Homeಮುಖಪುಟಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಮಿಸ್ಸಿಂಗ್!: ವಿಜ್ಞಾನಿಗಳ ಕಳವಳ

ಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಮಿಸ್ಸಿಂಗ್!: ವಿಜ್ಞಾನಿಗಳ ಕಳವಳ

ಸ್ವತಂತ್ರವಾಗಿ ಕೆಲಸ ಮಾಡುತ್ತಿರುವ ಹಲವು ವಿಜ್ಞಾನಿಗಳು ಕೋವಿಡ್ ಲಸಿಕೆಯ ಮೂರನೇ ಹಂತದ ಪ್ರಯೋಗದ ದತ್ತಾಂಶ ಲಭ್ಯವಿರದಿದ್ದರೂ, ಲಸಿಕೆ ಪ್ರಯೋಗಕ್ಕೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಕೋವಿಡ್ ಟಾಸ್ಕ್ ಫೋರ್ಸ್‌ನ ಸದಸ್ಯರು ಕೋವಿಡ್ ಲಸಿಕೆ ಕುರಿತಂತೆ ಈಗ ನೀಡಿರುವ ಸ್ಪಷ್ಟೀಕರಣದ ಪ್ರಕಾರ, ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಅನ್ನು ‘ಕ್ಲಿನಿಕಲ್ ಟ್ರಯಲ್’ ಮೋಡ್’ನಲ್ಲಿ ಬಳಸಬಹುದಾಗಿದೆ. ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ‘ಲಸಿಕೆಯ ಸುರಕ್ಷತೆಯ ಕಾರ್ಯತಂತ್ರದ ಭಾಗವಾಗಿ ಕೊವ್ಯಾಕ್ಸಿನ್ ಅನ್ನು ತುರ್ತು ಬಳಕೆಗೆ ಅನುಮೋದಿಸಲಾಗಿದೆ’ ಎಂದಿದ್ದಾರೆ.

ಆದರೆ, ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿರುವ ಹಲವಾರು ವಿಜ್ಞಾನಿಗಳು, ಮೊದಲ ಮತ್ತು ಎರಡನೇ ಹಂತದ ಟ್ರಯಲ್‌ಗಳು ಉತ್ತೇಜನಾಕಾರಿಯಾಗಿದ್ದವು, ಆದರೆ ನವೆಂಬರ್‌ನಲ್ಲಿ ಆರಂಭವಾದ ಮೂರನೆ ಹಂತದ ಟ್ರಯಲ್‌ನ ಪರಿಣಾಮಕಾರಿತ್ವ ದತ್ತಾಂಶ (efficacy data) ಲಭ್ಯವಾಗುವ ಮೊದಲೇ ಲಸಿಕೆ ಬಳಕೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸುತ್ತಿದ್ದಾರೆ.

‘ಭಾರತದ ಪ್ರಧಾನ ಔಷಧ ನಿಯಂತ್ರಕ ಸಂಸ್ಥೆ ಸೆಪ್ಟೆಂಬರ್‌ನಲ್ಲಿ ಬಿಡುಗಡೆ ಮಾಡಿದ ಮಾರ್ಗಸೂಚಿ ಪ್ರಕಾರ, ಯಾವುದೇ ಲಸಿಕೆ ಬಳಕೆಗೆ ಅನುಮತಿ ನೀಡಲು ಸುರಕ್ಷತಾ ಮತ್ತು ಪರಿಣಾಮಕಾರಿತ್ವ ದತ್ತಾಂಶ ಅಗತ್ಯವಾಗಿದೆ. ಸುರಕ್ಷತಾ ದತ್ತಾಂಶಕ್ಕೆ ಕನಿಷ್ಠ ಎರಡು ತಿಂಗಳ ಕಾಲ ಫಾಲೋ ಅಪ್ ಮಾಡಬೇಕು. ಆದರೆ ಅದು ಇಲ್ಲಿ ಆಗಿಲ್ಲ’ ಎಂದು ಲಸಿಕಾ ತಜ್ಞ ಮತ್ತು ಕ್ರಿಶ್ಚಿಯನ್ ಮೆಡಿಕಲ್ ಕಾಲೇಜ್ ಪ್ರೊಫೆಸರ್ ಡಾ. ಗಗನದಿಪ್ ಕಂಗ್ ಹೇಳುತ್ತಾರೆ.

