Homeಮುಖಪುಟಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಮಿಸ್ಸಿಂಗ್!: ವಿಜ್ಞಾನಿಗಳ ಕಳವಳ

ಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಮಿಸ್ಸಿಂಗ್!: ವಿಜ್ಞಾನಿಗಳ ಕಳವಳ

ಸ್ವತಂತ್ರವಾಗಿ ಕೆಲಸ ಮಾಡುತ್ತಿರುವ ಹಲವು ವಿಜ್ಞಾನಿಗಳು ಕೋವಿಡ್ ಲಸಿಕೆಯ ಮೂರನೇ ಹಂತದ ಪ್ರಯೋಗದ ದತ್ತಾಂಶ ಲಭ್ಯವಿರದಿದ್ದರೂ, ಲಸಿಕೆ ಪ್ರಯೋಗಕ್ಕೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಕೋವಿಡ್ ಟಾಸ್ಕ್ ಫೋರ್ಸ್‌ನ ಸದಸ್ಯರು ಕೋವಿಡ್ ಲಸಿಕೆ ಕುರಿತಂತೆ ಈಗ ನೀಡಿರುವ ಸ್ಪಷ್ಟೀಕರಣದ ಪ್ರಕಾರ, ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಅನ್ನು ‘ಕ್ಲಿನಿಕಲ್ ಟ್ರಯಲ್’ ಮೋಡ್’ನಲ್ಲಿ ಬಳಸಬಹುದಾಗಿದೆ. ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ‘ಲಸಿಕೆಯ ಸುರಕ್ಷತೆಯ ಕಾರ್ಯತಂತ್ರದ ಭಾಗವಾಗಿ ಕೊವ್ಯಾಕ್ಸಿನ್ ಅನ್ನು ತುರ್ತು ಬಳಕೆಗೆ ಅನುಮೋದಿಸಲಾಗಿದೆ’ ಎಂದಿದ್ದಾರೆ.

ಆದರೆ, ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿರುವ ಹಲವಾರು ವಿಜ್ಞಾನಿಗಳು, ಮೊದಲ ಮತ್ತು ಎರಡನೇ ಹಂತದ ಟ್ರಯಲ್‌ಗಳು ಉತ್ತೇಜನಾಕಾರಿಯಾಗಿದ್ದವು, ಆದರೆ ನವೆಂಬರ್‌ನಲ್ಲಿ ಆರಂಭವಾದ ಮೂರನೆ ಹಂತದ ಟ್ರಯಲ್‌ನ ಪರಿಣಾಮಕಾರಿತ್ವ ದತ್ತಾಂಶ (efficacy data) ಲಭ್ಯವಾಗುವ ಮೊದಲೇ ಲಸಿಕೆ ಬಳಕೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸುತ್ತಿದ್ದಾರೆ.

‘ಭಾರತದ ಪ್ರಧಾನ ಔಷಧ ನಿಯಂತ್ರಕ ಸಂಸ್ಥೆ ಸೆಪ್ಟೆಂಬರ್‌ನಲ್ಲಿ ಬಿಡುಗಡೆ ಮಾಡಿದ ಮಾರ್ಗಸೂಚಿ ಪ್ರಕಾರ, ಯಾವುದೇ ಲಸಿಕೆ ಬಳಕೆಗೆ ಅನುಮತಿ ನೀಡಲು ಸುರಕ್ಷತಾ ಮತ್ತು ಪರಿಣಾಮಕಾರಿತ್ವ ದತ್ತಾಂಶ ಅಗತ್ಯವಾಗಿದೆ. ಸುರಕ್ಷತಾ ದತ್ತಾಂಶಕ್ಕೆ ಕನಿಷ್ಠ ಎರಡು ತಿಂಗಳ ಕಾಲ ಫಾಲೋ ಅಪ್ ಮಾಡಬೇಕು. ಆದರೆ ಅದು ಇಲ್ಲಿ ಆಗಿಲ್ಲ’ ಎಂದು ಲಸಿಕಾ ತಜ್ಞ ಮತ್ತು ಕ್ರಿಶ್ಚಿಯನ್ ಮೆಡಿಕಲ್ ಕಾಲೇಜ್ ಪ್ರೊಫೆಸರ್ ಡಾ. ಗಗನದಿಪ್ ಕಂಗ್ ಹೇಳುತ್ತಾರೆ.

