Homeಕರ್ನಾಟಕಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸಿ ಮುಸ್ಲಿಂ ಬಾಲಕಿಯರ ಹಕ್ಕುಗಳ ಉಲ್ಲಂಘನೆ: ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಬಹಿರಂಗ...

ಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸಿ ಮುಸ್ಲಿಂ ಬಾಲಕಿಯರ ಹಕ್ಕುಗಳ ಉಲ್ಲಂಘನೆ: ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಬಹಿರಂಗ ಪತ್ರ

- Advertisement -
- Advertisement -

ಹಿಜಾಬ್‌ ವಿಚಾರವಾಗಿ ರಾಜ್ಯ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸಿ, ಮುಸ್ಲಿಂ ಬಾಲಕಿಯರು ಹಾಗು ಮಹಿಳೆಯರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗುತ್ತಿರುವ ಬಗ್ಗೆ ಬಹುತ್ವ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಅವರಿಗೆ ಬಹಿರಂಗ ಪತ್ರ ಬರೆಯಾಗಿದೆ.

ಹಿಜಾಬ್ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯದ ಉಚ್ಛ ನ್ಯಾಯಾಲಯ ಹೊರಡಿಸಿದ ಮಧ್ಯಂತರ ಆದೇಶದ ನಂತರ ಮುಸ್ಲಿಂ ಮಹಿಳೆಯರು ಹಾಗೂ ಬಾಲಕಿಯರ ಮೇಲೆ ನಡೆಸಲಾಗಿರುವಂತಹ ದುರುದ್ದೇಶಪೂರಿತ, ಅಮಾನವೀಯ ಹಾಗೂ ಅಗೌರವಯುತ ದಾಳಿಯ ಹಿನ್ನೆಲೆಯಲ್ಲಿ ಬಹಿರಂಗ ಪತ್ರವನ್ನು ಬರೆದಿದ್ದೇವೆ ಎಂದು ಬಹುತ್ವ ಕರ್ನಾಟಕ ತನ್ನ ಪತ್ರದಲ್ಲಿ ನ್ಯಾಯ ಮೂರ್ತಿಗಳಿಗೆ ಹೇಳಿದ್ದಾರೆ.

ಪತ್ರಕ್ಕೆ ಓದುಗರು ಕೂಡಾ ಸಹಿ ಹಾಕಬಹುದಾಗಿದ್ದು, ಸಹಿ ಹಾಕಲು ಇಲ್ಲಿ ಕ್ಲಿಕ್ ಮಾಡಿ.

“ಬಂಧುತ್ವ, ವ್ಯಕ್ತಿ ಗೌರವ, ಐಕ್ಯತೆ ಮತ್ತು ರಾಷ್ಟ್ರದ ಏಕತೆಯನ್ನು ಖಾತ್ರಿಪಡಿಸುವುದು ನಮ್ಮ ಸಂವಿಧಾನದ ಮೂಲಭೂತ ಉದ್ದೇಶಗಳಲ್ಲಿ ಒಂದಾಗಿದೆ. ಇಂದು ರಾಜ್ಯದ ವಿವಿಧ ಅಂಗಗಳು, ಮಾಧ್ಯಮ ಸಂಸ್ಥೆಗಳು ನ್ಯಾಯಾಲಯದ ಮಧ್ಯಂತರ ಆದೇಶವನ್ನು ದುರುಪಯೋಗಿಸಿ ಮುಸ್ಲಿಂ ಸಮುದಾಯದ ಸಾಂವಿಧಾನಿಕ ಮೌಲ್ಯಗಳು ಹಾಗೂ ಘನತೆಗೆ ಹಾನಿ ತರುವಲ್ಲಿ ತೊಡಗಿವೆ. ಆದರೆ ಇಂದು ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಬಹಿರಂಗವಾಗಿ ಉಲ್ಲಂಘಿಸುತ್ತಿದ್ದರೂ ಸಹ ನ್ಯಾಯಾಲಯಗಳು ವಹಿಸಿರುವ ಸಂಪೂರ್ಣ ಮೌನ ನಮ್ಮಲ್ಲಿ ಆಘಾತ ಹಾಗೂ ಆತಂಕವನ್ನು ಸೃಷ್ಟಿಸಿದೆ” ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

