Homeಅಂಕಣಗಳುನೂರರ ನೋಟ: ಎಗ್ಗಿಲ್ಲದೆ ಮುಂದುವರೆದಿರುವ ದೇಶದ್ರೋಹ ಆಪಾದನೆಯ ದುರ್ಬಳಕೆ

ನೂರರ ನೋಟ: ಎಗ್ಗಿಲ್ಲದೆ ಮುಂದುವರೆದಿರುವ ದೇಶದ್ರೋಹ ಆಪಾದನೆಯ ದುರ್ಬಳಕೆ

- Advertisement -
- Advertisement -

ಮೋದಿ ಸರ್ಕಾರ ತನ್ನ ಪ್ರಜೆಗಳ ಮೇಲೆ ಸಮರ ಸಾರಿದೆ. ಸರ್ಕಾರದ ಧೋರಣೆಯನ್ನು ಒಪ್ಪದ ನಾಗರಿಕರು ಸರ್ಕಾರವನ್ನು ಟೀಕೆ ಮಾಡಿದರೆ ಅವರ ಮೇಲೆ ದೇಶದ್ರೋಹದ ಆಪಾದನೆ ಹೊರಿಸಿ ಬಂಧನದಲ್ಲಿಡಲಾಗುತ್ತಿದೆ. ತನ್ನ ಧೋರಣೆಯನ್ನು ಒಪ್ಪದವರ ಮೇಲೆ, ರಾಜಕೀಯ ವಿರೋಧಿಗಳ ಮೇಲೆ, ಸ್ವತಂತ್ರ ಧೋರಣೆಯ ಪತ್ರಕರ್ತರು, ಬರಹಗಾರರು, ಕಾಲೇಜು ಅಧ್ಯಾಪಕರುಗಳ ಮೇಲೆ ಹಲವು ಪ್ರಕರಣಗಳನ್ನು ದಾಖಲಿಸುವುದರಿಂದ ಹಿಡಿದು, ದಸ್ತಗಿರಿ ಮಾಡುವುದು ಅವರ ವಿರುದ್ಧ ಖಟ್ಳೆ ಹೂಡುವುದು ಇವನ್ನೆಲ್ಲಾ ಸರ್ಕಾರ ಮಾಡುತ್ತಿದ್ದು ತನ್ನ ಧೋರಣೆಯನ್ನು ಎತ್ತಿ ಹಿಡಿಯುವ, ಹಾಡಿಹೊಗಳುವವರನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ರಾಜದ್ರೋಹದ ಕಾನೂನು ಬ್ರಿಟಿಷರು ಸ್ವಾತಂತ್ರ್ಯ ಬಯಸುವವರನ್ನು ಬಗ್ಗುಬಡಿಯಲು ಬಳಸುತ್ತಿದ್ದ ದುರ್ಬಳಕೆಯ ಆಯುಧ. ಈ ಕಾನೂನನ್ನು ಮೋದಿಯವರು ಅಧಿಕಾರಕ್ಕೆ ಬಂದಮೇಲೆ ಮನಸೋಇಚ್ಛೆ ಬಳಸುತ್ತಿದ್ದಾರೆ. ಇಂಗ್ಲೆಂಡಿನಲ್ಲಿ ಈ ಉಗ್ರ ಕಾಯಿದೆಯನ್ನು ತೆಗೆದುಹಾಕಿದ್ದರೂ ಭಾರತದಲ್ಲಿ ಈ ಅನ್ಯಾಯದ ಕಾಯ್ದೆಯನ್ನು ಜೀವಂತ ಇಟ್ಟು, ಮೋದಿ ಸರ್ಕಾರದಂತಹ ಸರ್ಕಾರಗಳು ಅದನ್ನು ದುರ್ಬಳಕೆ ಮಾಡುತ್ತಿವೆ.

