Homeಕರ್ನಾಟಕವಿಧಾನ ಪರಿಷತ್‌ಗೆ ಕೈತಪ್ಪಿದ ಟಿಕೆಟ್‌: ಬಿಜೆಪಿ ವಿರುದ್ಧ ರಘುಪತಿ ಭಟ್‌ ಅಸಮಾಧಾನ

ವಿಧಾನ ಪರಿಷತ್‌ಗೆ ಕೈತಪ್ಪಿದ ಟಿಕೆಟ್‌: ಬಿಜೆಪಿ ವಿರುದ್ಧ ರಘುಪತಿ ಭಟ್‌ ಅಸಮಾಧಾನ

- Advertisement -
- Advertisement -

ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದ ಬಿಜೆಪಿ ನಾಯಕ ರಘುಪತಿ ಭಟ್‌ ಇದೀಗ ವಿಧಾನ ಪರಿಷತ್‌ಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ.

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಜೂ.3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ನಿನ್ನೆ ಪ್ರಕಟಿಸಿತ್ತು. ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಅಮರನಾಥ್ ಪಾಟೀಲ್, ನೈಋತ್ಯ ಪದವೀಧರ ಕ್ಷೇತ್ರಕ್ಕೆ ಡಾ.ಧನಂಜಯ ಸರ್ಜಿ, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಅ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವೈ.ಎ.ನಾರಾಯಣಸ್ವಾಮಿ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಈ.ಸಿ.ನಿಂಗರಾಜು ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.

ಉಡುಪಿ ಕ್ಷೇತ್ರದಲ್ಲಿ ಶಾಸಕರಾಗಿದ್ದ ರಘುಪತಿ ಭಟ್‌ಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ನೀಡದೆ ಯಶ್ಪಲ್‌ ಸುವರ್ಣಾಗೆ ಟಿಕೆಟ್‌ ನೀಡಲಾಗಿತ್ತು. ಇದರಿಂದ ರಘಪತಿ ಭಟ್‌ ಸಾರ್ವಜನಿಕವಾಗಿ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಪಕ್ಷ ‌ನಡೆಸಿಕೊಂಡ ರೀತಿ ಸಾಕಷ್ಟು ಬೇಸರ ತಂದಿದೆ ಎಂದು ಹೇಳಿದ್ದರು. ರಘುಪತಿ ಭಟ್‌ ಪಕ್ಷೇತರರಾಗಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಅವರಿಗೆ ಪರಿಷತ್‌ ಟಿಕೆಟ್‌ ನೀಡುವುದಾಗಿ ಹೇಳಿ ಬಿಜೆಪಿ ಹೈಕಮಾಂಡ್‌ ಸಮಾಧಾನ ಮಾಡಿತ್ತು ಎಂದು ಹೇಳಲಾಗಿದೆ. ಆ ಬಳಿಕ ಅವರು ಪರಿಷತ್‌ ಚುನಾವಣೆ ಸ್ಪರ್ಧೆಗೆ ಸಿದ್ಧತೆ ಮಾಡುತ್ತಿದ್ದರು. ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಪದವೀಧರರ ಸದಸ್ಯತ್ವ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರರನ್ನು ಅವರು ಪಕ್ಷಕ್ಕೆ ಸೇರ್ಪಡೆಗೊಳಿಸಿದ್ದರು. ಆದರೆ ಇದೀಗ ಅವರಿಗೆ ಟಿಕೆಟ್‌ ಕೈತಪ್ಪಿದ್ದು ಅಸಮಾಧಾನಕ್ಕೆ ಕಾರಣವಾಗಿದೆ.

ರಘುಪತಿ ಭಟ್ಫೇಸ್ಬುಕ್ಪೋಸ್ಟ್ನಲ್ಲಿ ಏನೇನಿದೆ?

ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿ ಪದವೀಧರ ಕ್ಷೇತ್ರದ ಟಿಕೆಟ್ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿಗೆ ನೀಡಲಾಗಿದೆ. ಇದು ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡದೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗದ ವಿದ್ಯಾವಂತ, ಪ್ರಜ್ಞಾವಂತ ಮತದಾರರಿಗೆ ಅನ್ಯಾಯ ಮಾಡಿದ ಹಾಗಾಗಿದೆ. ಪ್ರಸ್ತುತ ಸ್ಥಿತಿಯಲ್ಲಿ ಬಿಜೆಪಿಯ ನಿಲುವಿನಿಂದ ವಿಚಲಿತನಾಗಿದ್ದೇನೆ.

1994ರಿಂದಲೂ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಕಾರ್ಯಕರ್ತನಾಗಿ, ಪದಾಧಿಕಾರಿಯಾಗಿ ವಿವಿಧ ಸ್ಥರಗಳಲ್ಲಿ ಕೆಲಸ ಮಾಡಿದ್ದೇನೆ. ವಿಧಾನ ಸಭೆಗೆ ಸ್ಪರ್ಧಿಸಿದ 3 ಬಾರಿಯೂ ಗೆದ್ದಿರುತ್ತೇನೆ. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನಗೆ ಯಾವುದೇ ಮಾಹಿತಿ ನೀಡದೆ ನನ್ನನ್ನು ಬದಲಾಯಿಸಲಾಯಿತು.

ನನ್ನ ಹೆಸರಿನ ಬದಲು ಬೇರೆ ಹೆಸರು ಘೋಷಣೆಯಾಗಿದ್ದು, ಟಿವಿ ಮೂಲಕ ತಿಳಿಯಿತು. ಆದರೆ ನಾನು ವಿಚಲಿತನಾಗದೆ ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ. ಆ ಸಂದರ್ಭದಲ್ಲಿ ನನಗೆ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಪಕ್ಷದ ಹಿರಿಯರು ಭರವಸೆ ನೀಡಿದ್ದರು. ಆ ಪ್ರಕಾರ ಪದವೀಧರರ ಸದಸ್ಯತ್ವ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಅತಿ ಹೆಚ್ಚು ಸದಸ್ಯರನ್ನು ನೋಂದಾಯಿಸಿದ್ದೇನೆ. ಅಲ್ಲದೆ ಪಕ್ಷ ನೀಡಿದ ಶಿವಮೊಗ್ಗ ಲೋಕಸಭಾ ಚುನಾವಣಾ ಪ್ರಭಾರಿ ಜವಾಬ್ದಾರಿಯನ್ನು 40 ದಿನಗಳ ಕಾಲ ಶಿವಮೊಗ್ಗದಲ್ಲಿ ಉಳಿದು ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ.

ಈಗ ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಆದರೆ ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರ ನೀಡದೆ ಮಾಡಿದ ಅನ್ಯಾಯಕ್ಕೆ ನ್ಯಾಯ ಕೊಡುವವರು ಯಾರು?ಪಕ್ಷ ತೆಗೆದುಕೊಂಡಿರುವ ಈ ನಿಲುವಿಂದ ವಿಚಲಿತನಾಗಿದ್ದೇನೆ. ಇದು ಪಕ್ಷದ ಪ್ರತಿಯೊಬ್ಬ ಸಾಮಾನ್ಯ ಕಾರ್ಯಕರ್ತ ಮತ್ತು ಪಕ್ಷದ ಅಭಿಮಾನಿಗಳು ಚಿಂತಿಸುವ ಕಾಲ, ಚರ್ಚಿಸೋಣ ಎಂದು ಬರೆದುಕೊಂಡಿದ್ದಾರೆ.

ಇದನ್ನು ಓದಿ: ಮೋದಿ ವಿರುದ್ಧ ಸ್ಪರ್ಧೆ: ವಾರಣಾಸಿಯಲ್ಲಿ ಅಧಿಕಾರಿಗಳು ನಾಮಪತ್ರದ ಅರ್ಜಿಯೇ ಕೊಡುತ್ತಿಲ್ಲ; ಶ್ಯಾಮ್ ರಂಗೀಲಾ ಆರೋಪ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...