Homeಮುಖಪುಟಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಮಿಸ್ಸಿಂಗ್!: ವಿಜ್ಞಾನಿಗಳ ಕಳವಳ

ಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಮಿಸ್ಸಿಂಗ್!: ವಿಜ್ಞಾನಿಗಳ ಕಳವಳ

ಸ್ವತಂತ್ರವಾಗಿ ಕೆಲಸ ಮಾಡುತ್ತಿರುವ ಹಲವು ವಿಜ್ಞಾನಿಗಳು ಕೋವಿಡ್ ಲಸಿಕೆಯ ಮೂರನೇ ಹಂತದ ಪ್ರಯೋಗದ ದತ್ತಾಂಶ ಲಭ್ಯವಿರದಿದ್ದರೂ, ಲಸಿಕೆ ಪ್ರಯೋಗಕ್ಕೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಕೋವಿಡ್ ಟಾಸ್ಕ್ ಫೋರ್ಸ್‌ನ ಸದಸ್ಯರು ಕೋವಿಡ್ ಲಸಿಕೆ ಕುರಿತಂತೆ ಈಗ ನೀಡಿರುವ ಸ್ಪಷ್ಟೀಕರಣದ ಪ್ರಕಾರ, ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಅನ್ನು ‘ಕ್ಲಿನಿಕಲ್ ಟ್ರಯಲ್’ ಮೋಡ್’ನಲ್ಲಿ ಬಳಸಬಹುದಾಗಿದೆ. ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ‘ಲಸಿಕೆಯ ಸುರಕ್ಷತೆಯ ಕಾರ್ಯತಂತ್ರದ ಭಾಗವಾಗಿ ಕೊವ್ಯಾಕ್ಸಿನ್ ಅನ್ನು ತುರ್ತು ಬಳಕೆಗೆ ಅನುಮೋದಿಸಲಾಗಿದೆ’ ಎಂದಿದ್ದಾರೆ.

ಆದರೆ, ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿರುವ ಹಲವಾರು ವಿಜ್ಞಾನಿಗಳು, ಮೊದಲ ಮತ್ತು ಎರಡನೇ ಹಂತದ ಟ್ರಯಲ್‌ಗಳು ಉತ್ತೇಜನಾಕಾರಿಯಾಗಿದ್ದವು, ಆದರೆ ನವೆಂಬರ್‌ನಲ್ಲಿ ಆರಂಭವಾದ ಮೂರನೆ ಹಂತದ ಟ್ರಯಲ್‌ನ ಪರಿಣಾಮಕಾರಿತ್ವ ದತ್ತಾಂಶ (efficacy data) ಲಭ್ಯವಾಗುವ ಮೊದಲೇ ಲಸಿಕೆ ಬಳಕೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸುತ್ತಿದ್ದಾರೆ.

‘ಭಾರತದ ಪ್ರಧಾನ ಔಷಧ ನಿಯಂತ್ರಕ ಸಂಸ್ಥೆ ಸೆಪ್ಟೆಂಬರ್‌ನಲ್ಲಿ ಬಿಡುಗಡೆ ಮಾಡಿದ ಮಾರ್ಗಸೂಚಿ ಪ್ರಕಾರ, ಯಾವುದೇ ಲಸಿಕೆ ಬಳಕೆಗೆ ಅನುಮತಿ ನೀಡಲು ಸುರಕ್ಷತಾ ಮತ್ತು ಪರಿಣಾಮಕಾರಿತ್ವ ದತ್ತಾಂಶ ಅಗತ್ಯವಾಗಿದೆ. ಸುರಕ್ಷತಾ ದತ್ತಾಂಶಕ್ಕೆ ಕನಿಷ್ಠ ಎರಡು ತಿಂಗಳ ಕಾಲ ಫಾಲೋ ಅಪ್ ಮಾಡಬೇಕು. ಆದರೆ ಅದು ಇಲ್ಲಿ ಆಗಿಲ್ಲ’ ಎಂದು ಲಸಿಕಾ ತಜ್ಞ ಮತ್ತು ಕ್ರಿಶ್ಚಿಯನ್ ಮೆಡಿಕಲ್ ಕಾಲೇಜ್ ಪ್ರೊಫೆಸರ್ ಡಾ. ಗಗನದಿಪ್ ಕಂಗ್ ಹೇಳುತ್ತಾರೆ.

