Homeಅಂಕಣಗಳುನೂರರ ನೋಟ: ಎಗ್ಗಿಲ್ಲದೆ ಮುಂದುವರೆದಿರುವ ದೇಶದ್ರೋಹ ಆಪಾದನೆಯ ದುರ್ಬಳಕೆ

ನೂರರ ನೋಟ: ಎಗ್ಗಿಲ್ಲದೆ ಮುಂದುವರೆದಿರುವ ದೇಶದ್ರೋಹ ಆಪಾದನೆಯ ದುರ್ಬಳಕೆ

- Advertisement -
- Advertisement -

ಮೋದಿ ಸರ್ಕಾರ ತನ್ನ ಪ್ರಜೆಗಳ ಮೇಲೆ ಸಮರ ಸಾರಿದೆ. ಸರ್ಕಾರದ ಧೋರಣೆಯನ್ನು ಒಪ್ಪದ ನಾಗರಿಕರು ಸರ್ಕಾರವನ್ನು ಟೀಕೆ ಮಾಡಿದರೆ ಅವರ ಮೇಲೆ ದೇಶದ್ರೋಹದ ಆಪಾದನೆ ಹೊರಿಸಿ ಬಂಧನದಲ್ಲಿಡಲಾಗುತ್ತಿದೆ. ತನ್ನ ಧೋರಣೆಯನ್ನು ಒಪ್ಪದವರ ಮೇಲೆ, ರಾಜಕೀಯ ವಿರೋಧಿಗಳ ಮೇಲೆ, ಸ್ವತಂತ್ರ ಧೋರಣೆಯ ಪತ್ರಕರ್ತರು, ಬರಹಗಾರರು, ಕಾಲೇಜು ಅಧ್ಯಾಪಕರುಗಳ ಮೇಲೆ ಹಲವು ಪ್ರಕರಣಗಳನ್ನು ದಾಖಲಿಸುವುದರಿಂದ ಹಿಡಿದು, ದಸ್ತಗಿರಿ ಮಾಡುವುದು ಅವರ ವಿರುದ್ಧ ಖಟ್ಳೆ ಹೂಡುವುದು ಇವನ್ನೆಲ್ಲಾ ಸರ್ಕಾರ ಮಾಡುತ್ತಿದ್ದು ತನ್ನ ಧೋರಣೆಯನ್ನು ಎತ್ತಿ ಹಿಡಿಯುವ, ಹಾಡಿಹೊಗಳುವವರನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ರಾಜದ್ರೋಹದ ಕಾನೂನು ಬ್ರಿಟಿಷರು ಸ್ವಾತಂತ್ರ್ಯ ಬಯಸುವವರನ್ನು ಬಗ್ಗುಬಡಿಯಲು ಬಳಸುತ್ತಿದ್ದ ದುರ್ಬಳಕೆಯ ಆಯುಧ. ಈ ಕಾನೂನನ್ನು ಮೋದಿಯವರು ಅಧಿಕಾರಕ್ಕೆ ಬಂದಮೇಲೆ ಮನಸೋಇಚ್ಛೆ ಬಳಸುತ್ತಿದ್ದಾರೆ. ಇಂಗ್ಲೆಂಡಿನಲ್ಲಿ ಈ ಉಗ್ರ ಕಾಯಿದೆಯನ್ನು ತೆಗೆದುಹಾಕಿದ್ದರೂ ಭಾರತದಲ್ಲಿ ಈ ಅನ್ಯಾಯದ ಕಾಯ್ದೆಯನ್ನು ಜೀವಂತ ಇಟ್ಟು, ಮೋದಿ ಸರ್ಕಾರದಂತಹ ಸರ್ಕಾರಗಳು ಅದನ್ನು ದುರ್ಬಳಕೆ ಮಾಡುತ್ತಿವೆ.