ಗಾಂಧೀಜಿಯವರ ಮೇಲೆ ರಾಜದ್ರೋಹ ಆಪಾದನೆ ಹೊರಿಸಿ ನ್ಯಾಯಾಲಯದ ಮುಂದೆ ನಿಲ್ಲಿಸಲಾಗಿತ್ತು. “ನೀವು ರಾಜದ್ರೋಹ ಮಾಡಿದ್ದೀರಿ ಎಂದು ಸರ್ಕಾರ ಖಟ್ಳೆ ಹಾಕಿದೆ, ಇದನ್ನು ನೀವು ಅಲ್ಲೆಗಳೆಯುತ್ತೀರಾ” ಎಂದು ಕೇಳಿದಾಗ, ಗಾಂಧೀಜಿ ಹೌದು ನಾನು ರಾಜದ್ರೋಹ ಕೆಲಸ ಮಾಡಿದ್ದೇನೆ, ಬ್ರಿಟಿಷರು ಭಾರತ ಬಿಟ್ಟು ತೊಲಗುವವರೆಗೆ ರಾಜದ್ರೋಹ ಭಾಷಣ ಮಾಡುತ್ತಲೇ ಇರುತ್ತೇನೆ ಎಂದು ಉತ್ತರಿಸಿದರು. ನ್ಯಾಯಾಧೀಶರು ಇದು ನಿಮ್ಮ ನಿಲುವಾಗಿದ್ದರೆ, ಪ್ರಚಲಿತ ರಾಜದ್ರೋಹ ಕಾನೂನಿಗನುಸಾರ ನಿಮಗೆ 6 ವರ್ಷ ಕಠಿಣ ಶಿಕ್ಷೆ ವಿಧಿಸಿದ್ದೇನೆ ಎಂದರು. ಈ ಮೊದಲೇ ರಾಜದ್ರೋಹ ಆರೋಪದ ಮೇಲೆ 6 ವರ್ಷಗಳ ಕಠಿಣ ಶಿಕ್ಷೆಗೆ ಒಳಗಾಗಿರುವ ಗೌರವಾನ್ವಿತ ಬಾಲಗಂಗಾಧರ ತಿಲಕ್‌ರವರಿಗೆ ಕೊಟ್ಟಿರುವಷ್ಟು ಶಿಕ್ಷೆಯನ್ನು ನನಗೂ ವಿಧಿಸಿ ನನ್ನನ್ನು ಅವರ ಮಟ್ಟಕ್ಕೆ ಏರಿಸಿದ್ದೀರಿ ಅದಕ್ಕಾಗಿ ನಿಮಗೆ ವಂದನೆಗಳು ಎಂದರು ಗಾಂಧೀಜಿ.

ದೇಶದ್ರೋಹ

ಅಂದಿನ ಬ್ರಿಟಿಷ್ ಸರ್ಕಾರ ತನ್ನ ಮೇಲೆ ಯಾವುದೇ ಭಿನ್ನಾಭಿಪ್ರಾಯ ಸೂಚಿಸಿದರೂ ಅದನ್ನು ರಾಜದ್ರೋಹ ಎಂದು ಭಾವಿಸುತ್ತಿತ್ತು. ಪ್ರತಿರೋಧ ತೋರಿಸುವ ಯಾವುದೇ ಕಾರ್ಯಕ್ರಮವನ್ನು ರಾಜದ್ರೋಹ ಎಂದು ಭಾವಿಸುತ್ತಿತ್ತು. ಸರ್ಕಾರದ ನೀತಿಯನ್ನು ಖಂಡಿಸಿ ಸಭೆ ನಡೆಸುವುದು ಅಥವಾ ಮೆರವಣಿಗೆ ತೆರಳುವುದು ರಾಜದ್ರೋಹದ ಕೆಲಸ ಎಂದು ಬ್ರಿಟಿಷ್ ಸರ್ಕಾರ ಭಾವಿಸುತ್ತಿತ್ತು. ಸರ್ಕಾರದ ಬಗೆಗೆ ಕೋಪ-ದ್ವೇಷ ಮೂಡಿಸುವುದೂ ರಾಜದ್ರೋಹವೆನಿಸಿತ್ತು. ಈ ಕಾನೂನನ್ನೇ ಬ್ರಿಟಿಷರು ಬಾಲಗಂಗಾಧರ ತಿಲಕ್, ಅನಿಬೆಸೆಂಟ್, ಮೌಲಾನ ಅಬ್ದುಲ್ ಕಲಾಂ ಅಜಾದ್, ಅಲಿ ಸಹೋದರರು ಈ ಎಲ್ಲರ ಮೇಲೆ ಹೇರಿತ್ತು. ಮುಕ್ತ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಕಸಿಯಲು ಸರ್ಕಾರ ತೊಡಗುವುದು ಪ್ರಜೆಯ ಮೂಲಭೂತ ಹಕ್ಕನ್ನು ಕಸಿದಂತೆ. ಈ ಬರ್ಬರ ರಾಜದ್ರೋಹ ಕಾನೂನು ನಮ್ಮ ರಾಜ್ಯಾಂಗದ ಆಶಯಗಳಿಗೆ ಕಂಟಕಪ್ರಾಯ.

ರಾಜ್ಯಾಂಗ ಸಭೆಯಲ್ಲಿ ಕೆ.ಎಂ ಮುನ್ಷಿಯವರು, ರಾಜ್ಯಾಂಗದಲ್ಲಿ ನುಸುಳಿದ ರಾಜದ್ರ್ರೋಹದ ಕಲಂ ಅನ್ನು ಕೈಬಿಡಬೇಕೆಂದು ತಿದ್ದುಪಡಿ ಸೂಚಿಸಿದರು. ಈ ತಿದ್ದುಪಡಿಗೆ ಅನುಮೋದನೆ ದೊರೆಯಿತಾದರೂ, ದೇಶದ ಭದ್ರತೆ ಮತ್ತು ಅಖಂಡತೆಯನ್ನು ಕಾಪಾಡುವ ದೃಷ್ಟಿಯಿಂದ ಕೆಲವು ಕ್ಲಾಸ್‌ಗಳನ್ನು ಉಳಿಸಿಕೊಳ್ಳಲಾಯಿತು. ಹೀಗಾಗಿ ರಾಜದ್ರೋಹದ ಕಾನೂನು ಕೆಲವು ಬದಲಾವಣೆಗಳೊಂದಿಗೆ ಹಾಗೇ ಉಳಿದುಹೋಯಿತು.

