Homeಅಂಕಣಗಳುನೂರರ ನೋಟ: ಎಗ್ಗಿಲ್ಲದೆ ಮುಂದುವರೆದಿರುವ ದೇಶದ್ರೋಹ ಆಪಾದನೆಯ ದುರ್ಬಳಕೆ

ನೂರರ ನೋಟ: ಎಗ್ಗಿಲ್ಲದೆ ಮುಂದುವರೆದಿರುವ ದೇಶದ್ರೋಹ ಆಪಾದನೆಯ ದುರ್ಬಳಕೆ

- Advertisement -
- Advertisement -

ಮೋದಿ ಸರ್ಕಾರ ತನ್ನ ಪ್ರಜೆಗಳ ಮೇಲೆ ಸಮರ ಸಾರಿದೆ. ಸರ್ಕಾರದ ಧೋರಣೆಯನ್ನು ಒಪ್ಪದ ನಾಗರಿಕರು ಸರ್ಕಾರವನ್ನು ಟೀಕೆ ಮಾಡಿದರೆ ಅವರ ಮೇಲೆ ದೇಶದ್ರೋಹದ ಆಪಾದನೆ ಹೊರಿಸಿ ಬಂಧನದಲ್ಲಿಡಲಾಗುತ್ತಿದೆ. ತನ್ನ ಧೋರಣೆಯನ್ನು ಒಪ್ಪದವರ ಮೇಲೆ, ರಾಜಕೀಯ ವಿರೋಧಿಗಳ ಮೇಲೆ, ಸ್ವತಂತ್ರ ಧೋರಣೆಯ ಪತ್ರಕರ್ತರು, ಬರಹಗಾರರು, ಕಾಲೇಜು ಅಧ್ಯಾಪಕರುಗಳ ಮೇಲೆ ಹಲವು ಪ್ರಕರಣಗಳನ್ನು ದಾಖಲಿಸುವುದರಿಂದ ಹಿಡಿದು, ದಸ್ತಗಿರಿ ಮಾಡುವುದು ಅವರ ವಿರುದ್ಧ ಖಟ್ಳೆ ಹೂಡುವುದು ಇವನ್ನೆಲ್ಲಾ ಸರ್ಕಾರ ಮಾಡುತ್ತಿದ್ದು ತನ್ನ ಧೋರಣೆಯನ್ನು ಎತ್ತಿ ಹಿಡಿಯುವ, ಹಾಡಿಹೊಗಳುವವರನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ರಾಜದ್ರೋಹದ ಕಾನೂನು ಬ್ರಿಟಿಷರು ಸ್ವಾತಂತ್ರ್ಯ ಬಯಸುವವರನ್ನು ಬಗ್ಗುಬಡಿಯಲು ಬಳಸುತ್ತಿದ್ದ ದುರ್ಬಳಕೆಯ ಆಯುಧ. ಈ ಕಾನೂನನ್ನು ಮೋದಿಯವರು ಅಧಿಕಾರಕ್ಕೆ ಬಂದಮೇಲೆ ಮನಸೋಇಚ್ಛೆ ಬಳಸುತ್ತಿದ್ದಾರೆ. ಇಂಗ್ಲೆಂಡಿನಲ್ಲಿ ಈ ಉಗ್ರ ಕಾಯಿದೆಯನ್ನು ತೆಗೆದುಹಾಕಿದ್ದರೂ ಭಾರತದಲ್ಲಿ ಈ ಅನ್ಯಾಯದ ಕಾಯ್ದೆಯನ್ನು ಜೀವಂತ ಇಟ್ಟು, ಮೋದಿ ಸರ್ಕಾರದಂತಹ ಸರ್ಕಾರಗಳು ಅದನ್ನು ದುರ್ಬಳಕೆ ಮಾಡುತ್ತಿವೆ.

