Homeಫ್ಯಾಕ್ಟ್‌ಚೆಕ್‘ಪಾಕಿಸ್ತಾನ್‌ ಮುರ್ದಾಬಾದ್‌’ ಘೋಷಣೆಯೊಂದಿಗೆ ಕಸದಬುಟ್ಟಿ ತಯಾರಿಸಿತೆ ನೀಲ್ ಕಮಲ್ ಸಂಸ್ಥೆ?

‘ಪಾಕಿಸ್ತಾನ್‌ ಮುರ್ದಾಬಾದ್‌’ ಘೋಷಣೆಯೊಂದಿಗೆ ಕಸದಬುಟ್ಟಿ ತಯಾರಿಸಿತೆ ನೀಲ್ ಕಮಲ್ ಸಂಸ್ಥೆ?

- Advertisement -
- Advertisement -

ನೀಲ್ ಕಮಲ್ ಸಂಸ್ಥೆಯು ‘ಪಾಕಿಸ್ತಾನ್ ಮುರ್ದಾಬಾದ್’ (ಪಾಕಿಸ್ತಾನಕ್ಕೆ ಧಿಕ್ಕಾರ) ಘೋಷಣೆಯನ್ನು ಪಾಕಿಸ್ತಾನದ ಬಾವುಟದೊಂದಿಗೆ ತನ್ನ ಉತ್ಪನ್ನದ ಮೇಲೆ ಮುದ್ರಿಸಿದೆ ಎಂಬ ಚಿತ್ರವೊಂದು ಇತ್ತೀಚೆಗೆ ವೈರಲ್‌ ಆಗಿದೆ.

ರೈಲ್ವೆ ನಿಲ್ದಾಣವೊಂದರ ಕಸದಬುಟ್ಟಿಯ ಮೇಲೆ ಈ ರೀತಿಯ ಘೋಷಣೆ ಹಾಗೂ ಭಾವುಟದ ಚಿತ್ರವಿದ್ದು, ಶಿಪ್ರಾ ದತ್‌ ಎಂಬುವವರು, “ಪ್ಲಾಸ್ಟಿಕ್ ಉತ್ಪನ್ನ ಸಂಸ್ಥೆ ನೀಲ್ ಕಮಲ್, ಬಹಳ ಸಂತೋಷ ತರುವ ಕೆಲಸ ಮಾಡಿದೆ” ಎಂಬ ಒಕ್ಕಣೆಯಲ್ಲಿ ತಮ್ಮ ಟ್ಟಿಟರ್‌ ಖಾತೆಯಲ್ಲಿ ಈ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದನ್ನು ತಕ್ಷಣದಲ್ಲೇ ನೂರಾರು ಮಂದಿ ರೀಟ್ವೀಟ್‌ ಮಾಡಿದ್ದಾರೆ.

ಬಿಜೆಪಿಯ ಪರ ಸದಾ ಬ್ಯಾಟಿಂಗ್ ಮಾಡುವ ನಟಿ ಕಂಗನಾ ರಣಾವತ್‌ ಅಭಿಮಾನಿಗಳು, ಇದೇ ಅರ್ಥದಲ್ಲಿಯೇ ಚಿತ್ರವನ್ನು ತಮ್ಮ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. ಗುಂಜೇಶ್‌ ಗೌತಮ್ ಝಾ, ಹಮ್‌ಲೋಗ್ ಇಂಡಿಯಾ, ಪಿ.ಎನ್.ರಾಯ್, ಜೀತೇಂದ್ರ ಭಾರದ್ವಾಜ್ ಸೇರಿದಂತೆ ಇನ್ನಿತರರೂ ಈ ಚಿತ್ರವನ್ನು ಹಂಚಿಕೊಂಡಿದ್ದಾರೆ. ಫೇಸ್ ಬುಕ್‌ನಲ್ಲೂ ಚಿತ್ರ ವೈರಲ್ ಆಗಿದೆ.