“ಫೆಬ್ರವರಿ 4 ರಂದು ರಾಜ್ಯದ ವಿವಿಧ ಜಿಲ್ಲೆಗಳ ಶಾಲೆಗಳಲ್ಲಿ, ಹಿಜಾಬ್‌‌‌ ಹಾಗೂ ಬುರ್ಖಾಗಳನ್ನು ಧರಿಸಿ ಬರುವಂತಹ ಮುಸ್ಲಿಂ ಶಿಕ್ಷಕಿಯರು ಹಾಗೂ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ. ಶಾಲೆಯ ಹೊರಗೆ, ಬಹಿರಂಗವಾಗಿ ಎಲ್ಲರ ಎದುರಿಗೆ ಹಿಜಾಬ್ ಹಾಗೂ ಬುರ್ಖಾಗಳನ್ನು ತೆಗೆಯುವಂತೆ ಸೂಚಿಸಲಾಗುತ್ತಿದೆ. ಜಿಲ್ಲಾಡಳಿತಗಳು, ಸರ್ಕಾರಿ ಇಲಾಖೆಗಳು, ಸಚಿವರು ಹಾಗೂ ಮಾಧ್ಯಮಗಳು, ಶಾಲೆಗಳು ಒಳಗೊಂಡಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿಯೂ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವ ಕುರಿತು ನ್ಯಾಯಾಲಯದ ಮಧ್ಯಂತರ ಆದೇಶವನ್ನು ವ್ಯಾಖ್ಯಾನಿಸಿರುವ ರೀತಿಯ ಹಿನ್ನೆಲೆಯಲ್ಲಿ ಈ ಅಗೌರವ ಹಾಗೂ ಸಾರ್ವಜನಿಕ ಅವಮಾನವನ್ನು ನಡೆಸಲಾಗುತ್ತಿದೆ” ಎಂದು ಪತ್ರವು ಉಲ್ಲೇಖಿಸಿದೆ.

ಮಾಧ್ಯಮಗಳಲ್ಲಿ ವರದಿ ಮಾಡಿರುವ ಘಟನಾವಳಿಗಳ ವಿವರಗಳನ್ನು ಕೂಡಾ ಪತ್ರವು ನ್ಯಾಯಾಲಯದ ಗಮನಕ್ಕೆ ತಂದಿದೆ.

“ನ್ಯಾಯಾಲಯದ ಮಧ್ಯಂತರ ಆದೇಶವು ಕಾಲೇಜು ಅಭಿವೃದ್ಧಿ ಸಮಿತಿಗಳು ವಿದ್ಯಾರ್ಥಿಗಳ ಡ್ರೆಸ್ ಕೋಡ್ ಅಥವಾ ಸಮವಸ್ತ್ರವನ್ನು ಸೂಚಿಸಿರುವ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಸ್ಪಷ್ಟವಾಗಿ ಹೇಳುತ್ತದೆ. ಈ ಆದೇಶವು ಶಾಲಾ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಅಥವಾ ಕಾಲೇಜು ವಿದ್ಯಾರ್ಥಿಗಳಿಗೆ ಯಾವುದೇ ಕಾಲೇಜು ಅಭಿವೃದ್ಧಿ ಸಮಿತಿಗಳು ಇಲ್ಲದಿರುವಲ್ಲಿ ಅಥವಾ ಅಭ್ಯಾಸ ಅಥವಾ ನಿಯಮದ ಪ್ರಕಾರ ಹಿಜಾಬ್ ಅನ್ನು ಅನುಮತಿಸಿದರೆ ಅದು ಅನ್ವಯಿಸುತ್ತದೆ ಎಂದು ಆದೇಶದಲ್ಲಿ ಎಲ್ಲಿಯೂ ಸೂಚಿಸಿಲ್ಲ” ಎಂದು ಪತ್ರವು ಉಲ್ಲೇಖಿಸಿದೆ.

