Homeಮುಖಪುಟವಿಶ್ವ ಭಾರತಿ ಕೇಂದ್ರೀಯ ವಿವಿಯ ಉದ್ದೇಶ ಅರ್ಥವಾಗುತ್ತಿಲ್ಲ: ಪ್ಲಾಟ್ ವಿವಾದಕ್ಕೆ ಅಮರ್ತ್ಯ ಸೇನ್‌ ಪ್ರತಿಕ್ರಿಯೆ

ವಿಶ್ವ ಭಾರತಿ ಕೇಂದ್ರೀಯ ವಿವಿಯ ಉದ್ದೇಶ ಅರ್ಥವಾಗುತ್ತಿಲ್ಲ: ಪ್ಲಾಟ್ ವಿವಾದಕ್ಕೆ ಅಮರ್ತ್ಯ ಸೇನ್‌ ಪ್ರತಿಕ್ರಿಯೆ

- Advertisement -
- Advertisement -

ಮೋದಿ ಸರ್ಕಾರದ ಟೀಕಾಕಾರರೂ ಹಾಗೂ ನೊಬೆಲ್‌ ಪ್ರಶಸ್ತಿ ಪುರಸ್ಕೃತರು ಆದ ಅಮರ್ತ್ಯ ಸೇನ್‌, “ವಿಶ್ವಭಾರತಿ ಕೇಂದ್ರೀಯ ವಿವಿಯ ಕ್ಯಾಂಪಸ್‌ನಲ್ಲಿ ಪ್ಲಾಟ್ ಒತ್ತುವರಿ ಮಾಡಿಕೊಂಡಿದ್ದಾರೆ” ಎಂದು ವಿವಿಯ ಆಡಳಿತ ವರ್ಗ ಆರೋಪಿಸಿದೆ. ಇದರ ಹಿನ್ನೆಲೆಯಲ್ಲಿ ಸೇನ್‌ ಪ್ರತಿಕ್ರಿಯಿಸಿದ್ದು, “ವಿಶ್ವವಿದ್ಯಾನಿಲಯದ ಉದ್ದೇಶವೇ ನನಗೆ ಅರ್ಥವಾಗುತ್ತಿಲ್ಲ. ಕೇಂದ್ರೀಯ ವಿವಿಯು ಏಕಾಏಕಿ ಯಾಕಿಷ್ಟು ಸಕ್ರಿಯವಾಗಿದೆ ಎಂಬುದು ತಿಳಿಯುತ್ತಿಲ್ಲ” ಎಂದಿದ್ದಾರೆ.

ಪ್ಲಾಟ್ ಸಂಬಂಧ ವಿಶ್ವವಿದ್ಯಾನಿಲಯದಿಂದ ಪತ್ರ ಬಂದ ಒಂದು ದಿನದ ನಂತರ ಪ್ರತಿಕ್ರಿಯಿಸಿರುವ ಅವರು, “ಈ ಕ್ರಮದ ಹಿಂದಿನ ರಾಜಕೀಯ ನನಗೆ ಅರ್ಥವಾಗುತ್ತಿಲ್ಲ. ಶಾಂತಿನಿಕೇತನ ಕ್ಯಾಂಪಸ್‌ನಲ್ಲಿ ಹೊಂದಿರುವ ಹೆಚ್ಚಿನ ಭೂಮಿಯನ್ನು ನಮ್ಮ ತಂದೆ ಖರೀದಿಸಿದ್ದರು. ಇತರ ಕೆಲವು ಪ್ಲಾಟ್‌ಗಳನ್ನು ಗುತ್ತಿಗೆಗೆ ತೆಗೆದುಕೊಳ್ಳಲಾಗಿದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಇದು 1940ರ ದಶಕದಲ್ಲಿ ವಿಶ್ವಭಾರತಿಯಿಂದ ಗುತ್ತಿಗೆ ಪಡೆದ ಭೂಮಿಯಲ್ಲಿ ನಿರ್ಮಿಸಲಾದ ನನ್ನ ನಿವಾಸವಾಗಿದೆ. ಭೂಮಿಯನ್ನು 100 ವರ್ಷಗಳ ಕಾಲ ನಮಗೆ ಗುತ್ತಿಗೆಗೆ ನೀಡಲಾಯಿತು. ಕೆಲವು ಭೂಮಿಯನ್ನು ನನ್ನ ತಂದೆ ಮಾರುಕಟ್ಟೆಯಿಂದ ಎಲ್ಲಾ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸಿ ಖರೀದಿಸಿದರು” ಎಂದು ಹೇಳಿದ್ದಾರೆ.

