Homeಫ್ಯಾಕ್ಟ್‌ಚೆಕ್‘ಪಾಕಿಸ್ತಾನ್‌ ಮುರ್ದಾಬಾದ್‌’ ಘೋಷಣೆಯೊಂದಿಗೆ ಕಸದಬುಟ್ಟಿ ತಯಾರಿಸಿತೆ ನೀಲ್ ಕಮಲ್ ಸಂಸ್ಥೆ?

‘ಪಾಕಿಸ್ತಾನ್‌ ಮುರ್ದಾಬಾದ್‌’ ಘೋಷಣೆಯೊಂದಿಗೆ ಕಸದಬುಟ್ಟಿ ತಯಾರಿಸಿತೆ ನೀಲ್ ಕಮಲ್ ಸಂಸ್ಥೆ?

- Advertisement -
- Advertisement -

ನೀಲ್ ಕಮಲ್ ಸಂಸ್ಥೆಯು ‘ಪಾಕಿಸ್ತಾನ್ ಮುರ್ದಾಬಾದ್’ (ಪಾಕಿಸ್ತಾನಕ್ಕೆ ಧಿಕ್ಕಾರ) ಘೋಷಣೆಯನ್ನು ಪಾಕಿಸ್ತಾನದ ಬಾವುಟದೊಂದಿಗೆ ತನ್ನ ಉತ್ಪನ್ನದ ಮೇಲೆ ಮುದ್ರಿಸಿದೆ ಎಂಬ ಚಿತ್ರವೊಂದು ಇತ್ತೀಚೆಗೆ ವೈರಲ್‌ ಆಗಿದೆ.

ರೈಲ್ವೆ ನಿಲ್ದಾಣವೊಂದರ ಕಸದಬುಟ್ಟಿಯ ಮೇಲೆ ಈ ರೀತಿಯ ಘೋಷಣೆ ಹಾಗೂ ಭಾವುಟದ ಚಿತ್ರವಿದ್ದು, ಶಿಪ್ರಾ ದತ್‌ ಎಂಬುವವರು, “ಪ್ಲಾಸ್ಟಿಕ್ ಉತ್ಪನ್ನ ಸಂಸ್ಥೆ ನೀಲ್ ಕಮಲ್, ಬಹಳ ಸಂತೋಷ ತರುವ ಕೆಲಸ ಮಾಡಿದೆ” ಎಂಬ ಒಕ್ಕಣೆಯಲ್ಲಿ ತಮ್ಮ ಟ್ಟಿಟರ್‌ ಖಾತೆಯಲ್ಲಿ ಈ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದನ್ನು ತಕ್ಷಣದಲ್ಲೇ ನೂರಾರು ಮಂದಿ ರೀಟ್ವೀಟ್‌ ಮಾಡಿದ್ದಾರೆ.

ಬಿಜೆಪಿಯ ಪರ ಸದಾ ಬ್ಯಾಟಿಂಗ್ ಮಾಡುವ ನಟಿ ಕಂಗನಾ ರಣಾವತ್‌ ಅಭಿಮಾನಿಗಳು, ಇದೇ ಅರ್ಥದಲ್ಲಿಯೇ ಚಿತ್ರವನ್ನು ತಮ್ಮ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. ಗುಂಜೇಶ್‌ ಗೌತಮ್ ಝಾ, ಹಮ್‌ಲೋಗ್ ಇಂಡಿಯಾ, ಪಿ.ಎನ್.ರಾಯ್, ಜೀತೇಂದ್ರ ಭಾರದ್ವಾಜ್ ಸೇರಿದಂತೆ ಇನ್ನಿತರರೂ ಈ ಚಿತ್ರವನ್ನು ಹಂಚಿಕೊಂಡಿದ್ದಾರೆ. ಫೇಸ್ ಬುಕ್‌ನಲ್ಲೂ ಚಿತ್ರ ವೈರಲ್ ಆಗಿದೆ.

