Homeಮುಖಪುಟಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಮಿಸ್ಸಿಂಗ್!: ವಿಜ್ಞಾನಿಗಳ ಕಳವಳ

ಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಮಿಸ್ಸಿಂಗ್!: ವಿಜ್ಞಾನಿಗಳ ಕಳವಳ

ಸ್ವತಂತ್ರವಾಗಿ ಕೆಲಸ ಮಾಡುತ್ತಿರುವ ಹಲವು ವಿಜ್ಞಾನಿಗಳು ಕೋವಿಡ್ ಲಸಿಕೆಯ ಮೂರನೇ ಹಂತದ ಪ್ರಯೋಗದ ದತ್ತಾಂಶ ಲಭ್ಯವಿರದಿದ್ದರೂ, ಲಸಿಕೆ ಪ್ರಯೋಗಕ್ಕೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಕೋವಿಡ್ ಟಾಸ್ಕ್ ಫೋರ್ಸ್‌ನ ಸದಸ್ಯರು ಕೋವಿಡ್ ಲಸಿಕೆ ಕುರಿತಂತೆ ಈಗ ನೀಡಿರುವ ಸ್ಪಷ್ಟೀಕರಣದ ಪ್ರಕಾರ, ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಅನ್ನು ‘ಕ್ಲಿನಿಕಲ್ ಟ್ರಯಲ್’ ಮೋಡ್’ನಲ್ಲಿ ಬಳಸಬಹುದಾಗಿದೆ. ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ‘ಲಸಿಕೆಯ ಸುರಕ್ಷತೆಯ ಕಾರ್ಯತಂತ್ರದ ಭಾಗವಾಗಿ ಕೊವ್ಯಾಕ್ಸಿನ್ ಅನ್ನು ತುರ್ತು ಬಳಕೆಗೆ ಅನುಮೋದಿಸಲಾಗಿದೆ’ ಎಂದಿದ್ದಾರೆ.

ಆದರೆ, ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿರುವ ಹಲವಾರು ವಿಜ್ಞಾನಿಗಳು, ಮೊದಲ ಮತ್ತು ಎರಡನೇ ಹಂತದ ಟ್ರಯಲ್‌ಗಳು ಉತ್ತೇಜನಾಕಾರಿಯಾಗಿದ್ದವು, ಆದರೆ ನವೆಂಬರ್‌ನಲ್ಲಿ ಆರಂಭವಾದ ಮೂರನೆ ಹಂತದ ಟ್ರಯಲ್‌ನ ಪರಿಣಾಮಕಾರಿತ್ವ ದತ್ತಾಂಶ (efficacy data) ಲಭ್ಯವಾಗುವ ಮೊದಲೇ ಲಸಿಕೆ ಬಳಕೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸುತ್ತಿದ್ದಾರೆ.

‘ಭಾರತದ ಪ್ರಧಾನ ಔಷಧ ನಿಯಂತ್ರಕ ಸಂಸ್ಥೆ ಸೆಪ್ಟೆಂಬರ್‌ನಲ್ಲಿ ಬಿಡುಗಡೆ ಮಾಡಿದ ಮಾರ್ಗಸೂಚಿ ಪ್ರಕಾರ, ಯಾವುದೇ ಲಸಿಕೆ ಬಳಕೆಗೆ ಅನುಮತಿ ನೀಡಲು ಸುರಕ್ಷತಾ ಮತ್ತು ಪರಿಣಾಮಕಾರಿತ್ವ ದತ್ತಾಂಶ ಅಗತ್ಯವಾಗಿದೆ. ಸುರಕ್ಷತಾ ದತ್ತಾಂಶಕ್ಕೆ ಕನಿಷ್ಠ ಎರಡು ತಿಂಗಳ ಕಾಲ ಫಾಲೋ ಅಪ್ ಮಾಡಬೇಕು. ಆದರೆ ಅದು ಇಲ್ಲಿ ಆಗಿಲ್ಲ’ ಎಂದು ಲಸಿಕಾ ತಜ್ಞ ಮತ್ತು ಕ್ರಿಶ್ಚಿಯನ್ ಮೆಡಿಕಲ್ ಕಾಲೇಜ್ ಪ್ರೊಫೆಸರ್ ಡಾ. ಗಗನದಿಪ್ ಕಂಗ್ ಹೇಳುತ್ತಾರೆ.

