Homeಕರ್ನಾಟಕಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸಿ ಮುಸ್ಲಿಂ ಬಾಲಕಿಯರ ಹಕ್ಕುಗಳ ಉಲ್ಲಂಘನೆ: ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಬಹಿರಂಗ...

ಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸಿ ಮುಸ್ಲಿಂ ಬಾಲಕಿಯರ ಹಕ್ಕುಗಳ ಉಲ್ಲಂಘನೆ: ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಬಹಿರಂಗ ಪತ್ರ

- Advertisement -
- Advertisement -

ಹಿಜಾಬ್‌ ವಿಚಾರವಾಗಿ ರಾಜ್ಯ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸಿ, ಮುಸ್ಲಿಂ ಬಾಲಕಿಯರು ಹಾಗು ಮಹಿಳೆಯರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗುತ್ತಿರುವ ಬಗ್ಗೆ ಬಹುತ್ವ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಅವರಿಗೆ ಬಹಿರಂಗ ಪತ್ರ ಬರೆಯಾಗಿದೆ.

ಹಿಜಾಬ್ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯದ ಉಚ್ಛ ನ್ಯಾಯಾಲಯ ಹೊರಡಿಸಿದ ಮಧ್ಯಂತರ ಆದೇಶದ ನಂತರ ಮುಸ್ಲಿಂ ಮಹಿಳೆಯರು ಹಾಗೂ ಬಾಲಕಿಯರ ಮೇಲೆ ನಡೆಸಲಾಗಿರುವಂತಹ ದುರುದ್ದೇಶಪೂರಿತ, ಅಮಾನವೀಯ ಹಾಗೂ ಅಗೌರವಯುತ ದಾಳಿಯ ಹಿನ್ನೆಲೆಯಲ್ಲಿ ಬಹಿರಂಗ ಪತ್ರವನ್ನು ಬರೆದಿದ್ದೇವೆ ಎಂದು ಬಹುತ್ವ ಕರ್ನಾಟಕ ತನ್ನ ಪತ್ರದಲ್ಲಿ ನ್ಯಾಯ ಮೂರ್ತಿಗಳಿಗೆ ಹೇಳಿದ್ದಾರೆ.

ಪತ್ರಕ್ಕೆ ಓದುಗರು ಕೂಡಾ ಸಹಿ ಹಾಕಬಹುದಾಗಿದ್ದು, ಸಹಿ ಹಾಕಲು ಇಲ್ಲಿ ಕ್ಲಿಕ್ ಮಾಡಿ.

“ಬಂಧುತ್ವ, ವ್ಯಕ್ತಿ ಗೌರವ, ಐಕ್ಯತೆ ಮತ್ತು ರಾಷ್ಟ್ರದ ಏಕತೆಯನ್ನು ಖಾತ್ರಿಪಡಿಸುವುದು ನಮ್ಮ ಸಂವಿಧಾನದ ಮೂಲಭೂತ ಉದ್ದೇಶಗಳಲ್ಲಿ ಒಂದಾಗಿದೆ. ಇಂದು ರಾಜ್ಯದ ವಿವಿಧ ಅಂಗಗಳು, ಮಾಧ್ಯಮ ಸಂಸ್ಥೆಗಳು ನ್ಯಾಯಾಲಯದ ಮಧ್ಯಂತರ ಆದೇಶವನ್ನು ದುರುಪಯೋಗಿಸಿ ಮುಸ್ಲಿಂ ಸಮುದಾಯದ ಸಾಂವಿಧಾನಿಕ ಮೌಲ್ಯಗಳು ಹಾಗೂ ಘನತೆಗೆ ಹಾನಿ ತರುವಲ್ಲಿ ತೊಡಗಿವೆ. ಆದರೆ ಇಂದು ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಬಹಿರಂಗವಾಗಿ ಉಲ್ಲಂಘಿಸುತ್ತಿದ್ದರೂ ಸಹ ನ್ಯಾಯಾಲಯಗಳು ವಹಿಸಿರುವ ಸಂಪೂರ್ಣ ಮೌನ ನಮ್ಮಲ್ಲಿ ಆಘಾತ ಹಾಗೂ ಆತಂಕವನ್ನು ಸೃಷ್ಟಿಸಿದೆ” ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

