Homeಅಂಕಣಗಳುನೂರರ ನೋಟ: ಎಗ್ಗಿಲ್ಲದೆ ಮುಂದುವರೆದಿರುವ ದೇಶದ್ರೋಹ ಆಪಾದನೆಯ ದುರ್ಬಳಕೆ

ನೂರರ ನೋಟ: ಎಗ್ಗಿಲ್ಲದೆ ಮುಂದುವರೆದಿರುವ ದೇಶದ್ರೋಹ ಆಪಾದನೆಯ ದುರ್ಬಳಕೆ

- Advertisement -
- Advertisement -

ಮೋದಿ ಸರ್ಕಾರ ತನ್ನ ಪ್ರಜೆಗಳ ಮೇಲೆ ಸಮರ ಸಾರಿದೆ. ಸರ್ಕಾರದ ಧೋರಣೆಯನ್ನು ಒಪ್ಪದ ನಾಗರಿಕರು ಸರ್ಕಾರವನ್ನು ಟೀಕೆ ಮಾಡಿದರೆ ಅವರ ಮೇಲೆ ದೇಶದ್ರೋಹದ ಆಪಾದನೆ ಹೊರಿಸಿ ಬಂಧನದಲ್ಲಿಡಲಾಗುತ್ತಿದೆ. ತನ್ನ ಧೋರಣೆಯನ್ನು ಒಪ್ಪದವರ ಮೇಲೆ, ರಾಜಕೀಯ ವಿರೋಧಿಗಳ ಮೇಲೆ, ಸ್ವತಂತ್ರ ಧೋರಣೆಯ ಪತ್ರಕರ್ತರು, ಬರಹಗಾರರು, ಕಾಲೇಜು ಅಧ್ಯಾಪಕರುಗಳ ಮೇಲೆ ಹಲವು ಪ್ರಕರಣಗಳನ್ನು ದಾಖಲಿಸುವುದರಿಂದ ಹಿಡಿದು, ದಸ್ತಗಿರಿ ಮಾಡುವುದು ಅವರ ವಿರುದ್ಧ ಖಟ್ಳೆ ಹೂಡುವುದು ಇವನ್ನೆಲ್ಲಾ ಸರ್ಕಾರ ಮಾಡುತ್ತಿದ್ದು ತನ್ನ ಧೋರಣೆಯನ್ನು ಎತ್ತಿ ಹಿಡಿಯುವ, ಹಾಡಿಹೊಗಳುವವರನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ರಾಜದ್ರೋಹದ ಕಾನೂನು ಬ್ರಿಟಿಷರು ಸ್ವಾತಂತ್ರ್ಯ ಬಯಸುವವರನ್ನು ಬಗ್ಗುಬಡಿಯಲು ಬಳಸುತ್ತಿದ್ದ ದುರ್ಬಳಕೆಯ ಆಯುಧ. ಈ ಕಾನೂನನ್ನು ಮೋದಿಯವರು ಅಧಿಕಾರಕ್ಕೆ ಬಂದಮೇಲೆ ಮನಸೋಇಚ್ಛೆ ಬಳಸುತ್ತಿದ್ದಾರೆ. ಇಂಗ್ಲೆಂಡಿನಲ್ಲಿ ಈ ಉಗ್ರ ಕಾಯಿದೆಯನ್ನು ತೆಗೆದುಹಾಕಿದ್ದರೂ ಭಾರತದಲ್ಲಿ ಈ ಅನ್ಯಾಯದ ಕಾಯ್ದೆಯನ್ನು ಜೀವಂತ ಇಟ್ಟು, ಮೋದಿ ಸರ್ಕಾರದಂತಹ ಸರ್ಕಾರಗಳು ಅದನ್ನು ದುರ್ಬಳಕೆ ಮಾಡುತ್ತಿವೆ.

