Homeಕರ್ನಾಟಕವಿಧಾನ ಪರಿಷತ್‌ ಕೋಲಾಹಲ: ಬಿಜೆಪಿ-ಜೆಡಿಎಸ್‌ನ ‍ಷಡ್ಯಂತ್ರ ಎಂದ ಸಿದ್ದರಾಮಯ್ಯ - ಸರಣಿ ಟ್ವೀಟ್

ವಿಧಾನ ಪರಿಷತ್‌ ಕೋಲಾಹಲ: ಬಿಜೆಪಿ-ಜೆಡಿಎಸ್‌ನ ‍ಷಡ್ಯಂತ್ರ ಎಂದ ಸಿದ್ದರಾಮಯ್ಯ – ಸರಣಿ ಟ್ವೀಟ್

ಬಿಜೆಪಿ ಸದಸ್ಯರು ನನ್ನ ಕೈಹಿಡಿದು ಪೀಠದಲ್ಲಿ ಕೂರಿಸಿದರು. ಆದರೆ ಕಾಂಗ್ರೆಸ್ ಸದಸ್ಯರು ಬೇಡ ಎಂದು ಎಳೆದಾಡಿದರು. ಹೀಗಾಗಿ ನಾನು ಒಬ್ಬನೇ ಏನು ಮಾಡಲಿ- ಉಪಸಭಾಪತಿ ಧರ್ಮೇಗೌಡ

- Advertisement -
- Advertisement -

ಇಂದು ಆರಂಭವಾಗಬೆಕಿದ್ದ ವಿಧಾನ ಪರಿಷತ್ ಅಧಿವೇಶನ ಬಿಜೆಪಿ-ಕಾಂಗ್ರೆಸ್ ನಾಯಕರ ಮೇಲಾಟಗಳಿಂದ ಸ್ಥಗಿತಗೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಆಡಳಿತ ಮತ್ತು ವಿರೋಧ ಪಕ್ಷಗಳು ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡಿಕೊಳ್ಳುತ್ತಿವೆ. ಸಭಾಪತಿಗಳು ಸದನ ಪ್ರವೇಶಿಸದಂತೆ ಬಲವಂತವಾಗಿ ಬಾಗಿಲು ಹಾಕಿಕೊಂಡು ತಡೆಯೊಡ್ಡಿದ ಬಿಜೆಪಿ, ಉಪಸಭಾಪತಿಯವರನ್ನು ಅಕ್ರಮವಾಗಿ ಪೀಠದಲ್ಲಿ ಕೂರಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಕಡೆ, ಕಾಂಗ್ರೆಸ್ ನಾಯಕರು ಉಪಸಭಾಪತಿಗಳನ್ನು ಎಳೆದಾಡಿ ಗೂಂಡಾಗಿರಿ ಮಾಡಿದ್ದಾರೆ ಎಂದು ಬಿಜೆಪಿ ಪ್ರತ್ಯಾರೋಪ ಮಾಡಿದೆ. ಈಗ ಜೆಡಿಎಸ್-ಬಿಜೆಪಿ ನಾಯಕರು ಒಟ್ಟುಗೂಡಿ ರಾಜ್ಯಪಾಲರಿಗೆ ದೂರು ನೀಡಿದ್ದು, ರಾಜ್ಯಪಾಲರ ಆದೇಶಕ್ಕಾಗಿ ಕಾಯುತ್ತಿದ್ದಾರೆ.

