Homeಮುಖಪುಟಆಧಾರ್ ಭದ್ರತೆ ಕುರಿತು ಕೇಂದ್ರ ಸರ್ಕಾರದಿಂದ ತಪ್ಪು ಮಾಹಿತಿ: ಟಿಎಂಸಿ ಸಂಸದ ಸಾಕೇತ್

ಆಧಾರ್ ಭದ್ರತೆ ಕುರಿತು ಕೇಂದ್ರ ಸರ್ಕಾರದಿಂದ ತಪ್ಪು ಮಾಹಿತಿ: ಟಿಎಂಸಿ ಸಂಸದ ಸಾಕೇತ್

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಆಧಾರ್ ಮಾಹಿತಿಯ ಭದ್ರತೆಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ತಪ್ಪು ಮಾಹಿತಿ ನೀಡುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸಾಕೇತ್ ಗೋಖಲೆ ಅವರು ಸೋಮವಾರ ಆರೋಪಿಸಿದ್ದಾರೆ.

ಭಾರತೀಯ ನಾಗರಿಕರ ಆಧಾರ್ ಮತ್ತು ಪಾಸ್‌ಪೋರ್ಟ್ ವಿವರಗಳನ್ನು ಡಾರ್ಕ್ ವೆಬ್‌ನಲ್ಲಿ ಸೋರಿಕೆ ಮಾಡುವಲ್ಲಿ ಭಾಗಿಯಾಗಿರುವ ನಾಲ್ವರ ಬಂಧನದ ನಂತರ ಗೋಖಲೆ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಮೋದಿ ಸರ್ಕಾರವು ಸಂಸತ್ತಿನಲ್ಲಿ ನನ್ನ ಪ್ರಶ್ನೆಗೆ ಉತ್ತರಿಸಿದ್ದು, ಆಧಾರ್ ಭದ್ರತೆ ವಿಚಾರದಲ್ಲಿ ಯಾವುದೇ ಉಲ್ಲಂಘನೆಯಾಗಿಲ್ಲ ಎಂದು ಹೇಳಿದೆ. ಆದರೆ, ಇದೀಗ ಐಸಿಎಂಆರ್ ಡೇಟಾಬೇಸ್‌ನಿಂದ ಡಾರ್ಕ್ ವೆಬ್‌ನಲ್ಲಿ ಭಾರತೀಯರ ಆಧಾರ್ ಮತ್ತು ಪಾಸ್‌ಪೋರ್ಟ್ ವಿವರಗಳನ್ನು ಸೋರಿಕೆ ಮಾಡಿದ್ದಕ್ಕಾಗಿ 4 ಜನರನ್ನು ಬಂಧಿಸಲಾಗಿದೆ. ನಿಮ್ಮ ಸಚಿವಾಲಯ ಸಂಸತ್ತಿನಲ್ಲಿ ಏಕೆ ಸುಳ್ಳು ಹೇಳುತ್ತಿದೆ? ರಾಜೀವ್ ಚಂದ್ರಶೇಖರ್ ಅವರೆ ನೀವು ಏನು ಮರೆಮಾಡುತ್ತಿದ್ದೀರಿ’ ಎಂದು ಪ್ರಶ್ನಿಸಿದ್ದಾರೆ.

ಸ್ವಯಂ ಪ್ರೇರಿತ ತನಿಖೆ ನಡೆಸಿದ ನಂತರ ಸುಮಾರು 10 ದಿನಗಳ ಹಿಂದೆ ದೆಹಲಿ ಪೊಲೀಸ್ ಸೈಬರ್ ಘಟಕವು ನಾಲ್ಕು ಜನರನ್ನು ಬಂಧಿಸಿತ್ತು. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್)ನ ಡೇಟಾ ಬ್ಯಾಂಕ್‌ನಿಂದ ಆಧಾರ್ ಮತ್ತು ಪಾಸ್‌ಪೋರ್ಟ್ ವಿವರಗಳು ಸೇರಿದಂತೆ ವೈಯಕ್ತಿಕ ಡೇಟಾ ಸೋರಿಕೆಯಾಗಿದ್ದು, ಅದನ್ನು ಡಾರ್ಕ್ ವೆಬ್‌ನಲ್ಲಿ ಮಾರಾಟಕ್ಕೆ ಇಡಲಾಗಿದೆ ಎಂದು ವರದಿಯಾಗಿದೆ.

