Homeಮುಖಪುಟವಿಶ್ವ ಭಾರತಿ ಕೇಂದ್ರೀಯ ವಿವಿಯ ಉದ್ದೇಶ ಅರ್ಥವಾಗುತ್ತಿಲ್ಲ: ಪ್ಲಾಟ್ ವಿವಾದಕ್ಕೆ ಅಮರ್ತ್ಯ ಸೇನ್‌ ಪ್ರತಿಕ್ರಿಯೆ

ವಿಶ್ವ ಭಾರತಿ ಕೇಂದ್ರೀಯ ವಿವಿಯ ಉದ್ದೇಶ ಅರ್ಥವಾಗುತ್ತಿಲ್ಲ: ಪ್ಲಾಟ್ ವಿವಾದಕ್ಕೆ ಅಮರ್ತ್ಯ ಸೇನ್‌ ಪ್ರತಿಕ್ರಿಯೆ

- Advertisement -
- Advertisement -

ಮೋದಿ ಸರ್ಕಾರದ ಟೀಕಾಕಾರರೂ ಹಾಗೂ ನೊಬೆಲ್‌ ಪ್ರಶಸ್ತಿ ಪುರಸ್ಕೃತರು ಆದ ಅಮರ್ತ್ಯ ಸೇನ್‌, “ವಿಶ್ವಭಾರತಿ ಕೇಂದ್ರೀಯ ವಿವಿಯ ಕ್ಯಾಂಪಸ್‌ನಲ್ಲಿ ಪ್ಲಾಟ್ ಒತ್ತುವರಿ ಮಾಡಿಕೊಂಡಿದ್ದಾರೆ” ಎಂದು ವಿವಿಯ ಆಡಳಿತ ವರ್ಗ ಆರೋಪಿಸಿದೆ. ಇದರ ಹಿನ್ನೆಲೆಯಲ್ಲಿ ಸೇನ್‌ ಪ್ರತಿಕ್ರಿಯಿಸಿದ್ದು, “ವಿಶ್ವವಿದ್ಯಾನಿಲಯದ ಉದ್ದೇಶವೇ ನನಗೆ ಅರ್ಥವಾಗುತ್ತಿಲ್ಲ. ಕೇಂದ್ರೀಯ ವಿವಿಯು ಏಕಾಏಕಿ ಯಾಕಿಷ್ಟು ಸಕ್ರಿಯವಾಗಿದೆ ಎಂಬುದು ತಿಳಿಯುತ್ತಿಲ್ಲ” ಎಂದಿದ್ದಾರೆ.

ಪ್ಲಾಟ್ ಸಂಬಂಧ ವಿಶ್ವವಿದ್ಯಾನಿಲಯದಿಂದ ಪತ್ರ ಬಂದ ಒಂದು ದಿನದ ನಂತರ ಪ್ರತಿಕ್ರಿಯಿಸಿರುವ ಅವರು, “ಈ ಕ್ರಮದ ಹಿಂದಿನ ರಾಜಕೀಯ ನನಗೆ ಅರ್ಥವಾಗುತ್ತಿಲ್ಲ. ಶಾಂತಿನಿಕೇತನ ಕ್ಯಾಂಪಸ್‌ನಲ್ಲಿ ಹೊಂದಿರುವ ಹೆಚ್ಚಿನ ಭೂಮಿಯನ್ನು ನಮ್ಮ ತಂದೆ ಖರೀದಿಸಿದ್ದರು. ಇತರ ಕೆಲವು ಪ್ಲಾಟ್‌ಗಳನ್ನು ಗುತ್ತಿಗೆಗೆ ತೆಗೆದುಕೊಳ್ಳಲಾಗಿದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಇದು 1940ರ ದಶಕದಲ್ಲಿ ವಿಶ್ವಭಾರತಿಯಿಂದ ಗುತ್ತಿಗೆ ಪಡೆದ ಭೂಮಿಯಲ್ಲಿ ನಿರ್ಮಿಸಲಾದ ನನ್ನ ನಿವಾಸವಾಗಿದೆ. ಭೂಮಿಯನ್ನು 100 ವರ್ಷಗಳ ಕಾಲ ನಮಗೆ ಗುತ್ತಿಗೆಗೆ ನೀಡಲಾಯಿತು. ಕೆಲವು ಭೂಮಿಯನ್ನು ನನ್ನ ತಂದೆ ಮಾರುಕಟ್ಟೆಯಿಂದ ಎಲ್ಲಾ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸಿ ಖರೀದಿಸಿದರು” ಎಂದು ಹೇಳಿದ್ದಾರೆ.