ಈ ಬೆಳವಣಿಗೆಗಳ ಕುರಿತು ತೀವ್ರ ಆಕ್ರೋಶಗೊಂಡಿರುವ ಸಿದ್ದರಾಮಯ್ಯ, “ಅವರೇ ಉಪಸಭಾಪತಿಯವರನ್ನು ಅಕ್ರಮವಾಗಿ ಪೀಠದಲ್ಲಿ ಕೂರಿಸಿ ತಾವೇ ನಿರ್ಧರಿಸಿದ ಅಜೆಂಡಾ ಮೂಲಕ ಕಲಾಪ ನಡೆಸಲು ಇದೇನು ‘ಬನಾನ ರಿಪಬ್ಲಿಕಾ’ನಾ?” ಎಂದು ಕಿಡಿಕಾರಿದ್ದು ಸರಣಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಜಪಾನ್‌ನ ’ಟ್ವಿಟರ್ ಕಿಲ್ಲರ್’ಗೆ ಮರಣದಂಡನೆ ವಿಧಿಸಿದ ಟೋಕಿಯೊ ನ್ಯಾಯಾಲಯ

“ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಸಚಿವರು ಮತ್ತು ಸದಸ್ಯರಿಂದ ನಡೆದಿರುವ ಗೂಂಡಾಗಿರಿ ರಾಜ್ಯದ ಮಾತ್ರವಲ್ಲ, ದೇಶದ ಸಂಸದೀಯ ಪ್ರಜಾಪ್ರಭುತ್ವ ಇತಿಹಾಸದ ಕಪ್ಪು ಅಧ್ಯಾಯ. ಇದು ಖಂಡಿತ ಸಾಂವಿಧಾನಿಕ ಪ್ರಜಾಪ್ರಭುತ್ವ ಅಲ್ಲ, ಇದು ನರೇಂದ್ರ ಮೋದಿಯವರ
ಪ್ರಜಾಪ್ರಭುತ್ವ. ಇದು ಅಪರಾಧ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ನ 36 ವಿದೇಶಿಗರೂ ದೋಷಮುಕ್ತ ಎಂದ ಹೈಕೋರ್ಟ್: ಬಿಜೆಪಿಗೆ ಮುಖಭಂಗ

“ವಿಧಾನ ಪರಿಷತ್ ಸಭಾಪತಿಗಳನ್ನು ಅವರ ಕಚೇರಿಯಲ್ಲಿ ಬಲತ್ಕಾರದಿಂದ ಕೂಡಿಹಾಕಿ, ಅವರ ಅನುಮತಿ ಇಲ್ಲದೆ ಉಪಸಭಾಪತಿಗಳನ್ನು ಸಭಾಪತಿ ಪೀಠದ ಮೇಲೆ ಕೂರಿಸಿ ಕಲಾಪ ನಡೆಸಲು ಹೊರಟಿರುವ ಬಿಜೆಪಿ ಸದಸ್ಯರು ಹಾಡಹಗಲೇ ಸಂವಿಂಧಾನಕ್ಕೆ ಅಪಚಾರ ಎಸಗಿದ್ದಾರೆ. ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದ್ದಾರೆ. ವಿಧಾನಸಭೆ ಮತ್ತು ವಿಧಾನಪರಿಷತ್ ಕಲಾಪ ನಡೆಸಲು ಸರ್ವಸಮ್ಮತಿಯಿಂದ ರಚಿಸಲಾದ ನಿಯಮಾವಳಿಗಳಿವೆ. ಬಿಜೆಪಿ ಸದಸ್ಯರ ಇಂದಿನ ನಡವಳಿಕೆ ಆ ನಿಯಮಾಳಿಗಳಿಗೆ ಅನುಗುಣವಾಗಿತ್ತೇ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತು ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ತಿಳಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಏಮ್ಸ್ ನರ್ಸಿಂಗ್ ನೌಕರರ ಪ್ರತಿಭಟನೆಗೆ ಹೈಕೋರ್ಟ್ ತಡೆ: ಪ್ರತಿಭಟನಾಕಾರರಿಗೆ ನೋಟಿಸ್