“ಫೆಬ್ರವರಿ 4 ರಂದು ರಾಜ್ಯದ ವಿವಿಧ ಜಿಲ್ಲೆಗಳ ಶಾಲೆಗಳಲ್ಲಿ, ಹಿಜಾಬ್‌‌‌ ಹಾಗೂ ಬುರ್ಖಾಗಳನ್ನು ಧರಿಸಿ ಬರುವಂತಹ ಮುಸ್ಲಿಂ ಶಿಕ್ಷಕಿಯರು ಹಾಗೂ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ. ಶಾಲೆಯ ಹೊರಗೆ, ಬಹಿರಂಗವಾಗಿ ಎಲ್ಲರ ಎದುರಿಗೆ ಹಿಜಾಬ್ ಹಾಗೂ ಬುರ್ಖಾಗಳನ್ನು ತೆಗೆಯುವಂತೆ ಸೂಚಿಸಲಾಗುತ್ತಿದೆ. ಜಿಲ್ಲಾಡಳಿತಗಳು, ಸರ್ಕಾರಿ ಇಲಾಖೆಗಳು, ಸಚಿವರು ಹಾಗೂ ಮಾಧ್ಯಮಗಳು, ಶಾಲೆಗಳು ಒಳಗೊಂಡಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿಯೂ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವ ಕುರಿತು ನ್ಯಾಯಾಲಯದ ಮಧ್ಯಂತರ ಆದೇಶವನ್ನು ವ್ಯಾಖ್ಯಾನಿಸಿರುವ ರೀತಿಯ ಹಿನ್ನೆಲೆಯಲ್ಲಿ ಈ ಅಗೌರವ ಹಾಗೂ ಸಾರ್ವಜನಿಕ ಅವಮಾನವನ್ನು ನಡೆಸಲಾಗುತ್ತಿದೆ” ಎಂದು ಪತ್ರವು ಉಲ್ಲೇಖಿಸಿದೆ.

ಮಾಧ್ಯಮಗಳಲ್ಲಿ ವರದಿ ಮಾಡಿರುವ ಘಟನಾವಳಿಗಳ ವಿವರಗಳನ್ನು ಕೂಡಾ ಪತ್ರವು ನ್ಯಾಯಾಲಯದ ಗಮನಕ್ಕೆ ತಂದಿದೆ.

“ನ್ಯಾಯಾಲಯದ ಮಧ್ಯಂತರ ಆದೇಶವು ಕಾಲೇಜು ಅಭಿವೃದ್ಧಿ ಸಮಿತಿಗಳು ವಿದ್ಯಾರ್ಥಿಗಳ ಡ್ರೆಸ್ ಕೋಡ್ ಅಥವಾ ಸಮವಸ್ತ್ರವನ್ನು ಸೂಚಿಸಿರುವ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಸ್ಪಷ್ಟವಾಗಿ ಹೇಳುತ್ತದೆ. ಈ ಆದೇಶವು ಶಾಲಾ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಅಥವಾ ಕಾಲೇಜು ವಿದ್ಯಾರ್ಥಿಗಳಿಗೆ ಯಾವುದೇ ಕಾಲೇಜು ಅಭಿವೃದ್ಧಿ ಸಮಿತಿಗಳು ಇಲ್ಲದಿರುವಲ್ಲಿ ಅಥವಾ ಅಭ್ಯಾಸ ಅಥವಾ ನಿಯಮದ ಪ್ರಕಾರ ಹಿಜಾಬ್ ಅನ್ನು ಅನುಮತಿಸಿದರೆ ಅದು ಅನ್ವಯಿಸುತ್ತದೆ ಎಂದು ಆದೇಶದಲ್ಲಿ ಎಲ್ಲಿಯೂ ಸೂಚಿಸಿಲ್ಲ” ಎಂದು ಪತ್ರವು ಉಲ್ಲೇಖಿಸಿದೆ.

