Homeಕರ್ನಾಟಕಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ: ಮಾತು ತಪ್ಪಿದ ಕೇಂದ್ರ ಸರ್ಕಾರ - ಟಿ.ಎಸ್.ನಾಗಾಭರಣ

ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ: ಮಾತು ತಪ್ಪಿದ ಕೇಂದ್ರ ಸರ್ಕಾರ – ಟಿ.ಎಸ್.ನಾಗಾಭರಣ

ಟಿ.ಎಸ್.ನಾಗಾಭರಣ ಈ ಹಿಂದೆ ಕೂಡ ರಾಷ್ಟ್ರೀಯ ಅರ್ಹತಾ ಪರೀಕ್ಷೆಗಳನ್ನು(NET) ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವಂತೆ ಕೇಂದ್ರದ ಸಚಿವರು, ಅಧಿಕಾರಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದರು.

- Advertisement -
- Advertisement -

ಬ್ಯಾಂಕಿಂಗ್ ಸೇವೆಗಳಿಗೆ ಸಂಬಂಧಿಸಿದ ಎಲ್ಲಾ ನೇಮಕಾತಿ ಪರೀಕ್ಷೆಗಳನ್ನು ರಾಜ್ಯ ಭಾಷೆಗಳಲ್ಲಿ ನಡೆಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಿರಂತರವಾಗಿ ಒತ್ತಾಯಿಸುತ್ತಿದೆ. ಆದರೂ ಸಹ ಹಳೆಯ ಮಾರ್ಗಸೂಚಿಗಳನ್ವಯ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಐಬಿಪಿಎಸ್ ಕ್ರಮಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಬೇಸರ ವ್ಯಕ್ತಪಡಿಸಿದ್ದಾರೆ.

ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳನ್ನು ನಡೆಸಬೇಕು ಎಂದು ಹಲವು ಭಾರಿ ಕೇಂದ್ರ ವಿತ್ತ ಸಚಿವರನ್ನು ಖುದ್ದು ಭೇಟಿಯಾಗಿ ಮನವಿ ಪತ್ರಗಳನ್ನು ಸಲ್ಲಿಸಲಾಗಿದ್ದರೂ ಹಳೆಯ ಮಾರ್ಗಸೂಚಿಗಳನ್ವಯ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಐಬಿಪಿಎಸ್ ಕ್ರಮ ಖಂಡನೀಯ ಎಂದಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳನ್ನು ಬರೆಯಲು ಅನುವು ಮಾಡಿಕೊಡುವಂತೆ ಮನವಿ ಮಾಡಿತ್ತು. ಮನವಿ ಹಿನ್ನೆಲೆಯಲ್ಲಿ ಕನ್ನಡದಲ್ಲಿ ಪರೀಕ್ಷೆಗಳನ್ನು ನಡೆಸುವುದಾಗಿ ಕೇಂದ್ರ ಸಚಿವರು ಭರವಸೆಗಳನ್ನು ನೀಡಿದ್ದರು. ಆದರೆ ಕೇಂದ್ರ ಸಚಿವರ ಭರವಸೆಗಳು ಹುಸಿಯಾಗಿದ್ದು, ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗಗಳು ಕನ್ನಡಿಗರ ಕೈ ತಪ್ಪುತ್ತಿರುವುದು ಅತ್ಯಂತ ನೋವಿನ ವಿಷಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕನ್ನಡದಲ್ಲಿ NET ಪರೀಕ್ಷೆ ನಡೆಸಲು ಒತ್ತಾಯ: ಕೇಂದ್ರಕ್ಕೆ ಪತ್ರಬರೆದ ಟಿ.ಎಸ್.ನಾಗಾಭರಣ

