Homeಮುಖಪುಟಆಧಾರ್ ಭದ್ರತೆ ಕುರಿತು ಕೇಂದ್ರ ಸರ್ಕಾರದಿಂದ ತಪ್ಪು ಮಾಹಿತಿ: ಟಿಎಂಸಿ ಸಂಸದ ಸಾಕೇತ್

ಆಧಾರ್ ಭದ್ರತೆ ಕುರಿತು ಕೇಂದ್ರ ಸರ್ಕಾರದಿಂದ ತಪ್ಪು ಮಾಹಿತಿ: ಟಿಎಂಸಿ ಸಂಸದ ಸಾಕೇತ್

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಆಧಾರ್ ಮಾಹಿತಿಯ ಭದ್ರತೆಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ತಪ್ಪು ಮಾಹಿತಿ ನೀಡುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸಾಕೇತ್ ಗೋಖಲೆ ಅವರು ಸೋಮವಾರ ಆರೋಪಿಸಿದ್ದಾರೆ.

ಭಾರತೀಯ ನಾಗರಿಕರ ಆಧಾರ್ ಮತ್ತು ಪಾಸ್‌ಪೋರ್ಟ್ ವಿವರಗಳನ್ನು ಡಾರ್ಕ್ ವೆಬ್‌ನಲ್ಲಿ ಸೋರಿಕೆ ಮಾಡುವಲ್ಲಿ ಭಾಗಿಯಾಗಿರುವ ನಾಲ್ವರ ಬಂಧನದ ನಂತರ ಗೋಖಲೆ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಮೋದಿ ಸರ್ಕಾರವು ಸಂಸತ್ತಿನಲ್ಲಿ ನನ್ನ ಪ್ರಶ್ನೆಗೆ ಉತ್ತರಿಸಿದ್ದು, ಆಧಾರ್ ಭದ್ರತೆ ವಿಚಾರದಲ್ಲಿ ಯಾವುದೇ ಉಲ್ಲಂಘನೆಯಾಗಿಲ್ಲ ಎಂದು ಹೇಳಿದೆ. ಆದರೆ, ಇದೀಗ ಐಸಿಎಂಆರ್ ಡೇಟಾಬೇಸ್‌ನಿಂದ ಡಾರ್ಕ್ ವೆಬ್‌ನಲ್ಲಿ ಭಾರತೀಯರ ಆಧಾರ್ ಮತ್ತು ಪಾಸ್‌ಪೋರ್ಟ್ ವಿವರಗಳನ್ನು ಸೋರಿಕೆ ಮಾಡಿದ್ದಕ್ಕಾಗಿ 4 ಜನರನ್ನು ಬಂಧಿಸಲಾಗಿದೆ. ನಿಮ್ಮ ಸಚಿವಾಲಯ ಸಂಸತ್ತಿನಲ್ಲಿ ಏಕೆ ಸುಳ್ಳು ಹೇಳುತ್ತಿದೆ? ರಾಜೀವ್ ಚಂದ್ರಶೇಖರ್ ಅವರೆ ನೀವು ಏನು ಮರೆಮಾಡುತ್ತಿದ್ದೀರಿ’ ಎಂದು ಪ್ರಶ್ನಿಸಿದ್ದಾರೆ.

ಸ್ವಯಂ ಪ್ರೇರಿತ ತನಿಖೆ ನಡೆಸಿದ ನಂತರ ಸುಮಾರು 10 ದಿನಗಳ ಹಿಂದೆ ದೆಹಲಿ ಪೊಲೀಸ್ ಸೈಬರ್ ಘಟಕವು ನಾಲ್ಕು ಜನರನ್ನು ಬಂಧಿಸಿತ್ತು. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್)ನ ಡೇಟಾ ಬ್ಯಾಂಕ್‌ನಿಂದ ಆಧಾರ್ ಮತ್ತು ಪಾಸ್‌ಪೋರ್ಟ್ ವಿವರಗಳು ಸೇರಿದಂತೆ ವೈಯಕ್ತಿಕ ಡೇಟಾ ಸೋರಿಕೆಯಾಗಿದ್ದು, ಅದನ್ನು ಡಾರ್ಕ್ ವೆಬ್‌ನಲ್ಲಿ ಮಾರಾಟಕ್ಕೆ ಇಡಲಾಗಿದೆ ಎಂದು ವರದಿಯಾಗಿದೆ.