“ಹೀಗಿದ್ದರೂ, ಈ ಆದೇಶವನ್ನು ರಾಜ್ಯದಾದ್ಯಂತ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿಯೂ ಹಿಜಾಬ್ ಅನ್ನು ಖಡಾಖಂಡಿತವಾಗಿ ನಿರ್ಬಂಧಿಸಲಾಗಿರುವುದಾಗಿ ಬಿಂಬಿಸಲಾಗಿದೆ. ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಕಾಲೇಜುಗಳಲ್ಲಿಯೂ ಹಿಜಾಬ್ ಅನ್ನು ನಿರ್ಬಂಧಿಸಿರುವುದಾಗಿ ಜಿಲ್ಲಾಡಳಿತಗಳು ಮೌಖಿಕ ಸೂಚನೆಯನ್ನು ನೀಡಿರುವುದಾಗಿ ತಿಳಿದು ಬಂದಿದೆ.

ಸುದ್ದಿ ಚಾನೆಲ್‌ಗಳು ನಿಮ್ಮ ಆದೇಶವನ್ನು ಕಡ್ಡಾಯವಾಗಿ ‘ಅನುಷ್ಠಾನ’ಗೊಳಿಸಬೇಕೆಂದು ಬೊಬ್ಬೆಯಿಟ್ಟು, ಕ್ಯಾಮೆರಾಗಳೊಂದಿಗೆ ಶಾಲಾ ತರಗತಿ ಕೊಠಡಿಗಳ ಒಳಗೆ ಹೋಗಿ ಹಿಜಾಬ್ ಧರಿಸಿರುವಂತಹ ಅಪ್ರಾಪ್ತ ವಯಸ್ಕ ಬಾಲಕಿಯರ ಮುಖಗಳನ್ನು ಪದೇ ಪದೇ ತೋರಿಸುತ್ತಿವೆ. ಈ ಮೂಲಕ ನ್ಯಾಯಾಲಯದ ಮಧ್ಯಂತರ ಆದೇಶವನ್ನು ಧಿಕ್ಕರಿಸುತ್ತಿರುವಂತೆ ಬಿಂಬಿಸುವ ಮೂಲಕ ಈಗಾಗಲೇ ಆತಂಕ ಸೃಷ್ಟಿಯಾಗಿರುವ ವಾತಾವರಣದಲ್ಲಿ ಮತ್ತಷ್ಟು ಭಯವನ್ನು ಸೃಷ್ಟಿಸುತ್ತಿವೆ. ಈ ವ್ಯತಿರಿಕ್ತ ಪ್ರಚಾರದಿಂದ ಭಯದ ಹಾಗು ಆತಂಕದ ವಾತಾವರಣ ಸೃಷ್ಟಿಯಾಗಿದೆ” ಎಂದು ಪತ್ರವು ಆತಂಕ ವ್ಯಕ್ತಪಡಿಸಿದೆ.