“ವಿಧಾನ ಪರಿಷತ್ ಸಭಾಪತಿ, ವಿದೇಶ ಪ್ರವಾಸ, ಅನಾರೋಗ್ಯ ಇಲ್ಲವೇ ಇನ್ನು ಯಾವುದೋ ಕಾರಣಕ್ಕೋ ಕರ್ತವ್ಯ ನಿರ್ವಹಣೆ ಮಾಡಲು ಸಾಧ್ಯವಾಗದೆ ಇದ್ದಾಗ ಸಭಾಪತಿಯಾಗಿ ಕಾರ್ಯನಿರ್ವಹಿಸಲು ಅವರು ಉಪಸಭಾಪತಿಯವರಿಗೆ ಅವಕಾಶವನ್ನು ನೀಡಬಹುದೆಂದು ಸದನದ ನಿಯಮಾವಳಿ ಹೇಳಿದೆ. ಇದರ ಪಾಲನೆಯಾಗಿದೆಯೇ? ಮುಖ್ಯಂತ್ರಿಗಳೇ. ಬಿಜೆಪಿಯವರು ವಿಧಾನಪರಿಷತ್ ಸಭಾಪತಿ ವಿರುದ್ದ ಅವಿಶ್ವಾಸ ನಿರ್ಣಯಕ್ಕೆ ನೋಟೀಸ್ ನೀಡಿದ್ದರು. ನಿಯಮಾವಳಿ ಪ್ರಕಾರ ಅದರ ಇತ್ಯರ್ಥಕ್ಕೆ 14 ದಿನಗಳ ಕಾಲಾವಕಾಶ ಇದೆ. ಆದರೆ ನೋಟೀಸ್ ಕ್ರಮಬದ್ದವಾಗಿಲ್ಲ ಎಂದು ಸಭಾಪತಿಯವರು ತಿರಸ್ಕರಿಸಿದ್ದ ಕಾರಣ ಆ ವಿಷಯ ಇಂದಿನ ಅಜೆಂಡಾದಲ್ಲಿ ಇರಲಿಲ್ಲ. ಅವಿಶ್ವಾಸ ನಿರ್ಣಯ ಅಜೆಂಡಾದಲ್ಲಿ ಸೇರ್ಪಡೆಯಾದ ನಂತರ ಸದನದಲ್ಲಿ ಅದನ್ನು ಕನಿಷ್ಠ ಹತ್ತು ಜನ ಯಾವುದೇ ಚರ್ಚೆ ಇಲ್ಲದೆ ಬೆಂಬಲಿಸಬೇಕು. ಅದರ ಆಧಾರದಲ್ಲಿ ಮುಂದಿನ ಐದು ದಿನಗಳೊಳಗೆ ನಿರ್ಣಯದ ಚರ್ಚೆಗೆ ಸಭಾಪತಿಗಳು ದಿನ ಗೊತ್ತುಪಡಿಸಬೇಕು. ಈ ನಿಯಮ ಪಾಲನೆಯಾಗಿದೆಯೇ? ಮುಖ್ಯಮಂತ್ರಿಗಳೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿಗೆ 14 ದಿನಗಳ ನ್ಯಾಯಾಂಗ ಬಂಧನ

