‘ಹಿಂದೂಗಳ ಅಗತ್ಯ ನಮಗೆ ಬೇಡ, ಮುಸ್ಲಿಮರ ಓಟು ಸಾಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂಬ ತಲೆಬರಹ ಇರುವ ನಕಲಿ ಪೇಪರ್ ಕಟಿಂಗ್ ಒಂದು ಜಾಲತಾಣದಲ್ಲಿ ವೈರಲ್ ಆಗಿದ್ದು, ‘ಬಿಜೆಪಿ–ಜೆಡಿಎಸ್ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ’ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ’ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೆ ಸ್ಪಷ್ಟನೆ ನೀಡಿದ್ದಾರೆಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೆ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಬಿಜೆಪಿ–ಜೆಡಿಎಸ್ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು’ ಎಂದು ಹೇಳಿದ್ದಾರೆ.
‘ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು ಬಿಜೆಪಿ ಮತ್ತು ಜೆಡಿಎಸ್ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು” ಎಂದು ಮೈತ್ರಿ ಪಕ್ಚಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬಿಜೆಪಿ – ಜೆಡಿಎಸ್ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ… pic.twitter.com/6Gin6L9Dvz
— Siddaramaiah (@siddaramaiah) April 10, 2024
‘ಸುಳ್ಳು ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಎಚ್ಚರಿಕೆ ವಹಿಸಿ….!! ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ’ ಎಂದು ಅವರು ಹೇಳಿದ್ದಾರೆ.
ನಕಲಿ ಪತ್ರಿಕಾ ತುಣುಕಿನಲ್ಲಿ ಏನಿದೆ?
‘ಹಿಂದೂಗಳ ಅಗತ್ಯ ನಮಗೆ ಬೇಡ, ಮುಸ್ಲಿಮರ ಓಟು ಸಾಕು. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮಿಸ್ಲಿಮರ ಓಲೈಕೆ ಕುರಿತು ಬಿಜೆಪಿಗರ ಟೀಕೆಗೆ ತಲೆ ಕೆಡಿಸಕೊಳ್ಳಬೇಡಿ’ ಎಂಬ ತಲೆ ಬರಹ ಇರುವ ನಕಲಿ ಪತ್ರಿಕಾ ತುಣುಕಿನಲ್ಲಿ, ‘ಕಾಂಗ್ರೆಸ್ ನಂಬಿಕೆ ಇಟ್ಟಿರುವುದು. ಮುಸ್ಲಿಂ ಓಟುಗಳನ್ನು, ಕಾಂಗ್ರೆಸ್ ಪಕ್ಷವು ಹಿಂದೂಗಳ ಓಟನ್ನು ನಂಬಿಕೊಂಡಿಲ್ಲ. ಪಕ್ಷದ ಚಿನ್ಹೆಯನ್ನು ಹಿ೦ದಿನ ಕಾಂಗ್ರೆಸ್ ನಾಯಕರು ಬದಲಾಯಿಸಿದ್ದಾರೆ. ಪಕ್ಷ ಕಟ್ಟಿರುವುದು ಮುಸ್ಲಿಂ ಆಧಾರದ ಮೇಲೆ ಹೊರತು ಹಿಂದೂಗಳ ಓಟುಗಳ ಮೇಲೆ ಅಲ್ಲ. ಕಾರ್ಯಕರ್ತರು ಹಿಂದುತ್ವದ ಮೇಲೆ ನಂಬಿಕೆ ಇಡಬಾರದು. ಹಿಂದುಗಳು ಯಾವುದೋ ಮೋದಿ ಎಂಬ ವ್ಯಕ್ತಿಯನ್ನು
ನಂಬಬಾರದು ಎಂದು ಶ್ರೀ ಸಿದ್ದರಾಮಯ್ಯ ಅವರು ಹೇಳಿದರು’ ಎಂದು ಬರೆಯಲಾಗಿದೆ.
ಅಸಲಿ ವಿಚಾರ ಏನು?
2023ರ ಜೂನ್ 02 ರಂದು ಸಂಪುಟ ಸಭೆಗೂ ಮುನ್ನ, ಉನ್ನತ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದರು. ಇದನ್ನು ಪಬ್ಲಿಕ್ ಟಿವಿ, ವಾರ್ತಾಭಾರತಿ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಅದೇ ಫೋಟೊ ತೆಗೆದುಕೊಂಡು, ಚುನಾವಣಾ ಸಮಯದಲ್ಲಿ ಕೆಲ ಕಿಡಿಗೇಡಿಗಳು ಸುಳ್ಳು ಸುದ್ದಿ ಸೃಷ್ಠಿಸಿ ಹರಿಬಿಟ್ಟಿದ್ದಾರೆ.
ಇದನ್ನೂ ಓದಿ; ಪುರಾವೆ ಸಹಿತ ಬಿಜೆಪಿ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇನೆ: ಅಭಿಷೇಕ್ ಬ್ಯಾನರ್ಜಿ