‘ಕಳೆದ ಅಕ್ಟೋಬರ್‌ನಲ್ಲಿ ಆಧಾರ್ ಭದ್ರತಾ ಉಲ್ಲಂಘನೆಯನ್ನು ಮೊದಲು ಪತ್ತೆಹಚ್ಚಲಾಯಿತು. ಸೂಕ್ಷ್ಮ ಮಾಹಿತಿಗಳನ್ನು ಅಕ್ರಮ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಮಾರಾಟ ಮಾಡಲು ನೀಡಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

‘ದೇಶದಲ್ಲಿನ ದತ್ತಾಂಶ ಸೋರಿಕೆಯ ‘ಅತಿದೊಡ್ಡ’ ಪ್ರಕರಣ ಇದಾಗಿದ್ದು, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ನಿಂದ 81.5 ಕೋಟಿಗೂ ಹೆಚ್ಚು ಭಾರತೀಯರ ವೈಯಕ್ತಿಕ ವಿವರಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಸೋರಿಕೆಯನ್ನು ಆರಂಭದಲ್ಲಿ ಅಮೆರಿಕದ ಸೈಬರ್ ಭದ್ರತೆ ಮತ್ತು ಗುಪ್ತಚರ ಸಂಸ್ಥೆ ರೆಸೆಕ್ಯುರಿಟಿ ಗಮನಿಸಿದೆ’ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಅಮೆರಿಕದ ಸೈಬರ್ ಸೆಕ್ಯುರಿಟಿ ಕಂಪನಿಯಿಂದ ಡೇಟಾ ಸೋರಿಕೆ ಎಚ್ಚರಿಕೆಯ ನಂತರ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಅವರು ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಸಮಗ್ರತೆಯ ಸಮಸ್ಯೆಯನ್ನು ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ನಾಗರಿಕರ ಸೂಕ್ಷ್ಮ ಮಾಹಿತಿಗಳ ಬಹಿರಂಗಪಡಿಸುವಿಕೆಯು ಆತಂಕಕಾರಿಯಾಗಿದ್ದು, ಸುರಕ್ಷತೆ ಮತ್ತು ಸಮಗ್ರತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಟ್ಯಾಗೋರ್ ಹೇಳಿದ್ದಾರೆ.

‘ಆಧಾರ್ ಸಂಖ್ಯೆಗಳು ಮತ್ತು ಪಾಸ್‌ಪೋರ್ಟ್ ವಿವರಗಳು ಸೇರಿದಂತೆ 815 ಮಿಲಿಯನ್ ಭಾರತೀಯ ನಾಗರಿಕರ ವೈಯಕ್ತಿಕವಾಗಿ ಗುರುತಿಸಬಹುದಾದ ಮಾಹಿತಿಯನ್ನು ಡಾರ್ಕ್ ವೆಬ್‌ನಲ್ಲಿ ಮಾರಾಟ ಮಾಡಲು ಮಾರಿಕೊಳ್ಳಲಾಗಿದೆ. ಈ ಆತಂಕಕಾರಿ ಬಹಿರಂಗಪಡಿಸುವಿಕೆಯು ನಮ್ಮ ನಾಗರಿಕರ ಸುರಕ್ಷತೆ ಮತ್ತು ಸಮಗ್ರತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ’ ಎಂದು ಕಾಂಗ್ರೆಸ್ ಸಂಸದ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

‘ಈ ಡೇಟಾವನ್ನು ಕೇವಲ $80,000 ಗೆ ಮಾರಾಟ ಮಾಡಲಾಗುತ್ತಿದೆ ಎಂಬ ಅಂಶವು ಗೌಪ್ಯತೆಯ ಗಂಭೀರ ಉಲ್ಲಂಘನೆ ಮಾತ್ರವಲ್ಲದೆ ರಾಷ್ಟ್ರೀಯ ಭದ್ರತೆಯ ವಿಷಯವಾಗಿದೆ. ಇನ್ನೂ ಹೆಚ್ಚು ಗೊಂದಲದ ಸಂಗತಿಯೆಂದರೆ, ಡೇಟಾವು ಮಾನ್ಯವಾಗಿರುವಂತೆ ತೋರುತ್ತಿದ್ದು, ನಮ್ಮ ಡೇಟಾ ಸಂರಕ್ಷಣಾ ಕ್ರಮಗಳಲ್ಲಿ ಸರ್ಕಾರದ ಗಮನಾರ್ಹ ಲೋಪವನ್ನು ಸೂಚಿಸುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ಹಲಾಲ್ ಮಾಂಸ ಸೇವಿಸುವ ಮುಸ್ಲಿಮರನ್ನು ಮೆಚ್ಚುತ್ತೇನೆ; ಹಿಂದೂಗಳು ಧಾರ್ಮಿಕ ಬದ್ಧತೆ ಪ್ರದರ್ಶಿಸಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...