ಸತ್ಯಾಂಶವೇನು?

ನಿಜಾಂಶವನ್ನು ಬೇಧಿಸಿರುವ ಆಲ್ಟ್ ನ್ಯೂಸ್‌‌, ಸಾಮಾಜಿಕ ಮಾಧ್ಯಮಗಳಲ್ಲಿ ಬಿಂಬಿಸಿರುವಂತೆ, ’ನೀಲ್ ಕಮಲ್ ಸಂಸ್ಥೆ ಈ ರೀತಿಯ ಘೋಷಣೆಯೊಂದಿಗೆ ಕಸದಬುಟ್ಟಿಯನ್ನು ಉತ್ಪಾದಿಸಿಲ್ಲ’ ಎಂದು ಸ್ಪಷ್ಟಪಡಿಸಿದೆ.

ಫೆ.22, 2019ರಲ್ಲಿ ಈ ಚಿತ್ರ ’ಪತ್ರಿಕಾ’ ಜಾಲತಾಣದಲ್ಲಿ ವರದಿಯಾಗಿದೆ. ಪುಲ್ವಾಮ ದಾಳಿಯಾದ ಹಿನ್ನೆಲೆಯಲ್ಲಿ ಯಾರೋ ಅಪರಿಚಿತರು, ’ಪಾಕಿಸ್ತಾನ ಮುರ್ದಾಬಾದ್’ ಸ್ಟಿಕ್ಕರ್‌ಗಳನ್ನು 10ರಿಂದ 12 ಕಸದಬುಟ್ಟಿಗಳ ಮೇಲೆ ಉದಯಪುರ್ ರೈಲ್ವೆ ನಿಲ್ದಾಣದಲ್ಲಿ ಅಂಟಿಸಿದ್ದಾರೆ. ಅಧಿಕಾರಿಗಳು ಸೂಚನೆ ನೀಡಿದ ಬಳಿಕ ಆ ಸ್ಟಿಕ್ಕರ್ಗಳನ್ನು ತೆರವು ಮಾಡಲಾಗಿದೆ. ಸ್ಟಿಕ್ಕರ್ ಅಂಟಿಸಿರುವ ಸಂಬಂಧ ಸ್ಥಳೀಯ ಮಾಧ್ಯಮ ’ಉದಯಪುರ್ ಟೈಮ್ಸ್’ ಕೂಡ ವರದಿ ಮಾಡಿತ್ತು. 2019ರ ವರದಿಯನ್ನು ತಿರುಚಿ, ಬೇರೊಂದು ಒಕ್ಕಣೆಯೊಂದಿಗೆ ಇತ್ತೀಚೆಗೆ ಈ ಚಿತ್ರವನ್ನು ವೈರಲ್ ಮಾಡಲಾಗಿದೆ.

ಇದನ್ನೂ ಓದಿ: ಇದು ಭಯೋತ್ಪಾದಕರನ್ನು ಬಂಧಿಸುವ ದೃಶ್ಯವಲ್ಲ!

ನೀಲ್ ಕಮಲ್ ಸಂಸ್ಥೆಯು, “ಈ ಥರದ ಯಾವುದೇ ಉತ್ಪನ್ನಗಳನ್ನು ನಾವು ತಯಾರಿಸಿಲ್ಲ. ಯಾವುದೇ ಸ್ಟಿಕ್ಕರ್‍ಗಳನ್ನೂ ಅಂಟಿಸಿಲ್ಲ” ಎಂದು ಆಲ್ಟ್ ನ್ಯೂಸ್‌ಗೆ ತಿಳಿಸಿದೆ. ಕಂಪೆನಿಯ ಹೆಸರು, ಲೋಗೋ, ಸಂಪರ್ಕ ಮಾಹಿತಿ ಮಾತ್ರ ಉತ್ಪನ್ನದ ಮೇಲೆ ಮುದ್ರಿಸಿರುವುದಾಗಿ ಸ್ಪಷ್ಟಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...