Homeಮುಖಪುಟಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ: 8 ವಿರೋಧ ಪಕ್ಷಗಳಿಂದ ಪ್ರಧಾನಿಗೆ ಪತ್ರ

ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ: 8 ವಿರೋಧ ಪಕ್ಷಗಳಿಂದ ಪ್ರಧಾನಿಗೆ ಪತ್ರ

- Advertisement -
- Advertisement -

ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕ ಮನೀಶ್ ಸಿಸೋಡಿಯಾ ಬಂಧನದ ವಿಚಾರದಲ್ಲಿ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಎಂಟು ವಿರೋಧ ಪಕ್ಷಗಳು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿವೆ.

ಮುಖ್ಯಮಂತ್ರಿಗಳಾದ ಕೆ ಚಂದ್ರಶೇಖರ್ ರಾವ್, ಮಮತಾ ಬ್ಯಾನರ್ಜಿ, ಭಗವಂತ್ ಮಾನ್ ಮತ್ತು ಅರವಿಂದ್ ಕೇಜ್ರಿವಾಲ್ ಸೇರಿದಂತೆ ವಿಪಕ್ಷ ನಾಯಕರು ಸಹಿ ಮಾಡಿದ ಪತ್ರದಿಂದ ಕಾಂಗ್ರೆಸ್ ದೂರ ಉಳಿದಿದೆ.

ಈ ಪತ್ರಕ್ಕೆ ನ್ಯಾಷನಲ್ ಕಾನ್ಫರೆನ್ಸ್‌ನ ಫಾರೂಕ್ ಅಬ್ದುಲ್ಲಾ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಶಿವಸೇನೆಯ ಉದ್ದವ್ ಠಾಕ್ರೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಸಹಿ ಹಾಕಿದ್ದಾರೆ.

“ಭಾರತ ಇನ್ನೂ ಪ್ರಜಾಪ್ರಭುತ್ವ ರಾಷ್ಟ್ರ ಎಂದು ನೀವು ಒಪ್ಪುತ್ತೀರಿ ಎಂದು ನಾವು ಭಾವಿಸುತ್ತೇವೆ. ವಿರೋಧ ಪಕ್ಷದ ಸದಸ್ಯರ ವಿರುದ್ಧ ಕೇಂದ್ರೀಯ ಸಂಸ್ಥೆಗಳ ದುರ್ಬಳಕೆಯು ನಾವು ಪ್ರಜಾಪ್ರಭುತ್ವದಿಂದ ನಿರಂಕುಶಪ್ರಭುತ್ವಕ್ಕೆ ಪರಿವರ್ತನೆಯಾಗಿದ್ದೇವೆ ಎಂದು ಸೂಚಿಸುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷದಿಂದ ರಾಹುಲ್ ಗಾಂಧಿ ಮತ್ತು ಅವರ ತಾಯಿ ಸೋನಿಯಾ ಗಾಂಧಿ ಇಬ್ಬರನ್ನೂ ಎನ್‌ಫೋರ್ಸ್‌ಮೆಂಟ್ ಡೈರೆಕ್ಟರೇಟ್ (ಇಡಿ) ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: ಸಿಸೋಡಿಯಾ, ಜೈನ್ ಬಿಜೆಪಿ ಸೇರಿದರೆ ನಾಳೆಯೇ ಜೈಲಿನಿಂದ ಹೊರಬರುತ್ತಾರೆ: ಅರವಿಂದ್ ಕೇಜ್ರಿವಾಲ್

”ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಅಕ್ರಮವೆಸಗಿರುವ ಆರೋಪದಲ್ಲಿ ಬಂಧಿಸಿದೆ” ಎಂದು ವಿರೋಧ ಪಕ್ಷದ ನಾಯಕರು ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

”ಅದಾನಿ ಗ್ರೂಪ್‌ನ “ಹಣಕಾಸಿನ ಅಕ್ರಮಗಳ” ಬಗ್ಗೆ ಏಕೆ ತನಿಖೆ ಮಾಡಿಲ್ಲ, ಸಂಘಟಿತ ಸಂಸ್ಥೆಯನ್ನು ಹೆಸರಿಸದೆ ಪ್ರಶ್ನಿಸಿದೆ.

ಈ ಪತ್ರದಲ್ಲಿ ”ಅಂತರರಾಷ್ಟ್ರೀಯ ವಿಧಿವಿಜ್ಞಾನ ಹಣಕಾಸು ಸಂಶೋಧನಾ ವರದಿಯ ಪ್ರಕಟಣೆಯ ನಂತರ, ಎಸ್‌ಬಿಐ ಮತ್ತು ಎಲ್‌ಐಸಿ ನಿರ್ದಿಷ್ಟ ಸಂಸ್ಥೆಗೆ ಒಡ್ಡಿಕೊಂಡ ಕಾರಣ ತಮ್ಮ ಷೇರುಗಳ ಮಾರುಕಟ್ಟೆ ಬಂಡವಾಳದಲ್ಲಿ ₹78,000 ಕೋಟಿಗಳನ್ನು ಕಳೆದುಕೊಂಡಿವೆ ಎಂದು ವರದಿಯಾಗಿದೆ. ಸಾರ್ವಜನಿಕರ ಹಣವನ್ನು ಪಣಕ್ಕಿಟ್ಟಿದ್ದರೂ ಸಂಸ್ಥೆಯ ಹಣಕಾಸು ಅವ್ಯವಹಾರಗಳ ತನಿಖೆಗೆ ಕೇಂದ್ರ ಏಜೆನ್ಸಿಗಳನ್ನು ಏಕೆ ಸೇವೆಗೆ ಒತ್ತಾಯಿಸಲಿಲ್ಲ? ಈ ಏಜೆನ್ಸಿಗಳು ತಮ್ಮ ಆದ್ಯತೆಯನ್ನು ಈ ಪ್ರಕರಣಕ್ಕೆ ನೀಡಬೇಕಿತ್ತು ಎಂದು ಪತ್ರವನ್ನು ಸೇರಿಸಲಾಗಿದೆ.

