Homeಕರ್ನಾಟಕಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸಿ ಮುಸ್ಲಿಂ ಬಾಲಕಿಯರ ಹಕ್ಕುಗಳ ಉಲ್ಲಂಘನೆ: ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಬಹಿರಂಗ...

ಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸಿ ಮುಸ್ಲಿಂ ಬಾಲಕಿಯರ ಹಕ್ಕುಗಳ ಉಲ್ಲಂಘನೆ: ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಬಹಿರಂಗ ಪತ್ರ

- Advertisement -
- Advertisement -

ಹಿಜಾಬ್‌ ವಿಚಾರವಾಗಿ ರಾಜ್ಯ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸಿ, ಮುಸ್ಲಿಂ ಬಾಲಕಿಯರು ಹಾಗು ಮಹಿಳೆಯರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗುತ್ತಿರುವ ಬಗ್ಗೆ ಬಹುತ್ವ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಅವರಿಗೆ ಬಹಿರಂಗ ಪತ್ರ ಬರೆಯಾಗಿದೆ.

ಹಿಜಾಬ್ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯದ ಉಚ್ಛ ನ್ಯಾಯಾಲಯ ಹೊರಡಿಸಿದ ಮಧ್ಯಂತರ ಆದೇಶದ ನಂತರ ಮುಸ್ಲಿಂ ಮಹಿಳೆಯರು ಹಾಗೂ ಬಾಲಕಿಯರ ಮೇಲೆ ನಡೆಸಲಾಗಿರುವಂತಹ ದುರುದ್ದೇಶಪೂರಿತ, ಅಮಾನವೀಯ ಹಾಗೂ ಅಗೌರವಯುತ ದಾಳಿಯ ಹಿನ್ನೆಲೆಯಲ್ಲಿ ಬಹಿರಂಗ ಪತ್ರವನ್ನು ಬರೆದಿದ್ದೇವೆ ಎಂದು ಬಹುತ್ವ ಕರ್ನಾಟಕ ತನ್ನ ಪತ್ರದಲ್ಲಿ ನ್ಯಾಯ ಮೂರ್ತಿಗಳಿಗೆ ಹೇಳಿದ್ದಾರೆ.

ಪತ್ರಕ್ಕೆ ಓದುಗರು ಕೂಡಾ ಸಹಿ ಹಾಕಬಹುದಾಗಿದ್ದು, ಸಹಿ ಹಾಕಲು ಇಲ್ಲಿ ಕ್ಲಿಕ್ ಮಾಡಿ.

“ಬಂಧುತ್ವ, ವ್ಯಕ್ತಿ ಗೌರವ, ಐಕ್ಯತೆ ಮತ್ತು ರಾಷ್ಟ್ರದ ಏಕತೆಯನ್ನು ಖಾತ್ರಿಪಡಿಸುವುದು ನಮ್ಮ ಸಂವಿಧಾನದ ಮೂಲಭೂತ ಉದ್ದೇಶಗಳಲ್ಲಿ ಒಂದಾಗಿದೆ. ಇಂದು ರಾಜ್ಯದ ವಿವಿಧ ಅಂಗಗಳು, ಮಾಧ್ಯಮ ಸಂಸ್ಥೆಗಳು ನ್ಯಾಯಾಲಯದ ಮಧ್ಯಂತರ ಆದೇಶವನ್ನು ದುರುಪಯೋಗಿಸಿ ಮುಸ್ಲಿಂ ಸಮುದಾಯದ ಸಾಂವಿಧಾನಿಕ ಮೌಲ್ಯಗಳು ಹಾಗೂ ಘನತೆಗೆ ಹಾನಿ ತರುವಲ್ಲಿ ತೊಡಗಿವೆ. ಆದರೆ ಇಂದು ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಬಹಿರಂಗವಾಗಿ ಉಲ್ಲಂಘಿಸುತ್ತಿದ್ದರೂ ಸಹ ನ್ಯಾಯಾಲಯಗಳು ವಹಿಸಿರುವ ಸಂಪೂರ್ಣ ಮೌನ ನಮ್ಮಲ್ಲಿ ಆಘಾತ ಹಾಗೂ ಆತಂಕವನ್ನು ಸೃಷ್ಟಿಸಿದೆ” ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