“ಈ ವಿಷಯದಲ್ಲಿ ನನ್ನ ಸಮಯವನ್ನು ವ್ಯರ್ಥ ಮಾಡಲು ನನಗೆ ಯಾವುದೇ ಕಾರಣವಿಲ್ಲ. ವಿಶ್ವಭಾರತಿ ಏಕಾಏಕಿ ನನ್ನನ್ನು ಓಡಿಸುವ ಪ್ರಯತ್ನದಲ್ಲಿ ಏಕೆ ಸಕ್ರಿಯವಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ” ಎಂದು ಪ್ರಸ್ತುತ ಶಾಂತಿನಿಕೇತನದಲ್ಲಿರುವ ಸೇನ್ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ವಿಶ್ವ ಭಾರತಿ ವಿಶ್ವವಿದ್ಯಾನಿಲಯವು ಶುಕ್ರವಾರ ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರಿಗೆ ಪತ್ರ ಬರೆದಿದ್ದು, ಬಿರ್ಭುಮ್ ಜಿಲ್ಲೆಯ ಶಾಂತಿನಿಕೇತನದಲ್ಲಿ ಆಕ್ರಮಿಸಿಕೊಂಡಿದ್ದಾರೆ ಎನ್ನಲಾದ ಪ್ಲಾಟ್‌ನ ಭಾಗಗಳನ್ನು ತಕ್ಷಣವೇ ಹಸ್ತಾಂತರಿಸಬೇಕು ಎಂದು ಸೂಚಿಸಿತ್ತು.

“ನೀವು 1.38 ಎಕರೆ ಭೂಮಿಯನ್ನು ಹೊಂದಿದ್ದೀರಿ. ಆದರೆ ಕಾನೂನಾತ್ಮಕವಾಗಿ 1.25 ಎಕರೆಗಿಂತ ಭೂಮಿ ಹೆಚ್ಚಿದೆ” ಎಂದು ವಿಶ್ವವಿದ್ಯಾಲಯದ ಆಡಳಿತವು ಸೇನ್‌ಗೆ ಬರೆದ ಪತ್ರದಲ್ಲಿ ತಿಳಿಸಿತ್ತು.

ಕಳೆದ ಮೂರು ದಿನಗಳಲ್ಲಿ ಭೂಮಿಗೆ ಸಂಬಂಧಿಸಿದಂತೆ ಸೇನ್ ಅವರಿಗೆ ವಿಶ್ವವಿದ್ಯಾಲಯ ಬರೆಯುತ್ತಿರುವ ಎರಡನೇ ಪತ್ರ ಇದಾಗಿದೆ. ಮಂಗಳವಾರ, ವಿಶ್ವ ಭಾರತಿ ವಿಶ್ವವಿದ್ಯಾಲಯವು ಸೇನ್ ಅವರಿಗೆ ನೋಟಿಸ್ ನೀಡಿದ್ದು, ಈ ಜಾಗವು ಅವರ ಕುಟುಂಬ ಒಡೆತನದ ಎಸ್ಟೇಟ್ ಭಾಗವಲ್ಲ ಎಂದು ಹೇಳಿ ಭೂಮಿಯನ್ನು ಹಿಂದಿರುಗಿಸುವಂತೆ ಸೂಚಿಸಿತ್ತು.

ಸಾರ್ವಜನಿಕ ಕೇಂದ್ರೀಯ ವಿಶ್ವವಿದ್ಯಾನಿಲಯವಾದ ವಿಶ್ವ ಭಾರತಿ ತನ್ನ ಆವರಣದೊಳಗೆ ಅಕ್ರಮ ಪ್ಲಾಟ್ ಹೊಂದಿರುವವರ ಪಟ್ಟಿ ಮಾಡಿತ್ತು. ಅದರಲ್ಲಿ ಸೇನ್ ಹೆಸರಿಸಿತ್ತು. ನೊಬೆಲ್ ಪ್ರಶಸ್ತಿ ವಿಜೇತ ಸೇನ್‌ ಶಾಂತಿನಿಕೇತನದಲ್ಲಿ ತಮ್ಮ ಕುಟುಂಬದ ಮನೆಯನ್ನು ಹೊಂದಿದ್ದಾರೆ, ಇದನ್ನು ಅವರ ಅಜ್ಜ ಮತ್ತು ಸಂಸ್ಕೃತ ವಿದ್ವಾಂಸರಾದ ಕ್ಷಿತಿಮೋಹನ್ ಸೇನ್ ಅವರು ಕಟ್ಟಿದ್ದಾಗಿದೆ. ಈ ಪಟ್ಟಿಯು ಸೇನ್ ಅವರ ಮನೆಯಾದ ‘ಪ್ರತಿಚಿ’ ಹೆಸರನ್ನು ಒಳಗೊಂಡಿದೆ.

ಇತ್ತೀಚಿನ ವರ್ಷಗಳಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಲವಾರು ನೀತಿಗಳ ಬಗ್ಗೆ ಸೇನ್ ಅವರು ತಮ್ಮ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಜನವರಿ 15ರಂದು ಪ್ರತಿಕ್ರಿಯಿಸಿದ್ದ ಅವರು, “ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದರಿಂದ ದೇಶದಲ್ಲಿ ಅಲ್ಪಸಂಖ್ಯಾತರ ಪಾತ್ರವನ್ನು ಕಡಿಮೆ ಮಾಡಲಾಗುತ್ತದೆ ಮತ್ತು ಬಹುಸಂಖ್ಯಾತ ಶಕ್ತಿಗಳನ್ನು ಪ್ರೋತ್ಸಾಹಿಸಲಾಗುತ್ತದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...