“ಬಿಜೆಪಿ ಸದಸ್ಯರ ಅವಿಶ್ವಾಸ ನಿರ್ಣಯದ ನೊಟೀಸ್ ಸಭಾಪತಿಯವರಿಂದ ತಿರಸ್ಕೃತಗೊಂಡಿದೆ ಮತ್ತು ಅಜೆಂಡಾದಲ್ಲಿಯೂ ಇರಲಿಲ್ಲ. ಹೀಗಿದ್ದಾಗ ಅವರೇ ಉಪಸಭಾಪತಿಯವರನ್ನು ಅಕ್ರಮವಾಗಿ ಪೀಠದಲ್ಲಿ ಕೂರಿಸಿ ತಾವೇ ನಿರ್ಧರಿಸಿದ ಅಜೆಂಡಾ ಮೂಲಕ ಕಲಾಪ ನಡೆಸಲು ಇದೇನು ಬನಾನ ರಿಪಬ್ಲಿಕಾ? ವಿಧಾನಪರಿಷತ್ ಅಧಿವೇಶನ ನಡೆಸಲು ಸಂಸದೀಯ ವ್ಯವಹಾರಗಳ ಖಾತೆಯ ಕಾರ್ಯದರ್ಶಿಗಳು ಸಭಾಪತಿಯವರಿಗೆ ನೇರವಾಗಿ ಪತ್ರಬರೆದಿದ್ದೇ ಅಕ್ರಮ ನಡವಳಿಕೆ. ಹೀಗಿದ್ದರೂ ಸಭಾಪತಿಗಳು ಸಂಘರ್ಷಕ್ಕಿಳಿಯದೆ ಸೌಜನ್ಯಪೂರ್ವಕವಾಗಿ ಅಧಿವೇಶನ ಕರೆದಿದ್ದಾರೆ. ಈ ಸೌಜನ್ಯವೇ ತಪ್ಪಾಯಿತೇ?” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ರಜನಿಯ ಹೊಸ ರಾಜಕೀಯ ಪಕ್ಷದ ಹೆಸರು ಮಕ್ಕಳ್ ಸೇವೈ ಕಚ್ಚಿ? ಚಿಹ್ನೆ ಆಟೋ ರಿಕ್ಷಾ?

“ನಿಯಮಾವಳಿಯಂತೆ ಸದನದಲ್ಲಿ ಕೋರಮ್ ಬಗ್ಗೆ ಮಾರ್ಷಲ್ ಗಳಿಂದ ದೃಡೀಕರಿಸಿಕೊಂಡ ನಂತರ ಸೂಚನಾ ಗಂಟೆ ನಿಲ್ಲಿಸಲು ತಿಳಿಸಿ ಸಭಾಪತಿಗಳು ಬಂದು ಪೀಠವನ್ನು ಅಲಂಕರಿಸಬೇಕಾಗುತ್ತದೆ. ಇಂದು ಸೂಚನಾ ಗಂಟೆ ನಿಲ್ಲಿಸುವ ಮೊದಲೇ ಬಿಜೆಪಿ ಸದಸ್ಯರು ಉಪಸಭಾಪತಿಯವರನ್ನು ಕೂರಿಸಿ ಕಲಾಪ ನಡೆಸಲು ಹೊರಟಿದ್ದು ಅಕ್ರಮ‌ ಅಲ್ಲವೇ? ರಾಜ್ಯದ ಸಚಿವರಾದ ಅಶ್ವತ್ ನಾರಾಯಣ್
ಅವರು ಖುದ್ದಾಗಿ ಸಭಾಪತಿ ಪೀಠದಲ್ಲಿ ಉಪಸಭಾಪತಿಯವರನ್ನು ಅಕ್ರಮವಾಗಿ ಕೂರಿಸ್ತಾರೆ, ಕಾನೂನು ಸಚಿವ ಮಾಧುಸ್ವಾಮಿ
ಸದನದಲ್ಲಿ ಮಾರ್ಷಲ್ ಗಳಿಗೆ ಧಮಕಿ ಹಾಕ್ತಾರೆ. ತಮ್ಮ ಪಕ್ಷದ ಸದಸ್ಯರನ್ನು ಗೂಂಡಾಗಿರಿಗೆ ಪ್ರಚೋದಿಸುವ ಇವರು ಸಚಿವರಾಗಲು ಅರ್ಹರೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವ, ನಾವು ರಾಮ ಭಕ್ತರು: ಅಖಿಲೇಶ್ ಯಾದವ್

