Homeಅಂಕಣಗಳುನೂರರ ನೋಟ: ಎಗ್ಗಿಲ್ಲದೆ ಮುಂದುವರೆದಿರುವ ದೇಶದ್ರೋಹ ಆಪಾದನೆಯ ದುರ್ಬಳಕೆ

ನೂರರ ನೋಟ: ಎಗ್ಗಿಲ್ಲದೆ ಮುಂದುವರೆದಿರುವ ದೇಶದ್ರೋಹ ಆಪಾದನೆಯ ದುರ್ಬಳಕೆ

- Advertisement -
- Advertisement -

ಮೋದಿ ಸರ್ಕಾರ ತನ್ನ ಪ್ರಜೆಗಳ ಮೇಲೆ ಸಮರ ಸಾರಿದೆ. ಸರ್ಕಾರದ ಧೋರಣೆಯನ್ನು ಒಪ್ಪದ ನಾಗರಿಕರು ಸರ್ಕಾರವನ್ನು ಟೀಕೆ ಮಾಡಿದರೆ ಅವರ ಮೇಲೆ ದೇಶದ್ರೋಹದ ಆಪಾದನೆ ಹೊರಿಸಿ ಬಂಧನದಲ್ಲಿಡಲಾಗುತ್ತಿದೆ. ತನ್ನ ಧೋರಣೆಯನ್ನು ಒಪ್ಪದವರ ಮೇಲೆ, ರಾಜಕೀಯ ವಿರೋಧಿಗಳ ಮೇಲೆ, ಸ್ವತಂತ್ರ ಧೋರಣೆಯ ಪತ್ರಕರ್ತರು, ಬರಹಗಾರರು, ಕಾಲೇಜು ಅಧ್ಯಾಪಕರುಗಳ ಮೇಲೆ ಹಲವು ಪ್ರಕರಣಗಳನ್ನು ದಾಖಲಿಸುವುದರಿಂದ ಹಿಡಿದು, ದಸ್ತಗಿರಿ ಮಾಡುವುದು ಅವರ ವಿರುದ್ಧ ಖಟ್ಳೆ ಹೂಡುವುದು ಇವನ್ನೆಲ್ಲಾ ಸರ್ಕಾರ ಮಾಡುತ್ತಿದ್ದು ತನ್ನ ಧೋರಣೆಯನ್ನು ಎತ್ತಿ ಹಿಡಿಯುವ, ಹಾಡಿಹೊಗಳುವವರನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ರಾಜದ್ರೋಹದ ಕಾನೂನು ಬ್ರಿಟಿಷರು ಸ್ವಾತಂತ್ರ್ಯ ಬಯಸುವವರನ್ನು ಬಗ್ಗುಬಡಿಯಲು ಬಳಸುತ್ತಿದ್ದ ದುರ್ಬಳಕೆಯ ಆಯುಧ. ಈ ಕಾನೂನನ್ನು ಮೋದಿಯವರು ಅಧಿಕಾರಕ್ಕೆ ಬಂದಮೇಲೆ ಮನಸೋಇಚ್ಛೆ ಬಳಸುತ್ತಿದ್ದಾರೆ. ಇಂಗ್ಲೆಂಡಿನಲ್ಲಿ ಈ ಉಗ್ರ ಕಾಯಿದೆಯನ್ನು ತೆಗೆದುಹಾಕಿದ್ದರೂ ಭಾರತದಲ್ಲಿ ಈ ಅನ್ಯಾಯದ ಕಾಯ್ದೆಯನ್ನು ಜೀವಂತ ಇಟ್ಟು, ಮೋದಿ ಸರ್ಕಾರದಂತಹ ಸರ್ಕಾರಗಳು ಅದನ್ನು ದುರ್ಬಳಕೆ ಮಾಡುತ್ತಿವೆ.

