Homeಕರ್ನಾಟಕಪತ್ನಿಯನ್ನು ಕೊಲೆಗೈದ ಸುಳ್ಳು ಆರೋಪ: 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್ 'ಗೌರವಯುತ' ಖುಲಾಸೆ

ಪತ್ನಿಯನ್ನು ಕೊಲೆಗೈದ ಸುಳ್ಳು ಆರೋಪ: 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್ ‘ಗೌರವಯುತ’ ಖುಲಾಸೆ

- Advertisement -
- Advertisement -

ಪತ್ನಿಯನ್ನು ಕೊಲೆ ಮಾಡಿದ್ದಾರೆ ಎಂಬ ಸುಳ್ಳು ಆರೋಪದ ಮೇಲೆ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಬಸವನಹಳ್ಳಿ ನಿವಾಸಿ ಸುರೇಶ್‌ ಅವರನ್ನು ಮೈಸೂರಿನ 5ನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಲಯವು ‘ನಿರಪರಾಧಿ’ ಎಂದು ಘೋಷಿಸಿ ಬುಧವಾರ (ಏ.23) ‘ಗೌರವಯುತವಾಗಿ’ ಖುಸಲಾಸೆಗೊಳಿಸಿದೆ.

ಸುರೇಶ್ ಅವರ ಪತ್ನಿ ಮಲ್ಲಿಗೆ 2021ರಲ್ಲಿ ನಾಪತ್ತೆಯಾಗಿದ್ದರು. ಅವರನ್ನು ಸುರೇಶ್ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದ ಪೊಲೀಸರು, ಸುರೇಶ್ ಮೇಲೆ ಎಫ್‌ಐಆರ್ ದಾಖಲಿಸಿ ಬಂಧಿಸಿದ್ದರು. ಸುರೇಶ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಮೈಸೂರು ಜಿಲ್ಲಾ ನ್ಯಾಯಾಲಯ ಸುರೇಶ್ ಅವರಿಗೆ ಜೈಲು ಶಿಕ್ಷೆ ವಿಧಿಸಿತ್ತು. ಎರಡು ವರ್ಷ ಜೈಲಿನಲ್ಲಿದ್ದ ಸುರೇಶ್ 2023ರಲ್ಲಿ ಜಾಮೀನಿನ ಮೂಲಕ ಬಿಡುಗಡೆಗೊಂಡಿದ್ದರು.

ತಪ್ಪು ಮಾಡದೆ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್, ನಾಪತ್ತೆಯಾದ ತನ್ನ ಪತ್ನಿಯ ಕುರಿತು ಮಾಹಿತಿ ಕಲೆ ಹಾಕಲು ಮುಂದಾಗಿದ್ದರು. ಆಕೆಗಾಗಿ ಹುಡುಕಾಟ ನಡೆಸುತ್ತಿದ್ದರು. ಈ ನಡುವೆ 2025ರ ಏಪ್ರಿಲ್ 1ರಂದು ಸುರೇಶ್ ಅವರ ಪತ್ನಿ ಮಲ್ಲಿಗೆ ಮಡಿಕೇರಿಯ ಹೋಟೆಲ್ ಒಂದರಲ್ಲಿ ಪ್ರಿಯಕರ ಗಣೇಶ್ ಜೊತೆ ಪತ್ತೆಯಾಗಿದ್ದಾರೆ. ಈ ವಿಚಾರವನ್ನು ವಕೀಲರ ಮೂಲಕ ಸುರೇಶ್ ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ನ್ಯಾಯಾಲಯದ ಆದೇಶದಂತೆ ಗಣೇಶ್‌ ಜೊತೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ದೇವಾಲಯಕ್ಕೆ ತೆರಳುತ್ತಿದ್ದಾಗ ಮಡಿಕೇರಿ ಪೊಲೀಸರು ಮಲ್ಲಿಗೆಯನ್ನು ವಶಕ್ಕೆ ಪಡೆದು, ಕುಶಾಲನಗರ ಪೊಲೀಸರಿಗೆ ಒಪ್ಪಿಸಿದ್ದರು. ಪೊಲೀಸರು ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಮೈಸೂರು ಜಿಲ್ಲಾ ಸೆಷನ್ಸ್‌ ನ್ಯಾಯಾಲವು ಪ್ರಕರಣದ ಕುರಿತು 15 ದಿನಗಳೊಳಗೆ ವಿವರಣೆ ನೀಡುವಂತೆ ಕೊಡಗು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಸೂಚಿಸಿತ್ತು. ಪೊಲೀಸ್ ವರಿಷ್ಠಾಧಿಕಾರಿಯ ವಿಚಾರಣಾ ವರದಿಯನ್ನು ಬೈಲುಕುಪ್ಪೆ ವೃತ್ತ ನಿರೀಕ್ಷಕ ದೀಪಕ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ವಿಚಾರಣೆ ಸಂದರ್ಭದಲ್ಲಿ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಿ.ಜಿ.ಪ್ರಕಾಶ್, ಮಹೇಶ್ ಕುಮಾರ್, ಪ್ರಕಾಶ್ ಎತ್ತಿಮನಿ ಅವರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು, ದೋಷಾರೋಪ ಪಟ್ಟಿಗೆ ಏನು ಆಧಾರವಿದೆ? ಎಂದು ಪ್ರಶ್ನಿಸಿದ್ದರು.

