Homeಕರ್ನಾಟಕವಿಧಾನ ಪರಿಷತ್‌ಗೆ ಕೈತಪ್ಪಿದ ಟಿಕೆಟ್‌: ಬಿಜೆಪಿ ವಿರುದ್ಧ ರಘುಪತಿ ಭಟ್‌ ಅಸಮಾಧಾನ

ವಿಧಾನ ಪರಿಷತ್‌ಗೆ ಕೈತಪ್ಪಿದ ಟಿಕೆಟ್‌: ಬಿಜೆಪಿ ವಿರುದ್ಧ ರಘುಪತಿ ಭಟ್‌ ಅಸಮಾಧಾನ

- Advertisement -
- Advertisement -

ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದ ಬಿಜೆಪಿ ನಾಯಕ ರಘುಪತಿ ಭಟ್‌ ಇದೀಗ ವಿಧಾನ ಪರಿಷತ್‌ಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ.

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಜೂ.3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ನಿನ್ನೆ ಪ್ರಕಟಿಸಿತ್ತು. ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಅಮರನಾಥ್ ಪಾಟೀಲ್, ನೈಋತ್ಯ ಪದವೀಧರ ಕ್ಷೇತ್ರಕ್ಕೆ ಡಾ.ಧನಂಜಯ ಸರ್ಜಿ, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಅ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವೈ.ಎ.ನಾರಾಯಣಸ್ವಾಮಿ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಈ.ಸಿ.ನಿಂಗರಾಜು ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.

ಉಡುಪಿ ಕ್ಷೇತ್ರದಲ್ಲಿ ಶಾಸಕರಾಗಿದ್ದ ರಘುಪತಿ ಭಟ್‌ಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ನೀಡದೆ ಯಶ್ಪಲ್‌ ಸುವರ್ಣಾಗೆ ಟಿಕೆಟ್‌ ನೀಡಲಾಗಿತ್ತು. ಇದರಿಂದ ರಘಪತಿ ಭಟ್‌ ಸಾರ್ವಜನಿಕವಾಗಿ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಪಕ್ಷ ‌ನಡೆಸಿಕೊಂಡ ರೀತಿ ಸಾಕಷ್ಟು ಬೇಸರ ತಂದಿದೆ ಎಂದು ಹೇಳಿದ್ದರು. ರಘುಪತಿ ಭಟ್‌ ಪಕ್ಷೇತರರಾಗಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಅವರಿಗೆ ಪರಿಷತ್‌ ಟಿಕೆಟ್‌ ನೀಡುವುದಾಗಿ ಹೇಳಿ ಬಿಜೆಪಿ ಹೈಕಮಾಂಡ್‌ ಸಮಾಧಾನ ಮಾಡಿತ್ತು ಎಂದು ಹೇಳಲಾಗಿದೆ. ಆ ಬಳಿಕ ಅವರು ಪರಿಷತ್‌ ಚುನಾವಣೆ ಸ್ಪರ್ಧೆಗೆ ಸಿದ್ಧತೆ ಮಾಡುತ್ತಿದ್ದರು. ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಪದವೀಧರರ ಸದಸ್ಯತ್ವ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರರನ್ನು ಅವರು ಪಕ್ಷಕ್ಕೆ ಸೇರ್ಪಡೆಗೊಳಿಸಿದ್ದರು. ಆದರೆ ಇದೀಗ ಅವರಿಗೆ ಟಿಕೆಟ್‌ ಕೈತಪ್ಪಿದ್ದು ಅಸಮಾಧಾನಕ್ಕೆ ಕಾರಣವಾಗಿದೆ.

ರಘುಪತಿ ಭಟ್ಫೇಸ್ಬುಕ್ಪೋಸ್ಟ್ನಲ್ಲಿ ಏನೇನಿದೆ?

ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿ ಪದವೀಧರ ಕ್ಷೇತ್ರದ ಟಿಕೆಟ್ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿಗೆ ನೀಡಲಾಗಿದೆ. ಇದು ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡದೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗದ ವಿದ್ಯಾವಂತ, ಪ್ರಜ್ಞಾವಂತ ಮತದಾರರಿಗೆ ಅನ್ಯಾಯ ಮಾಡಿದ ಹಾಗಾಗಿದೆ. ಪ್ರಸ್ತುತ ಸ್ಥಿತಿಯಲ್ಲಿ ಬಿಜೆಪಿಯ ನಿಲುವಿನಿಂದ ವಿಚಲಿತನಾಗಿದ್ದೇನೆ.

1994ರಿಂದಲೂ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಕಾರ್ಯಕರ್ತನಾಗಿ, ಪದಾಧಿಕಾರಿಯಾಗಿ ವಿವಿಧ ಸ್ಥರಗಳಲ್ಲಿ ಕೆಲಸ ಮಾಡಿದ್ದೇನೆ. ವಿಧಾನ ಸಭೆಗೆ ಸ್ಪರ್ಧಿಸಿದ 3 ಬಾರಿಯೂ ಗೆದ್ದಿರುತ್ತೇನೆ. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನಗೆ ಯಾವುದೇ ಮಾಹಿತಿ ನೀಡದೆ ನನ್ನನ್ನು ಬದಲಾಯಿಸಲಾಯಿತು.

ನನ್ನ ಹೆಸರಿನ ಬದಲು ಬೇರೆ ಹೆಸರು ಘೋಷಣೆಯಾಗಿದ್ದು, ಟಿವಿ ಮೂಲಕ ತಿಳಿಯಿತು. ಆದರೆ ನಾನು ವಿಚಲಿತನಾಗದೆ ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ. ಆ ಸಂದರ್ಭದಲ್ಲಿ ನನಗೆ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಪಕ್ಷದ ಹಿರಿಯರು ಭರವಸೆ ನೀಡಿದ್ದರು. ಆ ಪ್ರಕಾರ ಪದವೀಧರರ ಸದಸ್ಯತ್ವ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಅತಿ ಹೆಚ್ಚು ಸದಸ್ಯರನ್ನು ನೋಂದಾಯಿಸಿದ್ದೇನೆ. ಅಲ್ಲದೆ ಪಕ್ಷ ನೀಡಿದ ಶಿವಮೊಗ್ಗ ಲೋಕಸಭಾ ಚುನಾವಣಾ ಪ್ರಭಾರಿ ಜವಾಬ್ದಾರಿಯನ್ನು 40 ದಿನಗಳ ಕಾಲ ಶಿವಮೊಗ್ಗದಲ್ಲಿ ಉಳಿದು ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ.

ಈಗ ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಆದರೆ ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರ ನೀಡದೆ ಮಾಡಿದ ಅನ್ಯಾಯಕ್ಕೆ ನ್ಯಾಯ ಕೊಡುವವರು ಯಾರು?ಪಕ್ಷ ತೆಗೆದುಕೊಂಡಿರುವ ಈ ನಿಲುವಿಂದ ವಿಚಲಿತನಾಗಿದ್ದೇನೆ. ಇದು ಪಕ್ಷದ ಪ್ರತಿಯೊಬ್ಬ ಸಾಮಾನ್ಯ ಕಾರ್ಯಕರ್ತ ಮತ್ತು ಪಕ್ಷದ ಅಭಿಮಾನಿಗಳು ಚಿಂತಿಸುವ ಕಾಲ, ಚರ್ಚಿಸೋಣ ಎಂದು ಬರೆದುಕೊಂಡಿದ್ದಾರೆ.

ಇದನ್ನು ಓದಿ: ಮೋದಿ ವಿರುದ್ಧ ಸ್ಪರ್ಧೆ: ವಾರಣಾಸಿಯಲ್ಲಿ ಅಧಿಕಾರಿಗಳು ನಾಮಪತ್ರದ ಅರ್ಜಿಯೇ ಕೊಡುತ್ತಿಲ್ಲ; ಶ್ಯಾಮ್ ರಂಗೀಲಾ ಆರೋಪ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...