Homeಕರ್ನಾಟಕವಿಧಾನ ಪರಿಷತ್‌ ಕೋಲಾಹಲ: ಬಿಜೆಪಿ-ಜೆಡಿಎಸ್‌ನ ‍ಷಡ್ಯಂತ್ರ ಎಂದ ಸಿದ್ದರಾಮಯ್ಯ - ಸರಣಿ ಟ್ವೀಟ್

ವಿಧಾನ ಪರಿಷತ್‌ ಕೋಲಾಹಲ: ಬಿಜೆಪಿ-ಜೆಡಿಎಸ್‌ನ ‍ಷಡ್ಯಂತ್ರ ಎಂದ ಸಿದ್ದರಾಮಯ್ಯ – ಸರಣಿ ಟ್ವೀಟ್

ಬಿಜೆಪಿ ಸದಸ್ಯರು ನನ್ನ ಕೈಹಿಡಿದು ಪೀಠದಲ್ಲಿ ಕೂರಿಸಿದರು. ಆದರೆ ಕಾಂಗ್ರೆಸ್ ಸದಸ್ಯರು ಬೇಡ ಎಂದು ಎಳೆದಾಡಿದರು. ಹೀಗಾಗಿ ನಾನು ಒಬ್ಬನೇ ಏನು ಮಾಡಲಿ- ಉಪಸಭಾಪತಿ ಧರ್ಮೇಗೌಡ

- Advertisement -
- Advertisement -

ಇಂದು ಆರಂಭವಾಗಬೆಕಿದ್ದ ವಿಧಾನ ಪರಿಷತ್ ಅಧಿವೇಶನ ಬಿಜೆಪಿ-ಕಾಂಗ್ರೆಸ್ ನಾಯಕರ ಮೇಲಾಟಗಳಿಂದ ಸ್ಥಗಿತಗೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಆಡಳಿತ ಮತ್ತು ವಿರೋಧ ಪಕ್ಷಗಳು ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡಿಕೊಳ್ಳುತ್ತಿವೆ. ಸಭಾಪತಿಗಳು ಸದನ ಪ್ರವೇಶಿಸದಂತೆ ಬಲವಂತವಾಗಿ ಬಾಗಿಲು ಹಾಕಿಕೊಂಡು ತಡೆಯೊಡ್ಡಿದ ಬಿಜೆಪಿ, ಉಪಸಭಾಪತಿಯವರನ್ನು ಅಕ್ರಮವಾಗಿ ಪೀಠದಲ್ಲಿ ಕೂರಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಕಡೆ, ಕಾಂಗ್ರೆಸ್ ನಾಯಕರು ಉಪಸಭಾಪತಿಗಳನ್ನು ಎಳೆದಾಡಿ ಗೂಂಡಾಗಿರಿ ಮಾಡಿದ್ದಾರೆ ಎಂದು ಬಿಜೆಪಿ ಪ್ರತ್ಯಾರೋಪ ಮಾಡಿದೆ. ಈಗ ಜೆಡಿಎಸ್-ಬಿಜೆಪಿ ನಾಯಕರು ಒಟ್ಟುಗೂಡಿ ರಾಜ್ಯಪಾಲರಿಗೆ ದೂರು ನೀಡಿದ್ದು, ರಾಜ್ಯಪಾಲರ ಆದೇಶಕ್ಕಾಗಿ ಕಾಯುತ್ತಿದ್ದಾರೆ.