‘ಕಳೆದ ಅಕ್ಟೋಬರ್‌ನಲ್ಲಿ ಆಧಾರ್ ಭದ್ರತಾ ಉಲ್ಲಂಘನೆಯನ್ನು ಮೊದಲು ಪತ್ತೆಹಚ್ಚಲಾಯಿತು. ಸೂಕ್ಷ್ಮ ಮಾಹಿತಿಗಳನ್ನು ಅಕ್ರಮ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಮಾರಾಟ ಮಾಡಲು ನೀಡಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

‘ದೇಶದಲ್ಲಿನ ದತ್ತಾಂಶ ಸೋರಿಕೆಯ ‘ಅತಿದೊಡ್ಡ’ ಪ್ರಕರಣ ಇದಾಗಿದ್ದು, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ನಿಂದ 81.5 ಕೋಟಿಗೂ ಹೆಚ್ಚು ಭಾರತೀಯರ ವೈಯಕ್ತಿಕ ವಿವರಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಸೋರಿಕೆಯನ್ನು ಆರಂಭದಲ್ಲಿ ಅಮೆರಿಕದ ಸೈಬರ್ ಭದ್ರತೆ ಮತ್ತು ಗುಪ್ತಚರ ಸಂಸ್ಥೆ ರೆಸೆಕ್ಯುರಿಟಿ ಗಮನಿಸಿದೆ’ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಅಮೆರಿಕದ ಸೈಬರ್ ಸೆಕ್ಯುರಿಟಿ ಕಂಪನಿಯಿಂದ ಡೇಟಾ ಸೋರಿಕೆ ಎಚ್ಚರಿಕೆಯ ನಂತರ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಅವರು ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಸಮಗ್ರತೆಯ ಸಮಸ್ಯೆಯನ್ನು ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ನಾಗರಿಕರ ಸೂಕ್ಷ್ಮ ಮಾಹಿತಿಗಳ ಬಹಿರಂಗಪಡಿಸುವಿಕೆಯು ಆತಂಕಕಾರಿಯಾಗಿದ್ದು, ಸುರಕ್ಷತೆ ಮತ್ತು ಸಮಗ್ರತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಟ್ಯಾಗೋರ್ ಹೇಳಿದ್ದಾರೆ.

‘ಆಧಾರ್ ಸಂಖ್ಯೆಗಳು ಮತ್ತು ಪಾಸ್‌ಪೋರ್ಟ್ ವಿವರಗಳು ಸೇರಿದಂತೆ 815 ಮಿಲಿಯನ್ ಭಾರತೀಯ ನಾಗರಿಕರ ವೈಯಕ್ತಿಕವಾಗಿ ಗುರುತಿಸಬಹುದಾದ ಮಾಹಿತಿಯನ್ನು ಡಾರ್ಕ್ ವೆಬ್‌ನಲ್ಲಿ ಮಾರಾಟ ಮಾಡಲು ಮಾರಿಕೊಳ್ಳಲಾಗಿದೆ. ಈ ಆತಂಕಕಾರಿ ಬಹಿರಂಗಪಡಿಸುವಿಕೆಯು ನಮ್ಮ ನಾಗರಿಕರ ಸುರಕ್ಷತೆ ಮತ್ತು ಸಮಗ್ರತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ’ ಎಂದು ಕಾಂಗ್ರೆಸ್ ಸಂಸದ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

‘ಈ ಡೇಟಾವನ್ನು ಕೇವಲ $80,000 ಗೆ ಮಾರಾಟ ಮಾಡಲಾಗುತ್ತಿದೆ ಎಂಬ ಅಂಶವು ಗೌಪ್ಯತೆಯ ಗಂಭೀರ ಉಲ್ಲಂಘನೆ ಮಾತ್ರವಲ್ಲದೆ ರಾಷ್ಟ್ರೀಯ ಭದ್ರತೆಯ ವಿಷಯವಾಗಿದೆ. ಇನ್ನೂ ಹೆಚ್ಚು ಗೊಂದಲದ ಸಂಗತಿಯೆಂದರೆ, ಡೇಟಾವು ಮಾನ್ಯವಾಗಿರುವಂತೆ ತೋರುತ್ತಿದ್ದು, ನಮ್ಮ ಡೇಟಾ ಸಂರಕ್ಷಣಾ ಕ್ರಮಗಳಲ್ಲಿ ಸರ್ಕಾರದ ಗಮನಾರ್ಹ ಲೋಪವನ್ನು ಸೂಚಿಸುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ಹಲಾಲ್ ಮಾಂಸ ಸೇವಿಸುವ ಮುಸ್ಲಿಮರನ್ನು ಮೆಚ್ಚುತ್ತೇನೆ; ಹಿಂದೂಗಳು ಧಾರ್ಮಿಕ ಬದ್ಧತೆ ಪ್ರದರ್ಶಿಸಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...