‘ಕೊವ್ಯಾಕ್ಸಿನ್ ವಿಷಯದಲ್ಲಿ, ಸ್ವಯಂಸೇವಕರ ಭರ್ತಿಯೇ ಮುಗಿದಿಲ್ಲ. ಔಷಧ ನಿಯಂತ್ರಕರು ಕೇಳಿದ್ದ ಸುರಕ್ಷತಾ ದತ್ತಾಂಶವನ್ನು ಎಲ್ಲಿಂದ ತರುತ್ತೀರಿ? ನಿಸ್ಸಂಶವಾಯವಾಗಿ ಯಾವುದೇ ಪರಿಣಾಮಕಾರಿತ್ವ ದತ್ತಾಂಶವೂ ಲಭ್ಯ ಇಲ್ಲ’ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವೈರಲಾಜಿಸ್ಟ್ ಶಹೀದ್ ಜಮೀಲ್, ‘ತುರ್ತು ಬಳಕೆಗೆ ಅನುಮತಿ ನೀಡಲೂ ಕೂಡ ಪರಿಣಾಮಕಾರಿತ್ವ ದತ್ತಾಂಶ ಅಗತ್ಯ. ಈ ಉತ್ಪನ್ನಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯನ್ನೂ ಪ್ರವೇಶಿಸುತ್ತವೆ. ನಮ್ಮ ನಿಯಂತ್ರಕ ಸಂಸ್ಥೆಗಳು ವಿಶ್ವಾಸವನ್ನು ಉಳಿಸಿಕೊಳ್ಳಬೇಕು’ ಎಂದು ಅಭಿಪ್ರಾಯ ಪಡುತ್ತಾರೆ.

ಏಮ್ಸ್ (ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ನಿರ್ದೇಶಕ ಮತ್ತು ರಾಷ್ಟ್ರೀಯ ಕೋವಿಡ್ ಟಾಸ್ಕ್ ಫೋರ್ಸ್ ಸದಸ್ಯ ರಣದೀಪ್ ಗುಲೇರಿಯಾ, ‘ಕೊವ್ಯಾಕ್ಸಿನ ತುರ್ತು ಬಳಕೆಗೆ ಅನುಮತಿ ನೀಡಿದ್ದು ಏಕೆಂದರೆ, ಆಕಸ್ಮಾತ್ ಪಾಸಿಟಿವ್ ಕೇಸುಗಳ ಸಂಖ್ಯೆ ಹೆಚ್ಚಾದಲ್ಲಿ ಮತ್ತು ಆಕ್ಸ್‌ಫರ್ಡ್‌ ಲಸಿಕೆಯ ಕೊರತೆಯಾದಲ್ಲಿ ಕೊವಾಕ್ಷಿನ್ ಅನ್ನು ‘ಕ್ಲಿನಿಕಲ್ ಟ್ರಯಲ್ ಮೋಡ್’ನಲ್ಲಿ ಬಳಸಬಹುದು ಎಂಬ ಕಾರಣಕ್ಕಾಗಿ’ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

’50 ಮಿಲಿಯನ್ ಡೋಸ್ ಲಸಿಕೆ ಸಿದ್ಧ ಎಂದು ಸೀರಮ್ ಸಂಸ್ಥೇ ಹೇಳಿದೆ. ಹಾಗಾಗಿ ಬಯೋಟೆಕ್‌ನ ಕೊವಾಕ್ಸಿನ್ 3ನೆ ಹಂತ ಮುಗಿಸುವವರೆಗೂ ಕಾಯಬೇಕಿತ್ತು’ ಎಂದು ವೈರಾಲಜಿಸ್ಟ್ ಶಮೀದ್ ಜಮೀಲ್ ಪ್ರಶ್ನಿಸಿದ್ದಾರೆ.

‘ನೀತಿ ನಿರೂಪಣೆಯ ಮಟ್ಟದಲ್ಲಿ ಮತ್ತು ನಿಯಂತ್ರಕ ಮಟ್ಟದಲ್ಲಿ ಸಮಸ್ಯೆಯಿದೆ. ಲಸಿಕೆಗೆ ಅನುಮತಿ ನೀಡುವ ಪ್ರಕ್ರಿಯೆಯಲ್ಲಿ ಹಲವಾರು ಸಮಸ್ಯೆಗಳಿವೆ. ಈಗ ನಡೆಯುತ್ತಿರುವುದು ಜನರು ನಿಯಂತ್ರಕ ವ್ಯವಸ್ಥೆಯ ಮೇಲೆ ವಿಶ್ವಾಸ ಕಳೆದುಕೊಳ್ಳುವಂತೆ ಮಾಡಲಿದೆ’ ಎಂದು ಇಮ್ಯುನಿಲಾಜಿಸ್ಟ್ ಸತ್ಯಜೀತ್ ರಥ್ ಹೇಳಿದ್ದಾರೆ.


ಇದನ್ನೂ ಓದಿ: ಭಾರತದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಬಳಕೆಗೆ ಹಸಿರು ನಿಶಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...