“ಫೆಬ್ರವರಿ 4 ರಂದು ರಾಜ್ಯದ ವಿವಿಧ ಜಿಲ್ಲೆಗಳ ಶಾಲೆಗಳಲ್ಲಿ, ಹಿಜಾಬ್‌‌‌ ಹಾಗೂ ಬುರ್ಖಾಗಳನ್ನು ಧರಿಸಿ ಬರುವಂತಹ ಮುಸ್ಲಿಂ ಶಿಕ್ಷಕಿಯರು ಹಾಗೂ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ. ಶಾಲೆಯ ಹೊರಗೆ, ಬಹಿರಂಗವಾಗಿ ಎಲ್ಲರ ಎದುರಿಗೆ ಹಿಜಾಬ್ ಹಾಗೂ ಬುರ್ಖಾಗಳನ್ನು ತೆಗೆಯುವಂತೆ ಸೂಚಿಸಲಾಗುತ್ತಿದೆ. ಜಿಲ್ಲಾಡಳಿತಗಳು, ಸರ್ಕಾರಿ ಇಲಾಖೆಗಳು, ಸಚಿವರು ಹಾಗೂ ಮಾಧ್ಯಮಗಳು, ಶಾಲೆಗಳು ಒಳಗೊಂಡಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿಯೂ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವ ಕುರಿತು ನ್ಯಾಯಾಲಯದ ಮಧ್ಯಂತರ ಆದೇಶವನ್ನು ವ್ಯಾಖ್ಯಾನಿಸಿರುವ ರೀತಿಯ ಹಿನ್ನೆಲೆಯಲ್ಲಿ ಈ ಅಗೌರವ ಹಾಗೂ ಸಾರ್ವಜನಿಕ ಅವಮಾನವನ್ನು ನಡೆಸಲಾಗುತ್ತಿದೆ” ಎಂದು ಪತ್ರವು ಉಲ್ಲೇಖಿಸಿದೆ.

ಮಾಧ್ಯಮಗಳಲ್ಲಿ ವರದಿ ಮಾಡಿರುವ ಘಟನಾವಳಿಗಳ ವಿವರಗಳನ್ನು ಕೂಡಾ ಪತ್ರವು ನ್ಯಾಯಾಲಯದ ಗಮನಕ್ಕೆ ತಂದಿದೆ.

“ನ್ಯಾಯಾಲಯದ ಮಧ್ಯಂತರ ಆದೇಶವು ಕಾಲೇಜು ಅಭಿವೃದ್ಧಿ ಸಮಿತಿಗಳು ವಿದ್ಯಾರ್ಥಿಗಳ ಡ್ರೆಸ್ ಕೋಡ್ ಅಥವಾ ಸಮವಸ್ತ್ರವನ್ನು ಸೂಚಿಸಿರುವ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಸ್ಪಷ್ಟವಾಗಿ ಹೇಳುತ್ತದೆ. ಈ ಆದೇಶವು ಶಾಲಾ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಅಥವಾ ಕಾಲೇಜು ವಿದ್ಯಾರ್ಥಿಗಳಿಗೆ ಯಾವುದೇ ಕಾಲೇಜು ಅಭಿವೃದ್ಧಿ ಸಮಿತಿಗಳು ಇಲ್ಲದಿರುವಲ್ಲಿ ಅಥವಾ ಅಭ್ಯಾಸ ಅಥವಾ ನಿಯಮದ ಪ್ರಕಾರ ಹಿಜಾಬ್ ಅನ್ನು ಅನುಮತಿಸಿದರೆ ಅದು ಅನ್ವಯಿಸುತ್ತದೆ ಎಂದು ಆದೇಶದಲ್ಲಿ ಎಲ್ಲಿಯೂ ಸೂಚಿಸಿಲ್ಲ” ಎಂದು ಪತ್ರವು ಉಲ್ಲೇಖಿಸಿದೆ.

