HomeUncategorizedಕೊರೊನಾ ಬಗ್ಗೆ ತಪ್ಪು ಮಾಹಿತಿ: ಟ್ರಂಪ್ ಟ್ವೀಟ್‌ ಅನ್ನು ನಿರ್ಬಂಧಿಸಿದ ಟ್ವಿಟ್ಟರ್

ಕೊರೊನಾ ಬಗ್ಗೆ ತಪ್ಪು ಮಾಹಿತಿ: ಟ್ರಂಪ್ ಟ್ವೀಟ್‌ ಅನ್ನು ನಿರ್ಬಂಧಿಸಿದ ಟ್ವಿಟ್ಟರ್

ಇದು ಜನರನ್ನು ತಪ್ಪುದಾರಿಗೆಳೆಯುವ ಮಾಹಿತಿ ಎಂದು ಟ್ವಿಟ್ಟರ್ ಸಂಸ್ಥೆ ಎಚ್ಚರಿಕೆ ನೀಡಿದ್ದು, ಟ್ರಂಪ್ ಮಾಡಿದ್ದ ಟ್ವೀಟನ್ನು ನಿರ್ಬಂಧಿಸಿದೆ.

- Advertisement -
- Advertisement -

ಕೊರೊನಾ ಸೋಂಕಿಗೆ ಒಳಗಾಗಿದ್ದ ಟ್ರಂಪ್ ಕೊರೊನಾ ಸೋಂಕಿನ ಕುರಿತು ಮಾಡಿರುವ ಟ್ವೀಟ್‌ ಅನ್ನು ಟ್ವಿಟ್ಟರ್ ಸಂಸ್ಥೆ ಅಳಿಸಿಹಾಕಿದ್ದು, ಇದು ತಪ್ಪು ಮಾಹಿತಿ ನೀಡುತ್ತದೆ ಎಂದು ಎಚ್ಚರಿಕೆ ನೀಡಿದೆ.

ಕೊರೊನಾ ಸೋಂಕಿನ ತೀವ್ರತೆಯನ್ನು ಅರಿಯದೇ, ಇದು ಕೇವಲ ಸಾಮಾನ್ಯ ಜ್ವರ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಮಂಗಳವಾರ ಟ್ವೀಟ್ ಮಾಡಿದ್ದರು. ಇದು ಜನರನ್ನು ತಪ್ಪುದಾರಿಗೆಳೆಯುವ ಮಾಹಿತಿ ಎಂದು ಟ್ವಿಟ್ಟರ್ ಸಂಸ್ಥೆ ಎಚ್ಚರಿಕೆ ನೀಡಿದ್ದು, ಟ್ರಂಪ್ ಮಾಡಿದ್ದ ಟ್ವೀಟನ್ನು ನಿರ್ಬಂಧಿಸಿದೆ.

ಇದನ್ನೂ ಓದಿ: ಜಗತ್ತಿನ 10 ಜನರಲ್ಲಿ ಒಬ್ಬರಿಗೆ ಕೊರೊನಾ: WHO ಕಳವಳ

“ಜ್ವರ ಪ್ರತಿವರ್ಷವೂ ಬರುತ್ತದೆ. ಅನೆಕ ಜನರು, ಕೆಲವೊಮ್ಮೆ 100,000ಕ್ಕಿಂತ ಹೆಚ್ಚು ಜನರು ಲಸಿಕೆ ನೀಡಿದ ಹೊರತಾಗಿಯೂ ಜ್ವರದಿಂದ ಸಾಯುತ್ತಾರೆ. ನಾವು ನಮ್ಮ ದೇಶವನ್ನು ಮುಚ್ಚುತ್ತೇವೆಯೇ? ಇಲ್ಲ, ನಾವು ಅದರೊಟ್ಟಿಗೆ ಬದುಕಲು ಕಲಿತಿರುವಂತೆಯೇ ಕೋವಿಡ್‌ನೊಡನೆಯೂ ಬದುಕಲು ಕಲಿತಿದ್ದೇವೆ” ಎಂದು ಟ್ರಂಪ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೊರೊನಾದಿಂದ 551 ವೈದ್ಯರ ಸಾವು: ಭಾರತೀಯ ವೈದ್ಯಕೀಯ ಸಂಘಟನೆಯ ದತ್ತಾಂಶ