“ಈ ವಿಷಯದಲ್ಲಿ ನನ್ನ ಸಮಯವನ್ನು ವ್ಯರ್ಥ ಮಾಡಲು ನನಗೆ ಯಾವುದೇ ಕಾರಣವಿಲ್ಲ. ವಿಶ್ವಭಾರತಿ ಏಕಾಏಕಿ ನನ್ನನ್ನು ಓಡಿಸುವ ಪ್ರಯತ್ನದಲ್ಲಿ ಏಕೆ ಸಕ್ರಿಯವಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ” ಎಂದು ಪ್ರಸ್ತುತ ಶಾಂತಿನಿಕೇತನದಲ್ಲಿರುವ ಸೇನ್ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ವಿಶ್ವ ಭಾರತಿ ವಿಶ್ವವಿದ್ಯಾನಿಲಯವು ಶುಕ್ರವಾರ ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರಿಗೆ ಪತ್ರ ಬರೆದಿದ್ದು, ಬಿರ್ಭುಮ್ ಜಿಲ್ಲೆಯ ಶಾಂತಿನಿಕೇತನದಲ್ಲಿ ಆಕ್ರಮಿಸಿಕೊಂಡಿದ್ದಾರೆ ಎನ್ನಲಾದ ಪ್ಲಾಟ್‌ನ ಭಾಗಗಳನ್ನು ತಕ್ಷಣವೇ ಹಸ್ತಾಂತರಿಸಬೇಕು ಎಂದು ಸೂಚಿಸಿತ್ತು.

“ನೀವು 1.38 ಎಕರೆ ಭೂಮಿಯನ್ನು ಹೊಂದಿದ್ದೀರಿ. ಆದರೆ ಕಾನೂನಾತ್ಮಕವಾಗಿ 1.25 ಎಕರೆಗಿಂತ ಭೂಮಿ ಹೆಚ್ಚಿದೆ” ಎಂದು ವಿಶ್ವವಿದ್ಯಾಲಯದ ಆಡಳಿತವು ಸೇನ್‌ಗೆ ಬರೆದ ಪತ್ರದಲ್ಲಿ ತಿಳಿಸಿತ್ತು.

ಕಳೆದ ಮೂರು ದಿನಗಳಲ್ಲಿ ಭೂಮಿಗೆ ಸಂಬಂಧಿಸಿದಂತೆ ಸೇನ್ ಅವರಿಗೆ ವಿಶ್ವವಿದ್ಯಾಲಯ ಬರೆಯುತ್ತಿರುವ ಎರಡನೇ ಪತ್ರ ಇದಾಗಿದೆ. ಮಂಗಳವಾರ, ವಿಶ್ವ ಭಾರತಿ ವಿಶ್ವವಿದ್ಯಾಲಯವು ಸೇನ್ ಅವರಿಗೆ ನೋಟಿಸ್ ನೀಡಿದ್ದು, ಈ ಜಾಗವು ಅವರ ಕುಟುಂಬ ಒಡೆತನದ ಎಸ್ಟೇಟ್ ಭಾಗವಲ್ಲ ಎಂದು ಹೇಳಿ ಭೂಮಿಯನ್ನು ಹಿಂದಿರುಗಿಸುವಂತೆ ಸೂಚಿಸಿತ್ತು.

ಸಾರ್ವಜನಿಕ ಕೇಂದ್ರೀಯ ವಿಶ್ವವಿದ್ಯಾನಿಲಯವಾದ ವಿಶ್ವ ಭಾರತಿ ತನ್ನ ಆವರಣದೊಳಗೆ ಅಕ್ರಮ ಪ್ಲಾಟ್ ಹೊಂದಿರುವವರ ಪಟ್ಟಿ ಮಾಡಿತ್ತು. ಅದರಲ್ಲಿ ಸೇನ್ ಹೆಸರಿಸಿತ್ತು. ನೊಬೆಲ್ ಪ್ರಶಸ್ತಿ ವಿಜೇತ ಸೇನ್‌ ಶಾಂತಿನಿಕೇತನದಲ್ಲಿ ತಮ್ಮ ಕುಟುಂಬದ ಮನೆಯನ್ನು ಹೊಂದಿದ್ದಾರೆ, ಇದನ್ನು ಅವರ ಅಜ್ಜ ಮತ್ತು ಸಂಸ್ಕೃತ ವಿದ್ವಾಂಸರಾದ ಕ್ಷಿತಿಮೋಹನ್ ಸೇನ್ ಅವರು ಕಟ್ಟಿದ್ದಾಗಿದೆ. ಈ ಪಟ್ಟಿಯು ಸೇನ್ ಅವರ ಮನೆಯಾದ ‘ಪ್ರತಿಚಿ’ ಹೆಸರನ್ನು ಒಳಗೊಂಡಿದೆ.

ಇತ್ತೀಚಿನ ವರ್ಷಗಳಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಲವಾರು ನೀತಿಗಳ ಬಗ್ಗೆ ಸೇನ್ ಅವರು ತಮ್ಮ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಜನವರಿ 15ರಂದು ಪ್ರತಿಕ್ರಿಯಿಸಿದ್ದ ಅವರು, “ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದರಿಂದ ದೇಶದಲ್ಲಿ ಅಲ್ಪಸಂಖ್ಯಾತರ ಪಾತ್ರವನ್ನು ಕಡಿಮೆ ಮಾಡಲಾಗುತ್ತದೆ ಮತ್ತು ಬಹುಸಂಖ್ಯಾತ ಶಕ್ತಿಗಳನ್ನು ಪ್ರೋತ್ಸಾಹಿಸಲಾಗುತ್ತದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...