲ್ಲಿ ಉಪಸಭಾಪತಿಯವರನ್ನು ಅಕ್ರಮವಾಗಿ ಕೂರಿಸ್ತಾರೆ, ಕಾನೂನು ಸಚಿವ ಮಾಧುಸ್ವಾಮಿ
ಸದನದಲ್ಲಿ ಮಾರ್ಷಲ್ ಗಳಿಗೆ ಧಮಕಿ ಹಾಕ್ತಾರೆ. ತಮ್ಮ ಪಕ್ಷದ ಸದಸ್ಯರನ್ನು ಗೂಂಡಾಗಿರಿಗೆ ಪ್ರಚೋದಿಸುವ ಇವರು ಸಚಿವರಾಗಲು ಅರ್ಹರೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವ, ನಾವು ರಾಮ ಭಕ್ತರು: ಅಖಿಲೇಶ್ ಯಾದವ್

“ವಿಧಾನಪರಿಷತ್ ನಲ್ಲಿ ಇಂದು ನಡೆದಿರುವ ಘಟನಾವಳಿಗಳು ಬಿಜೆಪಿ ಮತ್ತು ಜೆಡಿಎಸ್‌ನ ಸದಸ್ಯರು ಕೂಡಿ ನಡೆಸಿರುವ ಯೋಜಿತ ಷಡ್ಯಂತ್ರ. ಇದರಿಂದ ಬಿಜೆಪಿ ಮತ್ತು ಜೆಡಿ(ಎಸ್) ನಡುವಿನ ಒಳ ಒಪ್ಪಂದ ಬಯಲಾಗಿದೆ. ಇದಕ್ಕಾಗಿ ಎರಡೂ ಪಕ್ಷಗಳ ನಾಯಕರು ರಾಜ್ಯದ ಜನತೆಯ ಕ್ಷಮೆ ಕೇಳಬೇಕು. ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ವಿಧಾನಪರಿಷತ್ ನಲ್ಲಿ ನಡೆದ ಘಟನಾವಳಿಗಳನ್ನು ನಿಷ್ಪಕ್ಷಪಾತವಾಗಿ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಆಶಯಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ಭರವಸೆ ನಮಗಿದೆ.” ಎಂದು ಟ್ವೀಟ್ ಮಾಡಿದ್ದಾರೆ.

ಇದರ ಕುರಿತು ಪ್ರತಿಕ್ರಿಯಿಸಿದ ಯಡಿಯೂರಪ್ಪ, “ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಜೆಡಿಎಸ್ ಸದಸ್ಯರು ಬೆಂಬಲಿಸಿದ್ದಾರೆ. ಹೀಗಾಗಿ ಅವರು ರಾಜೀನಾಮೆ ನೀಡಬೇಕಿತ್ತು. ಸಭಾಪತಿ ಪೀಠದಲ್ಲಿ ಉಪಸಭಾಪತಿ ಅವರನ್ನು ಕೂರಿಸುತ್ತೇವೆಂದು ನಾವು ಪ್ರಕಟಿಸಿದ್ದೆವು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹೋರಾಟನಿರತ ರೈತರನ್ನು ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ: ನರೇಂದ್ರ ಮೋದಿ

ಇಂದು ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಅವಿಶ್ವಾಸ ನಿರ್ಣಯ ಮಂಡನೆ ಬಳಿಕ ಉಪಸಭಾಪತಿ ಅವರೇ ಮುಂದುವರಿಯುತ್ತಾರೆ. ‘ಬೆಲ್’ ಚಾಲನೆಯಲ್ಲಿರುವ ವೇಳೆ ಪೀಠಕ್ಕೆ ಬಂದರು ಎಂಬುದು ಮುಖ್ಯವಲ್ಲ. ಕಾಂಗ್ರೆಸ್ ನೈತಿಕತೆ ಇದ್ದರೆ ಸಭಾಪತಿಗೆ ರಾಜೀನಾಮೆ ಕೊಡಲು ಸೂಚಿಸಬೇಕು. ಘಟನೆಯ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ” ಎಂದು ತಿಳಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಉಪಸಭಾಪತಿ ಧರ್ಮೇಗೌಡ, “ಸಭಾಪತಿ ಸ್ಥಾನದ ಬಗ್ಗೆ ಗೌರವವಿದೆ. ಎಲ್ಲ ಪಕ್ಷಗಳಲ್ಲಿ ಗೊಂದಲ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರು ನನ್ನ ಕೈಹಿಡಿದು ಪೀಠದಲ್ಲಿ ಕೂರಿಸಿದರು. ಆದರೆ ಕಾಂಗ್ರೆಸ್ ಸದಸ್ಯರು ಬೇಡ ಎಂದು ಎಳೆದಾಡಿದರು. ಹೀಗಾಗಿ ನಾನು ಒಬ್ಬನೇ ಏನು ಮಾಡಲಿ. ಈ ಘಟನೆಯಿಂದ ನನಗೆ ಬೇಸರವೇನು ಆಗಿಲ್ಲ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕರ್ನಾಟಕದ ಸುಮಾರು 50% ರಷ್ಟು ಯುವತಿಯರಿಗೆ ರಕ್ತಹೀನತೆ- NFHS ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...