ಸಂವಿಧಾನದ ಪರಿಚ್ಛೇದ-8 ರಲ್ಲಿ ಎಲ್ಲ ರಾಜ್ಯಭಾಷೆಗಳಿಗೂ ಮಾನ್ಯತೆ ನೀಡುವಂತೆ ವಿವರಿಸಲಾಗಿದೆ. ಹಾಗಾಗಿ ಬ್ಯಾಂಕಿಂಗ್ ನೇಮಕಾತಿಗೆ ಐಬಿಪಿಎಸ್ ನಡೆಸುವ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸುವಂತೆ ನಿರ್ದೇಶನ ನೀಡಬೇಕೆಂದು ಕೇಂದ್ರ ಸಚಿವರಿಗೆ ಬರೆಯಲಾಗಿರುವ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಹೀಗಿದ್ದರೂ ಮುಂದಿನ ಜನವರಿಯಲ್ಲಿ ನಡೆಯಲಿರುವ ಬ್ಯಾಂಕಿಂಗ್ ಪರೀಕ್ಷೆಗಳನ್ನು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ನಡೆಸಲು ಐಬಿಪಿಎಸ್ ಸಿದ್ಧತೆ ನಡೆಸುತ್ತಿರುವುದರಿಂದ ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರುವ ಅಭ್ಯರ್ಥಿಗಳಿಗೆ ಅನ್ಯಾಯವಾಗಲಿದ್ದು, ಕನ್ನಡದಲ್ಲಿ ಪರೀಕ್ಷೆಗಳನ್ನು ನಡೆಸುವಂತೆ ಐಬಿಪಿಎಸ್‌ಗೆ ನಿರ್ದೇಶನ ನೀಡುವಂತೆ ಒತ್ತಾಯಿಸಿದ್ದಾರೆ.

ಗ್ರಾಮಮಟ್ಟದಲ್ಲೂ ಬ್ಯಾಂಕು ಸೌಲಭ್ಯವಿರುವುದರಿಂದ ಗ್ರಾಮೀಣರಿಗೆ ಸ್ಥಳೀಯ ಭಾಷೆಯಲ್ಲಿ ಮಾತ್ರ ಸಂವಹನ ನಡೆಸಲು ಸಾಧ್ಯವಿರುತ್ತದೆ. ಹಾಗಾಗಿ ರಾಜ್ಯಭಾಷೆಗಳ ಪ್ರಾವೀಣ್ಯತೆಗೆ ಸಂಬಂಧಿಸಿದಂತೆ ಹೊಸ ಮಾನದಂಡಗಳನ್ನು ರೂಪಿಸಿ ಕನ್ನಡವೂ ಸೇರಿದಂತೆ ಎಲ್ಲ ರಾಜ್ಯಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳನ್ನು ನಡೆಸುವಂತೆ ಆಗ್ರಹಿಸಿದ್ದಾರೆ.

ಈ ಹಿಂದೆ ಕೂಡ ಟಿ.ಎಸ್.ನಾಗಾಭರಣ, ರಾಷ್ಟ್ರೀಯ ಅರ್ಹತಾ ಪರೀಕ್ಷೆಗಳನ್ನು(NET) ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವಂತೆ ಕೇಂದ್ರದ ಸಚಿವರು, ಅಧಿಕಾರಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದರು.

ಪ್ರಶ್ನೆ ಪತ್ರಿಕೆಗಳು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಇರುವುದರಿಂದ ದಕ್ಷಿಣ ರಾಜ್ಯದ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಸಾಕಷ್ಟು ತೊಂದರೆಯಾಗುತ್ತಿದ್ದು ಈ ಬಗ್ಗೆ ಕೂಡಲೇ ಗಮನಹರಿಸಿ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವರಾದ ರಮೇಶ್ ಪೊಕ್ರಿಯಲ್ ನಿಶಾಂಕ್‌ಗೆ ಪತ್ರ ಬರೆದಿದ್ದರು.


ಇದನ್ನೂ ಓದಿ: ಭಾರತದ ಸಂಸ್ಕೃತಿಯೆಂದರೆ ಕೇವಲ ವೈದಿಕ ಸಂಸ್ಕೃತಿಯೇ?: ಭಾರತೀಯ ಸಂಸ್ಕೃತಿ ಅಧ್ಯಯನದ ಹಿಂದಿನ ಹುನ್ನಾರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡದಲ್ಲಿ ಬರೆಯುವುದಕ್ಕೆ ಎಡೆಕೊಡುವುದರಿಂದಲೇ ಕನ್ನಡಿಗರಿಗೆ ಒಳಿತಾಗುವುದಿಲ್ಲ.೨೦೧೪ ಕ್ಕೆ ಮೊದಲು ಇದ್ದ ಕಟ್ಟುಪಾಡುಗಳನ್ನು ಮರುನೆಲೆಗೊಳಿಸಬೇಕು. ಕನ್ನಡನಾಡಿನ ಬ್ಯಾಂಕ್ ಗಳಲ್ಲಿನ ಹುದ್ದೆಗಳನ್ನು ಇಲ್ಲಿನವರಿಗೆ ಮೀಸಲುಲಿಡುವಂತಾಗಬೇಕು.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...