Homeಮುಖಪುಟಧರ್ಮ ಪ್ರಚಾರ ಮಾಡುವ ಹಕ್ಕನ್ನು ಮಿಷನರಿಗಳು ಹೊಂದಿವೆ: ಸುಪ್ರೀಂಗೆ ತಮಿಳುನಾಡು ಸರ್ಕಾರ ಅಫಿಡವಿಟ್

ಧರ್ಮ ಪ್ರಚಾರ ಮಾಡುವ ಹಕ್ಕನ್ನು ಮಿಷನರಿಗಳು ಹೊಂದಿವೆ: ಸುಪ್ರೀಂಗೆ ತಮಿಳುನಾಡು ಸರ್ಕಾರ ಅಫಿಡವಿಟ್

- Advertisement -
- Advertisement -

ಮಿಷನರಿಗಳು ತಮ್ಮ ಚಟುವಟಿಕೆಗಳನ್ನು ನಡೆಸಲು ಕಾನೂನುಬಾಹಿರ ವಿಧಾನಗಳನ್ನು ಬಳಸದ ಹೊರತು ಕ್ರಿಶ್ಚಿಯನ್ ಧರ್ಮವನ್ನು ಪ್ರಚಾರ ಮಾಡುವ ಕಾನೂನುಬದ್ಧ ಹಕ್ಕನ್ನು ಅವುಗಳು ಹೊಂದಿರುತ್ತವೆ ಎಂದು ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಈ ಕುರಿತು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದ್ದು, “ಭಾರತದ ಸಂವಿಧಾನದ 25 ನೇ ವಿಧಿಯು ಪ್ರತಿಯೊಬ್ಬ ಪ್ರಜೆಗೂ ತನ್ನ ಧರ್ಮವನ್ನು ಪ್ರಚಾರ ಮಾಡುವ ಹಕ್ಕನ್ನು ಖಾತರಿಪಡಿಸುತ್ತದೆ” ಎಂದು ರಾಜ್ಯ ಸರ್ಕಾರ ಸಲ್ಲಿಸಿದ ಅಫಿಡವಿಟ್ ಹೇಳಿದೆ. “ಆದ್ದರಿಂದ, ಕ್ರಿಶ್ಚಿಯನ್ ಧರ್ಮವನ್ನು ಪ್ರಚಾರ ಮಾಡುವ ಮಿಷನರಿಗಳ ಕೆಲಸಗಳನ್ನು ಕಾನೂನಿಗೆ ವಿರುದ್ಧವಾಗಿ ನೋಡಲಾಗುವುದಿಲ್ಲ” ಎಂದು ಅಭಿಪ್ರಾಯಪಟ್ಟಿದೆ.

ಬಲವಂತದ ಮತಾಂತರದ ಆರೋಪದ ಪ್ರಕರಣಗಳ ಬಗ್ಗೆ ಕೇಂದ್ರೀಯ ತನಿಖಾ ದಳದಿಂದ ತನಿಖೆ ನಡೆಸಬೇಕೆಂದು ಭಾರತೀಯ ಜನತಾ ಪಕ್ಷದ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ಆಡಳಿತಾರೂಢ ಡಿಎಂಕೆ ಸರ್ಕಾರವು ಅಫಿಡವಿಟ್ ಸಲ್ಲಿಸಿದೆ.

ಮತಾಂತರ ವಿರೋಧಿ ಕಾನೂನಿನ ಕರಡನ್ನು ತಯಾರಿಸಲು ಭಾರತದ ಕಾನೂನು ಆಯೋಗಕ್ಕೆ ನಿರ್ದೇಶನವನ್ನು ನೀಡಬೇಕೆಂದು ಉಪಾಧ್ಯಾಯ ಅವರು ಕೋರಿದ್ದಾರೆ.

ತನ್ನ ಅಫಿಡವಿಟ್‌ನಲ್ಲಿ ತಮಿಳುನಾಡು ಸರ್ಕಾರವು, “ಅಲ್ಪಸಂಖ್ಯಾತರ ವಿರುದ್ಧ ಮತಾಂತರ ವಿರೋಧಿ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ” ಎಂದು ಆತಂಕ ವ್ಯಕ್ತಪಡಿಸಿದೆ. “ವ್ಯಕ್ತಿಗಳು ತಮ್ಮ ಧರ್ಮವನ್ನು ಮುಕ್ತವಾಗಿ ಆಯ್ಕೆ ಮಾಡಲು ಅವಕಾಶ ನೀಡಬೇಕು” ಎಂದು ಸರ್ಕಾರ ತಿಳಿಸಿರುವುದಾಗಿ ‘ಹಿಂದೂಸ್ತಾನ್ ಟೈಮ್ಸ್’ ವರದಿ ಹೇಳಿದೆ.

