Homeಮುಖಪುಟವಿಶ್ವ ಭಾರತಿ ಕೇಂದ್ರೀಯ ವಿವಿಯ ಉದ್ದೇಶ ಅರ್ಥವಾಗುತ್ತಿಲ್ಲ: ಪ್ಲಾಟ್ ವಿವಾದಕ್ಕೆ ಅಮರ್ತ್ಯ ಸೇನ್‌ ಪ್ರತಿಕ್ರಿಯೆ

ವಿಶ್ವ ಭಾರತಿ ಕೇಂದ್ರೀಯ ವಿವಿಯ ಉದ್ದೇಶ ಅರ್ಥವಾಗುತ್ತಿಲ್ಲ: ಪ್ಲಾಟ್ ವಿವಾದಕ್ಕೆ ಅಮರ್ತ್ಯ ಸೇನ್‌ ಪ್ರತಿಕ್ರಿಯೆ

- Advertisement -
- Advertisement -

ಮೋದಿ ಸರ್ಕಾರದ ಟೀಕಾಕಾರರೂ ಹಾಗೂ ನೊಬೆಲ್‌ ಪ್ರಶಸ್ತಿ ಪುರಸ್ಕೃತರು ಆದ ಅಮರ್ತ್ಯ ಸೇನ್‌, “ವಿಶ್ವಭಾರತಿ ಕೇಂದ್ರೀಯ ವಿವಿಯ ಕ್ಯಾಂಪಸ್‌ನಲ್ಲಿ ಪ್ಲಾಟ್ ಒತ್ತುವರಿ ಮಾಡಿಕೊಂಡಿದ್ದಾರೆ” ಎಂದು ವಿವಿಯ ಆಡಳಿತ ವರ್ಗ ಆರೋಪಿಸಿದೆ. ಇದರ ಹಿನ್ನೆಲೆಯಲ್ಲಿ ಸೇನ್‌ ಪ್ರತಿಕ್ರಿಯಿಸಿದ್ದು, “ವಿಶ್ವವಿದ್ಯಾನಿಲಯದ ಉದ್ದೇಶವೇ ನನಗೆ ಅರ್ಥವಾಗುತ್ತಿಲ್ಲ. ಕೇಂದ್ರೀಯ ವಿವಿಯು ಏಕಾಏಕಿ ಯಾಕಿಷ್ಟು ಸಕ್ರಿಯವಾಗಿದೆ ಎಂಬುದು ತಿಳಿಯುತ್ತಿಲ್ಲ” ಎಂದಿದ್ದಾರೆ.

ಪ್ಲಾಟ್ ಸಂಬಂಧ ವಿಶ್ವವಿದ್ಯಾನಿಲಯದಿಂದ ಪತ್ರ ಬಂದ ಒಂದು ದಿನದ ನಂತರ ಪ್ರತಿಕ್ರಿಯಿಸಿರುವ ಅವರು, “ಈ ಕ್ರಮದ ಹಿಂದಿನ ರಾಜಕೀಯ ನನಗೆ ಅರ್ಥವಾಗುತ್ತಿಲ್ಲ. ಶಾಂತಿನಿಕೇತನ ಕ್ಯಾಂಪಸ್‌ನಲ್ಲಿ ಹೊಂದಿರುವ ಹೆಚ್ಚಿನ ಭೂಮಿಯನ್ನು ನಮ್ಮ ತಂದೆ ಖರೀದಿಸಿದ್ದರು. ಇತರ ಕೆಲವು ಪ್ಲಾಟ್‌ಗಳನ್ನು ಗುತ್ತಿಗೆಗೆ ತೆಗೆದುಕೊಳ್ಳಲಾಗಿದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಇದು 1940ರ ದಶಕದಲ್ಲಿ ವಿಶ್ವಭಾರತಿಯಿಂದ ಗುತ್ತಿಗೆ ಪಡೆದ ಭೂಮಿಯಲ್ಲಿ ನಿರ್ಮಿಸಲಾದ ನನ್ನ ನಿವಾಸವಾಗಿದೆ. ಭೂಮಿಯನ್ನು 100 ವರ್ಷಗಳ ಕಾಲ ನಮಗೆ ಗುತ್ತಿಗೆಗೆ ನೀಡಲಾಯಿತು. ಕೆಲವು ಭೂಮಿಯನ್ನು ನನ್ನ ತಂದೆ ಮಾರುಕಟ್ಟೆಯಿಂದ ಎಲ್ಲಾ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸಿ ಖರೀದಿಸಿದರು” ಎಂದು ಹೇಳಿದ್ದಾರೆ.