ಈ ಬೆಳವಣಿಗೆಗಳ ಕುರಿತು ತೀವ್ರ ಆಕ್ರೋಶಗೊಂಡಿರುವ ಸಿದ್ದರಾಮಯ್ಯ, “ಅವರೇ ಉಪಸಭಾಪತಿಯವರನ್ನು ಅಕ್ರಮವಾಗಿ ಪೀಠದಲ್ಲಿ ಕೂರಿಸಿ ತಾವೇ ನಿರ್ಧರಿಸಿದ ಅಜೆಂಡಾ ಮೂಲಕ ಕಲಾಪ ನಡೆಸಲು ಇದೇನು ‘ಬನಾನ ರಿಪಬ್ಲಿಕಾ’ನಾ?” ಎಂದು ಕಿಡಿಕಾರಿದ್ದು ಸರಣಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಜಪಾನ್‌ನ ’ಟ್ವಿಟರ್ ಕಿಲ್ಲರ್’ಗೆ ಮರಣದಂಡನೆ ವಿಧಿಸಿದ ಟೋಕಿಯೊ ನ್ಯಾಯಾಲಯ

“ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಸಚಿವರು ಮತ್ತು ಸದಸ್ಯರಿಂದ ನಡೆದಿರುವ ಗೂಂಡಾಗಿರಿ ರಾಜ್ಯದ ಮಾತ್ರವಲ್ಲ, ದೇಶದ ಸಂಸದೀಯ ಪ್ರಜಾಪ್ರಭುತ್ವ ಇತಿಹಾಸದ ಕಪ್ಪು ಅಧ್ಯಾಯ. ಇದು ಖಂಡಿತ ಸಾಂವಿಧಾನಿಕ ಪ್ರಜಾಪ್ರಭುತ್ವ ಅಲ್ಲ, ಇದು ನರೇಂದ್ರ ಮೋದಿಯವರ
ಪ್ರಜಾಪ್ರಭುತ್ವ. ಇದು ಅಪರಾಧ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ನ 36 ವಿದೇಶಿಗರೂ ದೋಷಮುಕ್ತ ಎಂದ ಹೈಕೋರ್ಟ್: ಬಿಜೆಪಿಗೆ ಮುಖಭಂಗ

“ವಿಧಾನ ಪರಿಷತ್ ಸಭಾಪತಿಗಳನ್ನು ಅವರ ಕಚೇರಿಯಲ್ಲಿ ಬಲತ್ಕಾರದಿಂದ ಕೂಡಿಹಾಕಿ, ಅವರ ಅನುಮತಿ ಇಲ್ಲದೆ ಉಪಸಭಾಪತಿಗಳನ್ನು ಸಭಾಪತಿ ಪೀಠದ ಮೇಲೆ ಕೂರಿಸಿ ಕಲಾಪ ನಡೆಸಲು ಹೊರಟಿರುವ ಬಿಜೆಪಿ ಸದಸ್ಯರು ಹಾಡಹಗಲೇ ಸಂವಿಂಧಾನಕ್ಕೆ ಅಪಚಾರ ಎಸಗಿದ್ದಾರೆ. ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದ್ದಾರೆ. ವಿಧಾನಸಭೆ ಮತ್ತು ವಿಧಾನಪರಿಷತ್ ಕಲಾಪ ನಡೆಸಲು ಸರ್ವಸಮ್ಮತಿಯಿಂದ ರಚಿಸಲಾದ ನಿಯಮಾವಳಿಗಳಿವೆ. ಬಿಜೆಪಿ ಸದಸ್ಯರ ಇಂದಿನ ನಡವಳಿಕೆ ಆ ನಿಯಮಾಳಿಗಳಿಗೆ ಅನುಗುಣವಾಗಿತ್ತೇ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತು ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ತಿಳಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಏಮ್ಸ್ ನರ್ಸಿಂಗ್ ನೌಕರರ ಪ್ರತಿಭಟನೆಗೆ ಹೈಕೋರ್ಟ್ ತಡೆ: ಪ್ರತಿಭಟನಾಕಾರರಿಗೆ ನೋಟಿಸ್

