Homeಫ್ಯಾಕ್ಟ್‌ಚೆಕ್‘ಪಾಕಿಸ್ತಾನ್‌ ಮುರ್ದಾಬಾದ್‌’ ಘೋಷಣೆಯೊಂದಿಗೆ ಕಸದಬುಟ್ಟಿ ತಯಾರಿಸಿತೆ ನೀಲ್ ಕಮಲ್ ಸಂಸ್ಥೆ?

‘ಪಾಕಿಸ್ತಾನ್‌ ಮುರ್ದಾಬಾದ್‌’ ಘೋಷಣೆಯೊಂದಿಗೆ ಕಸದಬುಟ್ಟಿ ತಯಾರಿಸಿತೆ ನೀಲ್ ಕಮಲ್ ಸಂಸ್ಥೆ?

- Advertisement -
- Advertisement -

ನೀಲ್ ಕಮಲ್ ಸಂಸ್ಥೆಯು ‘ಪಾಕಿಸ್ತಾನ್ ಮುರ್ದಾಬಾದ್’ (ಪಾಕಿಸ್ತಾನಕ್ಕೆ ಧಿಕ್ಕಾರ) ಘೋಷಣೆಯನ್ನು ಪಾಕಿಸ್ತಾನದ ಬಾವುಟದೊಂದಿಗೆ ತನ್ನ ಉತ್ಪನ್ನದ ಮೇಲೆ ಮುದ್ರಿಸಿದೆ ಎಂಬ ಚಿತ್ರವೊಂದು ಇತ್ತೀಚೆಗೆ ವೈರಲ್‌ ಆಗಿದೆ.

ರೈಲ್ವೆ ನಿಲ್ದಾಣವೊಂದರ ಕಸದಬುಟ್ಟಿಯ ಮೇಲೆ ಈ ರೀತಿಯ ಘೋಷಣೆ ಹಾಗೂ ಭಾವುಟದ ಚಿತ್ರವಿದ್ದು, ಶಿಪ್ರಾ ದತ್‌ ಎಂಬುವವರು, “ಪ್ಲಾಸ್ಟಿಕ್ ಉತ್ಪನ್ನ ಸಂಸ್ಥೆ ನೀಲ್ ಕಮಲ್, ಬಹಳ ಸಂತೋಷ ತರುವ ಕೆಲಸ ಮಾಡಿದೆ” ಎಂಬ ಒಕ್ಕಣೆಯಲ್ಲಿ ತಮ್ಮ ಟ್ಟಿಟರ್‌ ಖಾತೆಯಲ್ಲಿ ಈ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದನ್ನು ತಕ್ಷಣದಲ್ಲೇ ನೂರಾರು ಮಂದಿ ರೀಟ್ವೀಟ್‌ ಮಾಡಿದ್ದಾರೆ.

ಬಿಜೆಪಿಯ ಪರ ಸದಾ ಬ್ಯಾಟಿಂಗ್ ಮಾಡುವ ನಟಿ ಕಂಗನಾ ರಣಾವತ್‌ ಅಭಿಮಾನಿಗಳು, ಇದೇ ಅರ್ಥದಲ್ಲಿಯೇ ಚಿತ್ರವನ್ನು ತಮ್ಮ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. ಗುಂಜೇಶ್‌ ಗೌತಮ್ ಝಾ, ಹಮ್‌ಲೋಗ್ ಇಂಡಿಯಾ, ಪಿ.ಎನ್.ರಾಯ್, ಜೀತೇಂದ್ರ ಭಾರದ್ವಾಜ್ ಸೇರಿದಂತೆ ಇನ್ನಿತರರೂ ಈ ಚಿತ್ರವನ್ನು ಹಂಚಿಕೊಂಡಿದ್ದಾರೆ. ಫೇಸ್ ಬುಕ್‌ನಲ್ಲೂ ಚಿತ್ರ ವೈರಲ್ ಆಗಿದೆ.