“ಹೀಗಿದ್ದರೂ, ಈ ಆದೇಶವನ್ನು ರಾಜ್ಯದಾದ್ಯಂತ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿಯೂ ಹಿಜಾಬ್ ಅನ್ನು ಖಡಾಖಂಡಿತವಾಗಿ ನಿರ್ಬಂಧಿಸಲಾಗಿರುವುದಾಗಿ ಬಿಂಬಿಸಲಾಗಿದೆ. ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಕಾಲೇಜುಗಳಲ್ಲಿಯೂ ಹಿಜಾಬ್ ಅನ್ನು ನಿರ್ಬಂಧಿಸಿರುವುದಾಗಿ ಜಿಲ್ಲಾಡಳಿತಗಳು ಮೌಖಿಕ ಸೂಚನೆಯನ್ನು ನೀಡಿರುವುದಾಗಿ ತಿಳಿದು ಬಂದಿದೆ.

ಸುದ್ದಿ ಚಾನೆಲ್‌ಗಳು ನಿಮ್ಮ ಆದೇಶವನ್ನು ಕಡ್ಡಾಯವಾಗಿ ‘ಅನುಷ್ಠಾನ’ಗೊಳಿಸಬೇಕೆಂದು ಬೊಬ್ಬೆಯಿಟ್ಟು, ಕ್ಯಾಮೆರಾಗಳೊಂದಿಗೆ ಶಾಲಾ ತರಗತಿ ಕೊಠಡಿಗಳ ಒಳಗೆ ಹೋಗಿ ಹಿಜಾಬ್ ಧರಿಸಿರುವಂತಹ ಅಪ್ರಾಪ್ತ ವಯಸ್ಕ ಬಾಲಕಿಯರ ಮುಖಗಳನ್ನು ಪದೇ ಪದೇ ತೋರಿಸುತ್ತಿವೆ. ಈ ಮೂಲಕ ನ್ಯಾಯಾಲಯದ ಮಧ್ಯಂತರ ಆದೇಶವನ್ನು ಧಿಕ್ಕರಿಸುತ್ತಿರುವಂತೆ ಬಿಂಬಿಸುವ ಮೂಲಕ ಈಗಾಗಲೇ ಆತಂಕ ಸೃಷ್ಟಿಯಾಗಿರುವ ವಾತಾವರಣದಲ್ಲಿ ಮತ್ತಷ್ಟು ಭಯವನ್ನು ಸೃಷ್ಟಿಸುತ್ತಿವೆ. ಈ ವ್ಯತಿರಿಕ್ತ ಪ್ರಚಾರದಿಂದ ಭಯದ ಹಾಗು ಆತಂಕದ ವಾತಾವರಣ ಸೃಷ್ಟಿಯಾಗಿದೆ” ಎಂದು ಪತ್ರವು ಆತಂಕ ವ್ಯಕ್ತಪಡಿಸಿದೆ.

