Homeಮುಖಪುಟಧರ್ಮ ಪ್ರಚಾರ ಮಾಡುವ ಹಕ್ಕನ್ನು ಮಿಷನರಿಗಳು ಹೊಂದಿವೆ: ಸುಪ್ರೀಂಗೆ ತಮಿಳುನಾಡು ಸರ್ಕಾರ ಅಫಿಡವಿಟ್

ಧರ್ಮ ಪ್ರಚಾರ ಮಾಡುವ ಹಕ್ಕನ್ನು ಮಿಷನರಿಗಳು ಹೊಂದಿವೆ: ಸುಪ್ರೀಂಗೆ ತಮಿಳುನಾಡು ಸರ್ಕಾರ ಅಫಿಡವಿಟ್

- Advertisement -
- Advertisement -

ಮಿಷನರಿಗಳು ತಮ್ಮ ಚಟುವಟಿಕೆಗಳನ್ನು ನಡೆಸಲು ಕಾನೂನುಬಾಹಿರ ವಿಧಾನಗಳನ್ನು ಬಳಸದ ಹೊರತು ಕ್ರಿಶ್ಚಿಯನ್ ಧರ್ಮವನ್ನು ಪ್ರಚಾರ ಮಾಡುವ ಕಾನೂನುಬದ್ಧ ಹಕ್ಕನ್ನು ಅವುಗಳು ಹೊಂದಿರುತ್ತವೆ ಎಂದು ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಈ ಕುರಿತು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದ್ದು, “ಭಾರತದ ಸಂವಿಧಾನದ 25 ನೇ ವಿಧಿಯು ಪ್ರತಿಯೊಬ್ಬ ಪ್ರಜೆಗೂ ತನ್ನ ಧರ್ಮವನ್ನು ಪ್ರಚಾರ ಮಾಡುವ ಹಕ್ಕನ್ನು ಖಾತರಿಪಡಿಸುತ್ತದೆ” ಎಂದು ರಾಜ್ಯ ಸರ್ಕಾರ ಸಲ್ಲಿಸಿದ ಅಫಿಡವಿಟ್ ಹೇಳಿದೆ. “ಆದ್ದರಿಂದ, ಕ್ರಿಶ್ಚಿಯನ್ ಧರ್ಮವನ್ನು ಪ್ರಚಾರ ಮಾಡುವ ಮಿಷನರಿಗಳ ಕೆಲಸಗಳನ್ನು ಕಾನೂನಿಗೆ ವಿರುದ್ಧವಾಗಿ ನೋಡಲಾಗುವುದಿಲ್ಲ” ಎಂದು ಅಭಿಪ್ರಾಯಪಟ್ಟಿದೆ.

ಬಲವಂತದ ಮತಾಂತರದ ಆರೋಪದ ಪ್ರಕರಣಗಳ ಬಗ್ಗೆ ಕೇಂದ್ರೀಯ ತನಿಖಾ ದಳದಿಂದ ತನಿಖೆ ನಡೆಸಬೇಕೆಂದು ಭಾರತೀಯ ಜನತಾ ಪಕ್ಷದ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ಆಡಳಿತಾರೂಢ ಡಿಎಂಕೆ ಸರ್ಕಾರವು ಅಫಿಡವಿಟ್ ಸಲ್ಲಿಸಿದೆ.

ಮತಾಂತರ ವಿರೋಧಿ ಕಾನೂನಿನ ಕರಡನ್ನು ತಯಾರಿಸಲು ಭಾರತದ ಕಾನೂನು ಆಯೋಗಕ್ಕೆ ನಿರ್ದೇಶನವನ್ನು ನೀಡಬೇಕೆಂದು ಉಪಾಧ್ಯಾಯ ಅವರು ಕೋರಿದ್ದಾರೆ.

ತನ್ನ ಅಫಿಡವಿಟ್‌ನಲ್ಲಿ ತಮಿಳುನಾಡು ಸರ್ಕಾರವು, “ಅಲ್ಪಸಂಖ್ಯಾತರ ವಿರುದ್ಧ ಮತಾಂತರ ವಿರೋಧಿ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ” ಎಂದು ಆತಂಕ ವ್ಯಕ್ತಪಡಿಸಿದೆ. “ವ್ಯಕ್ತಿಗಳು ತಮ್ಮ ಧರ್ಮವನ್ನು ಮುಕ್ತವಾಗಿ ಆಯ್ಕೆ ಮಾಡಲು ಅವಕಾಶ ನೀಡಬೇಕು” ಎಂದು ಸರ್ಕಾರ ತಿಳಿಸಿರುವುದಾಗಿ ‘ಹಿಂದೂಸ್ತಾನ್ ಟೈಮ್ಸ್’ ವರದಿ ಹೇಳಿದೆ.

