Homeಮುಖಪುಟಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಮಿಸ್ಸಿಂಗ್!: ವಿಜ್ಞಾನಿಗಳ ಕಳವಳ

ಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಮಿಸ್ಸಿಂಗ್!: ವಿಜ್ಞಾನಿಗಳ ಕಳವಳ

ಸ್ವತಂತ್ರವಾಗಿ ಕೆಲಸ ಮಾಡುತ್ತಿರುವ ಹಲವು ವಿಜ್ಞಾನಿಗಳು ಕೋವಿಡ್ ಲಸಿಕೆಯ ಮೂರನೇ ಹಂತದ ಪ್ರಯೋಗದ ದತ್ತಾಂಶ ಲಭ್ಯವಿರದಿದ್ದರೂ, ಲಸಿಕೆ ಪ್ರಯೋಗಕ್ಕೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಕೋವಿಡ್ ಟಾಸ್ಕ್ ಫೋರ್ಸ್‌ನ ಸದಸ್ಯರು ಕೋವಿಡ್ ಲಸಿಕೆ ಕುರಿತಂತೆ ಈಗ ನೀಡಿರುವ ಸ್ಪಷ್ಟೀಕರಣದ ಪ್ರಕಾರ, ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಅನ್ನು ‘ಕ್ಲಿನಿಕಲ್ ಟ್ರಯಲ್’ ಮೋಡ್’ನಲ್ಲಿ ಬಳಸಬಹುದಾಗಿದೆ. ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ‘ಲಸಿಕೆಯ ಸುರಕ್ಷತೆಯ ಕಾರ್ಯತಂತ್ರದ ಭಾಗವಾಗಿ ಕೊವ್ಯಾಕ್ಸಿನ್ ಅನ್ನು ತುರ್ತು ಬಳಕೆಗೆ ಅನುಮೋದಿಸಲಾಗಿದೆ’ ಎಂದಿದ್ದಾರೆ.

ಆದರೆ, ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿರುವ ಹಲವಾರು ವಿಜ್ಞಾನಿಗಳು, ಮೊದಲ ಮತ್ತು ಎರಡನೇ ಹಂತದ ಟ್ರಯಲ್‌ಗಳು ಉತ್ತೇಜನಾಕಾರಿಯಾಗಿದ್ದವು, ಆದರೆ ನವೆಂಬರ್‌ನಲ್ಲಿ ಆರಂಭವಾದ ಮೂರನೆ ಹಂತದ ಟ್ರಯಲ್‌ನ ಪರಿಣಾಮಕಾರಿತ್ವ ದತ್ತಾಂಶ (efficacy data) ಲಭ್ಯವಾಗುವ ಮೊದಲೇ ಲಸಿಕೆ ಬಳಕೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸುತ್ತಿದ್ದಾರೆ.

‘ಭಾರತದ ಪ್ರಧಾನ ಔಷಧ ನಿಯಂತ್ರಕ ಸಂಸ್ಥೆ ಸೆಪ್ಟೆಂಬರ್‌ನಲ್ಲಿ ಬಿಡುಗಡೆ ಮಾಡಿದ ಮಾರ್ಗಸೂಚಿ ಪ್ರಕಾರ, ಯಾವುದೇ ಲಸಿಕೆ ಬಳಕೆಗೆ ಅನುಮತಿ ನೀಡಲು ಸುರಕ್ಷತಾ ಮತ್ತು ಪರಿಣಾಮಕಾರಿತ್ವ ದತ್ತಾಂಶ ಅಗತ್ಯವಾಗಿದೆ. ಸುರಕ್ಷತಾ ದತ್ತಾಂಶಕ್ಕೆ ಕನಿಷ್ಠ ಎರಡು ತಿಂಗಳ ಕಾಲ ಫಾಲೋ ಅಪ್ ಮಾಡಬೇಕು. ಆದರೆ ಅದು ಇಲ್ಲಿ ಆಗಿಲ್ಲ’ ಎಂದು ಲಸಿಕಾ ತಜ್ಞ ಮತ್ತು ಕ್ರಿಶ್ಚಿಯನ್ ಮೆಡಿಕಲ್ ಕಾಲೇಜ್ ಪ್ರೊಫೆಸರ್ ಡಾ. ಗಗನದಿಪ್ ಕಂಗ್ ಹೇಳುತ್ತಾರೆ.