“ಕೆಲವು ಶಾಲೆಗಳು ವಿದ್ಯಾರ್ಥಿನಿಯರು ಹಾಗೂ ಶಿಕ್ಷಕಿಯರನ್ನು ಶಾಲೆಯನ್ನು ಪ್ರವೇಶಿಸುವ ಮುಂಚೆಯೇ ಎಲ್ಲರ ಎದುರಿಗೆ ಹಿಜಾಬ್ ಹಾಗೂ ಬುರ್ಖಾಗಳನ್ನು ತೆಗೆಯುವಂತೆ ಸೂಚಿಸುತ್ತಿವೆ. ಹಿಜಾಬ್ ತೆಗೆಯಲು ನಿರಾಕರಿಸಿದಂತಹ ಕೆಲವು ವಿದ್ಯಾರ್ಥಿನಿಯರನ್ನು ಪರೀಕ್ಷೆಗಳನ್ನು ಬರೆಯದಿರುವಂತೆ ತಡೆಯಲಾಗಿದೆ. ಶಿವಮೊಗ್ಗದ ಒಂದು ಶಾಲೆಯಲ್ಲಿ ಫೆಬ್ರವರಿ 15ರಂದು ನಡೆದಂತಹ ಒಂದು ಅಮಾನವೀಯ ಘಟನೆಯಲ್ಲಿ ಓರ್ವ ಶಿಕ್ಷಕಿ ಒಂದು ಮಗುವನ್ನು ಶಾಲೆಯಿಂದ ಹೊರದೂಡಿದರು, ಈಟಿವಿ ಭಾರತ ಎಂಬ ಸುದ್ದಿ ವಾಹಿನಿಯ ವರದಿಗಾರ ವಿದ್ಯಾರ್ಥಿನಿಯನ್ನು ದೂಡಿದ ನಂತರ ತಮ್ಮ ಕ್ಯಾಮೆರಾದೊಂದಿಗೆ ಆ ಬಾಲಕಿಯನ್ನು ಹಿಂಬಾಲಿಸಿ ಚಿತ್ರೀಕರಿಸಿದ್ದಾರೆ” ಎಂದು ಶಿವಮೊಗ್ಗದಲ್ಲಿ ನಡೆದ ಘಟನೆಯ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಫೆಬ್ರವರಿ 14 ಮತ್ತು 15ರಂದು ರಾಜ್ಯದ ಹಲವು ಕಡೆ ಮುಸ್ಲಿಂ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ರಾಜ್ಯದಲ್ಲಿ ಹಿಂದೆಂದೂ ಅನುಭವಿಸದೇ ಇರುವಂತಹ ಅವಮಾನವನ್ನು ಎದುರಿಸಿದ್ದು, ಕಿರುಕುಳಕ್ಕೀಡಾಗಿದ್ದಾರೆ. ನ್ಯಾಯಾಲಯದ ಮಧ್ಯಂತರ ಆದೇಶದ ತಪ್ಪು ವ್ಯಾಖ್ಯಾನದ ಫಲಿತಾಂಶವಾಗಿ, ಭಾರತದ ಸಂವಿಧಾನದ ಪರಿಚ್ಛೇದ 21 ಹಾಗೂ 21ಎ ಅಡಿ ಖಾತ್ರಿಪಡಿಸಿರುವಂತೆ, ಕರ್ನಾಟಕದ ಮುಸ್ಲಿಂ ಮಹಿಳೆಯರ ಧರ್ಮದ ಆಚರಣೆ, ಶಿಕ್ಷಣ ಹಾಗೂ ಘನತೆಯಂತಹ ಮೂಲಭೂತ ಹಕ್ಕುಗಳ ಸಂಪೂರ್ಣ ಉಲ್ಲಂಘನೆಗೆಯಾಗಿದೆ’‌’ ಎಂದು ಪತ್ರವು ಒತ್ತಿ ಹೇಳಿದೆ.