ಗಾಂಧೀಜಿಯವರ ಮೇಲೆ ರಾಜದ್ರೋಹ ಆಪಾದನೆ ಹೊರಿಸಿ ನ್ಯಾಯಾಲಯದ ಮುಂದೆ ನಿಲ್ಲಿಸಲಾಗಿತ್ತು. “ನೀವು ರಾಜದ್ರೋಹ ಮಾಡಿದ್ದೀರಿ ಎಂದು ಸರ್ಕಾರ ಖಟ್ಳೆ ಹಾಕಿದೆ, ಇದನ್ನು ನೀವು ಅಲ್ಲೆಗಳೆಯುತ್ತೀರಾ” ಎಂದು ಕೇಳಿದಾಗ, ಗಾಂಧೀಜಿ ಹೌದು ನಾನು ರಾಜದ್ರೋಹ ಕೆಲಸ ಮಾಡಿದ್ದೇನೆ, ಬ್ರಿಟಿಷರು ಭಾರತ ಬಿಟ್ಟು ತೊಲಗುವವರೆಗೆ ರಾಜದ್ರೋಹ ಭಾಷಣ ಮಾಡುತ್ತಲೇ ಇರುತ್ತೇನೆ ಎಂದು ಉತ್ತರಿಸಿದರು. ನ್ಯಾಯಾಧೀಶರು ಇದು ನಿಮ್ಮ ನಿಲುವಾಗಿದ್ದರೆ, ಪ್ರಚಲಿತ ರಾಜದ್ರೋಹ ಕಾನೂನಿಗನುಸಾರ ನಿಮಗೆ 6 ವರ್ಷ ಕಠಿಣ ಶಿಕ್ಷೆ ವಿಧಿಸಿದ್ದೇನೆ ಎಂದರು. ಈ ಮೊದಲೇ ರಾಜದ್ರೋಹ ಆರೋಪದ ಮೇಲೆ 6 ವರ್ಷಗಳ ಕಠಿಣ ಶಿಕ್ಷೆಗೆ ಒಳಗಾಗಿರುವ ಗೌರವಾನ್ವಿತ ಬಾಲಗಂಗಾಧರ ತಿಲಕ್‌ರವರಿಗೆ ಕೊಟ್ಟಿರುವಷ್ಟು ಶಿಕ್ಷೆಯನ್ನು ನನಗೂ ವಿಧಿಸಿ ನನ್ನನ್ನು ಅವರ ಮಟ್ಟಕ್ಕೆ ಏರಿಸಿದ್ದೀರಿ ಅದಕ್ಕಾಗಿ ನಿಮಗೆ ವಂದನೆಗಳು ಎಂದರು ಗಾಂಧೀಜಿ.

ದೇಶದ್ರೋಹ

ಅಂದಿನ ಬ್ರಿಟಿಷ್ ಸರ್ಕಾರ ತನ್ನ ಮೇಲೆ ಯಾವುದೇ ಭಿನ್ನಾಭಿಪ್ರಾಯ ಸೂಚಿಸಿದರೂ ಅದನ್ನು ರಾಜದ್ರೋಹ ಎಂದು ಭಾವಿಸುತ್ತಿತ್ತು. ಪ್ರತಿರೋಧ ತೋರಿಸುವ ಯಾವುದೇ ಕಾರ್ಯಕ್ರಮವನ್ನು ರಾಜದ್ರೋಹ ಎಂದು ಭಾವಿಸುತ್ತಿತ್ತು. ಸರ್ಕಾರದ ನೀತಿಯನ್ನು ಖಂಡಿಸಿ ಸಭೆ ನಡೆಸುವುದು ಅಥವಾ ಮೆರವಣಿಗೆ ತೆರಳುವುದು ರಾಜದ್ರೋಹದ ಕೆಲಸ ಎಂದು ಬ್ರಿಟಿಷ್ ಸರ್ಕಾರ ಭಾವಿಸುತ್ತಿತ್ತು. ಸರ್ಕಾರದ ಬಗೆಗೆ ಕೋಪ-ದ್ವೇಷ ಮೂಡಿಸುವುದೂ ರಾಜದ್ರೋಹವೆನಿಸಿತ್ತು. ಈ ಕಾನೂನನ್ನೇ ಬ್ರಿಟಿಷರು ಬಾಲಗಂಗಾಧರ ತಿಲಕ್, ಅನಿಬೆಸೆಂಟ್, ಮೌಲಾನ ಅಬ್ದುಲ್ ಕಲಾಂ ಅಜಾದ್, ಅಲಿ ಸಹೋದರರು ಈ ಎಲ್ಲರ ಮೇಲೆ ಹೇರಿತ್ತು. ಮುಕ್ತ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಕಸಿಯಲು ಸರ್ಕಾರ ತೊಡಗುವುದು ಪ್ರಜೆಯ ಮೂಲಭೂತ ಹಕ್ಕನ್ನು ಕಸಿದಂತೆ. ಈ ಬರ್ಬರ ರಾಜದ್ರೋಹ ಕಾನೂನು ನಮ್ಮ ರಾಜ್ಯಾಂಗದ ಆಶಯಗಳಿಗೆ ಕಂಟಕಪ್ರಾಯ.

ರಾಜ್ಯಾಂಗ ಸಭೆಯಲ್ಲಿ ಕೆ.ಎಂ ಮುನ್ಷಿಯವರು, ರಾಜ್ಯಾಂಗದಲ್ಲಿ ನುಸುಳಿದ ರಾಜದ್ರ್ರೋಹದ ಕಲಂ ಅನ್ನು ಕೈಬಿಡಬೇಕೆಂದು ತಿದ್ದುಪಡಿ ಸೂಚಿಸಿದರು. ಈ ತಿದ್ದುಪಡಿಗೆ ಅನುಮೋದನೆ ದೊರೆಯಿತಾದರೂ, ದೇಶದ ಭದ್ರತೆ ಮತ್ತು ಅಖಂಡತೆಯನ್ನು ಕಾಪಾಡುವ ದೃಷ್ಟಿಯಿಂದ ಕೆಲವು ಕ್ಲಾಸ್‌ಗಳನ್ನು ಉಳಿಸಿಕೊಳ್ಳಲಾಯಿತು. ಹೀಗಾಗಿ ರಾಜದ್ರೋಹದ ಕಾನೂನು ಕೆಲವು ಬದಲಾವಣೆಗಳೊಂದಿಗೆ ಹಾಗೇ ಉಳಿದುಹೋಯಿತು.