ಗಾಂಧೀಜಿಯವರ ಮೇಲೆ ರಾಜದ್ರೋಹ ಆಪಾದನೆ ಹೊರಿಸಿ ನ್ಯಾಯಾಲಯದ ಮುಂದೆ ನಿಲ್ಲಿಸಲಾಗಿತ್ತು. “ನೀವು ರಾಜದ್ರೋಹ ಮಾಡಿದ್ದೀರಿ ಎಂದು ಸರ್ಕಾರ ಖಟ್ಳೆ ಹಾಕಿದೆ, ಇದನ್ನು ನೀವು ಅಲ್ಲೆಗಳೆಯುತ್ತೀರಾ” ಎಂದು ಕೇಳಿದಾಗ, ಗಾಂಧೀಜಿ ಹೌದು ನಾನು ರಾಜದ್ರೋಹ ಕೆಲಸ ಮಾಡಿದ್ದೇನೆ, ಬ್ರಿಟಿಷರು ಭಾರತ ಬಿಟ್ಟು ತೊಲಗುವವರೆಗೆ ರಾಜದ್ರೋಹ ಭಾಷಣ ಮಾಡುತ್ತಲೇ ಇರುತ್ತೇನೆ ಎಂದು ಉತ್ತರಿಸಿದರು. ನ್ಯಾಯಾಧೀಶರು ಇದು ನಿಮ್ಮ ನಿಲುವಾಗಿದ್ದರೆ, ಪ್ರಚಲಿತ ರಾಜದ್ರೋಹ ಕಾನೂನಿಗನುಸಾರ ನಿಮಗೆ 6 ವರ್ಷ ಕಠಿಣ ಶಿಕ್ಷೆ ವಿಧಿಸಿದ್ದೇನೆ ಎಂದರು. ಈ ಮೊದಲೇ ರಾಜದ್ರೋಹ ಆರೋಪದ ಮೇಲೆ 6 ವರ್ಷಗಳ ಕಠಿಣ ಶಿಕ್ಷೆಗೆ ಒಳಗಾಗಿರುವ ಗೌರವಾನ್ವಿತ ಬಾಲಗಂಗಾಧರ ತಿಲಕ್‌ರವರಿಗೆ ಕೊಟ್ಟಿರುವಷ್ಟು ಶಿಕ್ಷೆಯನ್ನು ನನಗೂ ವಿಧಿಸಿ ನನ್ನನ್ನು ಅವರ ಮಟ್ಟಕ್ಕೆ ಏರಿಸಿದ್ದೀರಿ ಅದಕ್ಕಾಗಿ ನಿಮಗೆ ವಂದನೆಗಳು ಎಂದರು ಗಾಂಧೀಜಿ.

ದೇಶದ್ರೋಹ

ಅಂದಿನ ಬ್ರಿಟಿಷ್ ಸರ್ಕಾರ ತನ್ನ ಮೇಲೆ ಯಾವುದೇ ಭಿನ್ನಾಭಿಪ್ರಾಯ ಸೂಚಿಸಿದರೂ ಅದನ್ನು ರಾಜದ್ರೋಹ ಎಂದು ಭಾವಿಸುತ್ತಿತ್ತು. ಪ್ರತಿರೋಧ ತೋರಿಸುವ ಯಾವುದೇ ಕಾರ್ಯಕ್ರಮವನ್ನು ರಾಜದ್ರೋಹ ಎಂದು ಭಾವಿಸುತ್ತಿತ್ತು. ಸರ್ಕಾರದ ನೀತಿಯನ್ನು ಖಂಡಿಸಿ ಸಭೆ ನಡೆಸುವುದು ಅಥವಾ ಮೆರವಣಿಗೆ ತೆರಳುವುದು ರಾಜದ್ರೋಹದ ಕೆಲಸ ಎಂದು ಬ್ರಿಟಿಷ್ ಸರ್ಕಾರ ಭಾವಿಸುತ್ತಿತ್ತು. ಸರ್ಕಾರದ ಬಗೆಗೆ ಕೋಪ-ದ್ವೇಷ ಮೂಡಿಸುವುದೂ ರಾಜದ್ರೋಹವೆನಿಸಿತ್ತು. ಈ ಕಾನೂನನ್ನೇ ಬ್ರಿಟಿಷರು ಬಾಲಗಂಗಾಧರ ತಿಲಕ್, ಅನಿಬೆಸೆಂಟ್, ಮೌಲಾನ ಅಬ್ದುಲ್ ಕಲಾಂ ಅಜಾದ್, ಅಲಿ ಸಹೋದರರು ಈ ಎಲ್ಲರ ಮೇಲೆ ಹೇರಿತ್ತು. ಮುಕ್ತ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಕಸಿಯಲು ಸರ್ಕಾರ ತೊಡಗುವುದು ಪ್ರಜೆಯ ಮೂಲಭೂತ ಹಕ್ಕನ್ನು ಕಸಿದಂತೆ. ಈ ಬರ್ಬರ ರಾಜದ್ರೋಹ ಕಾನೂನು ನಮ್ಮ ರಾಜ್ಯಾಂಗದ ಆಶಯಗಳಿಗೆ ಕಂಟಕಪ್ರಾಯ.

ರಾಜ್ಯಾಂಗ ಸಭೆಯಲ್ಲಿ ಕೆ.ಎಂ ಮುನ್ಷಿಯವರು, ರಾಜ್ಯಾಂಗದಲ್ಲಿ ನುಸುಳಿದ ರಾಜದ್ರ್ರೋಹದ ಕಲಂ ಅನ್ನು ಕೈಬಿಡಬೇಕೆಂದು ತಿದ್ದುಪಡಿ ಸೂಚಿಸಿದರು. ಈ ತಿದ್ದುಪಡಿಗೆ ಅನುಮೋದನೆ ದೊರೆಯಿತಾದರೂ, ದೇಶದ ಭದ್ರತೆ ಮತ್ತು ಅಖಂಡತೆಯನ್ನು ಕಾಪಾಡುವ ದೃಷ್ಟಿಯಿಂದ ಕೆಲವು ಕ್ಲಾಸ್‌ಗಳನ್ನು ಉಳಿಸಿಕೊಳ್ಳಲಾಯಿತು. ಹೀಗಾಗಿ ರಾಜದ್ರೋಹದ ಕಾನೂನು ಕೆಲವು ಬದಲಾವಣೆಗಳೊಂದಿಗೆ ಹಾಗೇ ಉಳಿದುಹೋಯಿತು.