“ಕೋವಿಡ್ ಸಾಂಕ್ರಾಮಿಕದಿಂದಾಗಿ ದೀರ್ಘ ಕಾಲದವರೆಗೂ ಶಿಕ್ಷಣ ಸಂಸ್ಥೆಗಳು ಮುಚ್ಚಿದ್ದು ಈಗಷ್ಟೇ ಆರಂಭವಾಗಿವೆ. ಮೇಲಾಗಿ ವಾರ್ಷಿಕ ಪರೀಕ್ಷಾಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯುತ್ತಿರುವ ಶೈಕ್ಷಣಿಕ ವರ್ಷದ ಈ ನಿರ್ಣಾಯಕ ಸಮಯದಲ್ಲಿ ರಾಜ್ಯದಾದ್ಯಂತ ಹಿಜಾಬ್ ನಿರ್ಬಂಧಿಸಿರುವುದು ವಿದ್ಯಾರ್ಥಿಗಳಲ್ಲಿ ಗಂಭೀರ ಸ್ವರೂಪದ ಆತಂಕ ಹಾಗೂ ಕಷ್ಟದ ಸನ್ನಿವೇಶವನ್ನು ಸೃಷ್ಟಿಸಿದೆ. ಕೋವಿಡ್ ಪಿಡುಗಿನಿಂದಾಗಿ ವಿದ್ಯಾರ್ಥಿಗಳು ಎಲ್ಲಿಲ್ಲದ ವ್ಯಾಪಕ ರೀತಿಯಲ್ಲಿ ಶಾಲೆ ಬಿಟ್ಟಿರುವ ಪ್ರಕ್ರಿಯೆಯು ನಡೆಯುತ್ತಿರುವಾಗ, ಮಕ್ಕಳ ಶಿಕ್ಷಣಕ್ಕೆ ಕುಂದು ಬರದಂತೆ ನೋಡಿಕೊಳ್ಲುವುದು ಸರಕಾರದ ಕಾನೂನುಬದ್ಧ ಜವಾಬ್ದಾರಿಯಾಗಿರುತ್ತದೆ. ಆದರೆ ಸರಕಾರದ ಪ್ರಸ್ತುತ ಕ್ರಮಗಳಿಂದಾಗಿ ಬಾಲಕಿಯರು ಇನ್ನೂ ಹೆಚ್ಚು ಪ್ರಮಾಣದಲ್ಲಿ ಶಾಲೆಗೆ ಹೋಗುವುದನ್ನು ಬಿಡುತ್ತಿದ್ದಾರೆ” ಎಂದು ಪತ್ರವು ಹೇಳಿದೆ.

“ರಾಜ್ಯದಾದ್ಯಂತ ಮುಸ್ಲಿಂ ಮಹಿಳೆಯರು, ಬಾಲಕಿಯರು ಹಾಗೂ ಮಕ್ಕಳ ವಿರುದ್ಧದ ಈ ಅವಮಾನ ಮತ್ತು ಅಗೌರವದ ಸನ್ನಿವೇಶಗಳನ್ನು ಉಚ್ಛ ನ್ಯಾಯಾಲಯದ ಗಮನಕ್ಕೆ ಹಲವು ಬಾರಿ ತರಲಾಗಿದೆ. ಆದಾಗ್ಯೂ, ಈ ವಿಷಯದ ಕಡೆ ಗಮನ ನೀಡಿಲ್ಲ. ಸರಕಾರದಿಂದ ಮತ್ತು ಸುದ್ದಿ ಮಾಧ್ಯಮಗಳಿಂದ ಅಲ್ಪ ಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳುವಂತೆ ಸಂವಿಧಾನವು ನ್ಯಾಯಾಲಯಗಳಿಗೆ ಅಧಿಕಾರ ನೀಡುತ್ತದೆ. ಮಾನ್ಯ ಉಚ್ಛ ನ್ಯಾಯಾಲಯವು ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸುವ ತನ್ನ ಕರ್ತವ್ಯನ್ನು ಪೂರೈಸಬೇಕಾಗಿ ಮಾನ್ಯ ನ್ಯಾಯಾಲಯದ ಸಾಂವಿಧಾನಿಕ ಆತ್ಮಸಾಕ್ಷಿಯನ್ನು ಉಲ್ಲೇಖಿಸಿ ಮನವಿ ಮಾಡುತ್ತಿದ್ದೇವೆ. ಇಂತಹ ವ್ಯಾಪಕ ರೀತಿಯಲ್ಲಿ ನಡೆಯುತ್ತಿರುವ ಘನತೆ ಮತ್ತು ಸ್ವಾತಂತ್ರ್ಯದ ಉಲ್ಲಂಘನೆಗಳನ್ನು ಸಾಂವಿಧಾನಿಕ ಉಚ್ಛ ನ್ಯಾಯಾಲಯವು ಪ್ರೇಕ್ಷಕನಾಗಿರುವಂತಿಲ್ಲ” ಎಂದು ಪತ್ರವು ಉಲ್ಲೇಖಿಸಿದೆ.