‘ಕೊವ್ಯಾಕ್ಸಿನ್ ವಿಷಯದಲ್ಲಿ, ಸ್ವಯಂಸೇವಕರ ಭರ್ತಿಯೇ ಮುಗಿದಿಲ್ಲ. ಔಷಧ ನಿಯಂತ್ರಕರು ಕೇಳಿದ್ದ ಸುರಕ್ಷತಾ ದತ್ತಾಂಶವನ್ನು ಎಲ್ಲಿಂದ ತರುತ್ತೀರಿ? ನಿಸ್ಸಂಶವಾಯವಾಗಿ ಯಾವುದೇ ಪರಿಣಾಮಕಾರಿತ್ವ ದತ್ತಾಂಶವೂ ಲಭ್ಯ ಇಲ್ಲ’ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವೈರಲಾಜಿಸ್ಟ್ ಶಹೀದ್ ಜಮೀಲ್, ‘ತುರ್ತು ಬಳಕೆಗೆ ಅನುಮತಿ ನೀಡಲೂ ಕೂಡ ಪರಿಣಾಮಕಾರಿತ್ವ ದತ್ತಾಂಶ ಅಗತ್ಯ. ಈ ಉತ್ಪನ್ನಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯನ್ನೂ ಪ್ರವೇಶಿಸುತ್ತವೆ. ನಮ್ಮ ನಿಯಂತ್ರಕ ಸಂಸ್ಥೆಗಳು ವಿಶ್ವಾಸವನ್ನು ಉಳಿಸಿಕೊಳ್ಳಬೇಕು’ ಎಂದು ಅಭಿಪ್ರಾಯ ಪಡುತ್ತಾರೆ.

ಏಮ್ಸ್ (ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ನಿರ್ದೇಶಕ ಮತ್ತು ರಾಷ್ಟ್ರೀಯ ಕೋವಿಡ್ ಟಾಸ್ಕ್ ಫೋರ್ಸ್ ಸದಸ್ಯ ರಣದೀಪ್ ಗುಲೇರಿಯಾ, ‘ಕೊವ್ಯಾಕ್ಸಿನ ತುರ್ತು ಬಳಕೆಗೆ ಅನುಮತಿ ನೀಡಿದ್ದು ಏಕೆಂದರೆ, ಆಕಸ್ಮಾತ್ ಪಾಸಿಟಿವ್ ಕೇಸುಗಳ ಸಂಖ್ಯೆ ಹೆಚ್ಚಾದಲ್ಲಿ ಮತ್ತು ಆಕ್ಸ್‌ಫರ್ಡ್‌ ಲಸಿಕೆಯ ಕೊರತೆಯಾದಲ್ಲಿ ಕೊವಾಕ್ಷಿನ್ ಅನ್ನು ‘ಕ್ಲಿನಿಕಲ್ ಟ್ರಯಲ್ ಮೋಡ್’ನಲ್ಲಿ ಬಳಸಬಹುದು ಎಂಬ ಕಾರಣಕ್ಕಾಗಿ’ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

’50 ಮಿಲಿಯನ್ ಡೋಸ್ ಲಸಿಕೆ ಸಿದ್ಧ ಎಂದು ಸೀರಮ್ ಸಂಸ್ಥೇ ಹೇಳಿದೆ. ಹಾಗಾಗಿ ಬಯೋಟೆಕ್‌ನ ಕೊವಾಕ್ಸಿನ್ 3ನೆ ಹಂತ ಮುಗಿಸುವವರೆಗೂ ಕಾಯಬೇಕಿತ್ತು’ ಎಂದು ವೈರಾಲಜಿಸ್ಟ್ ಶಮೀದ್ ಜಮೀಲ್ ಪ್ರಶ್ನಿಸಿದ್ದಾರೆ.

‘ನೀತಿ ನಿರೂಪಣೆಯ ಮಟ್ಟದಲ್ಲಿ ಮತ್ತು ನಿಯಂತ್ರಕ ಮಟ್ಟದಲ್ಲಿ ಸಮಸ್ಯೆಯಿದೆ. ಲಸಿಕೆಗೆ ಅನುಮತಿ ನೀಡುವ ಪ್ರಕ್ರಿಯೆಯಲ್ಲಿ ಹಲವಾರು ಸಮಸ್ಯೆಗಳಿವೆ. ಈಗ ನಡೆಯುತ್ತಿರುವುದು ಜನರು ನಿಯಂತ್ರಕ ವ್ಯವಸ್ಥೆಯ ಮೇಲೆ ವಿಶ್ವಾಸ ಕಳೆದುಕೊಳ್ಳುವಂತೆ ಮಾಡಲಿದೆ’ ಎಂದು ಇಮ್ಯುನಿಲಾಜಿಸ್ಟ್ ಸತ್ಯಜೀತ್ ರಥ್ ಹೇಳಿದ್ದಾರೆ.


ಇದನ್ನೂ ಓದಿ: ಭಾರತದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಬಳಕೆಗೆ ಹಸಿರು ನಿಶಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...