”ದೆಹಲಿಯ ಶಾಲಾ ಶಿಕ್ಷಣವನ್ನು ಪರಿವರ್ತಿಸಲು ಮನೀಶ್ ಸಿಸೋಡಿಯಾ ಜಾಗತಿಕವಾಗಿ ಗುರುತಿಸಿಕೊಂಡಿದ್ದಾರೆ. ಅವರ ಬಂಧನದ ಬಗ್ಗೆ ವಿಶ್ವದಾದ್ಯಂತ ಮಾತನಾಡಲಾಗುತ್ತಿದೆ ಮತ್ತು ಈ ವಿಚಾರದಿಂದ ವಿಶ್ವವು  ಅನುಮಾನಿಸುತ್ತಿರುವುದನ್ನು ಮತ್ತಷ್ಟು ದೃಢಪಡಿಸುತ್ತದೆ. ಭಾರತದ ಪ್ರಜಾಪ್ರಭುತ್ವದ ಮೌಲ್ಯಗಳು ನಿರಂಕುಶ ಬಿಜೆಪಿ ಆಡಳಿತದಿಂದ ಅಪಾಯದಲ್ಲಿದೆ” ಎಂದು ಪತ್ರದಲ್ಲಿ ಬರೆಯಲಾಗಿದೆ.

”2014 ರಿಂದ ನಿಮ್ಮ ಆಡಳಿತದ ಅಡಿಯಲ್ಲಿ ತನಿಖಾ ಸಂಸ್ಥೆಗಳು ಬಂಧಿಸಿದ, ದಾಳಿ ಮಾಡಿದ ಅಥವಾ ವಿಚಾರಣೆಗೆ ಒಳಗಾದ ಒಟ್ಟು ಪ್ರಮುಖ ರಾಜಕಾರಣಿಗಳ ಪೈಕಿ, ಗರಿಷ್ಠ ಮಟ್ಟದಲ್ಲಿ ಪ್ರತಿಪಕ್ಷದವರೇ ಸೇರಿದ್ದಾರೆ. ಕುತೂಹಲಕಾರಿಯಾಗಿ ವಿಚಾರ ಎಂದರೆ, ವಿರೋಧ ಪಕ್ಷದ ರಾಜಕಾರಣಿಗಳು ಬಿಜೆಪಿಗೆ ಸೇರಿದರೆ ಅವರ ವಿರುದ್ಧದ ಪ್ರಕರಣಗಳ ಬಗ್ಗೆ ತನಿಖಾ ಸಂಸ್ಥೆಗಳು ಮೌನವಾಗುತ್ತವೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್‌ನಲ್ಲಿದ್ದಾಗ ಶಾರದಾ ಚಿಟ್ ಫಂಡ್ ಹಗರಣದ ಕುರಿತು 2014 ಮತ್ತು 2015 ರಲ್ಲಿ ಸಿಬಿಐ ಮತ್ತು ಇಡಿ ವಿಚಾರಣೆಗೆ ಒಳಗಾಗಿದ್ದ ಉದಾಹರಣೆಯನ್ನು ವಿರೋಧ ಪಕ್ಷದ ನಾಯಕರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

”ಹಿಮಂತ ಬಿಸ್ವಾ ಶರ್ಮಾ ಬಿಜೆಪಿಗೆ ಸೇರಿದ ನಂತರ ಪ್ರಕರಣವು ಪ್ರಗತಿಯಾಗಲಿಲ್ಲ. ಹಾಗೆಯೇ, ಟಿಎಂಸಿ (ತೃಣಮೂಲ ಕಾಂಗ್ರೆಸ್) ಮಾಜಿ ನಾಯಕರಾದ ಸುವೇಂದು ಅಧಿಕಾರಿ ಮತ್ತು ಮುಕುಲ್ ರಾಯ್ ಅವರು ನಾರದ ಕುಟುಕು ಕಾರ್ಯಾಚರಣೆ ಪ್ರಕರಣದಲ್ಲಿ ಇಡಿ ಮತ್ತು ಸಿಬಿಐ ವಿಚಾರಣೆಯಲ್ಲಿದ್ದರು. ಆದರೆ ರಾಜ್ಯದಲ್ಲಿ (ಪಶ್ಚಿಮ ಬಂಗಾಳ) ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಅವರು ಬಿಜೆಪಿಗೆ ಸೇರಿದ ನಂತರ ಅವರ ವಿರುದ್ಧದ ಪ್ರಕರಣಗಳನ್ನು ಕೈಬಿಡಲಾಯಿತು” ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...