Homeಮುಖಪುಟ'ಲಾಪತಾ ಲೇಡಿಸ್' | ಆಸ್ಕರ್ 2025 ಅಂಗಳಕ್ಕೆ ಕಿರಣ್ ರಾವ್ ನಿರ್ದೇಶನದ ಚಿತ್ರ

‘ಲಾಪತಾ ಲೇಡಿಸ್’ | ಆಸ್ಕರ್ 2025 ಅಂಗಳಕ್ಕೆ ಕಿರಣ್ ರಾವ್ ನಿರ್ದೇಶನದ ಚಿತ್ರ

- Advertisement -
- Advertisement -

ಸೂಕ್ಷ್ಮವಾದ ವಿಚಾರಗಳನ್ನು ಸರಳವಾಗಿ ಹೇಳುವ ಮೂಲಕ ಪ್ರೇಕ್ಷಕರ ಹೃದಯವನ್ನು ಗೆದ್ದ ಕಿರಣ್ ರಾವ್ ನಿರ್ದೇಶನದ ‘ಲಾಪತಾ ಲೇಡಿಸ್’ ಪ್ರತಿಷ್ಠಿತ ಆಸ್ಕರ್‌ ಸ್ಪರ್ಧೆಗೆ ಆಯ್ಕೆಯಾಗಿದೆ. ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಆಸ್ಕರ್ 2025 ಗೆ ಭಾರತದ ಅಧಿಕೃತ ಪ್ರವೇಶ ಎಂದು ಘೋಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜಾನು ಬರುವಾ ನೇತೃತ್ವದ ಆಯ್ಕೆ ಸಮಿತಿಯು ಆಯ್ಕೆ ಪಟ್ಟಿಯಲ್ಲಿ ಇದ್ದ ‘ಅನಿಮಲ್’ ಮತ್ತು ‘ಆಟ್ಟಂ’ ನಂತಹ 29 ಪ್ರತಿಸ್ಪರ್ಧಿಗಳಲ್ಲಿ ‘ಲಾಪತಾ ಲೇಡಿಸ್’ ಚಿತ್ರವನ್ನು ಆಸ್ಕರ್‌ ಅಂಗಳದಲ್ಲಿ ಇಟ್ಟಿದೆ. ತಮ್ಮ ಚಿತ್ರವು ಆಸ್ಕರ್‌ಗೆ ಆಯ್ಕೆಯಾಗಿರುವ ಬಗ್ಗೆ ಪಿಟಿಐಗೆ ಪ್ರತಿಕ್ರಿಯೆ ನೀಡಿರುವ ನಿರ್ದೇಶಕಿ ಕಿರಣ್ ರಾವ್ ಅವರು, ಬಹುದಿನದ ಕನಸು ನನಸಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

‘ಲಾಪತಾ ಲೇಡಿಸ್’

ಕಿರಣ್ ರಾವ್ ಅವರು ನಿರ್ದೇಶಿಸಿರುವ ಈ ಚಿತ್ರವನ್ನು ಅವರ ಮಾಜಿ ಪತಿ, ಸೂಪರ್‌ಸ್ಟಾರ್ ಅಮೀರ್ ಖಾನ್ ಅವರು ನಿರ್ಮಿಸಿದ್ದಾರೆ. ಚಿತ್ರವು ಭಾರತದ ಗ್ರಾಮೀಣ ಭಾಗದಲ್ಲಿ ಇರುವ ಪುರುಷಪ್ರಧಾನ ಸಮಾಜದ ಕತೆಯನ್ನು ಹೇಳುತ್ತದೆ. ಸ್ತ್ರೀ ಸಬಲೀಕರಣದ ಕುರಿತು ಹೃದಯಸ್ಪರ್ಶಿ ಸಂದೇಶವನ್ನು ನೀಡುವ ಚಿತ್ರವನ್ನು ನವಿರಾಗಿ ನಿರೂಪಿಸಲಾಗಿದೆ. ಕೃತಿಯು ಆರ್ಟ್‌ ಮಾದರಿಯಲ್ಲಿದ್ದರೂ ಕಮರ್ಶಿಯಲ್ ಆಗಿ ಗೆದ್ದಿದೆ.