“ಕೆಲವು ಶಾಲೆಗಳು ವಿದ್ಯಾರ್ಥಿನಿಯರು ಹಾಗೂ ಶಿಕ್ಷಕಿಯರನ್ನು ಶಾಲೆಯನ್ನು ಪ್ರವೇಶಿಸುವ ಮುಂಚೆಯೇ ಎಲ್ಲರ ಎದುರಿಗೆ ಹಿಜಾಬ್ ಹಾಗೂ ಬುರ್ಖಾಗಳನ್ನು ತೆಗೆಯುವಂತೆ ಸೂಚಿಸುತ್ತಿವೆ. ಹಿಜಾಬ್ ತೆಗೆಯಲು ನಿರಾಕರಿಸಿದಂತಹ ಕೆಲವು ವಿದ್ಯಾರ್ಥಿನಿಯರನ್ನು ಪರೀಕ್ಷೆಗಳನ್ನು ಬರೆಯದಿರುವಂತೆ ತಡೆಯಲಾಗಿದೆ. ಶಿವಮೊಗ್ಗದ ಒಂದು ಶಾಲೆಯಲ್ಲಿ ಫೆಬ್ರವರಿ 15ರಂದು ನಡೆದಂತಹ ಒಂದು ಅಮಾನವೀಯ ಘಟನೆಯಲ್ಲಿ ಓರ್ವ ಶಿಕ್ಷಕಿ ಒಂದು ಮಗುವನ್ನು ಶಾಲೆಯಿಂದ ಹೊರದೂಡಿದರು, ಈಟಿವಿ ಭಾರತ ಎಂಬ ಸುದ್ದಿ ವಾಹಿನಿಯ ವರದಿಗಾರ ವಿದ್ಯಾರ್ಥಿನಿಯನ್ನು ದೂಡಿದ ನಂತರ ತಮ್ಮ ಕ್ಯಾಮೆರಾದೊಂದಿಗೆ ಆ ಬಾಲಕಿಯನ್ನು ಹಿಂಬಾಲಿಸಿ ಚಿತ್ರೀಕರಿಸಿದ್ದಾರೆ” ಎಂದು ಶಿವಮೊಗ್ಗದಲ್ಲಿ ನಡೆದ ಘಟನೆಯ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಫೆಬ್ರವರಿ 14 ಮತ್ತು 15ರಂದು ರಾಜ್ಯದ ಹಲವು ಕಡೆ ಮುಸ್ಲಿಂ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ರಾಜ್ಯದಲ್ಲಿ ಹಿಂದೆಂದೂ ಅನುಭವಿಸದೇ ಇರುವಂತಹ ಅವಮಾನವನ್ನು ಎದುರಿಸಿದ್ದು, ಕಿರುಕುಳಕ್ಕೀಡಾಗಿದ್ದಾರೆ. ನ್ಯಾಯಾಲಯದ ಮಧ್ಯಂತರ ಆದೇಶದ ತಪ್ಪು ವ್ಯಾಖ್ಯಾನದ ಫಲಿತಾಂಶವಾಗಿ, ಭಾರತದ ಸಂವಿಧಾನದ ಪರಿಚ್ಛೇದ 21 ಹಾಗೂ 21ಎ ಅಡಿ ಖಾತ್ರಿಪಡಿಸಿರುವಂತೆ, ಕರ್ನಾಟಕದ ಮುಸ್ಲಿಂ ಮಹಿಳೆಯರ ಧರ್ಮದ ಆಚರಣೆ, ಶಿಕ್ಷಣ ಹಾಗೂ ಘನತೆಯಂತಹ ಮೂಲಭೂತ ಹಕ್ಕುಗಳ ಸಂಪೂರ್ಣ ಉಲ್ಲಂಘನೆಗೆಯಾಗಿದೆ’‌’ ಎಂದು ಪತ್ರವು ಒತ್ತಿ ಹೇಳಿದೆ.

