Homeಕರ್ನಾಟಕಪತ್ನಿಯನ್ನು ಕೊಲೆಗೈದ ಸುಳ್ಳು ಆರೋಪ: 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್ 'ಗೌರವಯುತ' ಖುಲಾಸೆ

ಪತ್ನಿಯನ್ನು ಕೊಲೆಗೈದ ಸುಳ್ಳು ಆರೋಪ: 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್ ‘ಗೌರವಯುತ’ ಖುಲಾಸೆ

- Advertisement -
- Advertisement -

ಪತ್ನಿಯನ್ನು ಕೊಲೆ ಮಾಡಿದ್ದಾರೆ ಎಂಬ ಸುಳ್ಳು ಆರೋಪದ ಮೇಲೆ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಬಸವನಹಳ್ಳಿ ನಿವಾಸಿ ಸುರೇಶ್‌ ಅವರನ್ನು ಮೈಸೂರಿನ 5ನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಲಯವು ‘ನಿರಪರಾಧಿ’ ಎಂದು ಘೋಷಿಸಿ ಬುಧವಾರ (ಏ.23) ‘ಗೌರವಯುತವಾಗಿ’ ಖುಸಲಾಸೆಗೊಳಿಸಿದೆ.

ಸುರೇಶ್ ಅವರ ಪತ್ನಿ ಮಲ್ಲಿಗೆ 2021ರಲ್ಲಿ ನಾಪತ್ತೆಯಾಗಿದ್ದರು. ಅವರನ್ನು ಸುರೇಶ್ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದ ಪೊಲೀಸರು, ಸುರೇಶ್ ಮೇಲೆ ಎಫ್‌ಐಆರ್ ದಾಖಲಿಸಿ ಬಂಧಿಸಿದ್ದರು. ಸುರೇಶ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಮೈಸೂರು ಜಿಲ್ಲಾ ನ್ಯಾಯಾಲಯ ಸುರೇಶ್ ಅವರಿಗೆ ಜೈಲು ಶಿಕ್ಷೆ ವಿಧಿಸಿತ್ತು. ಎರಡು ವರ್ಷ ಜೈಲಿನಲ್ಲಿದ್ದ ಸುರೇಶ್ 2023ರಲ್ಲಿ ಜಾಮೀನಿನ ಮೂಲಕ ಬಿಡುಗಡೆಗೊಂಡಿದ್ದರು.

ತಪ್ಪು ಮಾಡದೆ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್, ನಾಪತ್ತೆಯಾದ ತನ್ನ ಪತ್ನಿಯ ಕುರಿತು ಮಾಹಿತಿ ಕಲೆ ಹಾಕಲು ಮುಂದಾಗಿದ್ದರು. ಆಕೆಗಾಗಿ ಹುಡುಕಾಟ ನಡೆಸುತ್ತಿದ್ದರು. ಈ ನಡುವೆ 2025ರ ಏಪ್ರಿಲ್ 1ರಂದು ಸುರೇಶ್ ಅವರ ಪತ್ನಿ ಮಲ್ಲಿಗೆ ಮಡಿಕೇರಿಯ ಹೋಟೆಲ್ ಒಂದರಲ್ಲಿ ಪ್ರಿಯಕರ ಗಣೇಶ್ ಜೊತೆ ಪತ್ತೆಯಾಗಿದ್ದಾರೆ. ಈ ವಿಚಾರವನ್ನು ವಕೀಲರ ಮೂಲಕ ಸುರೇಶ್ ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ನ್ಯಾಯಾಲಯದ ಆದೇಶದಂತೆ ಗಣೇಶ್‌ ಜೊತೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ದೇವಾಲಯಕ್ಕೆ ತೆರಳುತ್ತಿದ್ದಾಗ ಮಡಿಕೇರಿ ಪೊಲೀಸರು ಮಲ್ಲಿಗೆಯನ್ನು ವಶಕ್ಕೆ ಪಡೆದು, ಕುಶಾಲನಗರ ಪೊಲೀಸರಿಗೆ ಒಪ್ಪಿಸಿದ್ದರು. ಪೊಲೀಸರು ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಮೈಸೂರು ಜಿಲ್ಲಾ ಸೆಷನ್ಸ್‌ ನ್ಯಾಯಾಲವು ಪ್ರಕರಣದ ಕುರಿತು 15 ದಿನಗಳೊಳಗೆ ವಿವರಣೆ ನೀಡುವಂತೆ ಕೊಡಗು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಸೂಚಿಸಿತ್ತು. ಪೊಲೀಸ್ ವರಿಷ್ಠಾಧಿಕಾರಿಯ ವಿಚಾರಣಾ ವರದಿಯನ್ನು ಬೈಲುಕುಪ್ಪೆ ವೃತ್ತ ನಿರೀಕ್ಷಕ ದೀಪಕ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ವಿಚಾರಣೆ ಸಂದರ್ಭದಲ್ಲಿ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಿ.ಜಿ.ಪ್ರಕಾಶ್, ಮಹೇಶ್ ಕುಮಾರ್, ಪ್ರಕಾಶ್ ಎತ್ತಿಮನಿ ಅವರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು, ದೋಷಾರೋಪ ಪಟ್ಟಿಗೆ ಏನು ಆಧಾರವಿದೆ? ಎಂದು ಪ್ರಶ್ನಿಸಿದ್ದರು.

