Homeಮುಖಪುಟಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಮಿಸ್ಸಿಂಗ್!: ವಿಜ್ಞಾನಿಗಳ ಕಳವಳ

ಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಮಿಸ್ಸಿಂಗ್!: ವಿಜ್ಞಾನಿಗಳ ಕಳವಳ

ಸ್ವತಂತ್ರವಾಗಿ ಕೆಲಸ ಮಾಡುತ್ತಿರುವ ಹಲವು ವಿಜ್ಞಾನಿಗಳು ಕೋವಿಡ್ ಲಸಿಕೆಯ ಮೂರನೇ ಹಂತದ ಪ್ರಯೋಗದ ದತ್ತಾಂಶ ಲಭ್ಯವಿರದಿದ್ದರೂ, ಲಸಿಕೆ ಪ್ರಯೋಗಕ್ಕೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಕೋವಿಡ್ ಟಾಸ್ಕ್ ಫೋರ್ಸ್‌ನ ಸದಸ್ಯರು ಕೋವಿಡ್ ಲಸಿಕೆ ಕುರಿತಂತೆ ಈಗ ನೀಡಿರುವ ಸ್ಪಷ್ಟೀಕರಣದ ಪ್ರಕಾರ, ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಅನ್ನು ‘ಕ್ಲಿನಿಕಲ್ ಟ್ರಯಲ್’ ಮೋಡ್’ನಲ್ಲಿ ಬಳಸಬಹುದಾಗಿದೆ. ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ‘ಲಸಿಕೆಯ ಸುರಕ್ಷತೆಯ ಕಾರ್ಯತಂತ್ರದ ಭಾಗವಾಗಿ ಕೊವ್ಯಾಕ್ಸಿನ್ ಅನ್ನು ತುರ್ತು ಬಳಕೆಗೆ ಅನುಮೋದಿಸಲಾಗಿದೆ’ ಎಂದಿದ್ದಾರೆ.

ಆದರೆ, ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿರುವ ಹಲವಾರು ವಿಜ್ಞಾನಿಗಳು, ಮೊದಲ ಮತ್ತು ಎರಡನೇ ಹಂತದ ಟ್ರಯಲ್‌ಗಳು ಉತ್ತೇಜನಾಕಾರಿಯಾಗಿದ್ದವು, ಆದರೆ ನವೆಂಬರ್‌ನಲ್ಲಿ ಆರಂಭವಾದ ಮೂರನೆ ಹಂತದ ಟ್ರಯಲ್‌ನ ಪರಿಣಾಮಕಾರಿತ್ವ ದತ್ತಾಂಶ (efficacy data) ಲಭ್ಯವಾಗುವ ಮೊದಲೇ ಲಸಿಕೆ ಬಳಕೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸುತ್ತಿದ್ದಾರೆ.

‘ಭಾರತದ ಪ್ರಧಾನ ಔಷಧ ನಿಯಂತ್ರಕ ಸಂಸ್ಥೆ ಸೆಪ್ಟೆಂಬರ್‌ನಲ್ಲಿ ಬಿಡುಗಡೆ ಮಾಡಿದ ಮಾರ್ಗಸೂಚಿ ಪ್ರಕಾರ, ಯಾವುದೇ ಲಸಿಕೆ ಬಳಕೆಗೆ ಅನುಮತಿ ನೀಡಲು ಸುರಕ್ಷತಾ ಮತ್ತು ಪರಿಣಾಮಕಾರಿತ್ವ ದತ್ತಾಂಶ ಅಗತ್ಯವಾಗಿದೆ. ಸುರಕ್ಷತಾ ದತ್ತಾಂಶಕ್ಕೆ ಕನಿಷ್ಠ ಎರಡು ತಿಂಗಳ ಕಾಲ ಫಾಲೋ ಅಪ್ ಮಾಡಬೇಕು. ಆದರೆ ಅದು ಇಲ್ಲಿ ಆಗಿಲ್ಲ’ ಎಂದು ಲಸಿಕಾ ತಜ್ಞ ಮತ್ತು ಕ್ರಿಶ್ಚಿಯನ್ ಮೆಡಿಕಲ್ ಕಾಲೇಜ್ ಪ್ರೊಫೆಸರ್ ಡಾ. ಗಗನದಿಪ್ ಕಂಗ್ ಹೇಳುತ್ತಾರೆ.