“ಹೀಗಿದ್ದರೂ, ಈ ಆದೇಶವನ್ನು ರಾಜ್ಯದಾದ್ಯಂತ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿಯೂ ಹಿಜಾಬ್ ಅನ್ನು ಖಡಾಖಂಡಿತವಾಗಿ ನಿರ್ಬಂಧಿಸಲಾಗಿರುವುದಾಗಿ ಬಿಂಬಿಸಲಾಗಿದೆ. ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಕಾಲೇಜುಗಳಲ್ಲಿಯೂ ಹಿಜಾಬ್ ಅನ್ನು ನಿರ್ಬಂಧಿಸಿರುವುದಾಗಿ ಜಿಲ್ಲಾಡಳಿತಗಳು ಮೌಖಿಕ ಸೂಚನೆಯನ್ನು ನೀಡಿರುವುದಾಗಿ ತಿಳಿದು ಬಂದಿದೆ.

ಸುದ್ದಿ ಚಾನೆಲ್‌ಗಳು ನಿಮ್ಮ ಆದೇಶವನ್ನು ಕಡ್ಡಾಯವಾಗಿ ‘ಅನುಷ್ಠಾನ’ಗೊಳಿಸಬೇಕೆಂದು ಬೊಬ್ಬೆಯಿಟ್ಟು, ಕ್ಯಾಮೆರಾಗಳೊಂದಿಗೆ ಶಾಲಾ ತರಗತಿ ಕೊಠಡಿಗಳ ಒಳಗೆ ಹೋಗಿ ಹಿಜಾಬ್ ಧರಿಸಿರುವಂತಹ ಅಪ್ರಾಪ್ತ ವಯಸ್ಕ ಬಾಲಕಿಯರ ಮುಖಗಳನ್ನು ಪದೇ ಪದೇ ತೋರಿಸುತ್ತಿವೆ. ಈ ಮೂಲಕ ನ್ಯಾಯಾಲಯದ ಮಧ್ಯಂತರ ಆದೇಶವನ್ನು ಧಿಕ್ಕರಿಸುತ್ತಿರುವಂತೆ ಬಿಂಬಿಸುವ ಮೂಲಕ ಈಗಾಗಲೇ ಆತಂಕ ಸೃಷ್ಟಿಯಾಗಿರುವ ವಾತಾವರಣದಲ್ಲಿ ಮತ್ತಷ್ಟು ಭಯವನ್ನು ಸೃಷ್ಟಿಸುತ್ತಿವೆ. ಈ ವ್ಯತಿರಿಕ್ತ ಪ್ರಚಾರದಿಂದ ಭಯದ ಹಾಗು ಆತಂಕದ ವಾತಾವರಣ ಸೃಷ್ಟಿಯಾಗಿದೆ” ಎಂದು ಪತ್ರವು ಆತಂಕ ವ್ಯಕ್ತಪಡಿಸಿದೆ.