ಗಾಂಧೀಜಿಯವರ ಮೇಲೆ ರಾಜದ್ರೋಹ ಆಪಾದನೆ ಹೊರಿಸಿ ನ್ಯಾಯಾಲಯದ ಮುಂದೆ ನಿಲ್ಲಿಸಲಾಗಿತ್ತು. “ನೀವು ರಾಜದ್ರೋಹ ಮಾಡಿದ್ದೀರಿ ಎಂದು ಸರ್ಕಾರ ಖಟ್ಳೆ ಹಾಕಿದೆ, ಇದನ್ನು ನೀವು ಅಲ್ಲೆಗಳೆಯುತ್ತೀರಾ” ಎಂದು ಕೇಳಿದಾಗ, ಗಾಂಧೀಜಿ ಹೌದು ನಾನು ರಾಜದ್ರೋಹ ಕೆಲಸ ಮಾಡಿದ್ದೇನೆ, ಬ್ರಿಟಿಷರು ಭಾರತ ಬಿಟ್ಟು ತೊಲಗುವವರೆಗೆ ರಾಜದ್ರೋಹ ಭಾಷಣ ಮಾಡುತ್ತಲೇ ಇರುತ್ತೇನೆ ಎಂದು ಉತ್ತರಿಸಿದರು. ನ್ಯಾಯಾಧೀಶರು ಇದು ನಿಮ್ಮ ನಿಲುವಾಗಿದ್ದರೆ, ಪ್ರಚಲಿತ ರಾಜದ್ರೋಹ ಕಾನೂನಿಗನುಸಾರ ನಿಮಗೆ 6 ವರ್ಷ ಕಠಿಣ ಶಿಕ್ಷೆ ವಿಧಿಸಿದ್ದೇನೆ ಎಂದರು. ಈ ಮೊದಲೇ ರಾಜದ್ರೋಹ ಆರೋಪದ ಮೇಲೆ 6 ವರ್ಷಗಳ ಕಠಿಣ ಶಿಕ್ಷೆಗೆ ಒಳಗಾಗಿರುವ ಗೌರವಾನ್ವಿತ ಬಾಲಗಂಗಾಧರ ತಿಲಕ್‌ರವರಿಗೆ ಕೊಟ್ಟಿರುವಷ್ಟು ಶಿಕ್ಷೆಯನ್ನು ನನಗೂ ವಿಧಿಸಿ ನನ್ನನ್ನು ಅವರ ಮಟ್ಟಕ್ಕೆ ಏರಿಸಿದ್ದೀರಿ ಅದಕ್ಕಾಗಿ ನಿಮಗೆ ವಂದನೆಗಳು ಎಂದರು ಗಾಂಧೀಜಿ.

ದೇಶದ್ರೋಹ

ಅಂದಿನ ಬ್ರಿಟಿಷ್ ಸರ್ಕಾರ ತನ್ನ ಮೇಲೆ ಯಾವುದೇ ಭಿನ್ನಾಭಿಪ್ರಾಯ ಸೂಚಿಸಿದರೂ ಅದನ್ನು ರಾಜದ್ರೋಹ ಎಂದು ಭಾವಿಸುತ್ತಿತ್ತು. ಪ್ರತಿರೋಧ ತೋರಿಸುವ ಯಾವುದೇ ಕಾರ್ಯಕ್ರಮವನ್ನು ರಾಜದ್ರೋಹ ಎಂದು ಭಾವಿಸುತ್ತಿತ್ತು. ಸರ್ಕಾರದ ನೀತಿಯನ್ನು ಖಂಡಿಸಿ ಸಭೆ ನಡೆಸುವುದು ಅಥವಾ ಮೆರವಣಿಗೆ ತೆರಳುವುದು ರಾಜದ್ರೋಹದ ಕೆಲಸ ಎಂದು ಬ್ರಿಟಿಷ್ ಸರ್ಕಾರ ಭಾವಿಸುತ್ತಿತ್ತು. ಸರ್ಕಾರದ ಬಗೆಗೆ ಕೋಪ-ದ್ವೇಷ ಮೂಡಿಸುವುದೂ ರಾಜದ್ರೋಹವೆನಿಸಿತ್ತು. ಈ ಕಾನೂನನ್ನೇ ಬ್ರಿಟಿಷರು ಬಾಲಗಂಗಾಧರ ತಿಲಕ್, ಅನಿಬೆಸೆಂಟ್, ಮೌಲಾನ ಅಬ್ದುಲ್ ಕಲಾಂ ಅಜಾದ್, ಅಲಿ ಸಹೋದರರು ಈ ಎಲ್ಲರ ಮೇಲೆ ಹೇರಿತ್ತು. ಮುಕ್ತ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಕಸಿಯಲು ಸರ್ಕಾರ ತೊಡಗುವುದು ಪ್ರಜೆಯ ಮೂಲಭೂತ ಹಕ್ಕನ್ನು ಕಸಿದಂತೆ. ಈ ಬರ್ಬರ ರಾಜದ್ರೋಹ ಕಾನೂನು ನಮ್ಮ ರಾಜ್ಯಾಂಗದ ಆಶಯಗಳಿಗೆ ಕಂಟಕಪ್ರಾಯ.

ರಾಜ್ಯಾಂಗ ಸಭೆಯಲ್ಲಿ ಕೆ.ಎಂ ಮುನ್ಷಿಯವರು, ರಾಜ್ಯಾಂಗದಲ್ಲಿ ನುಸುಳಿದ ರಾಜದ್ರ್ರೋಹದ ಕಲಂ ಅನ್ನು ಕೈಬಿಡಬೇಕೆಂದು ತಿದ್ದುಪಡಿ ಸೂಚಿಸಿದರು. ಈ ತಿದ್ದುಪಡಿಗೆ ಅನುಮೋದನೆ ದೊರೆಯಿತಾದರೂ, ದೇಶದ ಭದ್ರತೆ ಮತ್ತು ಅಖಂಡತೆಯನ್ನು ಕಾಪಾಡುವ ದೃಷ್ಟಿಯಿಂದ ಕೆಲವು ಕ್ಲಾಸ್‌ಗಳನ್ನು ಉಳಿಸಿಕೊಳ್ಳಲಾಯಿತು. ಹೀಗಾಗಿ ರಾಜದ್ರೋಹದ ಕಾನೂನು ಕೆಲವು ಬದಲಾವಣೆಗಳೊಂದಿಗೆ ಹಾಗೇ ಉಳಿದುಹೋಯಿತು.