ಸುರೇಶ್ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ ಪಾಂಡು ಪೂಜಾರಿ ಅವರು, ‘ಪೊಲೀಸರು ಉದ್ದೇಶ ಪೂರ್ವಕವಾಗಿ ಬುಡಕಟ್ಟು ಸಮುದಾಯವನ್ನು ಗುರಿಯಾಗಿಸಿ ಸುಳ್ಳು ಕಥೆ ಸೃಷ್ಟಿಸಿದ್ದಾರೆ. ತನಿಖಾಧಿಕಾರಿಗಳ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಲು ನಿರ್ದೇಶನ ನೀಡಬೇಕು’ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ವಾದ ಆಲಿಸಿದ ನ್ಯಾಯಾಧೀಶರು ತೀರ್ಪು ಕಾಯ್ದಿರಿಸಿ, ವಿಚಾರಣೆ ಮುಂದೂಡಿದ್ದರು. ಕಾಯ್ದಿರಿಸಿದ ತೀರ್ಪನ್ನು ಬುಧವಾರ ಪ್ರಕಟಸಲಾಗಿದೆ.

ನ್ಯಾಯಾಲಯದ ತೀರ್ಪು ಏನು?

ಪ್ರಕರಣ ಸಂಬಂಧ, ಪೊಲೀಸ್‌ ದಾಖಲೆಗಳಲ್ಲಿ ಸುರೇಶ್ ಅವರ ಹೆಸರನ್ನು ತೆಗೆದು ಹಾಕುವಂತೆ ಮೈಸೂರಿನ ಬೆಟ್ಟದಪುರ ಪೊಲೀಸರಿಗೆ ನ್ಯಾಯಾಧೀಶ ಗುರುರಾಜ್‌ ಸೋಮಕ್ಕಳವರ್‌ ಸೂಚನೆ ನೀಡಿದ್ದಾರೆ. ಸುರೇಶ್ ಅವರ ಜಾಮೀನು ಬಾಂಡ್‌ ಮತ್ತು ಅವರ ಶ್ಯೂರಿಟಿ ಬಾಂಡ್‌ ಅನ್ನು ರದ್ದುಗೊಳಿಸಲಾಗಿದೆ. ಅವರಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸರ್ಕಾರದ ಗೃಹ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ನ್ಯಾಯಾಲಯ ಸೂಚಿಸಿದೆ.

ಪ್ರಕರಣದ ತನಿಖಾಧಿಕಾರಿಯಾಗಿದ್ದ ಅಂದಿನ ಬೈಲಕುಪ್ಪೆ ಸರ್ಕಲ್‌ ಇನ್‌ಸ್ಪೆಕ್ಟರ್‌ ಬಿ.ಜಿ.ಪ್ರಕಾಶ್ ವಿರುದ್ಧ ಐಪಿಸಿ ಸೆಕ್ಷನ್‌ 193, 195 ರ ಅಡಿ (ಸುಳ್ಳು ಪ್ರಕರಣ ಸೃಷ್ಟಿ, ಸುಳ್ಳು ದೋಷಾರೋಪಣ ಪಟ್ಟಿ ಸಲ್ಲಿಕೆ) ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗೆ ನ್ಯಾಯಾಲಯ ಸೂಚಿಸಿದೆ.

