Homeಮುಖಪುಟಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ: 8 ವಿರೋಧ ಪಕ್ಷಗಳಿಂದ ಪ್ರಧಾನಿಗೆ ಪತ್ರ

ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ: 8 ವಿರೋಧ ಪಕ್ಷಗಳಿಂದ ಪ್ರಧಾನಿಗೆ ಪತ್ರ

- Advertisement -
- Advertisement -

ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕ ಮನೀಶ್ ಸಿಸೋಡಿಯಾ ಬಂಧನದ ವಿಚಾರದಲ್ಲಿ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಎಂಟು ವಿರೋಧ ಪಕ್ಷಗಳು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿವೆ.

ಮುಖ್ಯಮಂತ್ರಿಗಳಾದ ಕೆ ಚಂದ್ರಶೇಖರ್ ರಾವ್, ಮಮತಾ ಬ್ಯಾನರ್ಜಿ, ಭಗವಂತ್ ಮಾನ್ ಮತ್ತು ಅರವಿಂದ್ ಕೇಜ್ರಿವಾಲ್ ಸೇರಿದಂತೆ ವಿಪಕ್ಷ ನಾಯಕರು ಸಹಿ ಮಾಡಿದ ಪತ್ರದಿಂದ ಕಾಂಗ್ರೆಸ್ ದೂರ ಉಳಿದಿದೆ.

ಈ ಪತ್ರಕ್ಕೆ ನ್ಯಾಷನಲ್ ಕಾನ್ಫರೆನ್ಸ್‌ನ ಫಾರೂಕ್ ಅಬ್ದುಲ್ಲಾ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಶಿವಸೇನೆಯ ಉದ್ದವ್ ಠಾಕ್ರೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಸಹಿ ಹಾಕಿದ್ದಾರೆ.

“ಭಾರತ ಇನ್ನೂ ಪ್ರಜಾಪ್ರಭುತ್ವ ರಾಷ್ಟ್ರ ಎಂದು ನೀವು ಒಪ್ಪುತ್ತೀರಿ ಎಂದು ನಾವು ಭಾವಿಸುತ್ತೇವೆ. ವಿರೋಧ ಪಕ್ಷದ ಸದಸ್ಯರ ವಿರುದ್ಧ ಕೇಂದ್ರೀಯ ಸಂಸ್ಥೆಗಳ ದುರ್ಬಳಕೆಯು ನಾವು ಪ್ರಜಾಪ್ರಭುತ್ವದಿಂದ ನಿರಂಕುಶಪ್ರಭುತ್ವಕ್ಕೆ ಪರಿವರ್ತನೆಯಾಗಿದ್ದೇವೆ ಎಂದು ಸೂಚಿಸುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷದಿಂದ ರಾಹುಲ್ ಗಾಂಧಿ ಮತ್ತು ಅವರ ತಾಯಿ ಸೋನಿಯಾ ಗಾಂಧಿ ಇಬ್ಬರನ್ನೂ ಎನ್‌ಫೋರ್ಸ್‌ಮೆಂಟ್ ಡೈರೆಕ್ಟರೇಟ್ (ಇಡಿ) ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: ಸಿಸೋಡಿಯಾ, ಜೈನ್ ಬಿಜೆಪಿ ಸೇರಿದರೆ ನಾಳೆಯೇ ಜೈಲಿನಿಂದ ಹೊರಬರುತ್ತಾರೆ: ಅರವಿಂದ್ ಕೇಜ್ರಿವಾಲ್

”ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಅಕ್ರಮವೆಸಗಿರುವ ಆರೋಪದಲ್ಲಿ ಬಂಧಿಸಿದೆ” ಎಂದು ವಿರೋಧ ಪಕ್ಷದ ನಾಯಕರು ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

”ಅದಾನಿ ಗ್ರೂಪ್‌ನ “ಹಣಕಾಸಿನ ಅಕ್ರಮಗಳ” ಬಗ್ಗೆ ಏಕೆ ತನಿಖೆ ಮಾಡಿಲ್ಲ, ಸಂಘಟಿತ ಸಂಸ್ಥೆಯನ್ನು ಹೆಸರಿಸದೆ ಪ್ರಶ್ನಿಸಿದೆ.

ಈ ಪತ್ರದಲ್ಲಿ ”ಅಂತರರಾಷ್ಟ್ರೀಯ ವಿಧಿವಿಜ್ಞಾನ ಹಣಕಾಸು ಸಂಶೋಧನಾ ವರದಿಯ ಪ್ರಕಟಣೆಯ ನಂತರ, ಎಸ್‌ಬಿಐ ಮತ್ತು ಎಲ್‌ಐಸಿ ನಿರ್ದಿಷ್ಟ ಸಂಸ್ಥೆಗೆ ಒಡ್ಡಿಕೊಂಡ ಕಾರಣ ತಮ್ಮ ಷೇರುಗಳ ಮಾರುಕಟ್ಟೆ ಬಂಡವಾಳದಲ್ಲಿ ₹78,000 ಕೋಟಿಗಳನ್ನು ಕಳೆದುಕೊಂಡಿವೆ ಎಂದು ವರದಿಯಾಗಿದೆ. ಸಾರ್ವಜನಿಕರ ಹಣವನ್ನು ಪಣಕ್ಕಿಟ್ಟಿದ್ದರೂ ಸಂಸ್ಥೆಯ ಹಣಕಾಸು ಅವ್ಯವಹಾರಗಳ ತನಿಖೆಗೆ ಕೇಂದ್ರ ಏಜೆನ್ಸಿಗಳನ್ನು ಏಕೆ ಸೇವೆಗೆ ಒತ್ತಾಯಿಸಲಿಲ್ಲ? ಈ ಏಜೆನ್ಸಿಗಳು ತಮ್ಮ ಆದ್ಯತೆಯನ್ನು ಈ ಪ್ರಕರಣಕ್ಕೆ ನೀಡಬೇಕಿತ್ತು ಎಂದು ಪತ್ರವನ್ನು ಸೇರಿಸಲಾಗಿದೆ.