ಇದನ್ನೂಓದಿ: ‘ನನ್ನ ಪರಿಸ್ಥಿತಿ ರಾಮನ ಅನುಪಸ್ಥಿತಿಯ ಭರತನಂತಿದೆ..’ ಎಂದ ದೆಹಲಿ ನೂತನ ಮುಖ್ಯಮಂತ್ರಿ ಅತಿಶಿ

ಈಗಷ್ಟೆ ಮದುವೆ ಮುಗಿಸಿದ ಜೋಡಿಗಳು ರೈಲಿನಲ್ಲಿ ಪ್ರಯಾಣಿಸುತ್ತದೆ. ಆದರೆ ರೈಲು ತುಂಬಾ ನವವಿವಾಹಿತರ ಹಲವು ಜೋಡಿಗಳು ತುಂಬಿದ್ದು, ಆಕಸ್ಮಿಕವಾಗಿ ನಾಯಕ ತನ್ನ ವಧುವಿನ ಬದಲಿಗೆ ಬೇರೊಂದು ವಧುವನ್ನು ತನ್ನ ಜೊತೆಗೆ ಕರೆದುಕೊಂಡು ಹೋಗುತ್ತಾರೆ. ಅಲ್ಲಿಂದ ಚಿತ್ರವೂ ಗ್ರಾಮೀಣ ಭಾರತದ ಅದರಲ್ಲೂ ಉತ್ತರ ಭಾರತದ ಪರಿಸ್ಥಿತಿಯನ್ನು ಚಿತ್ರವೂ ಒಂದೊಂದಾಗಿ ಮುಂದಿಡುತ್ತಾ ಹೋಗುತ್ತದೆ.

ಈ ಹಿಂದೆ ಚಿತ್ರ 48 ನೇ ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (TIFF) ಪ್ರದರ್ಶಿಸಲಾಯಿತು. ಬಿಡುಗಡೆಯ ನಂತರ, ತನ್ನ ಚಿತ್ರಕಥೆ ಮತ್ತು ಪ್ರಮುಖ ಪಾತ್ರದಾರಿಗಳ ನಟನೆಗೆ ವಿಮರ್ಶಕರಿಂದ ಭಾರಿ ಮೆಚ್ಚುಗೆಯ ವಿಮರ್ಶೆಗಳನ್ನು ಗಳಿಸಿತ್ತು. ಏಪ್ರಿಲ್ 26 ರಂದು ಚಿತ್ರವು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಗೊಂಡಿದೆ. ಅಲ್ಲಿ ಚಿತ್ರವನ್ನು ವೀಕ್ಷಿಸಬಹುದಾಗಿದೆ.

ಚಿತ್ರದಲ್ಲಿ ಸ್ಪರ್ಶ ಶ್ರೀವಾಸ್ತವ ಜೊತೆಗೆ ನಿತಾಂಶಿ ಗೋಯೆಲ್, ಪ್ರತಿಭಾ ರಂತ, ಛಾಯಾ ಕದಮ್ ಮತ್ತು ರವಿ ಕಿಶನ್ ನಟಿಸಿದ್ದಾರೆ. ಬಿಪ್ಲಬ್ ಗೋಸ್ವಾಮಿ ಅವರ ‘ಟೂ ಬ್ರೈಡ್ಸ್’ ಚಿತ್ರಕಥೆಯನ್ನು ಆಧರಿಸಿದೆ.

ವಿಡಿಯೊ ನೋಡಿ: ಓ ನನ್ನ ಚೇತನ, ಆಗು ನೀ ಅನಿಕೇತನ.. ಕುವೆಂಪು ಹಾಡಿಗೆ ಭಾವತುಂಬಿದ ಜೀವಪರರು O nanna chethana

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...