ಸುರೇಶ್ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ ಪಾಂಡು ಪೂಜಾರಿ ಅವರು, ‘ಪೊಲೀಸರು ಉದ್ದೇಶ ಪೂರ್ವಕವಾಗಿ ಬುಡಕಟ್ಟು ಸಮುದಾಯವನ್ನು ಗುರಿಯಾಗಿಸಿ ಸುಳ್ಳು ಕಥೆ ಸೃಷ್ಟಿಸಿದ್ದಾರೆ. ತನಿಖಾಧಿಕಾರಿಗಳ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಲು ನಿರ್ದೇಶನ ನೀಡಬೇಕು’ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ವಾದ ಆಲಿಸಿದ ನ್ಯಾಯಾಧೀಶರು ತೀರ್ಪು ಕಾಯ್ದಿರಿಸಿ, ವಿಚಾರಣೆ ಮುಂದೂಡಿದ್ದರು. ಕಾಯ್ದಿರಿಸಿದ ತೀರ್ಪನ್ನು ಬುಧವಾರ ಪ್ರಕಟಸಲಾಗಿದೆ.

ನ್ಯಾಯಾಲಯದ ತೀರ್ಪು ಏನು?

ಪ್ರಕರಣ ಸಂಬಂಧ, ಪೊಲೀಸ್‌ ದಾಖಲೆಗಳಲ್ಲಿ ಸುರೇಶ್ ಅವರ ಹೆಸರನ್ನು ತೆಗೆದು ಹಾಕುವಂತೆ ಮೈಸೂರಿನ ಬೆಟ್ಟದಪುರ ಪೊಲೀಸರಿಗೆ ನ್ಯಾಯಾಧೀಶ ಗುರುರಾಜ್‌ ಸೋಮಕ್ಕಳವರ್‌ ಸೂಚನೆ ನೀಡಿದ್ದಾರೆ. ಸುರೇಶ್ ಅವರ ಜಾಮೀನು ಬಾಂಡ್‌ ಮತ್ತು ಅವರ ಶ್ಯೂರಿಟಿ ಬಾಂಡ್‌ ಅನ್ನು ರದ್ದುಗೊಳಿಸಲಾಗಿದೆ. ಅವರಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸರ್ಕಾರದ ಗೃಹ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ನ್ಯಾಯಾಲಯ ಸೂಚಿಸಿದೆ.

ಪ್ರಕರಣದ ತನಿಖಾಧಿಕಾರಿಯಾಗಿದ್ದ ಅಂದಿನ ಬೈಲಕುಪ್ಪೆ ಸರ್ಕಲ್‌ ಇನ್‌ಸ್ಪೆಕ್ಟರ್‌ ಬಿ.ಜಿ.ಪ್ರಕಾಶ್ ವಿರುದ್ಧ ಐಪಿಸಿ ಸೆಕ್ಷನ್‌ 193, 195 ರ ಅಡಿ (ಸುಳ್ಳು ಪ್ರಕರಣ ಸೃಷ್ಟಿ, ಸುಳ್ಳು ದೋಷಾರೋಪಣ ಪಟ್ಟಿ ಸಲ್ಲಿಕೆ) ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗೆ ನ್ಯಾಯಾಲಯ ಸೂಚಿಸಿದೆ.