“ಕೆಲವು ಶಾಲೆಗಳು ವಿದ್ಯಾರ್ಥಿನಿಯರು ಹಾಗೂ ಶಿಕ್ಷಕಿಯರನ್ನು ಶಾಲೆಯನ್ನು ಪ್ರವೇಶಿಸುವ ಮುಂಚೆಯೇ ಎಲ್ಲರ ಎದುರಿಗೆ ಹಿಜಾಬ್ ಹಾಗೂ ಬುರ್ಖಾಗಳನ್ನು ತೆಗೆಯುವಂತೆ ಸೂಚಿಸುತ್ತಿವೆ. ಹಿಜಾಬ್ ತೆಗೆಯಲು ನಿರಾಕರಿಸಿದಂತಹ ಕೆಲವು ವಿದ್ಯಾರ್ಥಿನಿಯರನ್ನು ಪರೀಕ್ಷೆಗಳನ್ನು ಬರೆಯದಿರುವಂತೆ ತಡೆಯಲಾಗಿದೆ. ಶಿವಮೊಗ್ಗದ ಒಂದು ಶಾಲೆಯಲ್ಲಿ ಫೆಬ್ರವರಿ 15ರಂದು ನಡೆದಂತಹ ಒಂದು ಅಮಾನವೀಯ ಘಟನೆಯಲ್ಲಿ ಓರ್ವ ಶಿಕ್ಷಕಿ ಒಂದು ಮಗುವನ್ನು ಶಾಲೆಯಿಂದ ಹೊರದೂಡಿದರು, ಈಟಿವಿ ಭಾರತ ಎಂಬ ಸುದ್ದಿ ವಾಹಿನಿಯ ವರದಿಗಾರ ವಿದ್ಯಾರ್ಥಿನಿಯನ್ನು ದೂಡಿದ ನಂತರ ತಮ್ಮ ಕ್ಯಾಮೆರಾದೊಂದಿಗೆ ಆ ಬಾಲಕಿಯನ್ನು ಹಿಂಬಾಲಿಸಿ ಚಿತ್ರೀಕರಿಸಿದ್ದಾರೆ” ಎಂದು ಶಿವಮೊಗ್ಗದಲ್ಲಿ ನಡೆದ ಘಟನೆಯ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಫೆಬ್ರವರಿ 14 ಮತ್ತು 15ರಂದು ರಾಜ್ಯದ ಹಲವು ಕಡೆ ಮುಸ್ಲಿಂ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ರಾಜ್ಯದಲ್ಲಿ ಹಿಂದೆಂದೂ ಅನುಭವಿಸದೇ ಇರುವಂತಹ ಅವಮಾನವನ್ನು ಎದುರಿಸಿದ್ದು, ಕಿರುಕುಳಕ್ಕೀಡಾಗಿದ್ದಾರೆ. ನ್ಯಾಯಾಲಯದ ಮಧ್ಯಂತರ ಆದೇಶದ ತಪ್ಪು ವ್ಯಾಖ್ಯಾನದ ಫಲಿತಾಂಶವಾಗಿ, ಭಾರತದ ಸಂವಿಧಾನದ ಪರಿಚ್ಛೇದ 21 ಹಾಗೂ 21ಎ ಅಡಿ ಖಾತ್ರಿಪಡಿಸಿರುವಂತೆ, ಕರ್ನಾಟಕದ ಮುಸ್ಲಿಂ ಮಹಿಳೆಯರ ಧರ್ಮದ ಆಚರಣೆ, ಶಿಕ್ಷಣ ಹಾಗೂ ಘನತೆಯಂತಹ ಮೂಲಭೂತ ಹಕ್ಕುಗಳ ಸಂಪೂರ್ಣ ಉಲ್ಲಂಘನೆಗೆಯಾಗಿದೆ’‌’ ಎಂದು ಪತ್ರವು ಒತ್ತಿ ಹೇಳಿದೆ.