ಗಾಂಧೀಜಿಯವರ ಮೇಲೆ ರಾಜದ್ರೋಹ ಆಪಾದನೆ ಹೊರಿಸಿ ನ್ಯಾಯಾಲಯದ ಮುಂದೆ ನಿಲ್ಲಿಸಲಾಗಿತ್ತು. “ನೀವು ರಾಜದ್ರೋಹ ಮಾಡಿದ್ದೀರಿ ಎಂದು ಸರ್ಕಾರ ಖಟ್ಳೆ ಹಾಕಿದೆ, ಇದನ್ನು ನೀವು ಅಲ್ಲೆಗಳೆಯುತ್ತೀರಾ” ಎಂದು ಕೇಳಿದಾಗ, ಗಾಂಧೀಜಿ ಹೌದು ನಾನು ರಾಜದ್ರೋಹ ಕೆಲಸ ಮಾಡಿದ್ದೇನೆ, ಬ್ರಿಟಿಷರು ಭಾರತ ಬಿಟ್ಟು ತೊಲಗುವವರೆಗೆ ರಾಜದ್ರೋಹ ಭಾಷಣ ಮಾಡುತ್ತಲೇ ಇರುತ್ತೇನೆ ಎಂದು ಉತ್ತರಿಸಿದರು. ನ್ಯಾಯಾಧೀಶರು ಇದು ನಿಮ್ಮ ನಿಲುವಾಗಿದ್ದರೆ, ಪ್ರಚಲಿತ ರಾಜದ್ರೋಹ ಕಾನೂನಿಗನುಸಾರ ನಿಮಗೆ 6 ವರ್ಷ ಕಠಿಣ ಶಿಕ್ಷೆ ವಿಧಿಸಿದ್ದೇನೆ ಎಂದರು. ಈ ಮೊದಲೇ ರಾಜದ್ರೋಹ ಆರೋಪದ ಮೇಲೆ 6 ವರ್ಷಗಳ ಕಠಿಣ ಶಿಕ್ಷೆಗೆ ಒಳಗಾಗಿರುವ ಗೌರವಾನ್ವಿತ ಬಾಲಗಂಗಾಧರ ತಿಲಕ್‌ರವರಿಗೆ ಕೊಟ್ಟಿರುವಷ್ಟು ಶಿಕ್ಷೆಯನ್ನು ನನಗೂ ವಿಧಿಸಿ ನನ್ನನ್ನು ಅವರ ಮಟ್ಟಕ್ಕೆ ಏರಿಸಿದ್ದೀರಿ ಅದಕ್ಕಾಗಿ ನಿಮಗೆ ವಂದನೆಗಳು ಎಂದರು ಗಾಂಧೀಜಿ.

ದೇಶದ್ರೋಹ

ಅಂದಿನ ಬ್ರಿಟಿಷ್ ಸರ್ಕಾರ ತನ್ನ ಮೇಲೆ ಯಾವುದೇ ಭಿನ್ನಾಭಿಪ್ರಾಯ ಸೂಚಿಸಿದರೂ ಅದನ್ನು ರಾಜದ್ರೋಹ ಎಂದು ಭಾವಿಸುತ್ತಿತ್ತು. ಪ್ರತಿರೋಧ ತೋರಿಸುವ ಯಾವುದೇ ಕಾರ್ಯಕ್ರಮವನ್ನು ರಾಜದ್ರೋಹ ಎಂದು ಭಾವಿಸುತ್ತಿತ್ತು. ಸರ್ಕಾರದ ನೀತಿಯನ್ನು ಖಂಡಿಸಿ ಸಭೆ ನಡೆಸುವುದು ಅಥವಾ ಮೆರವಣಿಗೆ ತೆರಳುವುದು ರಾಜದ್ರೋಹದ ಕೆಲಸ ಎಂದು ಬ್ರಿಟಿಷ್ ಸರ್ಕಾರ ಭಾವಿಸುತ್ತಿತ್ತು. ಸರ್ಕಾರದ ಬಗೆಗೆ ಕೋಪ-ದ್ವೇಷ ಮೂಡಿಸುವುದೂ ರಾಜದ್ರೋಹವೆನಿಸಿತ್ತು. ಈ ಕಾನೂನನ್ನೇ ಬ್ರಿಟಿಷರು ಬಾಲಗಂಗಾಧರ ತಿಲಕ್, ಅನಿಬೆಸೆಂಟ್, ಮೌಲಾನ ಅಬ್ದುಲ್ ಕಲಾಂ ಅಜಾದ್, ಅಲಿ ಸಹೋದರರು ಈ ಎಲ್ಲರ ಮೇಲೆ ಹೇರಿತ್ತು. ಮುಕ್ತ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಕಸಿಯಲು ಸರ್ಕಾರ ತೊಡಗುವುದು ಪ್ರಜೆಯ ಮೂಲಭೂತ ಹಕ್ಕನ್ನು ಕಸಿದಂತೆ. ಈ ಬರ್ಬರ ರಾಜದ್ರೋಹ ಕಾನೂನು ನಮ್ಮ ರಾಜ್ಯಾಂಗದ ಆಶಯಗಳಿಗೆ ಕಂಟಕಪ್ರಾಯ.

ರಾಜ್ಯಾಂಗ ಸಭೆಯಲ್ಲಿ ಕೆ.ಎಂ ಮುನ್ಷಿಯವರು, ರಾಜ್ಯಾಂಗದಲ್ಲಿ ನುಸುಳಿದ ರಾಜದ್ರ್ರೋಹದ ಕಲಂ ಅನ್ನು ಕೈಬಿಡಬೇಕೆಂದು ತಿದ್ದುಪಡಿ ಸೂಚಿಸಿದರು. ಈ ತಿದ್ದುಪಡಿಗೆ ಅನುಮೋದನೆ ದೊರೆಯಿತಾದರೂ, ದೇಶದ ಭದ್ರತೆ ಮತ್ತು ಅಖಂಡತೆಯನ್ನು ಕಾಪಾಡುವ ದೃಷ್ಟಿಯಿಂದ ಕೆಲವು ಕ್ಲಾಸ್‌ಗಳನ್ನು ಉಳಿಸಿಕೊಳ್ಳಲಾಯಿತು. ಹೀಗಾಗಿ ರಾಜದ್ರೋಹದ ಕಾನೂನು ಕೆಲವು ಬದಲಾವಣೆಗಳೊಂದಿಗೆ ಹಾಗೇ ಉಳಿದುಹೋಯಿತು.

