Homeಅಂಕಣಗಳುನೂರರ ನೋಟ: ಎಗ್ಗಿಲ್ಲದೆ ಮುಂದುವರೆದಿರುವ ದೇಶದ್ರೋಹ ಆಪಾದನೆಯ ದುರ್ಬಳಕೆ

ನೂರರ ನೋಟ: ಎಗ್ಗಿಲ್ಲದೆ ಮುಂದುವರೆದಿರುವ ದೇಶದ್ರೋಹ ಆಪಾದನೆಯ ದುರ್ಬಳಕೆ

- Advertisement -
- Advertisement -

ಮೋದಿ ಸರ್ಕಾರ ತನ್ನ ಪ್ರಜೆಗಳ ಮೇಲೆ ಸಮರ ಸಾರಿದೆ. ಸರ್ಕಾರದ ಧೋರಣೆಯನ್ನು ಒಪ್ಪದ ನಾಗರಿಕರು ಸರ್ಕಾರವನ್ನು ಟೀಕೆ ಮಾಡಿದರೆ ಅವರ ಮೇಲೆ ದೇಶದ್ರೋಹದ ಆಪಾದನೆ ಹೊರಿಸಿ ಬಂಧನದಲ್ಲಿಡಲಾಗುತ್ತಿದೆ. ತನ್ನ ಧೋರಣೆಯನ್ನು ಒಪ್ಪದವರ ಮೇಲೆ, ರಾಜಕೀಯ ವಿರೋಧಿಗಳ ಮೇಲೆ, ಸ್ವತಂತ್ರ ಧೋರಣೆಯ ಪತ್ರಕರ್ತರು, ಬರಹಗಾರರು, ಕಾಲೇಜು ಅಧ್ಯಾಪಕರುಗಳ ಮೇಲೆ ಹಲವು ಪ್ರಕರಣಗಳನ್ನು ದಾಖಲಿಸುವುದರಿಂದ ಹಿಡಿದು, ದಸ್ತಗಿರಿ ಮಾಡುವುದು ಅವರ ವಿರುದ್ಧ ಖಟ್ಳೆ ಹೂಡುವುದು ಇವನ್ನೆಲ್ಲಾ ಸರ್ಕಾರ ಮಾಡುತ್ತಿದ್ದು ತನ್ನ ಧೋರಣೆಯನ್ನು ಎತ್ತಿ ಹಿಡಿಯುವ, ಹಾಡಿಹೊಗಳುವವರನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ರಾಜದ್ರೋಹದ ಕಾನೂನು ಬ್ರಿಟಿಷರು ಸ್ವಾತಂತ್ರ್ಯ ಬಯಸುವವರನ್ನು ಬಗ್ಗುಬಡಿಯಲು ಬಳಸುತ್ತಿದ್ದ ದುರ್ಬಳಕೆಯ ಆಯುಧ. ಈ ಕಾನೂನನ್ನು ಮೋದಿಯವರು ಅಧಿಕಾರಕ್ಕೆ ಬಂದಮೇಲೆ ಮನಸೋಇಚ್ಛೆ ಬಳಸುತ್ತಿದ್ದಾರೆ. ಇಂಗ್ಲೆಂಡಿನಲ್ಲಿ ಈ ಉಗ್ರ ಕಾಯಿದೆಯನ್ನು ತೆಗೆದುಹಾಕಿದ್ದರೂ ಭಾರತದಲ್ಲಿ ಈ ಅನ್ಯಾಯದ ಕಾಯ್ದೆಯನ್ನು ಜೀವಂತ ಇಟ್ಟು, ಮೋದಿ ಸರ್ಕಾರದಂತಹ ಸರ್ಕಾರಗಳು ಅದನ್ನು ದುರ್ಬಳಕೆ ಮಾಡುತ್ತಿವೆ.