“ವಿಧಾನ ಪರಿಷತ್ ಸಭಾಪತಿ, ವಿದೇಶ ಪ್ರವಾಸ, ಅನಾರೋಗ್ಯ ಇಲ್ಲವೇ ಇನ್ನು ಯಾವುದೋ ಕಾರಣಕ್ಕೋ ಕರ್ತವ್ಯ ನಿರ್ವಹಣೆ ಮಾಡಲು ಸಾಧ್ಯವಾಗದೆ ಇದ್ದಾಗ ಸಭಾಪತಿಯಾಗಿ ಕಾರ್ಯನಿರ್ವಹಿಸಲು ಅವರು ಉಪಸಭಾಪತಿಯವರಿಗೆ ಅವಕಾಶವನ್ನು ನೀಡಬಹುದೆಂದು ಸದನದ ನಿಯಮಾವಳಿ ಹೇಳಿದೆ. ಇದರ ಪಾಲನೆಯಾಗಿದೆಯೇ? ಮುಖ್ಯಂತ್ರಿಗಳೇ. ಬಿಜೆಪಿಯವರು ವಿಧಾನಪರಿಷತ್ ಸಭಾಪತಿ ವಿರುದ್ದ ಅವಿಶ್ವಾಸ ನಿರ್ಣಯಕ್ಕೆ ನೋಟೀಸ್ ನೀಡಿದ್ದರು. ನಿಯಮಾವಳಿ ಪ್ರಕಾರ ಅದರ ಇತ್ಯರ್ಥಕ್ಕೆ 14 ದಿನಗಳ ಕಾಲಾವಕಾಶ ಇದೆ. ಆದರೆ ನೋಟೀಸ್ ಕ್ರಮಬದ್ದವಾಗಿಲ್ಲ ಎಂದು ಸಭಾಪತಿಯವರು ತಿರಸ್ಕರಿಸಿದ್ದ ಕಾರಣ ಆ ವಿಷಯ ಇಂದಿನ ಅಜೆಂಡಾದಲ್ಲಿ ಇರಲಿಲ್ಲ. ಅವಿಶ್ವಾಸ ನಿರ್ಣಯ ಅಜೆಂಡಾದಲ್ಲಿ ಸೇರ್ಪಡೆಯಾದ ನಂತರ ಸದನದಲ್ಲಿ ಅದನ್ನು ಕನಿಷ್ಠ ಹತ್ತು ಜನ ಯಾವುದೇ ಚರ್ಚೆ ಇಲ್ಲದೆ ಬೆಂಬಲಿಸಬೇಕು. ಅದರ ಆಧಾರದಲ್ಲಿ ಮುಂದಿನ ಐದು ದಿನಗಳೊಳಗೆ ನಿರ್ಣಯದ ಚರ್ಚೆಗೆ ಸಭಾಪತಿಗಳು ದಿನ ಗೊತ್ತುಪಡಿಸಬೇಕು. ಈ ನಿಯಮ ಪಾಲನೆಯಾಗಿದೆಯೇ? ಮುಖ್ಯಮಂತ್ರಿಗಳೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿಗೆ 14 ದಿನಗಳ ನ್ಯಾಯಾಂಗ ಬಂಧನ