“ಕೋವಿಡ್ ಸಾಂಕ್ರಾಮಿಕದಿಂದಾಗಿ ದೀರ್ಘ ಕಾಲದವರೆಗೂ ಶಿಕ್ಷಣ ಸಂಸ್ಥೆಗಳು ಮುಚ್ಚಿದ್ದು ಈಗಷ್ಟೇ ಆರಂಭವಾಗಿವೆ. ಮೇಲಾಗಿ ವಾರ್ಷಿಕ ಪರೀಕ್ಷಾಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯುತ್ತಿರುವ ಶೈಕ್ಷಣಿಕ ವರ್ಷದ ಈ ನಿರ್ಣಾಯಕ ಸಮಯದಲ್ಲಿ ರಾಜ್ಯದಾದ್ಯಂತ ಹಿಜಾಬ್ ನಿರ್ಬಂಧಿಸಿರುವುದು ವಿದ್ಯಾರ್ಥಿಗಳಲ್ಲಿ ಗಂಭೀರ ಸ್ವರೂಪದ ಆತಂಕ ಹಾಗೂ ಕಷ್ಟದ ಸನ್ನಿವೇಶವನ್ನು ಸೃಷ್ಟಿಸಿದೆ. ಕೋವಿಡ್ ಪಿಡುಗಿನಿಂದಾಗಿ ವಿದ್ಯಾರ್ಥಿಗಳು ಎಲ್ಲಿಲ್ಲದ ವ್ಯಾಪಕ ರೀತಿಯಲ್ಲಿ ಶಾಲೆ ಬಿಟ್ಟಿರುವ ಪ್ರಕ್ರಿಯೆಯು ನಡೆಯುತ್ತಿರುವಾಗ, ಮಕ್ಕಳ ಶಿಕ್ಷಣಕ್ಕೆ ಕುಂದು ಬರದಂತೆ ನೋಡಿಕೊಳ್ಲುವುದು ಸರಕಾರದ ಕಾನೂನುಬದ್ಧ ಜವಾಬ್ದಾರಿಯಾಗಿರುತ್ತದೆ. ಆದರೆ ಸರಕಾರದ ಪ್ರಸ್ತುತ ಕ್ರಮಗಳಿಂದಾಗಿ ಬಾಲಕಿಯರು ಇನ್ನೂ ಹೆಚ್ಚು ಪ್ರಮಾಣದಲ್ಲಿ ಶಾಲೆಗೆ ಹೋಗುವುದನ್ನು ಬಿಡುತ್ತಿದ್ದಾರೆ” ಎಂದು ಪತ್ರವು ಹೇಳಿದೆ.

“ರಾಜ್ಯದಾದ್ಯಂತ ಮುಸ್ಲಿಂ ಮಹಿಳೆಯರು, ಬಾಲಕಿಯರು ಹಾಗೂ ಮಕ್ಕಳ ವಿರುದ್ಧದ ಈ ಅವಮಾನ ಮತ್ತು ಅಗೌರವದ ಸನ್ನಿವೇಶಗಳನ್ನು ಉಚ್ಛ ನ್ಯಾಯಾಲಯದ ಗಮನಕ್ಕೆ ಹಲವು ಬಾರಿ ತರಲಾಗಿದೆ. ಆದಾಗ್ಯೂ, ಈ ವಿಷಯದ ಕಡೆ ಗಮನ ನೀಡಿಲ್ಲ. ಸರಕಾರದಿಂದ ಮತ್ತು ಸುದ್ದಿ ಮಾಧ್ಯಮಗಳಿಂದ ಅಲ್ಪ ಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳುವಂತೆ ಸಂವಿಧಾನವು ನ್ಯಾಯಾಲಯಗಳಿಗೆ ಅಧಿಕಾರ ನೀಡುತ್ತದೆ. ಮಾನ್ಯ ಉಚ್ಛ ನ್ಯಾಯಾಲಯವು ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸುವ ತನ್ನ ಕರ್ತವ್ಯನ್ನು ಪೂರೈಸಬೇಕಾಗಿ ಮಾನ್ಯ ನ್ಯಾಯಾಲಯದ ಸಾಂವಿಧಾನಿಕ ಆತ್ಮಸಾಕ್ಷಿಯನ್ನು ಉಲ್ಲೇಖಿಸಿ ಮನವಿ ಮಾಡುತ್ತಿದ್ದೇವೆ. ಇಂತಹ ವ್ಯಾಪಕ ರೀತಿಯಲ್ಲಿ ನಡೆಯುತ್ತಿರುವ ಘನತೆ ಮತ್ತು ಸ್ವಾತಂತ್ರ್ಯದ ಉಲ್ಲಂಘನೆಗಳನ್ನು ಸಾಂವಿಧಾನಿಕ ಉಚ್ಛ ನ್ಯಾಯಾಲಯವು ಪ್ರೇಕ್ಷಕನಾಗಿರುವಂತಿಲ್ಲ” ಎಂದು ಪತ್ರವು ಉಲ್ಲೇಖಿಸಿದೆ.