‘ರಾಜ್ಯದಲ್ಲಿ ಸರ್ಕಾರ ಹಾಗೂ ಸುದ್ದಿ ಮಾಧ್ಯಮಗಳ ಕ್ರಮಗಳಿಂದಾಗಿ ಕೆಲವು ದಿನಗಳಿಂದ ಸಂಭವಿಸುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ ಮಾನ್ಯ ಉಚ್ಛ ನ್ಯಾಯಾಲಯದ ಈ ಉದ್ದೇಶಗಳನ್ನು ಎತ್ತಿ ಹಿಡಿಯಲಾಗಿಲ್ಲ ಎಂದು ಪತ್ರವು ಮತ್ತೊಮ್ಮೆ ನ್ಯಾಯಾಲಯದ ಮೂಲಕ ತಮ್ಮ ಗಮನಕ್ಕೆ ತರಲು ಬಯಸಿದ್ದೇವೆ ಎಂದು ತಿಳಿಸಿದ್ದು, “ನಮ್ಮ ಮಕ್ಕಳು ಹಾಗೂ ನಮ್ಮ ಸಹ ಮಹಿಳಾ ನಾಗರಿಕರ ವಿರುದ್ಧ ನಡೆಯುತ್ತಿರುವ ಈ ತೀವ್ರ ಅವಮಾನ ಮತ್ತು ಆತಂಕದ ಸನ್ನಿವೇಶ ಇನ್ನು ಮುಂದುವರೆಯುವಂತಿಲ್ಲ” ಎಂದು ಆಶಿಸಿದೆ.

ಮುಸ್ಲಿಮ್ ಮಕ್ಕಳು, ಬಾಲಕಿಯರು ಹಾಗೂ ಶಿಕ್ಷಕರು ಎದುರಿಸುತ್ತಿರುವಂತಹ ಅಗೌರವ ಮತ್ತು ಅವಮಾನದ ಕುರಿತು ಈ ಕೂಡಲೇ ಗಮನ ನೀಡುವಂತೆ ಪತ್ರವು ನ್ಯಾಯಾಲಯವನ್ನು ಕೋರಿದ್ದು, ಕೆಳಗಿನ ಅಂಶಗಳನ್ನು ಉಲ್ಲೇಖಿಸಿ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿದೆ.

  • ಈ ಆದೇಶದ ವ್ಯಾಪ್ತಿಯ (ಸ್ಕೊಪ್ ) ಕುರಿತು ಕೂಡಲೇ ಸ್ಪಷ್ಟಪಡಿಸುವುದು.
  • ರಾಜ್ಯ ಶಿಕ್ಷಣ ಇಲಾಖೆಯ ಅಧಿಕಾರಿಗಳು , ಜಿಲ್ಲಾ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳಿಂದ ಆದೇಶದ ತಪ್ಪು ವ್ಯಾಖ್ಯಾನದ ಕುರಿತು ವಿಚಾರಣೆ ನಡೆಸಲು ನಿರ್ದೇಶಿಸುವುದು.
  • ಶಿಕ್ಷಣದ ಹಕ್ಕನ್ನು ನಿರಾಕರಿಸಿರುವಂತಹ ಮುಸ್ಲಿಂ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಪರಿಹಾರ ಒದಗಿಸುವುದು.
  • ಘನತೆಯ ಸಾಂವಿಧಾನಿಕ ತತ್ವಗಳು ಮತ್ತು ಖಾಸಗಿತನದ ಹಕ್ಕನ್ನು ಉಲ್ಲಂಘಿಸಿದಂತಹ ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸುವುದು.

ಪತ್ರಕ್ಕೆ ಓದುಗರು ಕೂಡಾ ಸಹಿ ಹಾಕಬಹುದಾಗಿದ್ದು, ಸಹಿ ಹಾಕಲು ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...