‘ಕೊವ್ಯಾಕ್ಸಿನ್ ವಿಷಯದಲ್ಲಿ, ಸ್ವಯಂಸೇವಕರ ಭರ್ತಿಯೇ ಮುಗಿದಿಲ್ಲ. ಔಷಧ ನಿಯಂತ್ರಕರು ಕೇಳಿದ್ದ ಸುರಕ್ಷತಾ ದತ್ತಾಂಶವನ್ನು ಎಲ್ಲಿಂದ ತರುತ್ತೀರಿ? ನಿಸ್ಸಂಶವಾಯವಾಗಿ ಯಾವುದೇ ಪರಿಣಾಮಕಾರಿತ್ವ ದತ್ತಾಂಶವೂ ಲಭ್ಯ ಇಲ್ಲ’ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವೈರಲಾಜಿಸ್ಟ್ ಶಹೀದ್ ಜಮೀಲ್, ‘ತುರ್ತು ಬಳಕೆಗೆ ಅನುಮತಿ ನೀಡಲೂ ಕೂಡ ಪರಿಣಾಮಕಾರಿತ್ವ ದತ್ತಾಂಶ ಅಗತ್ಯ. ಈ ಉತ್ಪನ್ನಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯನ್ನೂ ಪ್ರವೇಶಿಸುತ್ತವೆ. ನಮ್ಮ ನಿಯಂತ್ರಕ ಸಂಸ್ಥೆಗಳು ವಿಶ್ವಾಸವನ್ನು ಉಳಿಸಿಕೊಳ್ಳಬೇಕು’ ಎಂದು ಅಭಿಪ್ರಾಯ ಪಡುತ್ತಾರೆ.

ಏಮ್ಸ್ (ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ನಿರ್ದೇಶಕ ಮತ್ತು ರಾಷ್ಟ್ರೀಯ ಕೋವಿಡ್ ಟಾಸ್ಕ್ ಫೋರ್ಸ್ ಸದಸ್ಯ ರಣದೀಪ್ ಗುಲೇರಿಯಾ, ‘ಕೊವ್ಯಾಕ್ಸಿನ ತುರ್ತು ಬಳಕೆಗೆ ಅನುಮತಿ ನೀಡಿದ್ದು ಏಕೆಂದರೆ, ಆಕಸ್ಮಾತ್ ಪಾಸಿಟಿವ್ ಕೇಸುಗಳ ಸಂಖ್ಯೆ ಹೆಚ್ಚಾದಲ್ಲಿ ಮತ್ತು ಆಕ್ಸ್‌ಫರ್ಡ್‌ ಲಸಿಕೆಯ ಕೊರತೆಯಾದಲ್ಲಿ ಕೊವಾಕ್ಷಿನ್ ಅನ್ನು ‘ಕ್ಲಿನಿಕಲ್ ಟ್ರಯಲ್ ಮೋಡ್’ನಲ್ಲಿ ಬಳಸಬಹುದು ಎಂಬ ಕಾರಣಕ್ಕಾಗಿ’ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

’50 ಮಿಲಿಯನ್ ಡೋಸ್ ಲಸಿಕೆ ಸಿದ್ಧ ಎಂದು ಸೀರಮ್ ಸಂಸ್ಥೇ ಹೇಳಿದೆ. ಹಾಗಾಗಿ ಬಯೋಟೆಕ್‌ನ ಕೊವಾಕ್ಸಿನ್ 3ನೆ ಹಂತ ಮುಗಿಸುವವರೆಗೂ ಕಾಯಬೇಕಿತ್ತು’ ಎಂದು ವೈರಾಲಜಿಸ್ಟ್ ಶಮೀದ್ ಜಮೀಲ್ ಪ್ರಶ್ನಿಸಿದ್ದಾರೆ.

‘ನೀತಿ ನಿರೂಪಣೆಯ ಮಟ್ಟದಲ್ಲಿ ಮತ್ತು ನಿಯಂತ್ರಕ ಮಟ್ಟದಲ್ಲಿ ಸಮಸ್ಯೆಯಿದೆ. ಲಸಿಕೆಗೆ ಅನುಮತಿ ನೀಡುವ ಪ್ರಕ್ರಿಯೆಯಲ್ಲಿ ಹಲವಾರು ಸಮಸ್ಯೆಗಳಿವೆ. ಈಗ ನಡೆಯುತ್ತಿರುವುದು ಜನರು ನಿಯಂತ್ರಕ ವ್ಯವಸ್ಥೆಯ ಮೇಲೆ ವಿಶ್ವಾಸ ಕಳೆದುಕೊಳ್ಳುವಂತೆ ಮಾಡಲಿದೆ’ ಎಂದು ಇಮ್ಯುನಿಲಾಜಿಸ್ಟ್ ಸತ್ಯಜೀತ್ ರಥ್ ಹೇಳಿದ್ದಾರೆ.


ಇದನ್ನೂ ಓದಿ: ಭಾರತದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಬಳಕೆಗೆ ಹಸಿರು ನಿಶಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...