Homeಕರ್ನಾಟಕಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸಿ ಮುಸ್ಲಿಂ ಬಾಲಕಿಯರ ಹಕ್ಕುಗಳ ಉಲ್ಲಂಘನೆ: ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಬಹಿರಂಗ...

ಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸಿ ಮುಸ್ಲಿಂ ಬಾಲಕಿಯರ ಹಕ್ಕುಗಳ ಉಲ್ಲಂಘನೆ: ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಬಹಿರಂಗ ಪತ್ರ

- Advertisement -
- Advertisement -

ಹಿಜಾಬ್‌ ವಿಚಾರವಾಗಿ ರಾಜ್ಯ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸಿ, ಮುಸ್ಲಿಂ ಬಾಲಕಿಯರು ಹಾಗು ಮಹಿಳೆಯರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗುತ್ತಿರುವ ಬಗ್ಗೆ ಬಹುತ್ವ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಅವರಿಗೆ ಬಹಿರಂಗ ಪತ್ರ ಬರೆಯಾಗಿದೆ.

ಹಿಜಾಬ್ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯದ ಉಚ್ಛ ನ್ಯಾಯಾಲಯ ಹೊರಡಿಸಿದ ಮಧ್ಯಂತರ ಆದೇಶದ ನಂತರ ಮುಸ್ಲಿಂ ಮಹಿಳೆಯರು ಹಾಗೂ ಬಾಲಕಿಯರ ಮೇಲೆ ನಡೆಸಲಾಗಿರುವಂತಹ ದುರುದ್ದೇಶಪೂರಿತ, ಅಮಾನವೀಯ ಹಾಗೂ ಅಗೌರವಯುತ ದಾಳಿಯ ಹಿನ್ನೆಲೆಯಲ್ಲಿ ಬಹಿರಂಗ ಪತ್ರವನ್ನು ಬರೆದಿದ್ದೇವೆ ಎಂದು ಬಹುತ್ವ ಕರ್ನಾಟಕ ತನ್ನ ಪತ್ರದಲ್ಲಿ ನ್ಯಾಯ ಮೂರ್ತಿಗಳಿಗೆ ಹೇಳಿದ್ದಾರೆ.

ಪತ್ರಕ್ಕೆ ಓದುಗರು ಕೂಡಾ ಸಹಿ ಹಾಕಬಹುದಾಗಿದ್ದು, ಸಹಿ ಹಾಕಲು ಇಲ್ಲಿ ಕ್ಲಿಕ್ ಮಾಡಿ.

“ಬಂಧುತ್ವ, ವ್ಯಕ್ತಿ ಗೌರವ, ಐಕ್ಯತೆ ಮತ್ತು ರಾಷ್ಟ್ರದ ಏಕತೆಯನ್ನು ಖಾತ್ರಿಪಡಿಸುವುದು ನಮ್ಮ ಸಂವಿಧಾನದ ಮೂಲಭೂತ ಉದ್ದೇಶಗಳಲ್ಲಿ ಒಂದಾಗಿದೆ. ಇಂದು ರಾಜ್ಯದ ವಿವಿಧ ಅಂಗಗಳು, ಮಾಧ್ಯಮ ಸಂಸ್ಥೆಗಳು ನ್ಯಾಯಾಲಯದ ಮಧ್ಯಂತರ ಆದೇಶವನ್ನು ದುರುಪಯೋಗಿಸಿ ಮುಸ್ಲಿಂ ಸಮುದಾಯದ ಸಾಂವಿಧಾನಿಕ ಮೌಲ್ಯಗಳು ಹಾಗೂ ಘನತೆಗೆ ಹಾನಿ ತರುವಲ್ಲಿ ತೊಡಗಿವೆ. ಆದರೆ ಇಂದು ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಬಹಿರಂಗವಾಗಿ ಉಲ್ಲಂಘಿಸುತ್ತಿದ್ದರೂ ಸಹ ನ್ಯಾಯಾಲಯಗಳು ವಹಿಸಿರುವ ಸಂಪೂರ್ಣ ಮೌನ ನಮ್ಮಲ್ಲಿ ಆಘಾತ ಹಾಗೂ ಆತಂಕವನ್ನು ಸೃಷ್ಟಿಸಿದೆ” ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

