Homeಮುಖಪುಟತಪ್ಪು ಮಾಹಿತಿಯಿಂದ ಮುಂದಿನ ಎರಡು ವರ್ಷಗಳಲ್ಲಿ ಭಾರತಕ್ಕೆ ಹೆಚ್ಚಿನ ಅಪಾಯ: ವರ್ಲ್ಡ್‌ ಇಕನಾಮಿಕ್‌ ಫೋರಂ ವರದಿ

ತಪ್ಪು ಮಾಹಿತಿಯಿಂದ ಮುಂದಿನ ಎರಡು ವರ್ಷಗಳಲ್ಲಿ ಭಾರತಕ್ಕೆ ಹೆಚ್ಚಿನ ಅಪಾಯ: ವರ್ಲ್ಡ್‌ ಇಕನಾಮಿಕ್‌ ಫೋರಂ ವರದಿ

- Advertisement -
- Advertisement -

ತಪ್ಪು ಮಾಹಿತಿ ಮತ್ತು ಸುಳ್ಳು ಮಾಹಿತಿ ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಹಾಗೂ ಮುಂದಿನ ಎರಡು ವರ್ಷಗಳಲ್ಲಿ ಭಾರತಕ್ಕೆ ದೊಡ್ಡ ಅಪಾಯವೊಡ್ಡಲಿದೆ ಎಂದು ವರ್ಲ್ಡ್ ಇಕನಾಮಿಕ್ ಫೋರಂ ತನ್ನ ವರದಿಯಲ್ಲಿ ತಿಳಿಸಿದೆ.

ಮುಂದಿನ ಎರಡು ವರ್ಷಗಳಲ್ಲಿ ಭಾರತಕ್ಕೆ ಇತರ ಪ್ರಮುಖ ಅಪಾಯಗಳೆಂದರೆ ಸಾಂಕ್ರಾಮಿಕ ರೋಗಗಳು, ಅಕ್ರಮ ಆರ್ಥಿಕ ಚಟುವಟಿಕೆ, ಅಸಮಾನತೆ ಮತ್ತು ಕಾರ್ಮಿಕರ ಕೊರತೆ ಎಂದು ಸಂಸ್ಥೆ ಹೇಳಿದೆ.

ಭಾರತ ಸೇರಿದಂತೆ ಮುಂದಿನ ಎರಡು ವರ್ಷಗಳಲ್ಲಿ ಚುನಾವಣೆಗಳು ನಡೆಯಲಿರುವ ದೇಶಗಳಲ್ಲಿ ತಪ್ಪು ಮಾಹಿತಿಯು ಸರ್ಕಾರಗಳ ನ್ಯಾಯ ಸಮ್ಮತತೆಯನ್ನು ಗಂಭೀರವಾಗಿ ಅಸ್ಥಿರಗೊಳಿಸಬಹುದು ಎಂದು ವರದಿ ಕಳವಳ ವ್ಯಕ್ತಪಡಿಸಿದೆ.

1.4 ಶತಕೋಟಿ ಜನಸಂಖ್ಯೆ ಹೊಂದಿರುವ ಭಾರತದಲ್ಲಿ 18ನೇ ಲೋಕಸಭೆಗೆ ಮುಂದಿನ ಏಪ್ರಿಲ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ವರ್ಲ್ಡ್ ಇಕನಾಮಿಕ್ ಫೋರಂನ ‘ದಿ ಗ್ಲೋಬಲ್‌ ರಿಸ್ಕ್ಸ್‌ ರಿಪೋರ್ಟ್‌’ ಅನ್ನು ಶಿಕ್ಷಣ, ಉದ್ಯಮ, ಸರ್ಕಾರಿ ಕ್ಷೇತ್ರಗಳ 1500 ತಜ್ಞರ ಸಮೀಕ್ಷೆಯ ಆಧಾರದಲ್ಲಿ ಸಿದ್ಧಪಡಿಸಲಾಗಿದ್ದು ಮುಂದಿನ ಎರಡು ಮತ್ತು 10 ವರ್ಷಗಳ ಅವಧಿಯಲ್ಲಿ ಜಾಗತಿಕ ಆರ್ಥಿಕತೆಗಳು ಎದುರಿಸುವ ಅಪಾಯಗಳನ್ನು ಅಂದಾಜಿಸುವ ಯತ್ನವನ್ನು ಮಾಡಿದೆ.

ವರದಿಯು ಆರ್ಥಿಕ, ಪರಿಸರ, ಭೌಗೋಳಿಕ ರಾಜಕೀಯ, ಸಾಮಾಜಿಕ ಮತ್ತು ತಾಂತ್ರಿಕ ಹೀಗೆ ಐದು ವರ್ಗಗಳಾಗಿ ಜಾಗತಿಕ ಅಪಾಯಗಳನ್ನು ಉಲ್ಲೇಖಿಸಿದೆ. ‘ತಪ್ಪು ಮಾಹಿತಿ’ ಎಂಬುದು ತಾಂತ್ರಿಕ ಅಪಾಯಗಳ ಅಡಿಯಲ್ಲಿ ಒಂದು ಉಪ-ವರ್ಗವಾಗಿದೆ.

ಗುಜರಾತ್‌ನಲ್ಲಿ 2002ರಲ್ಲಿ ನಡೆದ ಗಲಭೆಗಳಲ್ಲಿ ಆಗ ಅಲ್ಲಿನ ಸಿಎಂ ಆಗಿದ್ದ ಈಗಿನ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರವನ್ನು ತೋರಿಸುವ ಬಿಬಿಸಿ ಸಾಕ್ಷ್ಯಚಿತ್ರದ ಉದಾಹರಣೆಯನ್ನೂ ಈ ವರದಿ ಉಲ್ಲೇಖಿಸಿದೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಈ ಸಾಕ್ಷ್ಯಚಿತ್ರದ ವಿಡಿಯೋವನ್ನು ಟ್ವಿಟರ್‌, ಯುಟ್ಯೂಬ್‌ನಿಂದ ಕಳೆದ ವರ್ಷದ ಜನವರಿಯಲ್ಲಿ ತೆಗೆದು ಹಾಕಲಾಗಿತ್ತು. ಪ್ರಜಾಪ್ರಭುತ್ವಗಳಲ್ಲೂ ಸಹ ನೈಜ ಅಥವಾ ಕಲ್ಪಿತ ವಿದೇಶಿ ಹಸ್ತಕ್ಷೇಪದ ಮೇಲಿನ ಕಾರ್ಯಾಚರಣೆಯು ಈಗಿರುವ ನಿಯಂತ್ರಣವನ್ನು ಬಲಪಡಿಸಲು ಬಳಸಬಹುದು ಎಂಬುದನ್ನು ವರದಿ ಎತ್ತಿ ತೋರಿಸಿದೆ.

ಇದನ್ನೂ ಓದಿ : 2 ತಿಂಗಳ ಅವಧಿಯಲ್ಲಿ UAPAಯಡಿ 9 ಮುಸ್ಲಿಂ ಯುವಕರನ್ನು ಬಂಧಿಸಿದ ಉತ್ತರಪ್ರದೇಶದ ಎಟಿಎಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...