“ವಿಧಾನಪರಿಷತ್ ನಲ್ಲಿ ಇಂದು ನಡೆದಿರುವ ಘಟನಾವಳಿಗಳು ಬಿಜೆಪಿ ಮತ್ತು ಜೆಡಿಎಸ್‌ನ ಸದಸ್ಯರು ಕೂಡಿ ನಡೆಸಿರುವ ಯೋಜಿತ ಷಡ್ಯಂತ್ರ. ಇದರಿಂದ ಬಿಜೆಪಿ ಮತ್ತು ಜೆಡಿ(ಎಸ್) ನಡುವಿನ ಒಳ ಒಪ್ಪಂದ ಬಯಲಾಗಿದೆ. ಇದಕ್ಕಾಗಿ ಎರಡೂ ಪಕ್ಷಗಳ ನಾಯಕರು ರಾಜ್ಯದ ಜನತೆಯ ಕ್ಷಮೆ ಕೇಳಬೇಕು. ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ವಿಧಾನಪರಿಷತ್ ನಲ್ಲಿ ನಡೆದ ಘಟನಾವಳಿಗಳನ್ನು ನಿಷ್ಪಕ್ಷಪಾತವಾಗಿ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಆಶಯಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ಭರವಸೆ ನಮಗಿದೆ.” ಎಂದು ಟ್ವೀಟ್ ಮಾಡಿದ್ದಾರೆ.

ಇದರ ಕುರಿತು ಪ್ರತಿಕ್ರಿಯಿಸಿದ ಯಡಿಯೂರಪ್ಪ, “ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಜೆಡಿಎಸ್ ಸದಸ್ಯರು ಬೆಂಬಲಿಸಿದ್ದಾರೆ. ಹೀಗಾಗಿ ಅವರು ರಾಜೀನಾಮೆ ನೀಡಬೇಕಿತ್ತು. ಸಭಾಪತಿ ಪೀಠದಲ್ಲಿ ಉಪಸಭಾಪತಿ ಅವರನ್ನು ಕೂರಿಸುತ್ತೇವೆಂದು ನಾವು ಪ್ರಕಟಿಸಿದ್ದೆವು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹೋರಾಟನಿರತ ರೈತರನ್ನು ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ: ನರೇಂದ್ರ ಮೋದಿ

ಇಂದು ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಅವಿಶ್ವಾಸ ನಿರ್ಣಯ ಮಂಡನೆ ಬಳಿಕ ಉಪಸಭಾಪತಿ ಅವರೇ ಮುಂದುವರಿಯುತ್ತಾರೆ. ‘ಬೆಲ್’ ಚಾಲನೆಯಲ್ಲಿರುವ ವೇಳೆ ಪೀಠಕ್ಕೆ ಬಂದರು ಎಂಬುದು ಮುಖ್ಯವಲ್ಲ. ಕಾಂಗ್ರೆಸ್ ನೈತಿಕತೆ ಇದ್ದರೆ ಸಭಾಪತಿಗೆ ರಾಜೀನಾಮೆ ಕೊಡಲು ಸೂಚಿಸಬೇಕು. ಘಟನೆಯ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ” ಎಂದು ತಿಳಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಉಪಸಭಾಪತಿ ಧರ್ಮೇಗೌಡ, “ಸಭಾಪತಿ ಸ್ಥಾನದ ಬಗ್ಗೆ ಗೌರವವಿದೆ. ಎಲ್ಲ ಪಕ್ಷಗಳಲ್ಲಿ ಗೊಂದಲ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರು ನನ್ನ ಕೈಹಿಡಿದು ಪೀಠದಲ್ಲಿ ಕೂರಿಸಿದರು. ಆದರೆ ಕಾಂಗ್ರೆಸ್ ಸದಸ್ಯರು ಬೇಡ ಎಂದು ಎಳೆದಾಡಿದರು. ಹೀಗಾಗಿ ನಾನು ಒಬ್ಬನೇ ಏನು ಮಾಡಲಿ. ಈ ಘಟನೆಯಿಂದ ನನಗೆ ಬೇಸರವೇನು ಆಗಿಲ್ಲ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕರ್ನಾಟಕದ ಸುಮಾರು 50% ರಷ್ಟು ಯುವತಿಯರಿಗೆ ರಕ್ತಹೀನತೆ- NFHS ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...