ಪ್ರಕರಣದ ತನಿಖಾ ತಂಡದಲ್ಲಿದ್ದ ಅಂದಿನ ಪ್ರೊಬೆಷನರಿ ಐಪಿಎಸ್‌ ಅಧಿಕಾರಿ ಜಿತೇಂದ್ರ ಕುಮಾರ್‌, ಬೆಟ್ಟದಪುರ ಪಿಎಸ್‌ಐ ಮಹೇಶ್ ಕುಮಾರ್, ಎಸ್‌ಐ ಪ್ರಕಾಶ್ ಯತ್ತಿಮನಿ ವಿರುದ್ಧ ಇಲಾಖಾ ತನಿಖೆ ನಡೆಸಬೇಕು ಎಂದು ಮೈಸೂರು ಐಜಿಪಿಗೆ, ಪ್ರಸ್ತುತ ಪ್ರಕರಣದಲ್ಲಿ ದಾಖಲಾದ ಯುಡಿಆರ್‌ ಕುರಿತು ತನಿಖೆ ನಡೆಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ನ್ಯಾಯಾಲಯ ಆದೇಶಿಸಿದೆ.

ಕುಶಾಲನಗರದ ಮಹಿಳೆ ನಾಪತ್ತೆ…ಮೈಸೂರಿನಲ್ಲಿ ಏಕೆ ಪ್ರಕರಣ?

2021ರ ಜುಲೈನಲ್ಲಿ ಕೊಡಗು ಜಿಲ್ಲೆ ಕುಶಾಲನಗರದ ಬಸವನಹಳ್ಳಿ ಹೊಸ ಬಡಾವಣೆಯ ನಿವಾಸಿ ಮಲ್ಲಿಗೆ ಕಾಣೆಯಾಗಿದ್ದಾರೆಂದು ಪ್ರಕರಣ ದಾಖಲಾಗಿತ್ತು. ಅದೇ ತಿಂಗಳ 18ರಂದು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಠಾಣಾ ವ್ಯಾಪ್ತಿಯ ಶಾನುಭೋಗನಹಳ್ಳಿಯ ಕಾಲುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿತ್ತು. ಅದು ಮಗಳದ್ದೇ ಎಂದು ಮಲ್ಲಿಗೆಯ ತಾಯಿ ಗುರುತಿಸಿದ್ದರು. ಪತಿ ಸುರೇಶ್‌ ಅವರನ್ನು ವಿಚಾರಣೆ ನಡೆಸಿದ ಪೊಲೀಸರು, ಆತ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿರುವುದಾಗಿ ತಿಳಿಸಿ, ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದರು. ತನ್ನ ಪತ್ನಿ ಕಾಣೆಯಾಗಿದ್ದಾರೆ ಎಂದು ಸುರೇಶ್ ಕುಶಾಲನಗರದಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ, ಯಾರದ್ದೋ ಶವವನ್ನು ಸುರೇಶ್ ಅವರ ಪತ್ನಿಯದ್ದೇ ಎಂದು ಬಿಂಬಿಸಿದ್ದ ಮೈಸೂರಿನ ಬೆಟ್ಟದಪುರ ಪೊಲೀಸರು, ಸುರೇಶ್ ಆಕೆಯನ್ನು ಕೊಲೆ ಮಾಡಿದ್ದಾರೆ ಎಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

 ಸುರೇಶ್‌ಗೆ ನ್ಯಾಯ ದೊರಕಿಸಿಕೊಟ್ಟ ವಕೀಲ ಪಾಂಡು ಪೂಜಾರಿ 

ಸುರೇಶ್‌ ಜೈಲಿನಲ್ಲಿದ್ದ ಸಮಯದಲ್ಲಿ ಅವರ ತಂದೆ ಗಾಂಧಿ ವಕೀಲ ಪಾಂಡು ಪೂಜಾರಿ ಅವರನ್ನು ಭೇಟಿಯಾಗಿ ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿ ಮಗನನ್ನು ಜೈಲಿಗೆ ಹಾಕಿರುವ ಬಗ್ಗೆ ತಿಳಿಸಿದ್ದರು. ಪ್ರಕರಣ ಕೈಗೆತ್ತಿಕೊಂಡ ಪಾಂಡು ಪೂಜಾರಿ ಇಲ್ಲಿಯವರೆಗೆ ಸುರೇಶ್‌ ಕುಟುಂಬದಿಂದ ಯಾವುದೇ ಶುಲ್ಕ ಪಡೆಯದೆ ವಾದ ಮಂಡಿಸಿ ನ್ಯಾಯ ದೊರಕಿಸಿಕೊಟ್ಟಿದ್ದಾರೆ ಎಂದು ವರದಿಗಳು ಹೇಳಿವೆ.

ಚಿಕ್ಕಬಳ್ಳಾಪುರ | ಹಾಡಹಗಲೇ ರೈತನಿಗೆ ಗುಂಡಿಕ್ಕಿದ ಗಣಿ ಮಾಲಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...