‘ಕೊವ್ಯಾಕ್ಸಿನ್ ವಿಷಯದಲ್ಲಿ, ಸ್ವಯಂಸೇವಕರ ಭರ್ತಿಯೇ ಮುಗಿದಿಲ್ಲ. ಔಷಧ ನಿಯಂತ್ರಕರು ಕೇಳಿದ್ದ ಸುರಕ್ಷತಾ ದತ್ತಾಂಶವನ್ನು ಎಲ್ಲಿಂದ ತರುತ್ತೀರಿ? ನಿಸ್ಸಂಶವಾಯವಾಗಿ ಯಾವುದೇ ಪರಿಣಾಮಕಾರಿತ್ವ ದತ್ತಾಂಶವೂ ಲಭ್ಯ ಇಲ್ಲ’ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವೈರಲಾಜಿಸ್ಟ್ ಶಹೀದ್ ಜಮೀಲ್, ‘ತುರ್ತು ಬಳಕೆಗೆ ಅನುಮತಿ ನೀಡಲೂ ಕೂಡ ಪರಿಣಾಮಕಾರಿತ್ವ ದತ್ತಾಂಶ ಅಗತ್ಯ. ಈ ಉತ್ಪನ್ನಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯನ್ನೂ ಪ್ರವೇಶಿಸುತ್ತವೆ. ನಮ್ಮ ನಿಯಂತ್ರಕ ಸಂಸ್ಥೆಗಳು ವಿಶ್ವಾಸವನ್ನು ಉಳಿಸಿಕೊಳ್ಳಬೇಕು’ ಎಂದು ಅಭಿಪ್ರಾಯ ಪಡುತ್ತಾರೆ.

ಏಮ್ಸ್ (ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ನಿರ್ದೇಶಕ ಮತ್ತು ರಾಷ್ಟ್ರೀಯ ಕೋವಿಡ್ ಟಾಸ್ಕ್ ಫೋರ್ಸ್ ಸದಸ್ಯ ರಣದೀಪ್ ಗುಲೇರಿಯಾ, ‘ಕೊವ್ಯಾಕ್ಸಿನ ತುರ್ತು ಬಳಕೆಗೆ ಅನುಮತಿ ನೀಡಿದ್ದು ಏಕೆಂದರೆ, ಆಕಸ್ಮಾತ್ ಪಾಸಿಟಿವ್ ಕೇಸುಗಳ ಸಂಖ್ಯೆ ಹೆಚ್ಚಾದಲ್ಲಿ ಮತ್ತು ಆಕ್ಸ್‌ಫರ್ಡ್‌ ಲಸಿಕೆಯ ಕೊರತೆಯಾದಲ್ಲಿ ಕೊವಾಕ್ಷಿನ್ ಅನ್ನು ‘ಕ್ಲಿನಿಕಲ್ ಟ್ರಯಲ್ ಮೋಡ್’ನಲ್ಲಿ ಬಳಸಬಹುದು ಎಂಬ ಕಾರಣಕ್ಕಾಗಿ’ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

’50 ಮಿಲಿಯನ್ ಡೋಸ್ ಲಸಿಕೆ ಸಿದ್ಧ ಎಂದು ಸೀರಮ್ ಸಂಸ್ಥೇ ಹೇಳಿದೆ. ಹಾಗಾಗಿ ಬಯೋಟೆಕ್‌ನ ಕೊವಾಕ್ಸಿನ್ 3ನೆ ಹಂತ ಮುಗಿಸುವವರೆಗೂ ಕಾಯಬೇಕಿತ್ತು’ ಎಂದು ವೈರಾಲಜಿಸ್ಟ್ ಶಮೀದ್ ಜಮೀಲ್ ಪ್ರಶ್ನಿಸಿದ್ದಾರೆ.

‘ನೀತಿ ನಿರೂಪಣೆಯ ಮಟ್ಟದಲ್ಲಿ ಮತ್ತು ನಿಯಂತ್ರಕ ಮಟ್ಟದಲ್ಲಿ ಸಮಸ್ಯೆಯಿದೆ. ಲಸಿಕೆಗೆ ಅನುಮತಿ ನೀಡುವ ಪ್ರಕ್ರಿಯೆಯಲ್ಲಿ ಹಲವಾರು ಸಮಸ್ಯೆಗಳಿವೆ. ಈಗ ನಡೆಯುತ್ತಿರುವುದು ಜನರು ನಿಯಂತ್ರಕ ವ್ಯವಸ್ಥೆಯ ಮೇಲೆ ವಿಶ್ವಾಸ ಕಳೆದುಕೊಳ್ಳುವಂತೆ ಮಾಡಲಿದೆ’ ಎಂದು ಇಮ್ಯುನಿಲಾಜಿಸ್ಟ್ ಸತ್ಯಜೀತ್ ರಥ್ ಹೇಳಿದ್ದಾರೆ.


ಇದನ್ನೂ ಓದಿ: ಭಾರತದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಬಳಕೆಗೆ ಹಸಿರು ನಿಶಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....