ಪ್ರಕರಣದ ತನಿಖಾ ತಂಡದಲ್ಲಿದ್ದ ಅಂದಿನ ಪ್ರೊಬೆಷನರಿ ಐಪಿಎಸ್‌ ಅಧಿಕಾರಿ ಜಿತೇಂದ್ರ ಕುಮಾರ್‌, ಬೆಟ್ಟದಪುರ ಪಿಎಸ್‌ಐ ಮಹೇಶ್ ಕುಮಾರ್, ಎಸ್‌ಐ ಪ್ರಕಾಶ್ ಯತ್ತಿಮನಿ ವಿರುದ್ಧ ಇಲಾಖಾ ತನಿಖೆ ನಡೆಸಬೇಕು ಎಂದು ಮೈಸೂರು ಐಜಿಪಿಗೆ, ಪ್ರಸ್ತುತ ಪ್ರಕರಣದಲ್ಲಿ ದಾಖಲಾದ ಯುಡಿಆರ್‌ ಕುರಿತು ತನಿಖೆ ನಡೆಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ನ್ಯಾಯಾಲಯ ಆದೇಶಿಸಿದೆ.

ಕುಶಾಲನಗರದ ಮಹಿಳೆ ನಾಪತ್ತೆ…ಮೈಸೂರಿನಲ್ಲಿ ಏಕೆ ಪ್ರಕರಣ?

2021ರ ಜುಲೈನಲ್ಲಿ ಕೊಡಗು ಜಿಲ್ಲೆ ಕುಶಾಲನಗರದ ಬಸವನಹಳ್ಳಿ ಹೊಸ ಬಡಾವಣೆಯ ನಿವಾಸಿ ಮಲ್ಲಿಗೆ ಕಾಣೆಯಾಗಿದ್ದಾರೆಂದು ಪ್ರಕರಣ ದಾಖಲಾಗಿತ್ತು. ಅದೇ ತಿಂಗಳ 18ರಂದು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಠಾಣಾ ವ್ಯಾಪ್ತಿಯ ಶಾನುಭೋಗನಹಳ್ಳಿಯ ಕಾಲುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿತ್ತು. ಅದು ಮಗಳದ್ದೇ ಎಂದು ಮಲ್ಲಿಗೆಯ ತಾಯಿ ಗುರುತಿಸಿದ್ದರು. ಪತಿ ಸುರೇಶ್‌ ಅವರನ್ನು ವಿಚಾರಣೆ ನಡೆಸಿದ ಪೊಲೀಸರು, ಆತ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿರುವುದಾಗಿ ತಿಳಿಸಿ, ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದರು. ತನ್ನ ಪತ್ನಿ ಕಾಣೆಯಾಗಿದ್ದಾರೆ ಎಂದು ಸುರೇಶ್ ಕುಶಾಲನಗರದಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ, ಯಾರದ್ದೋ ಶವವನ್ನು ಸುರೇಶ್ ಅವರ ಪತ್ನಿಯದ್ದೇ ಎಂದು ಬಿಂಬಿಸಿದ್ದ ಮೈಸೂರಿನ ಬೆಟ್ಟದಪುರ ಪೊಲೀಸರು, ಸುರೇಶ್ ಆಕೆಯನ್ನು ಕೊಲೆ ಮಾಡಿದ್ದಾರೆ ಎಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

 ಸುರೇಶ್‌ಗೆ ನ್ಯಾಯ ದೊರಕಿಸಿಕೊಟ್ಟ ವಕೀಲ ಪಾಂಡು ಪೂಜಾರಿ 

ಸುರೇಶ್‌ ಜೈಲಿನಲ್ಲಿದ್ದ ಸಮಯದಲ್ಲಿ ಅವರ ತಂದೆ ಗಾಂಧಿ ವಕೀಲ ಪಾಂಡು ಪೂಜಾರಿ ಅವರನ್ನು ಭೇಟಿಯಾಗಿ ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿ ಮಗನನ್ನು ಜೈಲಿಗೆ ಹಾಕಿರುವ ಬಗ್ಗೆ ತಿಳಿಸಿದ್ದರು. ಪ್ರಕರಣ ಕೈಗೆತ್ತಿಕೊಂಡ ಪಾಂಡು ಪೂಜಾರಿ ಇಲ್ಲಿಯವರೆಗೆ ಸುರೇಶ್‌ ಕುಟುಂಬದಿಂದ ಯಾವುದೇ ಶುಲ್ಕ ಪಡೆಯದೆ ವಾದ ಮಂಡಿಸಿ ನ್ಯಾಯ ದೊರಕಿಸಿಕೊಟ್ಟಿದ್ದಾರೆ ಎಂದು ವರದಿಗಳು ಹೇಳಿವೆ.

ಚಿಕ್ಕಬಳ್ಳಾಪುರ | ಹಾಡಹಗಲೇ ರೈತನಿಗೆ ಗುಂಡಿಕ್ಕಿದ ಗಣಿ ಮಾಲಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...