ಕಳೆದ ಕೆಲವು ವರ್ಷಗಳಲ್ಲಿ ರಾಜ್ಯದಲ್ಲಿ ಯಾವುದೇ ಬಲವಂತದ ಮತಾಂತರದ ಘಟನೆ ವರದಿಯಾಗಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದೆ.

“ದೇಶದ ನಾಗರಿಕರಿಗೆ ಅವರ ಧರ್ಮವನ್ನು ಆಯ್ಕೆ ಮಾಡಲು ಮುಕ್ತವಾಗಿ ಅವಕಾಶ ನೀಡಬೇಕು ಮತ್ತು ಅವರ ವೈಯಕ್ತಿಕ ನಂಬಿಕೆ, ಗೌಪ್ಯತೆ ವಿಚಾರವಾಗಿ ಸರ್ಕಾರವು ಮಾತನಾಡುವುದು ಸೂಕ್ತವಲ್ಲ” ಎಂದು ಡಿಎಂಕೆ ಸರ್ಕಾರ ಅಭಿಪ್ರಾಯಪಟ್ಟಿದೆ.

ಯಾವುದೇ ವ್ಯಕ್ತಿಗೆ ಇತರರನ್ನು ತಮ್ಮ ಧರ್ಮಕ್ಕೆ ಮತಾಂತರಿಸುವ ಮೂಲಭೂತ ಹಕ್ಕನ್ನು ನೀಡಲಾಗಿಲ್ಲ ಎಂದೂ ಸರ್ಕಾರ ಹೇಳಿದೆ. ಆದರೆ ಇದು ಯಾವುದೇ ವ್ಯಕ್ತಿಗೆ ತನ್ನ ಧರ್ಮವನ್ನು ಪ್ರಚಾರ ಮಾಡುವ ಹಕ್ಕನ್ನು ನೀಡುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. “ಅಂತೆಯೇ, ಸಂವಿಧಾನವು ಯಾವುದೇ ವ್ಯಕ್ತಿಯು ತನ್ನ ಆಯ್ಕೆಯ ಧರ್ಮಕ್ಕೆ ಮತಾಂತರಗೊಳ್ಳುವುದನ್ನು ತಡೆಯುವುದಿಲ್ಲ” ಎಂದಿದೆ.

ಕಳೆದ ಜನವರಿಯಲ್ಲಿ ಸುಪ್ರೀಂ ಕೋರ್ಟ್ ಉಪಾಧ್ಯಾಯ ಅವರಿಗೆ ಎಚ್ಚರಿಕೆ ನೀಡಿತ್ತು. ‘ಬಲವಂತದ ಧಾರ್ಮಿಕ ಮತಾಂತರ’ ಆರೋಪಿಸಿ ಉನ್ನತ ನ್ಯಾಯಾಲಯ ಮತ್ತು ದೆಹಲಿ ಹೈಕೋರ್ಟ್‌ನ ವಿವಿಧ ಪೀಠಗಳ ಮುಂದೆ ಅನೇಕ ಅರ್ಜಿಗಳನ್ನು ಸಲ್ಲಿಸಿರುವುದರ ವಿರುದ್ಧ ಈ ಎಚ್ಚರಿಕೆ ಇತ್ತು.

“ನೀವು ಹೊಸ ಅರ್ಜಿಗಳನ್ನು ಹಿಂಪಡೆಯಲು ಮತ್ತು ಸಲ್ಲಿಸುವುದನ್ನು ಮುಂದುವರಿಸಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಅವರಿಗೆ ಸ್ಪಷ್ಟವಾಗಿ ನಿರ್ದೇಶನ ನೀಡಿದೆ.

ಇದನ್ನೂ ಓದಿರಿ: ‘ಆಂದೋಲನ’ ಪತ್ರಿಕೆ ವಿರುದ್ಧ ಪ್ರತಾಪ್ ಸಿಂಹ ಆರೋಪ; ಕ್ಷಮೆಯಾಚಿಸಲು ಪತ್ರಕರ್ತರ ಸಂಘ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...