‘ರಾಜ್ಯದಲ್ಲಿ ಸರ್ಕಾರ ಹಾಗೂ ಸುದ್ದಿ ಮಾಧ್ಯಮಗಳ ಕ್ರಮಗಳಿಂದಾಗಿ ಕೆಲವು ದಿನಗಳಿಂದ ಸಂಭವಿಸುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ ಮಾನ್ಯ ಉಚ್ಛ ನ್ಯಾಯಾಲಯದ ಈ ಉದ್ದೇಶಗಳನ್ನು ಎತ್ತಿ ಹಿಡಿಯಲಾಗಿಲ್ಲ ಎಂದು ಪತ್ರವು ಮತ್ತೊಮ್ಮೆ ನ್ಯಾಯಾಲಯದ ಮೂಲಕ ತಮ್ಮ ಗಮನಕ್ಕೆ ತರಲು ಬಯಸಿದ್ದೇವೆ ಎಂದು ತಿಳಿಸಿದ್ದು, “ನಮ್ಮ ಮಕ್ಕಳು ಹಾಗೂ ನಮ್ಮ ಸಹ ಮಹಿಳಾ ನಾಗರಿಕರ ವಿರುದ್ಧ ನಡೆಯುತ್ತಿರುವ ಈ ತೀವ್ರ ಅವಮಾನ ಮತ್ತು ಆತಂಕದ ಸನ್ನಿವೇಶ ಇನ್ನು ಮುಂದುವರೆಯುವಂತಿಲ್ಲ” ಎಂದು ಆಶಿಸಿದೆ.

ಮುಸ್ಲಿಮ್ ಮಕ್ಕಳು, ಬಾಲಕಿಯರು ಹಾಗೂ ಶಿಕ್ಷಕರು ಎದುರಿಸುತ್ತಿರುವಂತಹ ಅಗೌರವ ಮತ್ತು ಅವಮಾನದ ಕುರಿತು ಈ ಕೂಡಲೇ ಗಮನ ನೀಡುವಂತೆ ಪತ್ರವು ನ್ಯಾಯಾಲಯವನ್ನು ಕೋರಿದ್ದು, ಕೆಳಗಿನ ಅಂಶಗಳನ್ನು ಉಲ್ಲೇಖಿಸಿ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿದೆ.

  • ಈ ಆದೇಶದ ವ್ಯಾಪ್ತಿಯ (ಸ್ಕೊಪ್ ) ಕುರಿತು ಕೂಡಲೇ ಸ್ಪಷ್ಟಪಡಿಸುವುದು.
  • ರಾಜ್ಯ ಶಿಕ್ಷಣ ಇಲಾಖೆಯ ಅಧಿಕಾರಿಗಳು , ಜಿಲ್ಲಾ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳಿಂದ ಆದೇಶದ ತಪ್ಪು ವ್ಯಾಖ್ಯಾನದ ಕುರಿತು ವಿಚಾರಣೆ ನಡೆಸಲು ನಿರ್ದೇಶಿಸುವುದು.
  • ಶಿಕ್ಷಣದ ಹಕ್ಕನ್ನು ನಿರಾಕರಿಸಿರುವಂತಹ ಮುಸ್ಲಿಂ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಪರಿಹಾರ ಒದಗಿಸುವುದು.
  • ಘನತೆಯ ಸಾಂವಿಧಾನಿಕ ತತ್ವಗಳು ಮತ್ತು ಖಾಸಗಿತನದ ಹಕ್ಕನ್ನು ಉಲ್ಲಂಘಿಸಿದಂತಹ ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸುವುದು.

ಪತ್ರಕ್ಕೆ ಓದುಗರು ಕೂಡಾ ಸಹಿ ಹಾಕಬಹುದಾಗಿದ್ದು, ಸಹಿ ಹಾಕಲು ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...