Homeಫ್ಯಾಕ್ಟ್‌ಚೆಕ್‘ಪಾಕಿಸ್ತಾನ್‌ ಮುರ್ದಾಬಾದ್‌’ ಘೋಷಣೆಯೊಂದಿಗೆ ಕಸದಬುಟ್ಟಿ ತಯಾರಿಸಿತೆ ನೀಲ್ ಕಮಲ್ ಸಂಸ್ಥೆ?

‘ಪಾಕಿಸ್ತಾನ್‌ ಮುರ್ದಾಬಾದ್‌’ ಘೋಷಣೆಯೊಂದಿಗೆ ಕಸದಬುಟ್ಟಿ ತಯಾರಿಸಿತೆ ನೀಲ್ ಕಮಲ್ ಸಂಸ್ಥೆ?

- Advertisement -
- Advertisement -

ನೀಲ್ ಕಮಲ್ ಸಂಸ್ಥೆಯು ‘ಪಾಕಿಸ್ತಾನ್ ಮುರ್ದಾಬಾದ್’ (ಪಾಕಿಸ್ತಾನಕ್ಕೆ ಧಿಕ್ಕಾರ) ಘೋಷಣೆಯನ್ನು ಪಾಕಿಸ್ತಾನದ ಬಾವುಟದೊಂದಿಗೆ ತನ್ನ ಉತ್ಪನ್ನದ ಮೇಲೆ ಮುದ್ರಿಸಿದೆ ಎಂಬ ಚಿತ್ರವೊಂದು ಇತ್ತೀಚೆಗೆ ವೈರಲ್‌ ಆಗಿದೆ.

ರೈಲ್ವೆ ನಿಲ್ದಾಣವೊಂದರ ಕಸದಬುಟ್ಟಿಯ ಮೇಲೆ ಈ ರೀತಿಯ ಘೋಷಣೆ ಹಾಗೂ ಭಾವುಟದ ಚಿತ್ರವಿದ್ದು, ಶಿಪ್ರಾ ದತ್‌ ಎಂಬುವವರು, “ಪ್ಲಾಸ್ಟಿಕ್ ಉತ್ಪನ್ನ ಸಂಸ್ಥೆ ನೀಲ್ ಕಮಲ್, ಬಹಳ ಸಂತೋಷ ತರುವ ಕೆಲಸ ಮಾಡಿದೆ” ಎಂಬ ಒಕ್ಕಣೆಯಲ್ಲಿ ತಮ್ಮ ಟ್ಟಿಟರ್‌ ಖಾತೆಯಲ್ಲಿ ಈ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದನ್ನು ತಕ್ಷಣದಲ್ಲೇ ನೂರಾರು ಮಂದಿ ರೀಟ್ವೀಟ್‌ ಮಾಡಿದ್ದಾರೆ.

ಬಿಜೆಪಿಯ ಪರ ಸದಾ ಬ್ಯಾಟಿಂಗ್ ಮಾಡುವ ನಟಿ ಕಂಗನಾ ರಣಾವತ್‌ ಅಭಿಮಾನಿಗಳು, ಇದೇ ಅರ್ಥದಲ್ಲಿಯೇ ಚಿತ್ರವನ್ನು ತಮ್ಮ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. ಗುಂಜೇಶ್‌ ಗೌತಮ್ ಝಾ, ಹಮ್‌ಲೋಗ್ ಇಂಡಿಯಾ, ಪಿ.ಎನ್.ರಾಯ್, ಜೀತೇಂದ್ರ ಭಾರದ್ವಾಜ್ ಸೇರಿದಂತೆ ಇನ್ನಿತರರೂ ಈ ಚಿತ್ರವನ್ನು ಹಂಚಿಕೊಂಡಿದ್ದಾರೆ. ಫೇಸ್ ಬುಕ್‌ನಲ್ಲೂ ಚಿತ್ರ ವೈರಲ್ ಆಗಿದೆ.