ಸತ್ಯಾಂಶವೇನು?

ನಿಜಾಂಶವನ್ನು ಬೇಧಿಸಿರುವ ಆಲ್ಟ್ ನ್ಯೂಸ್‌‌, ಸಾಮಾಜಿಕ ಮಾಧ್ಯಮಗಳಲ್ಲಿ ಬಿಂಬಿಸಿರುವಂತೆ, ’ನೀಲ್ ಕಮಲ್ ಸಂಸ್ಥೆ ಈ ರೀತಿಯ ಘೋಷಣೆಯೊಂದಿಗೆ ಕಸದಬುಟ್ಟಿಯನ್ನು ಉತ್ಪಾದಿಸಿಲ್ಲ’ ಎಂದು ಸ್ಪಷ್ಟಪಡಿಸಿದೆ.

ಫೆ.22, 2019ರಲ್ಲಿ ಈ ಚಿತ್ರ ’ಪತ್ರಿಕಾ’ ಜಾಲತಾಣದಲ್ಲಿ ವರದಿಯಾಗಿದೆ. ಪುಲ್ವಾಮ ದಾಳಿಯಾದ ಹಿನ್ನೆಲೆಯಲ್ಲಿ ಯಾರೋ ಅಪರಿಚಿತರು, ’ಪಾಕಿಸ್ತಾನ ಮುರ್ದಾಬಾದ್’ ಸ್ಟಿಕ್ಕರ್‌ಗಳನ್ನು 10ರಿಂದ 12 ಕಸದಬುಟ್ಟಿಗಳ ಮೇಲೆ ಉದಯಪುರ್ ರೈಲ್ವೆ ನಿಲ್ದಾಣದಲ್ಲಿ ಅಂಟಿಸಿದ್ದಾರೆ. ಅಧಿಕಾರಿಗಳು ಸೂಚನೆ ನೀಡಿದ ಬಳಿಕ ಆ ಸ್ಟಿಕ್ಕರ್ಗಳನ್ನು ತೆರವು ಮಾಡಲಾಗಿದೆ. ಸ್ಟಿಕ್ಕರ್ ಅಂಟಿಸಿರುವ ಸಂಬಂಧ ಸ್ಥಳೀಯ ಮಾಧ್ಯಮ ’ಉದಯಪುರ್ ಟೈಮ್ಸ್’ ಕೂಡ ವರದಿ ಮಾಡಿತ್ತು. 2019ರ ವರದಿಯನ್ನು ತಿರುಚಿ, ಬೇರೊಂದು ಒಕ್ಕಣೆಯೊಂದಿಗೆ ಇತ್ತೀಚೆಗೆ ಈ ಚಿತ್ರವನ್ನು ವೈರಲ್ ಮಾಡಲಾಗಿದೆ.

ಇದನ್ನೂ ಓದಿ: ಇದು ಭಯೋತ್ಪಾದಕರನ್ನು ಬಂಧಿಸುವ ದೃಶ್ಯವಲ್ಲ!

ನೀಲ್ ಕಮಲ್ ಸಂಸ್ಥೆಯು, “ಈ ಥರದ ಯಾವುದೇ ಉತ್ಪನ್ನಗಳನ್ನು ನಾವು ತಯಾರಿಸಿಲ್ಲ. ಯಾವುದೇ ಸ್ಟಿಕ್ಕರ್‍ಗಳನ್ನೂ ಅಂಟಿಸಿಲ್ಲ” ಎಂದು ಆಲ್ಟ್ ನ್ಯೂಸ್‌ಗೆ ತಿಳಿಸಿದೆ. ಕಂಪೆನಿಯ ಹೆಸರು, ಲೋಗೋ, ಸಂಪರ್ಕ ಮಾಹಿತಿ ಮಾತ್ರ ಉತ್ಪನ್ನದ ಮೇಲೆ ಮುದ್ರಿಸಿರುವುದಾಗಿ ಸ್ಪಷ್ಟಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...