“ಕೋವಿಡ್ ಸಾಂಕ್ರಾಮಿಕದಿಂದಾಗಿ ದೀರ್ಘ ಕಾಲದವರೆಗೂ ಶಿಕ್ಷಣ ಸಂಸ್ಥೆಗಳು ಮುಚ್ಚಿದ್ದು ಈಗಷ್ಟೇ ಆರಂಭವಾಗಿವೆ. ಮೇಲಾಗಿ ವಾರ್ಷಿಕ ಪರೀಕ್ಷಾಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯುತ್ತಿರುವ ಶೈಕ್ಷಣಿಕ ವರ್ಷದ ಈ ನಿರ್ಣಾಯಕ ಸಮಯದಲ್ಲಿ ರಾಜ್ಯದಾದ್ಯಂತ ಹಿಜಾಬ್ ನಿರ್ಬಂಧಿಸಿರುವುದು ವಿದ್ಯಾರ್ಥಿಗಳಲ್ಲಿ ಗಂಭೀರ ಸ್ವರೂಪದ ಆತಂಕ ಹಾಗೂ ಕಷ್ಟದ ಸನ್ನಿವೇಶವನ್ನು ಸೃಷ್ಟಿಸಿದೆ. ಕೋವಿಡ್ ಪಿಡುಗಿನಿಂದಾಗಿ ವಿದ್ಯಾರ್ಥಿಗಳು ಎಲ್ಲಿಲ್ಲದ ವ್ಯಾಪಕ ರೀತಿಯಲ್ಲಿ ಶಾಲೆ ಬಿಟ್ಟಿರುವ ಪ್ರಕ್ರಿಯೆಯು ನಡೆಯುತ್ತಿರುವಾಗ, ಮಕ್ಕಳ ಶಿಕ್ಷಣಕ್ಕೆ ಕುಂದು ಬರದಂತೆ ನೋಡಿಕೊಳ್ಲುವುದು ಸರಕಾರದ ಕಾನೂನುಬದ್ಧ ಜವಾಬ್ದಾರಿಯಾಗಿರುತ್ತದೆ. ಆದರೆ ಸರಕಾರದ ಪ್ರಸ್ತುತ ಕ್ರಮಗಳಿಂದಾಗಿ ಬಾಲಕಿಯರು ಇನ್ನೂ ಹೆಚ್ಚು ಪ್ರಮಾಣದಲ್ಲಿ ಶಾಲೆಗೆ ಹೋಗುವುದನ್ನು ಬಿಡುತ್ತಿದ್ದಾರೆ” ಎಂದು ಪತ್ರವು ಹೇಳಿದೆ.

“ರಾಜ್ಯದಾದ್ಯಂತ ಮುಸ್ಲಿಂ ಮಹಿಳೆಯರು, ಬಾಲಕಿಯರು ಹಾಗೂ ಮಕ್ಕಳ ವಿರುದ್ಧದ ಈ ಅವಮಾನ ಮತ್ತು ಅಗೌರವದ ಸನ್ನಿವೇಶಗಳನ್ನು ಉಚ್ಛ ನ್ಯಾಯಾಲಯದ ಗಮನಕ್ಕೆ ಹಲವು ಬಾರಿ ತರಲಾಗಿದೆ. ಆದಾಗ್ಯೂ, ಈ ವಿಷಯದ ಕಡೆ ಗಮನ ನೀಡಿಲ್ಲ. ಸರಕಾರದಿಂದ ಮತ್ತು ಸುದ್ದಿ ಮಾಧ್ಯಮಗಳಿಂದ ಅಲ್ಪ ಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳುವಂತೆ ಸಂವಿಧಾನವು ನ್ಯಾಯಾಲಯಗಳಿಗೆ ಅಧಿಕಾರ ನೀಡುತ್ತದೆ. ಮಾನ್ಯ ಉಚ್ಛ ನ್ಯಾಯಾಲಯವು ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸುವ ತನ್ನ ಕರ್ತವ್ಯನ್ನು ಪೂರೈಸಬೇಕಾಗಿ ಮಾನ್ಯ ನ್ಯಾಯಾಲಯದ ಸಾಂವಿಧಾನಿಕ ಆತ್ಮಸಾಕ್ಷಿಯನ್ನು ಉಲ್ಲೇಖಿಸಿ ಮನವಿ ಮಾಡುತ್ತಿದ್ದೇವೆ. ಇಂತಹ ವ್ಯಾಪಕ ರೀತಿಯಲ್ಲಿ ನಡೆಯುತ್ತಿರುವ ಘನತೆ ಮತ್ತು ಸ್ವಾತಂತ್ರ್ಯದ ಉಲ್ಲಂಘನೆಗಳನ್ನು ಸಾಂವಿಧಾನಿಕ ಉಚ್ಛ ನ್ಯಾಯಾಲಯವು ಪ್ರೇಕ್ಷಕನಾಗಿರುವಂತಿಲ್ಲ” ಎಂದು ಪತ್ರವು ಉಲ್ಲೇಖಿಸಿದೆ.

