ಹಿರಿಯ ಅಧಿಕಾರಿಯನ್ನು ಕಚೇರಿಯಿಂದ ಎಳೆದೊಯ್ದು ಥಳಿಸಿದ ದುಷ್ಕರ್ಮಿಗಳು!

ಒಡಿಶಾ ಆಡಳಿತ ಸೇವೆಯ (ಒಎಎಸ್‌) ಹಿರಿಯ ಅಧಿಕಾರಿಯೊಬ್ಬರನ್ನು ಕಚೇರಿಯಿಂದ ಎಳೆದೊಯ್ದು ಕ್ರೂರವಾಗಿ ಥಳಿಸಿರುವ ಘಟನೆ ಭುವನೇಶ್ವರ ಮಹಾನಗರ ಪಾಲಿಕೆಯಲ್ಲಿ (ಬಿಎಂಸಿ) ಸೋಮವಾರ (ಜೂನ್ 30, 2025) ನಡೆದಿದೆ. ಅಧಿಕಾರಿ ವರ್ಗ, ವಿರೋಧ ಪಕ್ಷಗಳ ನಾಯಕರು ಮತ್ತು ಸಾರ್ವಜನಿಕರು ಈ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಬಿಎಂಸಿಯ ಹೆಚ್ಚುವರಿ ಆಯುಕ್ತ ರತ್ನಾಕರ್ ಸಾಹೂ ಅವರು ಪಾಲಿಕೆ ಕಟ್ಟಡದಲ್ಲಿ ಸಾರ್ವಜನಿಕರ ಕುಂದುಕೊರತೆ ಕುರಿತಂತೆ ಸಭೆ ನಡೆಸುತ್ತಿದ್ದರು. ಈ ವೇಳೆ 2024ರ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಪರಾಜಯಗೊಂಡ ಬಿಜೆಪಿ ಅಭ್ಯರ್ಥಿಯ ಬೆಂಬಲಿಗರು … Continue reading ಹಿರಿಯ ಅಧಿಕಾರಿಯನ್ನು ಕಚೇರಿಯಿಂದ ಎಳೆದೊಯ್ದು ಥಳಿಸಿದ ದುಷ್ಕರ್ಮಿಗಳು!