ರಾಜದ್ರೋಹ ಕಾನೂನಿನ ದುರ್ಬಳಕೆಯಿಂದ ಅನೇಕರ ಜೀವನ ಹಾಳಾಯಿತು. ರಾಜದ್ರೋಹ ಆಪಾದನೆಯಲ್ಲಿ ವಿಚಾರಣೆಯಾಗುತ್ತಿದ್ದು, 2019ನೆ ಇಸವಿಯಲ್ಲಿ ಬಾಕಿ ಇದ್ದ ಕೇಸುಗಳ ಶೇ 9ರಷ್ಟರಲ್ಲಿ ಖಟ್ಳೆಗಳನ್ನು ಕೈಬಿಡಲಾಯಿತು. ಕಾರಣ: ಸಾಕ್ಷ್ಯಾಧಾರಗಳ ಕೊರತೆ ಅಥವಾ ತಪ್ಪಿತಸ್ಥರ ಪರಾರಿಯಾಗಿದ್ದರಿಂದ! 2014ರ ನಂತರ ಸರ್ಕಾರ ನಡೆಸುವವರನ್ನು ಟೀಕೆ ಮಾಡಿದ್ದಕ್ಕಾಗಿ, ಮೋದಿ ಮುಂತಾದ ನಾಯಕರನ್ನು ಟೀಕೆ ಮಾಡಿದ್ದಕ್ಕಾಗಿ ನೂರಾರು ಜನರ ಮೇಲೆ ಕೇಸು ದಾಖಲಾಗಿವೆ.

ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ರಾಜದ್ರೋಹ ಆಪಾದನೆ ಹೊರೆಸುವುದರಲ್ಲಿ ಬಹಳ ಮುಂದಿದ್ದಾರೆ. ಕಳೆದ 4 ವರ್ಷಗಳಲ್ಲಿ ನಾಗರಿಕ (ತಿದ್ದುಪಡಿಯಾದ 2019) ಮಸೂದೆ ವಿರುದ್ಧ ಸೊಲ್ಲೆತ್ತಿದ 90 ಜನರ ಮೇಲೆ ರಾಜದ್ರೋಹ ಆಪಾದನೆ ಖಟ್ಳೆ ಹಾಕಿದ್ದಾರೆ. ಕಾರಣವಿಲ್ಲದೆ ಅವರ ಬಾಯಿ ಮುಚ್ಚಿಸಲು ರಾಜದ್ರೋಹ ಆಪಾದನೆಯನ್ನು ಅವರ ಮೇಲೆ ಹೊರಿಸಲಾಗಿದೆ.

ಸರ್ಕಾರಗಳು ಅನೇಕರ ಮೇಲೆ ರಾಜದ್ರೋಹ ಆಪಾದನೆ ಹೊರಿಸಿ ಸೆರೆಮನೆಗೆ ಕಳುಹಿಸುತ್ತಿರುವುದನ್ನು ಸರ್ವೋಚ್ಚ ನ್ಯಾಯಾಲಯ ಪ್ರಶ್ನಿಸಿದೆ. ದೇಶದ ಇತರ ಭಾಗಗಳಲ್ಲಿರುವ ಅಧೀನ ನ್ಯಾಯಾಲಯಗಳು ರಾಜದ್ರೋಹ ಹೇರುತ್ತಿರುವ ಸರ್ಕಾರದ ಆತುರದ ಕ್ರಮಗಳನ್ನು ಪ್ರಶ್ನಿಸಲು ತೊಡಗಿವೆ. ಅಪಾಯಕಾರಿ ಐಡಿಯಾಲಜಿಗಳು ಭಾರತದ ಐಕ್ಯತೆ ಮತ್ತು ಸಾರ್ವಭೌಮತ್ವವನ್ನು ಅಲ್ಲಗಳೆಯುತ್ತಿವೆ ಎಂದು ಮೋದಿ ಹರಿಹಾಯ್ದಿದ್ದಾರೆ. ಈ ಬಗೆಯ ಹೇಳಿಕೆ ಕೊಡುವ ಬದಲು ಮೋದಿಯವರು ತಮ್ಮ ಗೆಯ್ಮೆ ಸರಿಯೇ ಎಂದು ಆತ್ಮವಿಮರ್ಶೆ ಮಾಡಿಕೊಳ್ಳಬೇಕು.


ಇದನ್ನೂ ಓದಿ: ಸರ್ಕಾರದಿಂದ ದೇಶದ್ರೋಹ ಕಾನೂನು ದುರುಪಯೋಗ, ಅದನ್ನು ರದ್ದುಗೊಳಿಸಬೇಕು : ನಿವೃತ್ತ ಸುಪ್ರೀಂ ನ್ಯಾಯಾಧೀಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....