Homeಮುಖಪುಟತಪ್ಪು ಮಾಹಿತಿಯಿಂದ ಮುಂದಿನ ಎರಡು ವರ್ಷಗಳಲ್ಲಿ ಭಾರತಕ್ಕೆ ಹೆಚ್ಚಿನ ಅಪಾಯ: ವರ್ಲ್ಡ್‌ ಇಕನಾಮಿಕ್‌ ಫೋರಂ ವರದಿ

ತಪ್ಪು ಮಾಹಿತಿಯಿಂದ ಮುಂದಿನ ಎರಡು ವರ್ಷಗಳಲ್ಲಿ ಭಾರತಕ್ಕೆ ಹೆಚ್ಚಿನ ಅಪಾಯ: ವರ್ಲ್ಡ್‌ ಇಕನಾಮಿಕ್‌ ಫೋರಂ ವರದಿ

- Advertisement -
- Advertisement -

ತಪ್ಪು ಮಾಹಿತಿ ಮತ್ತು ಸುಳ್ಳು ಮಾಹಿತಿ ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಹಾಗೂ ಮುಂದಿನ ಎರಡು ವರ್ಷಗಳಲ್ಲಿ ಭಾರತಕ್ಕೆ ದೊಡ್ಡ ಅಪಾಯವೊಡ್ಡಲಿದೆ ಎಂದು ವರ್ಲ್ಡ್ ಇಕನಾಮಿಕ್ ಫೋರಂ ತನ್ನ ವರದಿಯಲ್ಲಿ ತಿಳಿಸಿದೆ.

ಮುಂದಿನ ಎರಡು ವರ್ಷಗಳಲ್ಲಿ ಭಾರತಕ್ಕೆ ಇತರ ಪ್ರಮುಖ ಅಪಾಯಗಳೆಂದರೆ ಸಾಂಕ್ರಾಮಿಕ ರೋಗಗಳು, ಅಕ್ರಮ ಆರ್ಥಿಕ ಚಟುವಟಿಕೆ, ಅಸಮಾನತೆ ಮತ್ತು ಕಾರ್ಮಿಕರ ಕೊರತೆ ಎಂದು ಸಂಸ್ಥೆ ಹೇಳಿದೆ.

ಭಾರತ ಸೇರಿದಂತೆ ಮುಂದಿನ ಎರಡು ವರ್ಷಗಳಲ್ಲಿ ಚುನಾವಣೆಗಳು ನಡೆಯಲಿರುವ ದೇಶಗಳಲ್ಲಿ ತಪ್ಪು ಮಾಹಿತಿಯು ಸರ್ಕಾರಗಳ ನ್ಯಾಯ ಸಮ್ಮತತೆಯನ್ನು ಗಂಭೀರವಾಗಿ ಅಸ್ಥಿರಗೊಳಿಸಬಹುದು ಎಂದು ವರದಿ ಕಳವಳ ವ್ಯಕ್ತಪಡಿಸಿದೆ.

1.4 ಶತಕೋಟಿ ಜನಸಂಖ್ಯೆ ಹೊಂದಿರುವ ಭಾರತದಲ್ಲಿ 18ನೇ ಲೋಕಸಭೆಗೆ ಮುಂದಿನ ಏಪ್ರಿಲ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ವರ್ಲ್ಡ್ ಇಕನಾಮಿಕ್ ಫೋರಂನ ‘ದಿ ಗ್ಲೋಬಲ್‌ ರಿಸ್ಕ್ಸ್‌ ರಿಪೋರ್ಟ್‌’ ಅನ್ನು ಶಿಕ್ಷಣ, ಉದ್ಯಮ, ಸರ್ಕಾರಿ ಕ್ಷೇತ್ರಗಳ 1500 ತಜ್ಞರ ಸಮೀಕ್ಷೆಯ ಆಧಾರದಲ್ಲಿ ಸಿದ್ಧಪಡಿಸಲಾಗಿದ್ದು ಮುಂದಿನ ಎರಡು ಮತ್ತು 10 ವರ್ಷಗಳ ಅವಧಿಯಲ್ಲಿ ಜಾಗತಿಕ ಆರ್ಥಿಕತೆಗಳು ಎದುರಿಸುವ ಅಪಾಯಗಳನ್ನು ಅಂದಾಜಿಸುವ ಯತ್ನವನ್ನು ಮಾಡಿದೆ.

ವರದಿಯು ಆರ್ಥಿಕ, ಪರಿಸರ, ಭೌಗೋಳಿಕ ರಾಜಕೀಯ, ಸಾಮಾಜಿಕ ಮತ್ತು ತಾಂತ್ರಿಕ ಹೀಗೆ ಐದು ವರ್ಗಗಳಾಗಿ ಜಾಗತಿಕ ಅಪಾಯಗಳನ್ನು ಉಲ್ಲೇಖಿಸಿದೆ. ‘ತಪ್ಪು ಮಾಹಿತಿ’ ಎಂಬುದು ತಾಂತ್ರಿಕ ಅಪಾಯಗಳ ಅಡಿಯಲ್ಲಿ ಒಂದು ಉಪ-ವರ್ಗವಾಗಿದೆ.

ಗುಜರಾತ್‌ನಲ್ಲಿ 2002ರಲ್ಲಿ ನಡೆದ ಗಲಭೆಗಳಲ್ಲಿ ಆಗ ಅಲ್ಲಿನ ಸಿಎಂ ಆಗಿದ್ದ ಈಗಿನ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರವನ್ನು ತೋರಿಸುವ ಬಿಬಿಸಿ ಸಾಕ್ಷ್ಯಚಿತ್ರದ ಉದಾಹರಣೆಯನ್ನೂ ಈ ವರದಿ ಉಲ್ಲೇಖಿಸಿದೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಈ ಸಾಕ್ಷ್ಯಚಿತ್ರದ ವಿಡಿಯೋವನ್ನು ಟ್ವಿಟರ್‌, ಯುಟ್ಯೂಬ್‌ನಿಂದ ಕಳೆದ ವರ್ಷದ ಜನವರಿಯಲ್ಲಿ ತೆಗೆದು ಹಾಕಲಾಗಿತ್ತು. ಪ್ರಜಾಪ್ರಭುತ್ವಗಳಲ್ಲೂ ಸಹ ನೈಜ ಅಥವಾ ಕಲ್ಪಿತ ವಿದೇಶಿ ಹಸ್ತಕ್ಷೇಪದ ಮೇಲಿನ ಕಾರ್ಯಾಚರಣೆಯು ಈಗಿರುವ ನಿಯಂತ್ರಣವನ್ನು ಬಲಪಡಿಸಲು ಬಳಸಬಹುದು ಎಂಬುದನ್ನು ವರದಿ ಎತ್ತಿ ತೋರಿಸಿದೆ.

ಇದನ್ನೂ ಓದಿ : 2 ತಿಂಗಳ ಅವಧಿಯಲ್ಲಿ UAPAಯಡಿ 9 ಮುಸ್ಲಿಂ ಯುವಕರನ್ನು ಬಂಧಿಸಿದ ಉತ್ತರಪ್ರದೇಶದ ಎಟಿಎಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...