ಗಾಂಧೀಜಿಯವರ ಮೇಲೆ ರಾಜದ್ರೋಹ ಆಪಾದನೆ ಹೊರಿಸಿ ನ್ಯಾಯಾಲಯದ ಮುಂದೆ ನಿಲ್ಲಿಸಲಾಗಿತ್ತು. “ನೀವು ರಾಜದ್ರೋಹ ಮಾಡಿದ್ದೀರಿ ಎಂದು ಸರ್ಕಾರ ಖಟ್ಳೆ ಹಾಕಿದೆ, ಇದನ್ನು ನೀವು ಅಲ್ಲೆಗಳೆಯುತ್ತೀರಾ” ಎಂದು ಕೇಳಿದಾಗ, ಗಾಂಧೀಜಿ ಹೌದು ನಾನು ರಾಜದ್ರೋಹ ಕೆಲಸ ಮಾಡಿದ್ದೇನೆ, ಬ್ರಿಟಿಷರು ಭಾರತ ಬಿಟ್ಟು ತೊಲಗುವವರೆಗೆ ರಾಜದ್ರೋಹ ಭಾಷಣ ಮಾಡುತ್ತಲೇ ಇರುತ್ತೇನೆ ಎಂದು ಉತ್ತರಿಸಿದರು. ನ್ಯಾಯಾಧೀಶರು ಇದು ನಿಮ್ಮ ನಿಲುವಾಗಿದ್ದರೆ, ಪ್ರಚಲಿತ ರಾಜದ್ರೋಹ ಕಾನೂನಿಗನುಸಾರ ನಿಮಗೆ 6 ವರ್ಷ ಕಠಿಣ ಶಿಕ್ಷೆ ವಿಧಿಸಿದ್ದೇನೆ ಎಂದರು. ಈ ಮೊದಲೇ ರಾಜದ್ರೋಹ ಆರೋಪದ ಮೇಲೆ 6 ವರ್ಷಗಳ ಕಠಿಣ ಶಿಕ್ಷೆಗೆ ಒಳಗಾಗಿರುವ ಗೌರವಾನ್ವಿತ ಬಾಲಗಂಗಾಧರ ತಿಲಕ್‌ರವರಿಗೆ ಕೊಟ್ಟಿರುವಷ್ಟು ಶಿಕ್ಷೆಯನ್ನು ನನಗೂ ವಿಧಿಸಿ ನನ್ನನ್ನು ಅವರ ಮಟ್ಟಕ್ಕೆ ಏರಿಸಿದ್ದೀರಿ ಅದಕ್ಕಾಗಿ ನಿಮಗೆ ವಂದನೆಗಳು ಎಂದರು ಗಾಂಧೀಜಿ.

ದೇಶದ್ರೋಹ

ಅಂದಿನ ಬ್ರಿಟಿಷ್ ಸರ್ಕಾರ ತನ್ನ ಮೇಲೆ ಯಾವುದೇ ಭಿನ್ನಾಭಿಪ್ರಾಯ ಸೂಚಿಸಿದರೂ ಅದನ್ನು ರಾಜದ್ರೋಹ ಎಂದು ಭಾವಿಸುತ್ತಿತ್ತು. ಪ್ರತಿರೋಧ ತೋರಿಸುವ ಯಾವುದೇ ಕಾರ್ಯಕ್ರಮವನ್ನು ರಾಜದ್ರೋಹ ಎಂದು ಭಾವಿಸುತ್ತಿತ್ತು. ಸರ್ಕಾರದ ನೀತಿಯನ್ನು ಖಂಡಿಸಿ ಸಭೆ ನಡೆಸುವುದು ಅಥವಾ ಮೆರವಣಿಗೆ ತೆರಳುವುದು ರಾಜದ್ರೋಹದ ಕೆಲಸ ಎಂದು ಬ್ರಿಟಿಷ್ ಸರ್ಕಾರ ಭಾವಿಸುತ್ತಿತ್ತು. ಸರ್ಕಾರದ ಬಗೆಗೆ ಕೋಪ-ದ್ವೇಷ ಮೂಡಿಸುವುದೂ ರಾಜದ್ರೋಹವೆನಿಸಿತ್ತು. ಈ ಕಾನೂನನ್ನೇ ಬ್ರಿಟಿಷರು ಬಾಲಗಂಗಾಧರ ತಿಲಕ್, ಅನಿಬೆಸೆಂಟ್, ಮೌಲಾನ ಅಬ್ದುಲ್ ಕಲಾಂ ಅಜಾದ್, ಅಲಿ ಸಹೋದರರು ಈ ಎಲ್ಲರ ಮೇಲೆ ಹೇರಿತ್ತು. ಮುಕ್ತ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಕಸಿಯಲು ಸರ್ಕಾರ ತೊಡಗುವುದು ಪ್ರಜೆಯ ಮೂಲಭೂತ ಹಕ್ಕನ್ನು ಕಸಿದಂತೆ. ಈ ಬರ್ಬರ ರಾಜದ್ರೋಹ ಕಾನೂನು ನಮ್ಮ ರಾಜ್ಯಾಂಗದ ಆಶಯಗಳಿಗೆ ಕಂಟಕಪ್ರಾಯ.

ರಾಜ್ಯಾಂಗ ಸಭೆಯಲ್ಲಿ ಕೆ.ಎಂ ಮುನ್ಷಿಯವರು, ರಾಜ್ಯಾಂಗದಲ್ಲಿ ನುಸುಳಿದ ರಾಜದ್ರ್ರೋಹದ ಕಲಂ ಅನ್ನು ಕೈಬಿಡಬೇಕೆಂದು ತಿದ್ದುಪಡಿ ಸೂಚಿಸಿದರು. ಈ ತಿದ್ದುಪಡಿಗೆ ಅನುಮೋದನೆ ದೊರೆಯಿತಾದರೂ, ದೇಶದ ಭದ್ರತೆ ಮತ್ತು ಅಖಂಡತೆಯನ್ನು ಕಾಪಾಡುವ ದೃಷ್ಟಿಯಿಂದ ಕೆಲವು ಕ್ಲಾಸ್‌ಗಳನ್ನು ಉಳಿಸಿಕೊಳ್ಳಲಾಯಿತು. ಹೀಗಾಗಿ ರಾಜದ್ರೋಹದ ಕಾನೂನು ಕೆಲವು ಬದಲಾವಣೆಗಳೊಂದಿಗೆ ಹಾಗೇ ಉಳಿದುಹೋಯಿತು.