“ಬಿಜೆಪಿ ಸದಸ್ಯರ ಅವಿಶ್ವಾಸ ನಿರ್ಣಯದ ನೊಟೀಸ್ ಸಭಾಪತಿಯವರಿಂದ ತಿರಸ್ಕೃತಗೊಂಡಿದೆ ಮತ್ತು ಅಜೆಂಡಾದಲ್ಲಿಯೂ ಇರಲಿಲ್ಲ. ಹೀಗಿದ್ದಾಗ ಅವರೇ ಉಪಸಭಾಪತಿಯವರನ್ನು ಅಕ್ರಮವಾಗಿ ಪೀಠದಲ್ಲಿ ಕೂರಿಸಿ ತಾವೇ ನಿರ್ಧರಿಸಿದ ಅಜೆಂಡಾ ಮೂಲಕ ಕಲಾಪ ನಡೆಸಲು ಇದೇನು ಬನಾನ ರಿಪಬ್ಲಿಕಾ? ವಿಧಾನಪರಿಷತ್ ಅಧಿವೇಶನ ನಡೆಸಲು ಸಂಸದೀಯ ವ್ಯವಹಾರಗಳ ಖಾತೆಯ ಕಾರ್ಯದರ್ಶಿಗಳು ಸಭಾಪತಿಯವರಿಗೆ ನೇರವಾಗಿ ಪತ್ರಬರೆದಿದ್ದೇ ಅಕ್ರಮ ನಡವಳಿಕೆ. ಹೀಗಿದ್ದರೂ ಸಭಾಪತಿಗಳು ಸಂಘರ್ಷಕ್ಕಿಳಿಯದೆ ಸೌಜನ್ಯಪೂರ್ವಕವಾಗಿ ಅಧಿವೇಶನ ಕರೆದಿದ್ದಾರೆ. ಈ ಸೌಜನ್ಯವೇ ತಪ್ಪಾಯಿತೇ?” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ರಜನಿಯ ಹೊಸ ರಾಜಕೀಯ ಪಕ್ಷದ ಹೆಸರು ಮಕ್ಕಳ್ ಸೇವೈ ಕಚ್ಚಿ? ಚಿಹ್ನೆ ಆಟೋ ರಿಕ್ಷಾ?

“ನಿಯಮಾವಳಿಯಂತೆ ಸದನದಲ್ಲಿ ಕೋರಮ್ ಬಗ್ಗೆ ಮಾರ್ಷಲ್ ಗಳಿಂದ ದೃಡೀಕರಿಸಿಕೊಂಡ ನಂತರ ಸೂಚನಾ ಗಂಟೆ ನಿಲ್ಲಿಸಲು ತಿಳಿಸಿ ಸಭಾಪತಿಗಳು ಬಂದು ಪೀಠವನ್ನು ಅಲಂಕರಿಸಬೇಕಾಗುತ್ತದೆ. ಇಂದು ಸೂಚನಾ ಗಂಟೆ ನಿಲ್ಲಿಸುವ ಮೊದಲೇ ಬಿಜೆಪಿ ಸದಸ್ಯರು ಉಪಸಭಾಪತಿಯವರನ್ನು ಕೂರಿಸಿ ಕಲಾಪ ನಡೆಸಲು ಹೊರಟಿದ್ದು ಅಕ್ರಮ‌ ಅಲ್ಲವೇ? ರಾಜ್ಯದ ಸಚಿವರಾದ ಅಶ್ವತ್ ನಾರಾಯಣ್
ಅವರು ಖುದ್ದಾಗಿ ಸಭಾಪತಿ ಪೀಠದಲ್ಲಿ ಉಪಸಭಾಪತಿಯವರನ್ನು ಅಕ್ರಮವಾಗಿ ಕೂರಿಸ್ತಾರೆ, ಕಾನೂನು ಸಚಿವ ಮಾಧುಸ್ವಾಮಿ
ಸದನದಲ್ಲಿ ಮಾರ್ಷಲ್ ಗಳಿಗೆ ಧಮಕಿ ಹಾಕ್ತಾರೆ. ತಮ್ಮ ಪಕ್ಷದ ಸದಸ್ಯರನ್ನು ಗೂಂಡಾಗಿರಿಗೆ ಪ್ರಚೋದಿಸುವ ಇವರು ಸಚಿವರಾಗಲು ಅರ್ಹರೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವ, ನಾವು ರಾಮ ಭಕ್ತರು: ಅಖಿಲೇಶ್ ಯಾದವ್

