Homeಮುಖಪುಟತಪ್ಪು ಮಾಹಿತಿಯಿಂದ ಮುಂದಿನ ಎರಡು ವರ್ಷಗಳಲ್ಲಿ ಭಾರತಕ್ಕೆ ಹೆಚ್ಚಿನ ಅಪಾಯ: ವರ್ಲ್ಡ್‌ ಇಕನಾಮಿಕ್‌ ಫೋರಂ ವರದಿ

ತಪ್ಪು ಮಾಹಿತಿಯಿಂದ ಮುಂದಿನ ಎರಡು ವರ್ಷಗಳಲ್ಲಿ ಭಾರತಕ್ಕೆ ಹೆಚ್ಚಿನ ಅಪಾಯ: ವರ್ಲ್ಡ್‌ ಇಕನಾಮಿಕ್‌ ಫೋರಂ ವರದಿ

- Advertisement -
- Advertisement -

ತಪ್ಪು ಮಾಹಿತಿ ಮತ್ತು ಸುಳ್ಳು ಮಾಹಿತಿ ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಹಾಗೂ ಮುಂದಿನ ಎರಡು ವರ್ಷಗಳಲ್ಲಿ ಭಾರತಕ್ಕೆ ದೊಡ್ಡ ಅಪಾಯವೊಡ್ಡಲಿದೆ ಎಂದು ವರ್ಲ್ಡ್ ಇಕನಾಮಿಕ್ ಫೋರಂ ತನ್ನ ವರದಿಯಲ್ಲಿ ತಿಳಿಸಿದೆ.

ಮುಂದಿನ ಎರಡು ವರ್ಷಗಳಲ್ಲಿ ಭಾರತಕ್ಕೆ ಇತರ ಪ್ರಮುಖ ಅಪಾಯಗಳೆಂದರೆ ಸಾಂಕ್ರಾಮಿಕ ರೋಗಗಳು, ಅಕ್ರಮ ಆರ್ಥಿಕ ಚಟುವಟಿಕೆ, ಅಸಮಾನತೆ ಮತ್ತು ಕಾರ್ಮಿಕರ ಕೊರತೆ ಎಂದು ಸಂಸ್ಥೆ ಹೇಳಿದೆ.

ಭಾರತ ಸೇರಿದಂತೆ ಮುಂದಿನ ಎರಡು ವರ್ಷಗಳಲ್ಲಿ ಚುನಾವಣೆಗಳು ನಡೆಯಲಿರುವ ದೇಶಗಳಲ್ಲಿ ತಪ್ಪು ಮಾಹಿತಿಯು ಸರ್ಕಾರಗಳ ನ್ಯಾಯ ಸಮ್ಮತತೆಯನ್ನು ಗಂಭೀರವಾಗಿ ಅಸ್ಥಿರಗೊಳಿಸಬಹುದು ಎಂದು ವರದಿ ಕಳವಳ ವ್ಯಕ್ತಪಡಿಸಿದೆ.

1.4 ಶತಕೋಟಿ ಜನಸಂಖ್ಯೆ ಹೊಂದಿರುವ ಭಾರತದಲ್ಲಿ 18ನೇ ಲೋಕಸಭೆಗೆ ಮುಂದಿನ ಏಪ್ರಿಲ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ವರ್ಲ್ಡ್ ಇಕನಾಮಿಕ್ ಫೋರಂನ ‘ದಿ ಗ್ಲೋಬಲ್‌ ರಿಸ್ಕ್ಸ್‌ ರಿಪೋರ್ಟ್‌’ ಅನ್ನು ಶಿಕ್ಷಣ, ಉದ್ಯಮ, ಸರ್ಕಾರಿ ಕ್ಷೇತ್ರಗಳ 1500 ತಜ್ಞರ ಸಮೀಕ್ಷೆಯ ಆಧಾರದಲ್ಲಿ ಸಿದ್ಧಪಡಿಸಲಾಗಿದ್ದು ಮುಂದಿನ ಎರಡು ಮತ್ತು 10 ವರ್ಷಗಳ ಅವಧಿಯಲ್ಲಿ ಜಾಗತಿಕ ಆರ್ಥಿಕತೆಗಳು ಎದುರಿಸುವ ಅಪಾಯಗಳನ್ನು ಅಂದಾಜಿಸುವ ಯತ್ನವನ್ನು ಮಾಡಿದೆ.

ವರದಿಯು ಆರ್ಥಿಕ, ಪರಿಸರ, ಭೌಗೋಳಿಕ ರಾಜಕೀಯ, ಸಾಮಾಜಿಕ ಮತ್ತು ತಾಂತ್ರಿಕ ಹೀಗೆ ಐದು ವರ್ಗಗಳಾಗಿ ಜಾಗತಿಕ ಅಪಾಯಗಳನ್ನು ಉಲ್ಲೇಖಿಸಿದೆ. ‘ತಪ್ಪು ಮಾಹಿತಿ’ ಎಂಬುದು ತಾಂತ್ರಿಕ ಅಪಾಯಗಳ ಅಡಿಯಲ್ಲಿ ಒಂದು ಉಪ-ವರ್ಗವಾಗಿದೆ.

ಗುಜರಾತ್‌ನಲ್ಲಿ 2002ರಲ್ಲಿ ನಡೆದ ಗಲಭೆಗಳಲ್ಲಿ ಆಗ ಅಲ್ಲಿನ ಸಿಎಂ ಆಗಿದ್ದ ಈಗಿನ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರವನ್ನು ತೋರಿಸುವ ಬಿಬಿಸಿ ಸಾಕ್ಷ್ಯಚಿತ್ರದ ಉದಾಹರಣೆಯನ್ನೂ ಈ ವರದಿ ಉಲ್ಲೇಖಿಸಿದೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಈ ಸಾಕ್ಷ್ಯಚಿತ್ರದ ವಿಡಿಯೋವನ್ನು ಟ್ವಿಟರ್‌, ಯುಟ್ಯೂಬ್‌ನಿಂದ ಕಳೆದ ವರ್ಷದ ಜನವರಿಯಲ್ಲಿ ತೆಗೆದು ಹಾಕಲಾಗಿತ್ತು. ಪ್ರಜಾಪ್ರಭುತ್ವಗಳಲ್ಲೂ ಸಹ ನೈಜ ಅಥವಾ ಕಲ್ಪಿತ ವಿದೇಶಿ ಹಸ್ತಕ್ಷೇಪದ ಮೇಲಿನ ಕಾರ್ಯಾಚರಣೆಯು ಈಗಿರುವ ನಿಯಂತ್ರಣವನ್ನು ಬಲಪಡಿಸಲು ಬಳಸಬಹುದು ಎಂಬುದನ್ನು ವರದಿ ಎತ್ತಿ ತೋರಿಸಿದೆ.

ಇದನ್ನೂ ಓದಿ : 2 ತಿಂಗಳ ಅವಧಿಯಲ್ಲಿ UAPAಯಡಿ 9 ಮುಸ್ಲಿಂ ಯುವಕರನ್ನು ಬಂಧಿಸಿದ ಉತ್ತರಪ್ರದೇಶದ ಎಟಿಎಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...