ಕಳೆದ ಕೆಲವು ವರ್ಷಗಳಲ್ಲಿ ರಾಜ್ಯದಲ್ಲಿ ಯಾವುದೇ ಬಲವಂತದ ಮತಾಂತರದ ಘಟನೆ ವರದಿಯಾಗಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದೆ.

“ದೇಶದ ನಾಗರಿಕರಿಗೆ ಅವರ ಧರ್ಮವನ್ನು ಆಯ್ಕೆ ಮಾಡಲು ಮುಕ್ತವಾಗಿ ಅವಕಾಶ ನೀಡಬೇಕು ಮತ್ತು ಅವರ ವೈಯಕ್ತಿಕ ನಂಬಿಕೆ, ಗೌಪ್ಯತೆ ವಿಚಾರವಾಗಿ ಸರ್ಕಾರವು ಮಾತನಾಡುವುದು ಸೂಕ್ತವಲ್ಲ” ಎಂದು ಡಿಎಂಕೆ ಸರ್ಕಾರ ಅಭಿಪ್ರಾಯಪಟ್ಟಿದೆ.

ಯಾವುದೇ ವ್ಯಕ್ತಿಗೆ ಇತರರನ್ನು ತಮ್ಮ ಧರ್ಮಕ್ಕೆ ಮತಾಂತರಿಸುವ ಮೂಲಭೂತ ಹಕ್ಕನ್ನು ನೀಡಲಾಗಿಲ್ಲ ಎಂದೂ ಸರ್ಕಾರ ಹೇಳಿದೆ. ಆದರೆ ಇದು ಯಾವುದೇ ವ್ಯಕ್ತಿಗೆ ತನ್ನ ಧರ್ಮವನ್ನು ಪ್ರಚಾರ ಮಾಡುವ ಹಕ್ಕನ್ನು ನೀಡುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. “ಅಂತೆಯೇ, ಸಂವಿಧಾನವು ಯಾವುದೇ ವ್ಯಕ್ತಿಯು ತನ್ನ ಆಯ್ಕೆಯ ಧರ್ಮಕ್ಕೆ ಮತಾಂತರಗೊಳ್ಳುವುದನ್ನು ತಡೆಯುವುದಿಲ್ಲ” ಎಂದಿದೆ.

ಕಳೆದ ಜನವರಿಯಲ್ಲಿ ಸುಪ್ರೀಂ ಕೋರ್ಟ್ ಉಪಾಧ್ಯಾಯ ಅವರಿಗೆ ಎಚ್ಚರಿಕೆ ನೀಡಿತ್ತು. ‘ಬಲವಂತದ ಧಾರ್ಮಿಕ ಮತಾಂತರ’ ಆರೋಪಿಸಿ ಉನ್ನತ ನ್ಯಾಯಾಲಯ ಮತ್ತು ದೆಹಲಿ ಹೈಕೋರ್ಟ್‌ನ ವಿವಿಧ ಪೀಠಗಳ ಮುಂದೆ ಅನೇಕ ಅರ್ಜಿಗಳನ್ನು ಸಲ್ಲಿಸಿರುವುದರ ವಿರುದ್ಧ ಈ ಎಚ್ಚರಿಕೆ ಇತ್ತು.

“ನೀವು ಹೊಸ ಅರ್ಜಿಗಳನ್ನು ಹಿಂಪಡೆಯಲು ಮತ್ತು ಸಲ್ಲಿಸುವುದನ್ನು ಮುಂದುವರಿಸಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಅವರಿಗೆ ಸ್ಪಷ್ಟವಾಗಿ ನಿರ್ದೇಶನ ನೀಡಿದೆ.

ಇದನ್ನೂ ಓದಿರಿ: ‘ಆಂದೋಲನ’ ಪತ್ರಿಕೆ ವಿರುದ್ಧ ಪ್ರತಾಪ್ ಸಿಂಹ ಆರೋಪ; ಕ್ಷಮೆಯಾಚಿಸಲು ಪತ್ರಕರ್ತರ ಸಂಘ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...