“ವಿಧಾನಪರಿಷತ್ ನಲ್ಲಿ ಇಂದು ನಡೆದಿರುವ ಘಟನಾವಳಿಗಳು ಬಿಜೆಪಿ ಮತ್ತು ಜೆಡಿಎಸ್‌ನ ಸದಸ್ಯರು ಕೂಡಿ ನಡೆಸಿರುವ ಯೋಜಿತ ಷಡ್ಯಂತ್ರ. ಇದರಿಂದ ಬಿಜೆಪಿ ಮತ್ತು ಜೆಡಿ(ಎಸ್) ನಡುವಿನ ಒಳ ಒಪ್ಪಂದ ಬಯಲಾಗಿದೆ. ಇದಕ್ಕಾಗಿ ಎರಡೂ ಪಕ್ಷಗಳ ನಾಯಕರು ರಾಜ್ಯದ ಜನತೆಯ ಕ್ಷಮೆ ಕೇಳಬೇಕು. ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ವಿಧಾನಪರಿಷತ್ ನಲ್ಲಿ ನಡೆದ ಘಟನಾವಳಿಗಳನ್ನು ನಿಷ್ಪಕ್ಷಪಾತವಾಗಿ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಆಶಯಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ಭರವಸೆ ನಮಗಿದೆ.” ಎಂದು ಟ್ವೀಟ್ ಮಾಡಿದ್ದಾರೆ.

ಇದರ ಕುರಿತು ಪ್ರತಿಕ್ರಿಯಿಸಿದ ಯಡಿಯೂರಪ್ಪ, “ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಜೆಡಿಎಸ್ ಸದಸ್ಯರು ಬೆಂಬಲಿಸಿದ್ದಾರೆ. ಹೀಗಾಗಿ ಅವರು ರಾಜೀನಾಮೆ ನೀಡಬೇಕಿತ್ತು. ಸಭಾಪತಿ ಪೀಠದಲ್ಲಿ ಉಪಸಭಾಪತಿ ಅವರನ್ನು ಕೂರಿಸುತ್ತೇವೆಂದು ನಾವು ಪ್ರಕಟಿಸಿದ್ದೆವು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹೋರಾಟನಿರತ ರೈತರನ್ನು ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ: ನರೇಂದ್ರ ಮೋದಿ

ಇಂದು ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಅವಿಶ್ವಾಸ ನಿರ್ಣಯ ಮಂಡನೆ ಬಳಿಕ ಉಪಸಭಾಪತಿ ಅವರೇ ಮುಂದುವರಿಯುತ್ತಾರೆ. ‘ಬೆಲ್’ ಚಾಲನೆಯಲ್ಲಿರುವ ವೇಳೆ ಪೀಠಕ್ಕೆ ಬಂದರು ಎಂಬುದು ಮುಖ್ಯವಲ್ಲ. ಕಾಂಗ್ರೆಸ್ ನೈತಿಕತೆ ಇದ್ದರೆ ಸಭಾಪತಿಗೆ ರಾಜೀನಾಮೆ ಕೊಡಲು ಸೂಚಿಸಬೇಕು. ಘಟನೆಯ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ” ಎಂದು ತಿಳಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಉಪಸಭಾಪತಿ ಧರ್ಮೇಗೌಡ, “ಸಭಾಪತಿ ಸ್ಥಾನದ ಬಗ್ಗೆ ಗೌರವವಿದೆ. ಎಲ್ಲ ಪಕ್ಷಗಳಲ್ಲಿ ಗೊಂದಲ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರು ನನ್ನ ಕೈಹಿಡಿದು ಪೀಠದಲ್ಲಿ ಕೂರಿಸಿದರು. ಆದರೆ ಕಾಂಗ್ರೆಸ್ ಸದಸ್ಯರು ಬೇಡ ಎಂದು ಎಳೆದಾಡಿದರು. ಹೀಗಾಗಿ ನಾನು ಒಬ್ಬನೇ ಏನು ಮಾಡಲಿ. ಈ ಘಟನೆಯಿಂದ ನನಗೆ ಬೇಸರವೇನು ಆಗಿಲ್ಲ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕರ್ನಾಟಕದ ಸುಮಾರು 50% ರಷ್ಟು ಯುವತಿಯರಿಗೆ ರಕ್ತಹೀನತೆ- NFHS ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...