”ದೆಹಲಿಯ ಶಾಲಾ ಶಿಕ್ಷಣವನ್ನು ಪರಿವರ್ತಿಸಲು ಮನೀಶ್ ಸಿಸೋಡಿಯಾ ಜಾಗತಿಕವಾಗಿ ಗುರುತಿಸಿಕೊಂಡಿದ್ದಾರೆ. ಅವರ ಬಂಧನದ ಬಗ್ಗೆ ವಿಶ್ವದಾದ್ಯಂತ ಮಾತನಾಡಲಾಗುತ್ತಿದೆ ಮತ್ತು ಈ ವಿಚಾರದಿಂದ ವಿಶ್ವವು  ಅನುಮಾನಿಸುತ್ತಿರುವುದನ್ನು ಮತ್ತಷ್ಟು ದೃಢಪಡಿಸುತ್ತದೆ. ಭಾರತದ ಪ್ರಜಾಪ್ರಭುತ್ವದ ಮೌಲ್ಯಗಳು ನಿರಂಕುಶ ಬಿಜೆಪಿ ಆಡಳಿತದಿಂದ ಅಪಾಯದಲ್ಲಿದೆ” ಎಂದು ಪತ್ರದಲ್ಲಿ ಬರೆಯಲಾಗಿದೆ.

”2014 ರಿಂದ ನಿಮ್ಮ ಆಡಳಿತದ ಅಡಿಯಲ್ಲಿ ತನಿಖಾ ಸಂಸ್ಥೆಗಳು ಬಂಧಿಸಿದ, ದಾಳಿ ಮಾಡಿದ ಅಥವಾ ವಿಚಾರಣೆಗೆ ಒಳಗಾದ ಒಟ್ಟು ಪ್ರಮುಖ ರಾಜಕಾರಣಿಗಳ ಪೈಕಿ, ಗರಿಷ್ಠ ಮಟ್ಟದಲ್ಲಿ ಪ್ರತಿಪಕ್ಷದವರೇ ಸೇರಿದ್ದಾರೆ. ಕುತೂಹಲಕಾರಿಯಾಗಿ ವಿಚಾರ ಎಂದರೆ, ವಿರೋಧ ಪಕ್ಷದ ರಾಜಕಾರಣಿಗಳು ಬಿಜೆಪಿಗೆ ಸೇರಿದರೆ ಅವರ ವಿರುದ್ಧದ ಪ್ರಕರಣಗಳ ಬಗ್ಗೆ ತನಿಖಾ ಸಂಸ್ಥೆಗಳು ಮೌನವಾಗುತ್ತವೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್‌ನಲ್ಲಿದ್ದಾಗ ಶಾರದಾ ಚಿಟ್ ಫಂಡ್ ಹಗರಣದ ಕುರಿತು 2014 ಮತ್ತು 2015 ರಲ್ಲಿ ಸಿಬಿಐ ಮತ್ತು ಇಡಿ ವಿಚಾರಣೆಗೆ ಒಳಗಾಗಿದ್ದ ಉದಾಹರಣೆಯನ್ನು ವಿರೋಧ ಪಕ್ಷದ ನಾಯಕರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

”ಹಿಮಂತ ಬಿಸ್ವಾ ಶರ್ಮಾ ಬಿಜೆಪಿಗೆ ಸೇರಿದ ನಂತರ ಪ್ರಕರಣವು ಪ್ರಗತಿಯಾಗಲಿಲ್ಲ. ಹಾಗೆಯೇ, ಟಿಎಂಸಿ (ತೃಣಮೂಲ ಕಾಂಗ್ರೆಸ್) ಮಾಜಿ ನಾಯಕರಾದ ಸುವೇಂದು ಅಧಿಕಾರಿ ಮತ್ತು ಮುಕುಲ್ ರಾಯ್ ಅವರು ನಾರದ ಕುಟುಕು ಕಾರ್ಯಾಚರಣೆ ಪ್ರಕರಣದಲ್ಲಿ ಇಡಿ ಮತ್ತು ಸಿಬಿಐ ವಿಚಾರಣೆಯಲ್ಲಿದ್ದರು. ಆದರೆ ರಾಜ್ಯದಲ್ಲಿ (ಪಶ್ಚಿಮ ಬಂಗಾಳ) ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಅವರು ಬಿಜೆಪಿಗೆ ಸೇರಿದ ನಂತರ ಅವರ ವಿರುದ್ಧದ ಪ್ರಕರಣಗಳನ್ನು ಕೈಬಿಡಲಾಯಿತು” ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...