ರಾಜದ್ರೋಹ ಕಾನೂನಿನ ದುರ್ಬಳಕೆಯಿಂದ ಅನೇಕರ ಜೀವನ ಹಾಳಾಯಿತು. ರಾಜದ್ರೋಹ ಆಪಾದನೆಯಲ್ಲಿ ವಿಚಾರಣೆಯಾಗುತ್ತಿದ್ದು, 2019ನೆ ಇಸವಿಯಲ್ಲಿ ಬಾಕಿ ಇದ್ದ ಕೇಸುಗಳ ಶೇ 9ರಷ್ಟರಲ್ಲಿ ಖಟ್ಳೆಗಳನ್ನು ಕೈಬಿಡಲಾಯಿತು. ಕಾರಣ: ಸಾಕ್ಷ್ಯಾಧಾರಗಳ ಕೊರತೆ ಅಥವಾ ತಪ್ಪಿತಸ್ಥರ ಪರಾರಿಯಾಗಿದ್ದರಿಂದ! 2014ರ ನಂತರ ಸರ್ಕಾರ ನಡೆಸುವವರನ್ನು ಟೀಕೆ ಮಾಡಿದ್ದಕ್ಕಾಗಿ, ಮೋದಿ ಮುಂತಾದ ನಾಯಕರನ್ನು ಟೀಕೆ ಮಾಡಿದ್ದಕ್ಕಾಗಿ ನೂರಾರು ಜನರ ಮೇಲೆ ಕೇಸು ದಾಖಲಾಗಿವೆ.

ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ರಾಜದ್ರೋಹ ಆಪಾದನೆ ಹೊರೆಸುವುದರಲ್ಲಿ ಬಹಳ ಮುಂದಿದ್ದಾರೆ. ಕಳೆದ 4 ವರ್ಷಗಳಲ್ಲಿ ನಾಗರಿಕ (ತಿದ್ದುಪಡಿಯಾದ 2019) ಮಸೂದೆ ವಿರುದ್ಧ ಸೊಲ್ಲೆತ್ತಿದ 90 ಜನರ ಮೇಲೆ ರಾಜದ್ರೋಹ ಆಪಾದನೆ ಖಟ್ಳೆ ಹಾಕಿದ್ದಾರೆ. ಕಾರಣವಿಲ್ಲದೆ ಅವರ ಬಾಯಿ ಮುಚ್ಚಿಸಲು ರಾಜದ್ರೋಹ ಆಪಾದನೆಯನ್ನು ಅವರ ಮೇಲೆ ಹೊರಿಸಲಾಗಿದೆ.

ಸರ್ಕಾರಗಳು ಅನೇಕರ ಮೇಲೆ ರಾಜದ್ರೋಹ ಆಪಾದನೆ ಹೊರಿಸಿ ಸೆರೆಮನೆಗೆ ಕಳುಹಿಸುತ್ತಿರುವುದನ್ನು ಸರ್ವೋಚ್ಚ ನ್ಯಾಯಾಲಯ ಪ್ರಶ್ನಿಸಿದೆ. ದೇಶದ ಇತರ ಭಾಗಗಳಲ್ಲಿರುವ ಅಧೀನ ನ್ಯಾಯಾಲಯಗಳು ರಾಜದ್ರೋಹ ಹೇರುತ್ತಿರುವ ಸರ್ಕಾರದ ಆತುರದ ಕ್ರಮಗಳನ್ನು ಪ್ರಶ್ನಿಸಲು ತೊಡಗಿವೆ. ಅಪಾಯಕಾರಿ ಐಡಿಯಾಲಜಿಗಳು ಭಾರತದ ಐಕ್ಯತೆ ಮತ್ತು ಸಾರ್ವಭೌಮತ್ವವನ್ನು ಅಲ್ಲಗಳೆಯುತ್ತಿವೆ ಎಂದು ಮೋದಿ ಹರಿಹಾಯ್ದಿದ್ದಾರೆ. ಈ ಬಗೆಯ ಹೇಳಿಕೆ ಕೊಡುವ ಬದಲು ಮೋದಿಯವರು ತಮ್ಮ ಗೆಯ್ಮೆ ಸರಿಯೇ ಎಂದು ಆತ್ಮವಿಮರ್ಶೆ ಮಾಡಿಕೊಳ್ಳಬೇಕು.


ಇದನ್ನೂ ಓದಿ: ಸರ್ಕಾರದಿಂದ ದೇಶದ್ರೋಹ ಕಾನೂನು ದುರುಪಯೋಗ, ಅದನ್ನು ರದ್ದುಗೊಳಿಸಬೇಕು : ನಿವೃತ್ತ ಸುಪ್ರೀಂ ನ್ಯಾಯಾಧೀಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...