‘ರಾಜ್ಯದಲ್ಲಿ ಸರ್ಕಾರ ಹಾಗೂ ಸುದ್ದಿ ಮಾಧ್ಯಮಗಳ ಕ್ರಮಗಳಿಂದಾಗಿ ಕೆಲವು ದಿನಗಳಿಂದ ಸಂಭವಿಸುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ ಮಾನ್ಯ ಉಚ್ಛ ನ್ಯಾಯಾಲಯದ ಈ ಉದ್ದೇಶಗಳನ್ನು ಎತ್ತಿ ಹಿಡಿಯಲಾಗಿಲ್ಲ ಎಂದು ಪತ್ರವು ಮತ್ತೊಮ್ಮೆ ನ್ಯಾಯಾಲಯದ ಮೂಲಕ ತಮ್ಮ ಗಮನಕ್ಕೆ ತರಲು ಬಯಸಿದ್ದೇವೆ ಎಂದು ತಿಳಿಸಿದ್ದು, “ನಮ್ಮ ಮಕ್ಕಳು ಹಾಗೂ ನಮ್ಮ ಸಹ ಮಹಿಳಾ ನಾಗರಿಕರ ವಿರುದ್ಧ ನಡೆಯುತ್ತಿರುವ ಈ ತೀವ್ರ ಅವಮಾನ ಮತ್ತು ಆತಂಕದ ಸನ್ನಿವೇಶ ಇನ್ನು ಮುಂದುವರೆಯುವಂತಿಲ್ಲ” ಎಂದು ಆಶಿಸಿದೆ.

ಮುಸ್ಲಿಮ್ ಮಕ್ಕಳು, ಬಾಲಕಿಯರು ಹಾಗೂ ಶಿಕ್ಷಕರು ಎದುರಿಸುತ್ತಿರುವಂತಹ ಅಗೌರವ ಮತ್ತು ಅವಮಾನದ ಕುರಿತು ಈ ಕೂಡಲೇ ಗಮನ ನೀಡುವಂತೆ ಪತ್ರವು ನ್ಯಾಯಾಲಯವನ್ನು ಕೋರಿದ್ದು, ಕೆಳಗಿನ ಅಂಶಗಳನ್ನು ಉಲ್ಲೇಖಿಸಿ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿದೆ.

  • ಈ ಆದೇಶದ ವ್ಯಾಪ್ತಿಯ (ಸ್ಕೊಪ್ ) ಕುರಿತು ಕೂಡಲೇ ಸ್ಪಷ್ಟಪಡಿಸುವುದು.
  • ರಾಜ್ಯ ಶಿಕ್ಷಣ ಇಲಾಖೆಯ ಅಧಿಕಾರಿಗಳು , ಜಿಲ್ಲಾ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳಿಂದ ಆದೇಶದ ತಪ್ಪು ವ್ಯಾಖ್ಯಾನದ ಕುರಿತು ವಿಚಾರಣೆ ನಡೆಸಲು ನಿರ್ದೇಶಿಸುವುದು.
  • ಶಿಕ್ಷಣದ ಹಕ್ಕನ್ನು ನಿರಾಕರಿಸಿರುವಂತಹ ಮುಸ್ಲಿಂ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಪರಿಹಾರ ಒದಗಿಸುವುದು.
  • ಘನತೆಯ ಸಾಂವಿಧಾನಿಕ ತತ್ವಗಳು ಮತ್ತು ಖಾಸಗಿತನದ ಹಕ್ಕನ್ನು ಉಲ್ಲಂಘಿಸಿದಂತಹ ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸುವುದು.

ಪತ್ರಕ್ಕೆ ಓದುಗರು ಕೂಡಾ ಸಹಿ ಹಾಕಬಹುದಾಗಿದ್ದು, ಸಹಿ ಹಾಕಲು ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...