ರಾಜದ್ರೋಹ ಕಾನೂನಿನ ದುರ್ಬಳಕೆಯಿಂದ ಅನೇಕರ ಜೀವನ ಹಾಳಾಯಿತು. ರಾಜದ್ರೋಹ ಆಪಾದನೆಯಲ್ಲಿ ವಿಚಾರಣೆಯಾಗುತ್ತಿದ್ದು, 2019ನೆ ಇಸವಿಯಲ್ಲಿ ಬಾಕಿ ಇದ್ದ ಕೇಸುಗಳ ಶೇ 9ರಷ್ಟರಲ್ಲಿ ಖಟ್ಳೆಗಳನ್ನು ಕೈಬಿಡಲಾಯಿತು. ಕಾರಣ: ಸಾಕ್ಷ್ಯಾಧಾರಗಳ ಕೊರತೆ ಅಥವಾ ತಪ್ಪಿತಸ್ಥರ ಪರಾರಿಯಾಗಿದ್ದರಿಂದ! 2014ರ ನಂತರ ಸರ್ಕಾರ ನಡೆಸುವವರನ್ನು ಟೀಕೆ ಮಾಡಿದ್ದಕ್ಕಾಗಿ, ಮೋದಿ ಮುಂತಾದ ನಾಯಕರನ್ನು ಟೀಕೆ ಮಾಡಿದ್ದಕ್ಕಾಗಿ ನೂರಾರು ಜನರ ಮೇಲೆ ಕೇಸು ದಾಖಲಾಗಿವೆ.

ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ರಾಜದ್ರೋಹ ಆಪಾದನೆ ಹೊರೆಸುವುದರಲ್ಲಿ ಬಹಳ ಮುಂದಿದ್ದಾರೆ. ಕಳೆದ 4 ವರ್ಷಗಳಲ್ಲಿ ನಾಗರಿಕ (ತಿದ್ದುಪಡಿಯಾದ 2019) ಮಸೂದೆ ವಿರುದ್ಧ ಸೊಲ್ಲೆತ್ತಿದ 90 ಜನರ ಮೇಲೆ ರಾಜದ್ರೋಹ ಆಪಾದನೆ ಖಟ್ಳೆ ಹಾಕಿದ್ದಾರೆ. ಕಾರಣವಿಲ್ಲದೆ ಅವರ ಬಾಯಿ ಮುಚ್ಚಿಸಲು ರಾಜದ್ರೋಹ ಆಪಾದನೆಯನ್ನು ಅವರ ಮೇಲೆ ಹೊರಿಸಲಾಗಿದೆ.

ಸರ್ಕಾರಗಳು ಅನೇಕರ ಮೇಲೆ ರಾಜದ್ರೋಹ ಆಪಾದನೆ ಹೊರಿಸಿ ಸೆರೆಮನೆಗೆ ಕಳುಹಿಸುತ್ತಿರುವುದನ್ನು ಸರ್ವೋಚ್ಚ ನ್ಯಾಯಾಲಯ ಪ್ರಶ್ನಿಸಿದೆ. ದೇಶದ ಇತರ ಭಾಗಗಳಲ್ಲಿರುವ ಅಧೀನ ನ್ಯಾಯಾಲಯಗಳು ರಾಜದ್ರೋಹ ಹೇರುತ್ತಿರುವ ಸರ್ಕಾರದ ಆತುರದ ಕ್ರಮಗಳನ್ನು ಪ್ರಶ್ನಿಸಲು ತೊಡಗಿವೆ. ಅಪಾಯಕಾರಿ ಐಡಿಯಾಲಜಿಗಳು ಭಾರತದ ಐಕ್ಯತೆ ಮತ್ತು ಸಾರ್ವಭೌಮತ್ವವನ್ನು ಅಲ್ಲಗಳೆಯುತ್ತಿವೆ ಎಂದು ಮೋದಿ ಹರಿಹಾಯ್ದಿದ್ದಾರೆ. ಈ ಬಗೆಯ ಹೇಳಿಕೆ ಕೊಡುವ ಬದಲು ಮೋದಿಯವರು ತಮ್ಮ ಗೆಯ್ಮೆ ಸರಿಯೇ ಎಂದು ಆತ್ಮವಿಮರ್ಶೆ ಮಾಡಿಕೊಳ್ಳಬೇಕು.


ಇದನ್ನೂ ಓದಿ: ಸರ್ಕಾರದಿಂದ ದೇಶದ್ರೋಹ ಕಾನೂನು ದುರುಪಯೋಗ, ಅದನ್ನು ರದ್ದುಗೊಳಿಸಬೇಕು : ನಿವೃತ್ತ ಸುಪ್ರೀಂ ನ್ಯಾಯಾಧೀಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...