“ಫೆಬ್ರವರಿ 4 ರಂದು ರಾಜ್ಯದ ವಿವಿಧ ಜಿಲ್ಲೆಗಳ ಶಾಲೆಗಳಲ್ಲಿ, ಹಿಜಾಬ್‌‌‌ ಹಾಗೂ ಬುರ್ಖಾಗಳನ್ನು ಧರಿಸಿ ಬರುವಂತಹ ಮುಸ್ಲಿಂ ಶಿಕ್ಷಕಿಯರು ಹಾಗೂ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ. ಶಾಲೆಯ ಹೊರಗೆ, ಬಹಿರಂಗವಾಗಿ ಎಲ್ಲರ ಎದುರಿಗೆ ಹಿಜಾಬ್ ಹಾಗೂ ಬುರ್ಖಾಗಳನ್ನು ತೆಗೆಯುವಂತೆ ಸೂಚಿಸಲಾಗುತ್ತಿದೆ. ಜಿಲ್ಲಾಡಳಿತಗಳು, ಸರ್ಕಾರಿ ಇಲಾಖೆಗಳು, ಸಚಿವರು ಹಾಗೂ ಮಾಧ್ಯಮಗಳು, ಶಾಲೆಗಳು ಒಳಗೊಂಡಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿಯೂ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವ ಕುರಿತು ನ್ಯಾಯಾಲಯದ ಮಧ್ಯಂತರ ಆದೇಶವನ್ನು ವ್ಯಾಖ್ಯಾನಿಸಿರುವ ರೀತಿಯ ಹಿನ್ನೆಲೆಯಲ್ಲಿ ಈ ಅಗೌರವ ಹಾಗೂ ಸಾರ್ವಜನಿಕ ಅವಮಾನವನ್ನು ನಡೆಸಲಾಗುತ್ತಿದೆ” ಎಂದು ಪತ್ರವು ಉಲ್ಲೇಖಿಸಿದೆ.

ಮಾಧ್ಯಮಗಳಲ್ಲಿ ವರದಿ ಮಾಡಿರುವ ಘಟನಾವಳಿಗಳ ವಿವರಗಳನ್ನು ಕೂಡಾ ಪತ್ರವು ನ್ಯಾಯಾಲಯದ ಗಮನಕ್ಕೆ ತಂದಿದೆ.

“ನ್ಯಾಯಾಲಯದ ಮಧ್ಯಂತರ ಆದೇಶವು ಕಾಲೇಜು ಅಭಿವೃದ್ಧಿ ಸಮಿತಿಗಳು ವಿದ್ಯಾರ್ಥಿಗಳ ಡ್ರೆಸ್ ಕೋಡ್ ಅಥವಾ ಸಮವಸ್ತ್ರವನ್ನು ಸೂಚಿಸಿರುವ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಸ್ಪಷ್ಟವಾಗಿ ಹೇಳುತ್ತದೆ. ಈ ಆದೇಶವು ಶಾಲಾ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಅಥವಾ ಕಾಲೇಜು ವಿದ್ಯಾರ್ಥಿಗಳಿಗೆ ಯಾವುದೇ ಕಾಲೇಜು ಅಭಿವೃದ್ಧಿ ಸಮಿತಿಗಳು ಇಲ್ಲದಿರುವಲ್ಲಿ ಅಥವಾ ಅಭ್ಯಾಸ ಅಥವಾ ನಿಯಮದ ಪ್ರಕಾರ ಹಿಜಾಬ್ ಅನ್ನು ಅನುಮತಿಸಿದರೆ ಅದು ಅನ್ವಯಿಸುತ್ತದೆ ಎಂದು ಆದೇಶದಲ್ಲಿ ಎಲ್ಲಿಯೂ ಸೂಚಿಸಿಲ್ಲ” ಎಂದು ಪತ್ರವು ಉಲ್ಲೇಖಿಸಿದೆ.