‘ಕೊವ್ಯಾಕ್ಸಿನ್ ವಿಷಯದಲ್ಲಿ, ಸ್ವಯಂಸೇವಕರ ಭರ್ತಿಯೇ ಮುಗಿದಿಲ್ಲ. ಔಷಧ ನಿಯಂತ್ರಕರು ಕೇಳಿದ್ದ ಸುರಕ್ಷತಾ ದತ್ತಾಂಶವನ್ನು ಎಲ್ಲಿಂದ ತರುತ್ತೀರಿ? ನಿಸ್ಸಂಶವಾಯವಾಗಿ ಯಾವುದೇ ಪರಿಣಾಮಕಾರಿತ್ವ ದತ್ತಾಂಶವೂ ಲಭ್ಯ ಇಲ್ಲ’ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವೈರಲಾಜಿಸ್ಟ್ ಶಹೀದ್ ಜಮೀಲ್, ‘ತುರ್ತು ಬಳಕೆಗೆ ಅನುಮತಿ ನೀಡಲೂ ಕೂಡ ಪರಿಣಾಮಕಾರಿತ್ವ ದತ್ತಾಂಶ ಅಗತ್ಯ. ಈ ಉತ್ಪನ್ನಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯನ್ನೂ ಪ್ರವೇಶಿಸುತ್ತವೆ. ನಮ್ಮ ನಿಯಂತ್ರಕ ಸಂಸ್ಥೆಗಳು ವಿಶ್ವಾಸವನ್ನು ಉಳಿಸಿಕೊಳ್ಳಬೇಕು’ ಎಂದು ಅಭಿಪ್ರಾಯ ಪಡುತ್ತಾರೆ.

ಏಮ್ಸ್ (ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ನಿರ್ದೇಶಕ ಮತ್ತು ರಾಷ್ಟ್ರೀಯ ಕೋವಿಡ್ ಟಾಸ್ಕ್ ಫೋರ್ಸ್ ಸದಸ್ಯ ರಣದೀಪ್ ಗುಲೇರಿಯಾ, ‘ಕೊವ್ಯಾಕ್ಸಿನ ತುರ್ತು ಬಳಕೆಗೆ ಅನುಮತಿ ನೀಡಿದ್ದು ಏಕೆಂದರೆ, ಆಕಸ್ಮಾತ್ ಪಾಸಿಟಿವ್ ಕೇಸುಗಳ ಸಂಖ್ಯೆ ಹೆಚ್ಚಾದಲ್ಲಿ ಮತ್ತು ಆಕ್ಸ್‌ಫರ್ಡ್‌ ಲಸಿಕೆಯ ಕೊರತೆಯಾದಲ್ಲಿ ಕೊವಾಕ್ಷಿನ್ ಅನ್ನು ‘ಕ್ಲಿನಿಕಲ್ ಟ್ರಯಲ್ ಮೋಡ್’ನಲ್ಲಿ ಬಳಸಬಹುದು ಎಂಬ ಕಾರಣಕ್ಕಾಗಿ’ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

’50 ಮಿಲಿಯನ್ ಡೋಸ್ ಲಸಿಕೆ ಸಿದ್ಧ ಎಂದು ಸೀರಮ್ ಸಂಸ್ಥೇ ಹೇಳಿದೆ. ಹಾಗಾಗಿ ಬಯೋಟೆಕ್‌ನ ಕೊವಾಕ್ಸಿನ್ 3ನೆ ಹಂತ ಮುಗಿಸುವವರೆಗೂ ಕಾಯಬೇಕಿತ್ತು’ ಎಂದು ವೈರಾಲಜಿಸ್ಟ್ ಶಮೀದ್ ಜಮೀಲ್ ಪ್ರಶ್ನಿಸಿದ್ದಾರೆ.

‘ನೀತಿ ನಿರೂಪಣೆಯ ಮಟ್ಟದಲ್ಲಿ ಮತ್ತು ನಿಯಂತ್ರಕ ಮಟ್ಟದಲ್ಲಿ ಸಮಸ್ಯೆಯಿದೆ. ಲಸಿಕೆಗೆ ಅನುಮತಿ ನೀಡುವ ಪ್ರಕ್ರಿಯೆಯಲ್ಲಿ ಹಲವಾರು ಸಮಸ್ಯೆಗಳಿವೆ. ಈಗ ನಡೆಯುತ್ತಿರುವುದು ಜನರು ನಿಯಂತ್ರಕ ವ್ಯವಸ್ಥೆಯ ಮೇಲೆ ವಿಶ್ವಾಸ ಕಳೆದುಕೊಳ್ಳುವಂತೆ ಮಾಡಲಿದೆ’ ಎಂದು ಇಮ್ಯುನಿಲಾಜಿಸ್ಟ್ ಸತ್ಯಜೀತ್ ರಥ್ ಹೇಳಿದ್ದಾರೆ.


ಇದನ್ನೂ ಓದಿ: ಭಾರತದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಬಳಕೆಗೆ ಹಸಿರು ನಿಶಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...