ರಾಜದ್ರೋಹ ಕಾನೂನಿನ ದುರ್ಬಳಕೆಯಿಂದ ಅನೇಕರ ಜೀವನ ಹಾಳಾಯಿತು. ರಾಜದ್ರೋಹ ಆಪಾದನೆಯಲ್ಲಿ ವಿಚಾರಣೆಯಾಗುತ್ತಿದ್ದು, 2019ನೆ ಇಸವಿಯಲ್ಲಿ ಬಾಕಿ ಇದ್ದ ಕೇಸುಗಳ ಶೇ 9ರಷ್ಟರಲ್ಲಿ ಖಟ್ಳೆಗಳನ್ನು ಕೈಬಿಡಲಾಯಿತು. ಕಾರಣ: ಸಾಕ್ಷ್ಯಾಧಾರಗಳ ಕೊರತೆ ಅಥವಾ ತಪ್ಪಿತಸ್ಥರ ಪರಾರಿಯಾಗಿದ್ದರಿಂದ! 2014ರ ನಂತರ ಸರ್ಕಾರ ನಡೆಸುವವರನ್ನು ಟೀಕೆ ಮಾಡಿದ್ದಕ್ಕಾಗಿ, ಮೋದಿ ಮುಂತಾದ ನಾಯಕರನ್ನು ಟೀಕೆ ಮಾಡಿದ್ದಕ್ಕಾಗಿ ನೂರಾರು ಜನರ ಮೇಲೆ ಕೇಸು ದಾಖಲಾಗಿವೆ.

ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ರಾಜದ್ರೋಹ ಆಪಾದನೆ ಹೊರೆಸುವುದರಲ್ಲಿ ಬಹಳ ಮುಂದಿದ್ದಾರೆ. ಕಳೆದ 4 ವರ್ಷಗಳಲ್ಲಿ ನಾಗರಿಕ (ತಿದ್ದುಪಡಿಯಾದ 2019) ಮಸೂದೆ ವಿರುದ್ಧ ಸೊಲ್ಲೆತ್ತಿದ 90 ಜನರ ಮೇಲೆ ರಾಜದ್ರೋಹ ಆಪಾದನೆ ಖಟ್ಳೆ ಹಾಕಿದ್ದಾರೆ. ಕಾರಣವಿಲ್ಲದೆ ಅವರ ಬಾಯಿ ಮುಚ್ಚಿಸಲು ರಾಜದ್ರೋಹ ಆಪಾದನೆಯನ್ನು ಅವರ ಮೇಲೆ ಹೊರಿಸಲಾಗಿದೆ.

ಸರ್ಕಾರಗಳು ಅನೇಕರ ಮೇಲೆ ರಾಜದ್ರೋಹ ಆಪಾದನೆ ಹೊರಿಸಿ ಸೆರೆಮನೆಗೆ ಕಳುಹಿಸುತ್ತಿರುವುದನ್ನು ಸರ್ವೋಚ್ಚ ನ್ಯಾಯಾಲಯ ಪ್ರಶ್ನಿಸಿದೆ. ದೇಶದ ಇತರ ಭಾಗಗಳಲ್ಲಿರುವ ಅಧೀನ ನ್ಯಾಯಾಲಯಗಳು ರಾಜದ್ರೋಹ ಹೇರುತ್ತಿರುವ ಸರ್ಕಾರದ ಆತುರದ ಕ್ರಮಗಳನ್ನು ಪ್ರಶ್ನಿಸಲು ತೊಡಗಿವೆ. ಅಪಾಯಕಾರಿ ಐಡಿಯಾಲಜಿಗಳು ಭಾರತದ ಐಕ್ಯತೆ ಮತ್ತು ಸಾರ್ವಭೌಮತ್ವವನ್ನು ಅಲ್ಲಗಳೆಯುತ್ತಿವೆ ಎಂದು ಮೋದಿ ಹರಿಹಾಯ್ದಿದ್ದಾರೆ. ಈ ಬಗೆಯ ಹೇಳಿಕೆ ಕೊಡುವ ಬದಲು ಮೋದಿಯವರು ತಮ್ಮ ಗೆಯ್ಮೆ ಸರಿಯೇ ಎಂದು ಆತ್ಮವಿಮರ್ಶೆ ಮಾಡಿಕೊಳ್ಳಬೇಕು.


ಇದನ್ನೂ ಓದಿ: ಸರ್ಕಾರದಿಂದ ದೇಶದ್ರೋಹ ಕಾನೂನು ದುರುಪಯೋಗ, ಅದನ್ನು ರದ್ದುಗೊಳಿಸಬೇಕು : ನಿವೃತ್ತ ಸುಪ್ರೀಂ ನ್ಯಾಯಾಧೀಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...