“ಹೀಗಿದ್ದರೂ, ಈ ಆದೇಶವನ್ನು ರಾಜ್ಯದಾದ್ಯಂತ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿಯೂ ಹಿಜಾಬ್ ಅನ್ನು ಖಡಾಖಂಡಿತವಾಗಿ ನಿರ್ಬಂಧಿಸಲಾಗಿರುವುದಾಗಿ ಬಿಂಬಿಸಲಾಗಿದೆ. ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಕಾಲೇಜುಗಳಲ್ಲಿಯೂ ಹಿಜಾಬ್ ಅನ್ನು ನಿರ್ಬಂಧಿಸಿರುವುದಾಗಿ ಜಿಲ್ಲಾಡಳಿತಗಳು ಮೌಖಿಕ ಸೂಚನೆಯನ್ನು ನೀಡಿರುವುದಾಗಿ ತಿಳಿದು ಬಂದಿದೆ.

ಸುದ್ದಿ ಚಾನೆಲ್‌ಗಳು ನಿಮ್ಮ ಆದೇಶವನ್ನು ಕಡ್ಡಾಯವಾಗಿ ‘ಅನುಷ್ಠಾನ’ಗೊಳಿಸಬೇಕೆಂದು ಬೊಬ್ಬೆಯಿಟ್ಟು, ಕ್ಯಾಮೆರಾಗಳೊಂದಿಗೆ ಶಾಲಾ ತರಗತಿ ಕೊಠಡಿಗಳ ಒಳಗೆ ಹೋಗಿ ಹಿಜಾಬ್ ಧರಿಸಿರುವಂತಹ ಅಪ್ರಾಪ್ತ ವಯಸ್ಕ ಬಾಲಕಿಯರ ಮುಖಗಳನ್ನು ಪದೇ ಪದೇ ತೋರಿಸುತ್ತಿವೆ. ಈ ಮೂಲಕ ನ್ಯಾಯಾಲಯದ ಮಧ್ಯಂತರ ಆದೇಶವನ್ನು ಧಿಕ್ಕರಿಸುತ್ತಿರುವಂತೆ ಬಿಂಬಿಸುವ ಮೂಲಕ ಈಗಾಗಲೇ ಆತಂಕ ಸೃಷ್ಟಿಯಾಗಿರುವ ವಾತಾವರಣದಲ್ಲಿ ಮತ್ತಷ್ಟು ಭಯವನ್ನು ಸೃಷ್ಟಿಸುತ್ತಿವೆ. ಈ ವ್ಯತಿರಿಕ್ತ ಪ್ರಚಾರದಿಂದ ಭಯದ ಹಾಗು ಆತಂಕದ ವಾತಾವರಣ ಸೃಷ್ಟಿಯಾಗಿದೆ” ಎಂದು ಪತ್ರವು ಆತಂಕ ವ್ಯಕ್ತಪಡಿಸಿದೆ.

