HomeUncategorizedಕೊರೊನಾ ಬಗ್ಗೆ ತಪ್ಪು ಮಾಹಿತಿ: ಟ್ರಂಪ್ ಟ್ವೀಟ್‌ ಅನ್ನು ನಿರ್ಬಂಧಿಸಿದ ಟ್ವಿಟ್ಟರ್

ಕೊರೊನಾ ಬಗ್ಗೆ ತಪ್ಪು ಮಾಹಿತಿ: ಟ್ರಂಪ್ ಟ್ವೀಟ್‌ ಅನ್ನು ನಿರ್ಬಂಧಿಸಿದ ಟ್ವಿಟ್ಟರ್

ಇದು ಜನರನ್ನು ತಪ್ಪುದಾರಿಗೆಳೆಯುವ ಮಾಹಿತಿ ಎಂದು ಟ್ವಿಟ್ಟರ್ ಸಂಸ್ಥೆ ಎಚ್ಚರಿಕೆ ನೀಡಿದ್ದು, ಟ್ರಂಪ್ ಮಾಡಿದ್ದ ಟ್ವೀಟನ್ನು ನಿರ್ಬಂಧಿಸಿದೆ.

- Advertisement -
- Advertisement -

ಕೊರೊನಾ ಸೋಂಕಿಗೆ ಒಳಗಾಗಿದ್ದ ಟ್ರಂಪ್ ಕೊರೊನಾ ಸೋಂಕಿನ ಕುರಿತು ಮಾಡಿರುವ ಟ್ವೀಟ್‌ ಅನ್ನು ಟ್ವಿಟ್ಟರ್ ಸಂಸ್ಥೆ ಅಳಿಸಿಹಾಕಿದ್ದು, ಇದು ತಪ್ಪು ಮಾಹಿತಿ ನೀಡುತ್ತದೆ ಎಂದು ಎಚ್ಚರಿಕೆ ನೀಡಿದೆ.

ಕೊರೊನಾ ಸೋಂಕಿನ ತೀವ್ರತೆಯನ್ನು ಅರಿಯದೇ, ಇದು ಕೇವಲ ಸಾಮಾನ್ಯ ಜ್ವರ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಮಂಗಳವಾರ ಟ್ವೀಟ್ ಮಾಡಿದ್ದರು. ಇದು ಜನರನ್ನು ತಪ್ಪುದಾರಿಗೆಳೆಯುವ ಮಾಹಿತಿ ಎಂದು ಟ್ವಿಟ್ಟರ್ ಸಂಸ್ಥೆ ಎಚ್ಚರಿಕೆ ನೀಡಿದ್ದು, ಟ್ರಂಪ್ ಮಾಡಿದ್ದ ಟ್ವೀಟನ್ನು ನಿರ್ಬಂಧಿಸಿದೆ.

ಇದನ್ನೂ ಓದಿ: ಜಗತ್ತಿನ 10 ಜನರಲ್ಲಿ ಒಬ್ಬರಿಗೆ ಕೊರೊನಾ: WHO ಕಳವಳ

“ಜ್ವರ ಪ್ರತಿವರ್ಷವೂ ಬರುತ್ತದೆ. ಅನೆಕ ಜನರು, ಕೆಲವೊಮ್ಮೆ 100,000ಕ್ಕಿಂತ ಹೆಚ್ಚು ಜನರು ಲಸಿಕೆ ನೀಡಿದ ಹೊರತಾಗಿಯೂ ಜ್ವರದಿಂದ ಸಾಯುತ್ತಾರೆ. ನಾವು ನಮ್ಮ ದೇಶವನ್ನು ಮುಚ್ಚುತ್ತೇವೆಯೇ? ಇಲ್ಲ, ನಾವು ಅದರೊಟ್ಟಿಗೆ ಬದುಕಲು ಕಲಿತಿರುವಂತೆಯೇ ಕೋವಿಡ್‌ನೊಡನೆಯೂ ಬದುಕಲು ಕಲಿತಿದ್ದೇವೆ” ಎಂದು ಟ್ರಂಪ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೊರೊನಾದಿಂದ 551 ವೈದ್ಯರ ಸಾವು: ಭಾರತೀಯ ವೈದ್ಯಕೀಯ ಸಂಘಟನೆಯ ದತ್ತಾಂಶ