ಟ್ರಂಪ್‌ ಕೊರೊನಾ ವೈರಸ್‌ಗೆ ತುತ್ತಾಗಿದ್ದರಿಂದ, ಅವರನ್ನು ಮೇರಿಲ್ಯಾಂಡ್‌ನ ವಾಲ್ಟರ್ ರೀಡ್ ರಾಷ್ಟ್ರೀಯ ಮಿಲಿಟರಿ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಅಲ್ಲಿಂದ ಬಿಡುಗಡೆಯಾದ ಕೆಲವೇ ಗಂಟೆಗಳ ನಂತರ ಈ ಟ್ವೀಟ್ ಮಾಡಿದ್ದಾರೆ. ಕೋವಿಡ್‌ಗೆ ಭಯಪಡಬೇಡಿ ಎಂದು ನಾಗರೀಕರಿಗೆ ಹೇಳುತ್ತಾ, ತಮಗಿನ್ನೂ ಸೋಂಕು ಸಂಪೂರ್ಣವಾಗಿ ನಿವಾರಣೆಯಾಗಿಲ್ಲದಿದ್ದರೂ, ಕ್ಯಾಮರಾಗೆ ಪೋಸ್ ನೀಡಲು ತಮ್ಮ ಮಾಸ್ಕನ್ನು ಕಿತ್ತೊಗೆದರು.

ಈ ಹಿಂದೆಯೂ ಟ್ರಂಪ್ ಇದೇ ರೀತಿಯ ತಪ್ಪು ಮಾಹಿತಿ ನೀಡುವ ಪೋಸ್ಟನ್ನು ಫೇಸ್‌ಬುಕ್‌ನಲ್ಲಿ ಮಾಡಿದ್ದರು. ಆಗ ಫೇಸ್‌ಬುಕ್ ಇದನ್ನು ನಿರ್ಬಂಧಿಸಿತ್ತು ಎಂದು CNN ತಿಳಿಸಿದೆ.

ಇದನ್ನೂ ಓದಿ: ‘ನನಗೆ ಕೊರೊನಾ ಬಂದರೆ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುವೆ’ ಎಂದಿದ್ದ ಬಿಜೆಪಿ ನಾಯಕನಿಗೆ ಕೊರೊನಾ ದೃಢ!

ಕೊರೊನಾ ಸಾಂಕ್ರಾಮಿಕವು ಅಮೇರಿಕಾದಲ್ಲಿ ಮಾತ್ರ ಕನಿಷ್ಠ 2 ಲಕ್ಷ ಜೀವಗಳನ್ನು ಬಲಿತೆಗೆದುಕೊಂಡಿದೆ. ಅಮೇರಿಕಾದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಸೇರಿದಂತೆ ಅನೇಕ ಶ್ವೇತಭವನದ ಅಧಿಕಾರಿಗಳು ಇತ್ತೀಚೆಗೆ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಸೋಮವಾರ ಶ್ವೇತಭವನ್ ಪತ್ರಿಕಾ ಕಾರ್ಯದರ್ಶಿ ಕೇಲೀ ಮೆಗ್ ಎನಾನಿ ಸೋಂಕಿಗೆ ಒಳಗಾಗಿದ್ದರು.

ನಿನ್ನೆ  ವಿಶ್ವ ಆರೋಗ್ಯ ಸಂಸ್ಥೆ ತನ್ನ ವಿಶೇಷ ಸಭೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. “ಜಗತ್ತಿನ ಜನಸಂಖ್ಯೆಯಲ್ಲಿ ಶೇಕಡಾ 10 ರಷ್ಟು ಜನರಿಗೆ ಸೋಂಕು ತಗುಲಿದೆ. ಹಾಗಾಗಿ ನಾವು ಅಪಾಯದ ಅಂಚಿನಲ್ಲಿದ್ದೇವೆ” ಎಂದು ಎಚ್ಚರಿಕೆ ನೀಡಿತ್ತು.


ಇದನ್ನೂ ಓದಿ: ಕ್ಯಾಟ್‌ ಕ್ಯೂ ವೈರಸ್: ಕೊರೊನಾದಂತೆಯೇ ಮತ್ತೊಂದು ಅಪಾಯಕಾರಿ ವೈರಸ್: ICMR ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...