“ಕೆಲವು ಶಾಲೆಗಳು ವಿದ್ಯಾರ್ಥಿನಿಯರು ಹಾಗೂ ಶಿಕ್ಷಕಿಯರನ್ನು ಶಾಲೆಯನ್ನು ಪ್ರವೇಶಿಸುವ ಮುಂಚೆಯೇ ಎಲ್ಲರ ಎದುರಿಗೆ ಹಿಜಾಬ್ ಹಾಗೂ ಬುರ್ಖಾಗಳನ್ನು ತೆಗೆಯುವಂತೆ ಸೂಚಿಸುತ್ತಿವೆ. ಹಿಜಾಬ್ ತೆಗೆಯಲು ನಿರಾಕರಿಸಿದಂತಹ ಕೆಲವು ವಿದ್ಯಾರ್ಥಿನಿಯರನ್ನು ಪರೀಕ್ಷೆಗಳನ್ನು ಬರೆಯದಿರುವಂತೆ ತಡೆಯಲಾಗಿದೆ. ಶಿವಮೊಗ್ಗದ ಒಂದು ಶಾಲೆಯಲ್ಲಿ ಫೆಬ್ರವರಿ 15ರಂದು ನಡೆದಂತಹ ಒಂದು ಅಮಾನವೀಯ ಘಟನೆಯಲ್ಲಿ ಓರ್ವ ಶಿಕ್ಷಕಿ ಒಂದು ಮಗುವನ್ನು ಶಾಲೆಯಿಂದ ಹೊರದೂಡಿದರು, ಈಟಿವಿ ಭಾರತ ಎಂಬ ಸುದ್ದಿ ವಾಹಿನಿಯ ವರದಿಗಾರ ವಿದ್ಯಾರ್ಥಿನಿಯನ್ನು ದೂಡಿದ ನಂತರ ತಮ್ಮ ಕ್ಯಾಮೆರಾದೊಂದಿಗೆ ಆ ಬಾಲಕಿಯನ್ನು ಹಿಂಬಾಲಿಸಿ ಚಿತ್ರೀಕರಿಸಿದ್ದಾರೆ” ಎಂದು ಶಿವಮೊಗ್ಗದಲ್ಲಿ ನಡೆದ ಘಟನೆಯ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಫೆಬ್ರವರಿ 14 ಮತ್ತು 15ರಂದು ರಾಜ್ಯದ ಹಲವು ಕಡೆ ಮುಸ್ಲಿಂ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ರಾಜ್ಯದಲ್ಲಿ ಹಿಂದೆಂದೂ ಅನುಭವಿಸದೇ ಇರುವಂತಹ ಅವಮಾನವನ್ನು ಎದುರಿಸಿದ್ದು, ಕಿರುಕುಳಕ್ಕೀಡಾಗಿದ್ದಾರೆ. ನ್ಯಾಯಾಲಯದ ಮಧ್ಯಂತರ ಆದೇಶದ ತಪ್ಪು ವ್ಯಾಖ್ಯಾನದ ಫಲಿತಾಂಶವಾಗಿ, ಭಾರತದ ಸಂವಿಧಾನದ ಪರಿಚ್ಛೇದ 21 ಹಾಗೂ 21ಎ ಅಡಿ ಖಾತ್ರಿಪಡಿಸಿರುವಂತೆ, ಕರ್ನಾಟಕದ ಮುಸ್ಲಿಂ ಮಹಿಳೆಯರ ಧರ್ಮದ ಆಚರಣೆ, ಶಿಕ್ಷಣ ಹಾಗೂ ಘನತೆಯಂತಹ ಮೂಲಭೂತ ಹಕ್ಕುಗಳ ಸಂಪೂರ್ಣ ಉಲ್ಲಂಘನೆಗೆಯಾಗಿದೆ’‌’ ಎಂದು ಪತ್ರವು ಒತ್ತಿ ಹೇಳಿದೆ.