ಸತ್ಯಾಂಶವೇನು?

ನಿಜಾಂಶವನ್ನು ಬೇಧಿಸಿರುವ ಆಲ್ಟ್ ನ್ಯೂಸ್‌‌, ಸಾಮಾಜಿಕ ಮಾಧ್ಯಮಗಳಲ್ಲಿ ಬಿಂಬಿಸಿರುವಂತೆ, ’ನೀಲ್ ಕಮಲ್ ಸಂಸ್ಥೆ ಈ ರೀತಿಯ ಘೋಷಣೆಯೊಂದಿಗೆ ಕಸದಬುಟ್ಟಿಯನ್ನು ಉತ್ಪಾದಿಸಿಲ್ಲ’ ಎಂದು ಸ್ಪಷ್ಟಪಡಿಸಿದೆ.

ಫೆ.22, 2019ರಲ್ಲಿ ಈ ಚಿತ್ರ ’ಪತ್ರಿಕಾ’ ಜಾಲತಾಣದಲ್ಲಿ ವರದಿಯಾಗಿದೆ. ಪುಲ್ವಾಮ ದಾಳಿಯಾದ ಹಿನ್ನೆಲೆಯಲ್ಲಿ ಯಾರೋ ಅಪರಿಚಿತರು, ’ಪಾಕಿಸ್ತಾನ ಮುರ್ದಾಬಾದ್’ ಸ್ಟಿಕ್ಕರ್‌ಗಳನ್ನು 10ರಿಂದ 12 ಕಸದಬುಟ್ಟಿಗಳ ಮೇಲೆ ಉದಯಪುರ್ ರೈಲ್ವೆ ನಿಲ್ದಾಣದಲ್ಲಿ ಅಂಟಿಸಿದ್ದಾರೆ. ಅಧಿಕಾರಿಗಳು ಸೂಚನೆ ನೀಡಿದ ಬಳಿಕ ಆ ಸ್ಟಿಕ್ಕರ್ಗಳನ್ನು ತೆರವು ಮಾಡಲಾಗಿದೆ. ಸ್ಟಿಕ್ಕರ್ ಅಂಟಿಸಿರುವ ಸಂಬಂಧ ಸ್ಥಳೀಯ ಮಾಧ್ಯಮ ’ಉದಯಪುರ್ ಟೈಮ್ಸ್’ ಕೂಡ ವರದಿ ಮಾಡಿತ್ತು. 2019ರ ವರದಿಯನ್ನು ತಿರುಚಿ, ಬೇರೊಂದು ಒಕ್ಕಣೆಯೊಂದಿಗೆ ಇತ್ತೀಚೆಗೆ ಈ ಚಿತ್ರವನ್ನು ವೈರಲ್ ಮಾಡಲಾಗಿದೆ.

ಇದನ್ನೂ ಓದಿ: ಇದು ಭಯೋತ್ಪಾದಕರನ್ನು ಬಂಧಿಸುವ ದೃಶ್ಯವಲ್ಲ!

ನೀಲ್ ಕಮಲ್ ಸಂಸ್ಥೆಯು, “ಈ ಥರದ ಯಾವುದೇ ಉತ್ಪನ್ನಗಳನ್ನು ನಾವು ತಯಾರಿಸಿಲ್ಲ. ಯಾವುದೇ ಸ್ಟಿಕ್ಕರ್‍ಗಳನ್ನೂ ಅಂಟಿಸಿಲ್ಲ” ಎಂದು ಆಲ್ಟ್ ನ್ಯೂಸ್‌ಗೆ ತಿಳಿಸಿದೆ. ಕಂಪೆನಿಯ ಹೆಸರು, ಲೋಗೋ, ಸಂಪರ್ಕ ಮಾಹಿತಿ ಮಾತ್ರ ಉತ್ಪನ್ನದ ಮೇಲೆ ಮುದ್ರಿಸಿರುವುದಾಗಿ ಸ್ಪಷ್ಟಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...