“ಈ ವಿಷಯದಲ್ಲಿ ನನ್ನ ಸಮಯವನ್ನು ವ್ಯರ್ಥ ಮಾಡಲು ನನಗೆ ಯಾವುದೇ ಕಾರಣವಿಲ್ಲ. ವಿಶ್ವಭಾರತಿ ಏಕಾಏಕಿ ನನ್ನನ್ನು ಓಡಿಸುವ ಪ್ರಯತ್ನದಲ್ಲಿ ಏಕೆ ಸಕ್ರಿಯವಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ” ಎಂದು ಪ್ರಸ್ತುತ ಶಾಂತಿನಿಕೇತನದಲ್ಲಿರುವ ಸೇನ್ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ವಿಶ್ವ ಭಾರತಿ ವಿಶ್ವವಿದ್ಯಾನಿಲಯವು ಶುಕ್ರವಾರ ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರಿಗೆ ಪತ್ರ ಬರೆದಿದ್ದು, ಬಿರ್ಭುಮ್ ಜಿಲ್ಲೆಯ ಶಾಂತಿನಿಕೇತನದಲ್ಲಿ ಆಕ್ರಮಿಸಿಕೊಂಡಿದ್ದಾರೆ ಎನ್ನಲಾದ ಪ್ಲಾಟ್‌ನ ಭಾಗಗಳನ್ನು ತಕ್ಷಣವೇ ಹಸ್ತಾಂತರಿಸಬೇಕು ಎಂದು ಸೂಚಿಸಿತ್ತು.

“ನೀವು 1.38 ಎಕರೆ ಭೂಮಿಯನ್ನು ಹೊಂದಿದ್ದೀರಿ. ಆದರೆ ಕಾನೂನಾತ್ಮಕವಾಗಿ 1.25 ಎಕರೆಗಿಂತ ಭೂಮಿ ಹೆಚ್ಚಿದೆ” ಎಂದು ವಿಶ್ವವಿದ್ಯಾಲಯದ ಆಡಳಿತವು ಸೇನ್‌ಗೆ ಬರೆದ ಪತ್ರದಲ್ಲಿ ತಿಳಿಸಿತ್ತು.

ಕಳೆದ ಮೂರು ದಿನಗಳಲ್ಲಿ ಭೂಮಿಗೆ ಸಂಬಂಧಿಸಿದಂತೆ ಸೇನ್ ಅವರಿಗೆ ವಿಶ್ವವಿದ್ಯಾಲಯ ಬರೆಯುತ್ತಿರುವ ಎರಡನೇ ಪತ್ರ ಇದಾಗಿದೆ. ಮಂಗಳವಾರ, ವಿಶ್ವ ಭಾರತಿ ವಿಶ್ವವಿದ್ಯಾಲಯವು ಸೇನ್ ಅವರಿಗೆ ನೋಟಿಸ್ ನೀಡಿದ್ದು, ಈ ಜಾಗವು ಅವರ ಕುಟುಂಬ ಒಡೆತನದ ಎಸ್ಟೇಟ್ ಭಾಗವಲ್ಲ ಎಂದು ಹೇಳಿ ಭೂಮಿಯನ್ನು ಹಿಂದಿರುಗಿಸುವಂತೆ ಸೂಚಿಸಿತ್ತು.

ಸಾರ್ವಜನಿಕ ಕೇಂದ್ರೀಯ ವಿಶ್ವವಿದ್ಯಾನಿಲಯವಾದ ವಿಶ್ವ ಭಾರತಿ ತನ್ನ ಆವರಣದೊಳಗೆ ಅಕ್ರಮ ಪ್ಲಾಟ್ ಹೊಂದಿರುವವರ ಪಟ್ಟಿ ಮಾಡಿತ್ತು. ಅದರಲ್ಲಿ ಸೇನ್ ಹೆಸರಿಸಿತ್ತು. ನೊಬೆಲ್ ಪ್ರಶಸ್ತಿ ವಿಜೇತ ಸೇನ್‌ ಶಾಂತಿನಿಕೇತನದಲ್ಲಿ ತಮ್ಮ ಕುಟುಂಬದ ಮನೆಯನ್ನು ಹೊಂದಿದ್ದಾರೆ, ಇದನ್ನು ಅವರ ಅಜ್ಜ ಮತ್ತು ಸಂಸ್ಕೃತ ವಿದ್ವಾಂಸರಾದ ಕ್ಷಿತಿಮೋಹನ್ ಸೇನ್ ಅವರು ಕಟ್ಟಿದ್ದಾಗಿದೆ. ಈ ಪಟ್ಟಿಯು ಸೇನ್ ಅವರ ಮನೆಯಾದ ‘ಪ್ರತಿಚಿ’ ಹೆಸರನ್ನು ಒಳಗೊಂಡಿದೆ.

ಇತ್ತೀಚಿನ ವರ್ಷಗಳಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಲವಾರು ನೀತಿಗಳ ಬಗ್ಗೆ ಸೇನ್ ಅವರು ತಮ್ಮ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಜನವರಿ 15ರಂದು ಪ್ರತಿಕ್ರಿಯಿಸಿದ್ದ ಅವರು, “ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದರಿಂದ ದೇಶದಲ್ಲಿ ಅಲ್ಪಸಂಖ್ಯಾತರ ಪಾತ್ರವನ್ನು ಕಡಿಮೆ ಮಾಡಲಾಗುತ್ತದೆ ಮತ್ತು ಬಹುಸಂಖ್ಯಾತ ಶಕ್ತಿಗಳನ್ನು ಪ್ರೋತ್ಸಾಹಿಸಲಾಗುತ್ತದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...