ಟ್ರಂಪ್‌ ಕೊರೊನಾ ವೈರಸ್‌ಗೆ ತುತ್ತಾಗಿದ್ದರಿಂದ, ಅವರನ್ನು ಮೇರಿಲ್ಯಾಂಡ್‌ನ ವಾಲ್ಟರ್ ರೀಡ್ ರಾಷ್ಟ್ರೀಯ ಮಿಲಿಟರಿ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಅಲ್ಲಿಂದ ಬಿಡುಗಡೆಯಾದ ಕೆಲವೇ ಗಂಟೆಗಳ ನಂತರ ಈ ಟ್ವೀಟ್ ಮಾಡಿದ್ದಾರೆ. ಕೋವಿಡ್‌ಗೆ ಭಯಪಡಬೇಡಿ ಎಂದು ನಾಗರೀಕರಿಗೆ ಹೇಳುತ್ತಾ, ತಮಗಿನ್ನೂ ಸೋಂಕು ಸಂಪೂರ್ಣವಾಗಿ ನಿವಾರಣೆಯಾಗಿಲ್ಲದಿದ್ದರೂ, ಕ್ಯಾಮರಾಗೆ ಪೋಸ್ ನೀಡಲು ತಮ್ಮ ಮಾಸ್ಕನ್ನು ಕಿತ್ತೊಗೆದರು.

ಈ ಹಿಂದೆಯೂ ಟ್ರಂಪ್ ಇದೇ ರೀತಿಯ ತಪ್ಪು ಮಾಹಿತಿ ನೀಡುವ ಪೋಸ್ಟನ್ನು ಫೇಸ್‌ಬುಕ್‌ನಲ್ಲಿ ಮಾಡಿದ್ದರು. ಆಗ ಫೇಸ್‌ಬುಕ್ ಇದನ್ನು ನಿರ್ಬಂಧಿಸಿತ್ತು ಎಂದು CNN ತಿಳಿಸಿದೆ.

ಇದನ್ನೂ ಓದಿ: ‘ನನಗೆ ಕೊರೊನಾ ಬಂದರೆ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುವೆ’ ಎಂದಿದ್ದ ಬಿಜೆಪಿ ನಾಯಕನಿಗೆ ಕೊರೊನಾ ದೃಢ!

ಕೊರೊನಾ ಸಾಂಕ್ರಾಮಿಕವು ಅಮೇರಿಕಾದಲ್ಲಿ ಮಾತ್ರ ಕನಿಷ್ಠ 2 ಲಕ್ಷ ಜೀವಗಳನ್ನು ಬಲಿತೆಗೆದುಕೊಂಡಿದೆ. ಅಮೇರಿಕಾದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಸೇರಿದಂತೆ ಅನೇಕ ಶ್ವೇತಭವನದ ಅಧಿಕಾರಿಗಳು ಇತ್ತೀಚೆಗೆ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಸೋಮವಾರ ಶ್ವೇತಭವನ್ ಪತ್ರಿಕಾ ಕಾರ್ಯದರ್ಶಿ ಕೇಲೀ ಮೆಗ್ ಎನಾನಿ ಸೋಂಕಿಗೆ ಒಳಗಾಗಿದ್ದರು.

ನಿನ್ನೆ  ವಿಶ್ವ ಆರೋಗ್ಯ ಸಂಸ್ಥೆ ತನ್ನ ವಿಶೇಷ ಸಭೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. “ಜಗತ್ತಿನ ಜನಸಂಖ್ಯೆಯಲ್ಲಿ ಶೇಕಡಾ 10 ರಷ್ಟು ಜನರಿಗೆ ಸೋಂಕು ತಗುಲಿದೆ. ಹಾಗಾಗಿ ನಾವು ಅಪಾಯದ ಅಂಚಿನಲ್ಲಿದ್ದೇವೆ” ಎಂದು ಎಚ್ಚರಿಕೆ ನೀಡಿತ್ತು.


ಇದನ್ನೂ ಓದಿ: ಕ್ಯಾಟ್‌ ಕ್ಯೂ ವೈರಸ್: ಕೊರೊನಾದಂತೆಯೇ ಮತ್ತೊಂದು ಅಪಾಯಕಾರಿ ವೈರಸ್: ICMR ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...