Homeಕರ್ನಾಟಕವಿಧಾನ ಪರಿಷತ್‌ಗೆ ಕೈತಪ್ಪಿದ ಟಿಕೆಟ್‌: ಬಿಜೆಪಿ ವಿರುದ್ಧ ರಘುಪತಿ ಭಟ್‌ ಅಸಮಾಧಾನ

ವಿಧಾನ ಪರಿಷತ್‌ಗೆ ಕೈತಪ್ಪಿದ ಟಿಕೆಟ್‌: ಬಿಜೆಪಿ ವಿರುದ್ಧ ರಘುಪತಿ ಭಟ್‌ ಅಸಮಾಧಾನ

- Advertisement -
- Advertisement -

ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದ ಬಿಜೆಪಿ ನಾಯಕ ರಘುಪತಿ ಭಟ್‌ ಇದೀಗ ವಿಧಾನ ಪರಿಷತ್‌ಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ.

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಜೂ.3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ನಿನ್ನೆ ಪ್ರಕಟಿಸಿತ್ತು. ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಅಮರನಾಥ್ ಪಾಟೀಲ್, ನೈಋತ್ಯ ಪದವೀಧರ ಕ್ಷೇತ್ರಕ್ಕೆ ಡಾ.ಧನಂಜಯ ಸರ್ಜಿ, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಅ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವೈ.ಎ.ನಾರಾಯಣಸ್ವಾಮಿ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಈ.ಸಿ.ನಿಂಗರಾಜು ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.

ಉಡುಪಿ ಕ್ಷೇತ್ರದಲ್ಲಿ ಶಾಸಕರಾಗಿದ್ದ ರಘುಪತಿ ಭಟ್‌ಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ನೀಡದೆ ಯಶ್ಪಲ್‌ ಸುವರ್ಣಾಗೆ ಟಿಕೆಟ್‌ ನೀಡಲಾಗಿತ್ತು. ಇದರಿಂದ ರಘಪತಿ ಭಟ್‌ ಸಾರ್ವಜನಿಕವಾಗಿ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಪಕ್ಷ ‌ನಡೆಸಿಕೊಂಡ ರೀತಿ ಸಾಕಷ್ಟು ಬೇಸರ ತಂದಿದೆ ಎಂದು ಹೇಳಿದ್ದರು. ರಘುಪತಿ ಭಟ್‌ ಪಕ್ಷೇತರರಾಗಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಅವರಿಗೆ ಪರಿಷತ್‌ ಟಿಕೆಟ್‌ ನೀಡುವುದಾಗಿ ಹೇಳಿ ಬಿಜೆಪಿ ಹೈಕಮಾಂಡ್‌ ಸಮಾಧಾನ ಮಾಡಿತ್ತು ಎಂದು ಹೇಳಲಾಗಿದೆ. ಆ ಬಳಿಕ ಅವರು ಪರಿಷತ್‌ ಚುನಾವಣೆ ಸ್ಪರ್ಧೆಗೆ ಸಿದ್ಧತೆ ಮಾಡುತ್ತಿದ್ದರು. ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಪದವೀಧರರ ಸದಸ್ಯತ್ವ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರರನ್ನು ಅವರು ಪಕ್ಷಕ್ಕೆ ಸೇರ್ಪಡೆಗೊಳಿಸಿದ್ದರು. ಆದರೆ ಇದೀಗ ಅವರಿಗೆ ಟಿಕೆಟ್‌ ಕೈತಪ್ಪಿದ್ದು ಅಸಮಾಧಾನಕ್ಕೆ ಕಾರಣವಾಗಿದೆ.

ರಘುಪತಿ ಭಟ್ಫೇಸ್ಬುಕ್ಪೋಸ್ಟ್ನಲ್ಲಿ ಏನೇನಿದೆ?

ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿ ಪದವೀಧರ ಕ್ಷೇತ್ರದ ಟಿಕೆಟ್ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿಗೆ ನೀಡಲಾಗಿದೆ. ಇದು ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡದೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗದ ವಿದ್ಯಾವಂತ, ಪ್ರಜ್ಞಾವಂತ ಮತದಾರರಿಗೆ ಅನ್ಯಾಯ ಮಾಡಿದ ಹಾಗಾಗಿದೆ. ಪ್ರಸ್ತುತ ಸ್ಥಿತಿಯಲ್ಲಿ ಬಿಜೆಪಿಯ ನಿಲುವಿನಿಂದ ವಿಚಲಿತನಾಗಿದ್ದೇನೆ.

1994ರಿಂದಲೂ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಕಾರ್ಯಕರ್ತನಾಗಿ, ಪದಾಧಿಕಾರಿಯಾಗಿ ವಿವಿಧ ಸ್ಥರಗಳಲ್ಲಿ ಕೆಲಸ ಮಾಡಿದ್ದೇನೆ. ವಿಧಾನ ಸಭೆಗೆ ಸ್ಪರ್ಧಿಸಿದ 3 ಬಾರಿಯೂ ಗೆದ್ದಿರುತ್ತೇನೆ. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನಗೆ ಯಾವುದೇ ಮಾಹಿತಿ ನೀಡದೆ ನನ್ನನ್ನು ಬದಲಾಯಿಸಲಾಯಿತು.

ನನ್ನ ಹೆಸರಿನ ಬದಲು ಬೇರೆ ಹೆಸರು ಘೋಷಣೆಯಾಗಿದ್ದು, ಟಿವಿ ಮೂಲಕ ತಿಳಿಯಿತು. ಆದರೆ ನಾನು ವಿಚಲಿತನಾಗದೆ ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ. ಆ ಸಂದರ್ಭದಲ್ಲಿ ನನಗೆ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಪಕ್ಷದ ಹಿರಿಯರು ಭರವಸೆ ನೀಡಿದ್ದರು. ಆ ಪ್ರಕಾರ ಪದವೀಧರರ ಸದಸ್ಯತ್ವ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಅತಿ ಹೆಚ್ಚು ಸದಸ್ಯರನ್ನು ನೋಂದಾಯಿಸಿದ್ದೇನೆ. ಅಲ್ಲದೆ ಪಕ್ಷ ನೀಡಿದ ಶಿವಮೊಗ್ಗ ಲೋಕಸಭಾ ಚುನಾವಣಾ ಪ್ರಭಾರಿ ಜವಾಬ್ದಾರಿಯನ್ನು 40 ದಿನಗಳ ಕಾಲ ಶಿವಮೊಗ್ಗದಲ್ಲಿ ಉಳಿದು ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ.

ಈಗ ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಆದರೆ ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರ ನೀಡದೆ ಮಾಡಿದ ಅನ್ಯಾಯಕ್ಕೆ ನ್ಯಾಯ ಕೊಡುವವರು ಯಾರು?ಪಕ್ಷ ತೆಗೆದುಕೊಂಡಿರುವ ಈ ನಿಲುವಿಂದ ವಿಚಲಿತನಾಗಿದ್ದೇನೆ. ಇದು ಪಕ್ಷದ ಪ್ರತಿಯೊಬ್ಬ ಸಾಮಾನ್ಯ ಕಾರ್ಯಕರ್ತ ಮತ್ತು ಪಕ್ಷದ ಅಭಿಮಾನಿಗಳು ಚಿಂತಿಸುವ ಕಾಲ, ಚರ್ಚಿಸೋಣ ಎಂದು ಬರೆದುಕೊಂಡಿದ್ದಾರೆ.

ಇದನ್ನು ಓದಿ: ಮೋದಿ ವಿರುದ್ಧ ಸ್ಪರ್ಧೆ: ವಾರಣಾಸಿಯಲ್ಲಿ ಅಧಿಕಾರಿಗಳು ನಾಮಪತ್ರದ ಅರ್ಜಿಯೇ ಕೊಡುತ್ತಿಲ್ಲ; ಶ್ಯಾಮ್ ರಂಗೀಲಾ ಆರೋಪ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...