ರಾಜದ್ರೋಹ ಕಾನೂನಿನ ದುರ್ಬಳಕೆಯಿಂದ ಅನೇಕರ ಜೀವನ ಹಾಳಾಯಿತು. ರಾಜದ್ರೋಹ ಆಪಾದನೆಯಲ್ಲಿ ವಿಚಾರಣೆಯಾಗುತ್ತಿದ್ದು, 2019ನೆ ಇಸವಿಯಲ್ಲಿ ಬಾಕಿ ಇದ್ದ ಕೇಸುಗಳ ಶೇ 9ರಷ್ಟರಲ್ಲಿ ಖಟ್ಳೆಗಳನ್ನು ಕೈಬಿಡಲಾಯಿತು. ಕಾರಣ: ಸಾಕ್ಷ್ಯಾಧಾರಗಳ ಕೊರತೆ ಅಥವಾ ತಪ್ಪಿತಸ್ಥರ ಪರಾರಿಯಾಗಿದ್ದರಿಂದ! 2014ರ ನಂತರ ಸರ್ಕಾರ ನಡೆಸುವವರನ್ನು ಟೀಕೆ ಮಾಡಿದ್ದಕ್ಕಾಗಿ, ಮೋದಿ ಮುಂತಾದ ನಾಯಕರನ್ನು ಟೀಕೆ ಮಾಡಿದ್ದಕ್ಕಾಗಿ ನೂರಾರು ಜನರ ಮೇಲೆ ಕೇಸು ದಾಖಲಾಗಿವೆ.

ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ರಾಜದ್ರೋಹ ಆಪಾದನೆ ಹೊರೆಸುವುದರಲ್ಲಿ ಬಹಳ ಮುಂದಿದ್ದಾರೆ. ಕಳೆದ 4 ವರ್ಷಗಳಲ್ಲಿ ನಾಗರಿಕ (ತಿದ್ದುಪಡಿಯಾದ 2019) ಮಸೂದೆ ವಿರುದ್ಧ ಸೊಲ್ಲೆತ್ತಿದ 90 ಜನರ ಮೇಲೆ ರಾಜದ್ರೋಹ ಆಪಾದನೆ ಖಟ್ಳೆ ಹಾಕಿದ್ದಾರೆ. ಕಾರಣವಿಲ್ಲದೆ ಅವರ ಬಾಯಿ ಮುಚ್ಚಿಸಲು ರಾಜದ್ರೋಹ ಆಪಾದನೆಯನ್ನು ಅವರ ಮೇಲೆ ಹೊರಿಸಲಾಗಿದೆ.

ಸರ್ಕಾರಗಳು ಅನೇಕರ ಮೇಲೆ ರಾಜದ್ರೋಹ ಆಪಾದನೆ ಹೊರಿಸಿ ಸೆರೆಮನೆಗೆ ಕಳುಹಿಸುತ್ತಿರುವುದನ್ನು ಸರ್ವೋಚ್ಚ ನ್ಯಾಯಾಲಯ ಪ್ರಶ್ನಿಸಿದೆ. ದೇಶದ ಇತರ ಭಾಗಗಳಲ್ಲಿರುವ ಅಧೀನ ನ್ಯಾಯಾಲಯಗಳು ರಾಜದ್ರೋಹ ಹೇರುತ್ತಿರುವ ಸರ್ಕಾರದ ಆತುರದ ಕ್ರಮಗಳನ್ನು ಪ್ರಶ್ನಿಸಲು ತೊಡಗಿವೆ. ಅಪಾಯಕಾರಿ ಐಡಿಯಾಲಜಿಗಳು ಭಾರತದ ಐಕ್ಯತೆ ಮತ್ತು ಸಾರ್ವಭೌಮತ್ವವನ್ನು ಅಲ್ಲಗಳೆಯುತ್ತಿವೆ ಎಂದು ಮೋದಿ ಹರಿಹಾಯ್ದಿದ್ದಾರೆ. ಈ ಬಗೆಯ ಹೇಳಿಕೆ ಕೊಡುವ ಬದಲು ಮೋದಿಯವರು ತಮ್ಮ ಗೆಯ್ಮೆ ಸರಿಯೇ ಎಂದು ಆತ್ಮವಿಮರ್ಶೆ ಮಾಡಿಕೊಳ್ಳಬೇಕು.


ಇದನ್ನೂ ಓದಿ: ಸರ್ಕಾರದಿಂದ ದೇಶದ್ರೋಹ ಕಾನೂನು ದುರುಪಯೋಗ, ಅದನ್ನು ರದ್ದುಗೊಳಿಸಬೇಕು : ನಿವೃತ್ತ ಸುಪ್ರೀಂ ನ್ಯಾಯಾಧೀಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...