ಸತ್ಯಾಂಶವೇನು?

ನಿಜಾಂಶವನ್ನು ಬೇಧಿಸಿರುವ ಆಲ್ಟ್ ನ್ಯೂಸ್‌‌, ಸಾಮಾಜಿಕ ಮಾಧ್ಯಮಗಳಲ್ಲಿ ಬಿಂಬಿಸಿರುವಂತೆ, ’ನೀಲ್ ಕಮಲ್ ಸಂಸ್ಥೆ ಈ ರೀತಿಯ ಘೋಷಣೆಯೊಂದಿಗೆ ಕಸದಬುಟ್ಟಿಯನ್ನು ಉತ್ಪಾದಿಸಿಲ್ಲ’ ಎಂದು ಸ್ಪಷ್ಟಪಡಿಸಿದೆ.

ಫೆ.22, 2019ರಲ್ಲಿ ಈ ಚಿತ್ರ ’ಪತ್ರಿಕಾ’ ಜಾಲತಾಣದಲ್ಲಿ ವರದಿಯಾಗಿದೆ. ಪುಲ್ವಾಮ ದಾಳಿಯಾದ ಹಿನ್ನೆಲೆಯಲ್ಲಿ ಯಾರೋ ಅಪರಿಚಿತರು, ’ಪಾಕಿಸ್ತಾನ ಮುರ್ದಾಬಾದ್’ ಸ್ಟಿಕ್ಕರ್‌ಗಳನ್ನು 10ರಿಂದ 12 ಕಸದಬುಟ್ಟಿಗಳ ಮೇಲೆ ಉದಯಪುರ್ ರೈಲ್ವೆ ನಿಲ್ದಾಣದಲ್ಲಿ ಅಂಟಿಸಿದ್ದಾರೆ. ಅಧಿಕಾರಿಗಳು ಸೂಚನೆ ನೀಡಿದ ಬಳಿಕ ಆ ಸ್ಟಿಕ್ಕರ್ಗಳನ್ನು ತೆರವು ಮಾಡಲಾಗಿದೆ. ಸ್ಟಿಕ್ಕರ್ ಅಂಟಿಸಿರುವ ಸಂಬಂಧ ಸ್ಥಳೀಯ ಮಾಧ್ಯಮ ’ಉದಯಪುರ್ ಟೈಮ್ಸ್’ ಕೂಡ ವರದಿ ಮಾಡಿತ್ತು. 2019ರ ವರದಿಯನ್ನು ತಿರುಚಿ, ಬೇರೊಂದು ಒಕ್ಕಣೆಯೊಂದಿಗೆ ಇತ್ತೀಚೆಗೆ ಈ ಚಿತ್ರವನ್ನು ವೈರಲ್ ಮಾಡಲಾಗಿದೆ.

ಇದನ್ನೂ ಓದಿ: ಇದು ಭಯೋತ್ಪಾದಕರನ್ನು ಬಂಧಿಸುವ ದೃಶ್ಯವಲ್ಲ!

ನೀಲ್ ಕಮಲ್ ಸಂಸ್ಥೆಯು, “ಈ ಥರದ ಯಾವುದೇ ಉತ್ಪನ್ನಗಳನ್ನು ನಾವು ತಯಾರಿಸಿಲ್ಲ. ಯಾವುದೇ ಸ್ಟಿಕ್ಕರ್‍ಗಳನ್ನೂ ಅಂಟಿಸಿಲ್ಲ” ಎಂದು ಆಲ್ಟ್ ನ್ಯೂಸ್‌ಗೆ ತಿಳಿಸಿದೆ. ಕಂಪೆನಿಯ ಹೆಸರು, ಲೋಗೋ, ಸಂಪರ್ಕ ಮಾಹಿತಿ ಮಾತ್ರ ಉತ್ಪನ್ನದ ಮೇಲೆ ಮುದ್ರಿಸಿರುವುದಾಗಿ ಸ್ಪಷ್ಟಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...