‘ಕೊವ್ಯಾಕ್ಸಿನ್ ವಿಷಯದಲ್ಲಿ, ಸ್ವಯಂಸೇವಕರ ಭರ್ತಿಯೇ ಮುಗಿದಿಲ್ಲ. ಔಷಧ ನಿಯಂತ್ರಕರು ಕೇಳಿದ್ದ ಸುರಕ್ಷತಾ ದತ್ತಾಂಶವನ್ನು ಎಲ್ಲಿಂದ ತರುತ್ತೀರಿ? ನಿಸ್ಸಂಶವಾಯವಾಗಿ ಯಾವುದೇ ಪರಿಣಾಮಕಾರಿತ್ವ ದತ್ತಾಂಶವೂ ಲಭ್ಯ ಇಲ್ಲ’ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವೈರಲಾಜಿಸ್ಟ್ ಶಹೀದ್ ಜಮೀಲ್, ‘ತುರ್ತು ಬಳಕೆಗೆ ಅನುಮತಿ ನೀಡಲೂ ಕೂಡ ಪರಿಣಾಮಕಾರಿತ್ವ ದತ್ತಾಂಶ ಅಗತ್ಯ. ಈ ಉತ್ಪನ್ನಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯನ್ನೂ ಪ್ರವೇಶಿಸುತ್ತವೆ. ನಮ್ಮ ನಿಯಂತ್ರಕ ಸಂಸ್ಥೆಗಳು ವಿಶ್ವಾಸವನ್ನು ಉಳಿಸಿಕೊಳ್ಳಬೇಕು’ ಎಂದು ಅಭಿಪ್ರಾಯ ಪಡುತ್ತಾರೆ.

ಏಮ್ಸ್ (ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ನಿರ್ದೇಶಕ ಮತ್ತು ರಾಷ್ಟ್ರೀಯ ಕೋವಿಡ್ ಟಾಸ್ಕ್ ಫೋರ್ಸ್ ಸದಸ್ಯ ರಣದೀಪ್ ಗುಲೇರಿಯಾ, ‘ಕೊವ್ಯಾಕ್ಸಿನ ತುರ್ತು ಬಳಕೆಗೆ ಅನುಮತಿ ನೀಡಿದ್ದು ಏಕೆಂದರೆ, ಆಕಸ್ಮಾತ್ ಪಾಸಿಟಿವ್ ಕೇಸುಗಳ ಸಂಖ್ಯೆ ಹೆಚ್ಚಾದಲ್ಲಿ ಮತ್ತು ಆಕ್ಸ್‌ಫರ್ಡ್‌ ಲಸಿಕೆಯ ಕೊರತೆಯಾದಲ್ಲಿ ಕೊವಾಕ್ಷಿನ್ ಅನ್ನು ‘ಕ್ಲಿನಿಕಲ್ ಟ್ರಯಲ್ ಮೋಡ್’ನಲ್ಲಿ ಬಳಸಬಹುದು ಎಂಬ ಕಾರಣಕ್ಕಾಗಿ’ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

’50 ಮಿಲಿಯನ್ ಡೋಸ್ ಲಸಿಕೆ ಸಿದ್ಧ ಎಂದು ಸೀರಮ್ ಸಂಸ್ಥೇ ಹೇಳಿದೆ. ಹಾಗಾಗಿ ಬಯೋಟೆಕ್‌ನ ಕೊವಾಕ್ಸಿನ್ 3ನೆ ಹಂತ ಮುಗಿಸುವವರೆಗೂ ಕಾಯಬೇಕಿತ್ತು’ ಎಂದು ವೈರಾಲಜಿಸ್ಟ್ ಶಮೀದ್ ಜಮೀಲ್ ಪ್ರಶ್ನಿಸಿದ್ದಾರೆ.

‘ನೀತಿ ನಿರೂಪಣೆಯ ಮಟ್ಟದಲ್ಲಿ ಮತ್ತು ನಿಯಂತ್ರಕ ಮಟ್ಟದಲ್ಲಿ ಸಮಸ್ಯೆಯಿದೆ. ಲಸಿಕೆಗೆ ಅನುಮತಿ ನೀಡುವ ಪ್ರಕ್ರಿಯೆಯಲ್ಲಿ ಹಲವಾರು ಸಮಸ್ಯೆಗಳಿವೆ. ಈಗ ನಡೆಯುತ್ತಿರುವುದು ಜನರು ನಿಯಂತ್ರಕ ವ್ಯವಸ್ಥೆಯ ಮೇಲೆ ವಿಶ್ವಾಸ ಕಳೆದುಕೊಳ್ಳುವಂತೆ ಮಾಡಲಿದೆ’ ಎಂದು ಇಮ್ಯುನಿಲಾಜಿಸ್ಟ್ ಸತ್ಯಜೀತ್ ರಥ್ ಹೇಳಿದ್ದಾರೆ.


ಇದನ್ನೂ ಓದಿ: ಭಾರತದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಬಳಕೆಗೆ ಹಸಿರು ನಿಶಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...