“ಕೋವಿಡ್ ಸಾಂಕ್ರಾಮಿಕದಿಂದಾಗಿ ದೀರ್ಘ ಕಾಲದವರೆಗೂ ಶಿಕ್ಷಣ ಸಂಸ್ಥೆಗಳು ಮುಚ್ಚಿದ್ದು ಈಗಷ್ಟೇ ಆರಂಭವಾಗಿವೆ. ಮೇಲಾಗಿ ವಾರ್ಷಿಕ ಪರೀಕ್ಷಾಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯುತ್ತಿರುವ ಶೈಕ್ಷಣಿಕ ವರ್ಷದ ಈ ನಿರ್ಣಾಯಕ ಸಮಯದಲ್ಲಿ ರಾಜ್ಯದಾದ್ಯಂತ ಹಿಜಾಬ್ ನಿರ್ಬಂಧಿಸಿರುವುದು ವಿದ್ಯಾರ್ಥಿಗಳಲ್ಲಿ ಗಂಭೀರ ಸ್ವರೂಪದ ಆತಂಕ ಹಾಗೂ ಕಷ್ಟದ ಸನ್ನಿವೇಶವನ್ನು ಸೃಷ್ಟಿಸಿದೆ. ಕೋವಿಡ್ ಪಿಡುಗಿನಿಂದಾಗಿ ವಿದ್ಯಾರ್ಥಿಗಳು ಎಲ್ಲಿಲ್ಲದ ವ್ಯಾಪಕ ರೀತಿಯಲ್ಲಿ ಶಾಲೆ ಬಿಟ್ಟಿರುವ ಪ್ರಕ್ರಿಯೆಯು ನಡೆಯುತ್ತಿರುವಾಗ, ಮಕ್ಕಳ ಶಿಕ್ಷಣಕ್ಕೆ ಕುಂದು ಬರದಂತೆ ನೋಡಿಕೊಳ್ಲುವುದು ಸರಕಾರದ ಕಾನೂನುಬದ್ಧ ಜವಾಬ್ದಾರಿಯಾಗಿರುತ್ತದೆ. ಆದರೆ ಸರಕಾರದ ಪ್ರಸ್ತುತ ಕ್ರಮಗಳಿಂದಾಗಿ ಬಾಲಕಿಯರು ಇನ್ನೂ ಹೆಚ್ಚು ಪ್ರಮಾಣದಲ್ಲಿ ಶಾಲೆಗೆ ಹೋಗುವುದನ್ನು ಬಿಡುತ್ತಿದ್ದಾರೆ” ಎಂದು ಪತ್ರವು ಹೇಳಿದೆ.

“ರಾಜ್ಯದಾದ್ಯಂತ ಮುಸ್ಲಿಂ ಮಹಿಳೆಯರು, ಬಾಲಕಿಯರು ಹಾಗೂ ಮಕ್ಕಳ ವಿರುದ್ಧದ ಈ ಅವಮಾನ ಮತ್ತು ಅಗೌರವದ ಸನ್ನಿವೇಶಗಳನ್ನು ಉಚ್ಛ ನ್ಯಾಯಾಲಯದ ಗಮನಕ್ಕೆ ಹಲವು ಬಾರಿ ತರಲಾಗಿದೆ. ಆದಾಗ್ಯೂ, ಈ ವಿಷಯದ ಕಡೆ ಗಮನ ನೀಡಿಲ್ಲ. ಸರಕಾರದಿಂದ ಮತ್ತು ಸುದ್ದಿ ಮಾಧ್ಯಮಗಳಿಂದ ಅಲ್ಪ ಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳುವಂತೆ ಸಂವಿಧಾನವು ನ್ಯಾಯಾಲಯಗಳಿಗೆ ಅಧಿಕಾರ ನೀಡುತ್ತದೆ. ಮಾನ್ಯ ಉಚ್ಛ ನ್ಯಾಯಾಲಯವು ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸುವ ತನ್ನ ಕರ್ತವ್ಯನ್ನು ಪೂರೈಸಬೇಕಾಗಿ ಮಾನ್ಯ ನ್ಯಾಯಾಲಯದ ಸಾಂವಿಧಾನಿಕ ಆತ್ಮಸಾಕ್ಷಿಯನ್ನು ಉಲ್ಲೇಖಿಸಿ ಮನವಿ ಮಾಡುತ್ತಿದ್ದೇವೆ. ಇಂತಹ ವ್ಯಾಪಕ ರೀತಿಯಲ್ಲಿ ನಡೆಯುತ್ತಿರುವ ಘನತೆ ಮತ್ತು ಸ್ವಾತಂತ್ರ್ಯದ ಉಲ್ಲಂಘನೆಗಳನ್ನು ಸಾಂವಿಧಾನಿಕ ಉಚ್ಛ ನ್ಯಾಯಾಲಯವು ಪ್ರೇಕ್ಷಕನಾಗಿರುವಂತಿಲ್ಲ” ಎಂದು ಪತ್ರವು ಉಲ್ಲೇಖಿಸಿದೆ.

