Homeಕರ್ನಾಟಕಕೋಮು ದ್ವೇಷದಿಂದ ಶಾಲಾ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣ: ದಿಗ್ಭ್ರಮೆ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

ಕೋಮು ದ್ವೇಷದಿಂದ ಶಾಲಾ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣ: ದಿಗ್ಭ್ರಮೆ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬೆಳಗಾವಿ ಜಿಲ್ಲೆ ಹೂಲಿಕಟ್ಟಿ ಗ್ರಾಮದಲ್ಲಿ ಮುಸ್ಲಿಂ ಮುಖ್ಯೋಪಾಧ್ಯಾಯರನ್ನು ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಬರೆದುಕೊಂಡಿರುವ ಸಿಎಂ, “ದಯವೇ ಧರ್ಮದ ಮೂಲವಯ್ಯ” ಎಂದು ಸಾರಿದ ಶರಣರ ನಾಡಿನಲ್ಲಿ ಈ ಮಟ್ಟಿನ ಕ್ರೌರ್ಯ, ದ್ವೇಷ ಹುಟ್ಟಲು ಸಾಧ್ಯವೇ? ಎಂಬುದನ್ನು ಈ ಕ್ಷಣಕ್ಕೂ ನನ್ನಿಂದ ನಂಬಲಾಗುತ್ತಿಲ್ಲ ಎಂದಿದ್ದಾರೆ.

ಧಾರ್ಮಿಕ ಮೂಲಭೂತವಾದ, ಕೋಮುವೈಷಮ್ಯ ಎನ್ನುವುದು ಎಂತಹ ಹೀನ ಕೃತ್ಯವನ್ನೂ ಮಾಡಿಸಬಲ್ಲುದು ಎಂಬುದಕ್ಕೆ ಪುಟ್ಟಮಕ್ಕಳ ಮಾರಣಹೋಮಕ್ಕೆ ಕಾರಣವಾಗಬಹುದಾಗಿದ್ದ ಈ ಘಟನೆಯೇ ಸಾಕ್ಷಿ ಎಂದು ತಿಳಿಸಿದ್ದಾರೆ.

ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ನಾಯಕರು ಒಮ್ಮೆ ತಮ್ಮ‌ ಆತ್ಮವಿಮರ್ಷೆ ಮಾಡಿಕೊಳ್ಳಲಿ. ಈ ಘಟನೆಯ ಹೊಣೆಯನ್ನು ಪ್ರಮೋದ್ ಮುತಾಲಿಕ್ ಹೊರುವರೇ? ವಿಜಯೇಂದ್ರ ಹೊರುವರೇ? ಆರ್.ಅಶೋಕ್ ಹೊರುವರೇ? ಇಂಥವರು ಮಾಡುವ ಸಮಾಜಘಾತುಕ ಕೃತ್ಯಗಳಿಗೆ ಸದಾ ಬೆಂಬಲವಾಗಿ ನಿಲ್ಲುವ ನಾಯಕರು ಈಗ ಮುಂದೆ ಬಂದು ತಮ್ಮ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.

ಎಲ್ಲಾ ಬಗೆಯ ಮತೀಯವಾದ, ಮೂಲಭೂತವಾದಿತನಗಳು ಮನುಷ್ಯ ಸಮಾಜಕ್ಕೆ ಅಪಾಯಕಾರಿ. ದ್ವೇಷ ಭಾಷಣಗಳು, ಕೋಮು ಗಲಭೆಗಳ ತಡೆಗಾಗಿಯೇ ನಾವು ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದೇವೆ, ಅಂಥವರ ವಿರುದ್ಧ ಕಾನೂನಿನ ಪರಿಧಿಯೊಳಗೆ ಸಾಧ್ಯವಾದ ಎಲ್ಲಾ ಕ್ರಮವನ್ನು ವಹಿಸುತ್ತಿದ್ದೇವೆ. ನಮ್ಮ ಎಲ್ಲಾ ಪ್ರಯತ್ನಗಳು ಫಲ ಕೊಡಬೇಕಾದರೆ ಸಾರ್ವಜನಿಕರೂ ಇಂಥಾ ಶಕ್ತಿಗಳ ವಿರುದ್ಧ ಧ್ವನಿಯೆತ್ತಬೇಕು, ಪ್ರತಿರೋಧ ಒಡ್ಡಬೇಕು, ದೂರು ದಾಖಲಿಸಬೇಕು ಎಂದಿದ್ದಾರೆ.

ನನಗೆ ಈಗಲೂ ನಂಬಿಕೆಯಿದೆ, ಕೋಮುವಾದಿಗಳ ಸಂಖ್ಯೆಗಿಂತ ಕೂಡಿ ಬಾಳಬೇಕೆಂದು ಬಯಸುವ ಜನರ ಸಂಖ್ಯೆ ನೂರು ಪಟ್ಟು ಹೆಚ್ಚಿದೆ ಎಂದಿರು ಸಿಎಂ, ಮಕ್ಕಳ ಹತ್ಯಾಕಾಂಡ ನಡೆಸುವ ದುಷ್ಟ ಹುನ್ನಾರವನ್ನು ಭೇದಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆಗಳು. ಇಂಥ ಹೀನಕೃತ್ಯ ಎಸಗಿದ ದುರುಳರಿಗೆ ನ್ಯಾಯ ವ್ಯವಸ್ಥೆ ತಕ್ಕಶಿಕ್ಷೆ ನೀಡಲಿದೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ ಬೇರೆಡೆಗೆ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ಸಾಗರ ಪಾಟೀಲ ಸೇರಿದಂತೆ ಒಟ್ಟು ಮೂವರನ್ನು ಬಂಧಿಸಲಾಗಿದೆ. ಕಳೆದ 15 ದಿನಗಳ ಹಿಂದೆ ನಡೆದ ಈ ಘಟನೆಯಲ್ಲಿ ಹಲವು ಮಕ್ಕಳು ಅಸ್ವಸ್ಥಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ‌ ಸಂಭವಿಸಿರಲಿಲ್ಲ.

ಬೆಳಗಾವಿ| ಮುಸ್ಲಿಂ ಮುಖ್ಯ ಶಿಕ್ಷಕನ ವರ್ಗಾವಣೆಗೆ ಸಂಚು; ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ದುಷ್ಕರ್ಮಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...