ರಾಜದ್ರೋಹ ಕಾನೂನಿನ ದುರ್ಬಳಕೆಯಿಂದ ಅನೇಕರ ಜೀವನ ಹಾಳಾಯಿತು. ರಾಜದ್ರೋಹ ಆಪಾದನೆಯಲ್ಲಿ ವಿಚಾರಣೆಯಾಗುತ್ತಿದ್ದು, 2019ನೆ ಇಸವಿಯಲ್ಲಿ ಬಾಕಿ ಇದ್ದ ಕೇಸುಗಳ ಶೇ 9ರಷ್ಟರಲ್ಲಿ ಖಟ್ಳೆಗಳನ್ನು ಕೈಬಿಡಲಾಯಿತು. ಕಾರಣ: ಸಾಕ್ಷ್ಯಾಧಾರಗಳ ಕೊರತೆ ಅಥವಾ ತಪ್ಪಿತಸ್ಥರ ಪರಾರಿಯಾಗಿದ್ದರಿಂದ! 2014ರ ನಂತರ ಸರ್ಕಾರ ನಡೆಸುವವರನ್ನು ಟೀಕೆ ಮಾಡಿದ್ದಕ್ಕಾಗಿ, ಮೋದಿ ಮುಂತಾದ ನಾಯಕರನ್ನು ಟೀಕೆ ಮಾಡಿದ್ದಕ್ಕಾಗಿ ನೂರಾರು ಜನರ ಮೇಲೆ ಕೇಸು ದಾಖಲಾಗಿವೆ.

ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ರಾಜದ್ರೋಹ ಆಪಾದನೆ ಹೊರೆಸುವುದರಲ್ಲಿ ಬಹಳ ಮುಂದಿದ್ದಾರೆ. ಕಳೆದ 4 ವರ್ಷಗಳಲ್ಲಿ ನಾಗರಿಕ (ತಿದ್ದುಪಡಿಯಾದ 2019) ಮಸೂದೆ ವಿರುದ್ಧ ಸೊಲ್ಲೆತ್ತಿದ 90 ಜನರ ಮೇಲೆ ರಾಜದ್ರೋಹ ಆಪಾದನೆ ಖಟ್ಳೆ ಹಾಕಿದ್ದಾರೆ. ಕಾರಣವಿಲ್ಲದೆ ಅವರ ಬಾಯಿ ಮುಚ್ಚಿಸಲು ರಾಜದ್ರೋಹ ಆಪಾದನೆಯನ್ನು ಅವರ ಮೇಲೆ ಹೊರಿಸಲಾಗಿದೆ.

ಸರ್ಕಾರಗಳು ಅನೇಕರ ಮೇಲೆ ರಾಜದ್ರೋಹ ಆಪಾದನೆ ಹೊರಿಸಿ ಸೆರೆಮನೆಗೆ ಕಳುಹಿಸುತ್ತಿರುವುದನ್ನು ಸರ್ವೋಚ್ಚ ನ್ಯಾಯಾಲಯ ಪ್ರಶ್ನಿಸಿದೆ. ದೇಶದ ಇತರ ಭಾಗಗಳಲ್ಲಿರುವ ಅಧೀನ ನ್ಯಾಯಾಲಯಗಳು ರಾಜದ್ರೋಹ ಹೇರುತ್ತಿರುವ ಸರ್ಕಾರದ ಆತುರದ ಕ್ರಮಗಳನ್ನು ಪ್ರಶ್ನಿಸಲು ತೊಡಗಿವೆ. ಅಪಾಯಕಾರಿ ಐಡಿಯಾಲಜಿಗಳು ಭಾರತದ ಐಕ್ಯತೆ ಮತ್ತು ಸಾರ್ವಭೌಮತ್ವವನ್ನು ಅಲ್ಲಗಳೆಯುತ್ತಿವೆ ಎಂದು ಮೋದಿ ಹರಿಹಾಯ್ದಿದ್ದಾರೆ. ಈ ಬಗೆಯ ಹೇಳಿಕೆ ಕೊಡುವ ಬದಲು ಮೋದಿಯವರು ತಮ್ಮ ಗೆಯ್ಮೆ ಸರಿಯೇ ಎಂದು ಆತ್ಮವಿಮರ್ಶೆ ಮಾಡಿಕೊಳ್ಳಬೇಕು.


ಇದನ್ನೂ ಓದಿ: ಸರ್ಕಾರದಿಂದ ದೇಶದ್ರೋಹ ಕಾನೂನು ದುರುಪಯೋಗ, ಅದನ್ನು ರದ್ದುಗೊಳಿಸಬೇಕು : ನಿವೃತ್ತ ಸುಪ್ರೀಂ ನ್ಯಾಯಾಧೀಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...