‘ರಾಜ್ಯದಲ್ಲಿ ಸರ್ಕಾರ ಹಾಗೂ ಸುದ್ದಿ ಮಾಧ್ಯಮಗಳ ಕ್ರಮಗಳಿಂದಾಗಿ ಕೆಲವು ದಿನಗಳಿಂದ ಸಂಭವಿಸುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ ಮಾನ್ಯ ಉಚ್ಛ ನ್ಯಾಯಾಲಯದ ಈ ಉದ್ದೇಶಗಳನ್ನು ಎತ್ತಿ ಹಿಡಿಯಲಾಗಿಲ್ಲ ಎಂದು ಪತ್ರವು ಮತ್ತೊಮ್ಮೆ ನ್ಯಾಯಾಲಯದ ಮೂಲಕ ತಮ್ಮ ಗಮನಕ್ಕೆ ತರಲು ಬಯಸಿದ್ದೇವೆ ಎಂದು ತಿಳಿಸಿದ್ದು, “ನಮ್ಮ ಮಕ್ಕಳು ಹಾಗೂ ನಮ್ಮ ಸಹ ಮಹಿಳಾ ನಾಗರಿಕರ ವಿರುದ್ಧ ನಡೆಯುತ್ತಿರುವ ಈ ತೀವ್ರ ಅವಮಾನ ಮತ್ತು ಆತಂಕದ ಸನ್ನಿವೇಶ ಇನ್ನು ಮುಂದುವರೆಯುವಂತಿಲ್ಲ” ಎಂದು ಆಶಿಸಿದೆ.

ಮುಸ್ಲಿಮ್ ಮಕ್ಕಳು, ಬಾಲಕಿಯರು ಹಾಗೂ ಶಿಕ್ಷಕರು ಎದುರಿಸುತ್ತಿರುವಂತಹ ಅಗೌರವ ಮತ್ತು ಅವಮಾನದ ಕುರಿತು ಈ ಕೂಡಲೇ ಗಮನ ನೀಡುವಂತೆ ಪತ್ರವು ನ್ಯಾಯಾಲಯವನ್ನು ಕೋರಿದ್ದು, ಕೆಳಗಿನ ಅಂಶಗಳನ್ನು ಉಲ್ಲೇಖಿಸಿ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿದೆ.

  • ಈ ಆದೇಶದ ವ್ಯಾಪ್ತಿಯ (ಸ್ಕೊಪ್ ) ಕುರಿತು ಕೂಡಲೇ ಸ್ಪಷ್ಟಪಡಿಸುವುದು.
  • ರಾಜ್ಯ ಶಿಕ್ಷಣ ಇಲಾಖೆಯ ಅಧಿಕಾರಿಗಳು , ಜಿಲ್ಲಾ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳಿಂದ ಆದೇಶದ ತಪ್ಪು ವ್ಯಾಖ್ಯಾನದ ಕುರಿತು ವಿಚಾರಣೆ ನಡೆಸಲು ನಿರ್ದೇಶಿಸುವುದು.
  • ಶಿಕ್ಷಣದ ಹಕ್ಕನ್ನು ನಿರಾಕರಿಸಿರುವಂತಹ ಮುಸ್ಲಿಂ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಪರಿಹಾರ ಒದಗಿಸುವುದು.
  • ಘನತೆಯ ಸಾಂವಿಧಾನಿಕ ತತ್ವಗಳು ಮತ್ತು ಖಾಸಗಿತನದ ಹಕ್ಕನ್ನು ಉಲ್ಲಂಘಿಸಿದಂತಹ ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸುವುದು.

ಪತ್ರಕ್ಕೆ ಓದುಗರು ಕೂಡಾ ಸಹಿ ಹಾಕಬಹುದಾಗಿದ್ದು, ಸಹಿ ಹಾಕಲು ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...