Homeಅಂಕಣಗಳುನೂರರ ನೋಟ: ಎಗ್ಗಿಲ್ಲದೆ ಮುಂದುವರೆದಿರುವ ದೇಶದ್ರೋಹ ಆಪಾದನೆಯ ದುರ್ಬಳಕೆ

ನೂರರ ನೋಟ: ಎಗ್ಗಿಲ್ಲದೆ ಮುಂದುವರೆದಿರುವ ದೇಶದ್ರೋಹ ಆಪಾದನೆಯ ದುರ್ಬಳಕೆ

- Advertisement -
- Advertisement -

ಮೋದಿ ಸರ್ಕಾರ ತನ್ನ ಪ್ರಜೆಗಳ ಮೇಲೆ ಸಮರ ಸಾರಿದೆ. ಸರ್ಕಾರದ ಧೋರಣೆಯನ್ನು ಒಪ್ಪದ ನಾಗರಿಕರು ಸರ್ಕಾರವನ್ನು ಟೀಕೆ ಮಾಡಿದರೆ ಅವರ ಮೇಲೆ ದೇಶದ್ರೋಹದ ಆಪಾದನೆ ಹೊರಿಸಿ ಬಂಧನದಲ್ಲಿಡಲಾಗುತ್ತಿದೆ. ತನ್ನ ಧೋರಣೆಯನ್ನು ಒಪ್ಪದವರ ಮೇಲೆ, ರಾಜಕೀಯ ವಿರೋಧಿಗಳ ಮೇಲೆ, ಸ್ವತಂತ್ರ ಧೋರಣೆಯ ಪತ್ರಕರ್ತರು, ಬರಹಗಾರರು, ಕಾಲೇಜು ಅಧ್ಯಾಪಕರುಗಳ ಮೇಲೆ ಹಲವು ಪ್ರಕರಣಗಳನ್ನು ದಾಖಲಿಸುವುದರಿಂದ ಹಿಡಿದು, ದಸ್ತಗಿರಿ ಮಾಡುವುದು ಅವರ ವಿರುದ್ಧ ಖಟ್ಳೆ ಹೂಡುವುದು ಇವನ್ನೆಲ್ಲಾ ಸರ್ಕಾರ ಮಾಡುತ್ತಿದ್ದು ತನ್ನ ಧೋರಣೆಯನ್ನು ಎತ್ತಿ ಹಿಡಿಯುವ, ಹಾಡಿಹೊಗಳುವವರನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ರಾಜದ್ರೋಹದ ಕಾನೂನು ಬ್ರಿಟಿಷರು ಸ್ವಾತಂತ್ರ್ಯ ಬಯಸುವವರನ್ನು ಬಗ್ಗುಬಡಿಯಲು ಬಳಸುತ್ತಿದ್ದ ದುರ್ಬಳಕೆಯ ಆಯುಧ. ಈ ಕಾನೂನನ್ನು ಮೋದಿಯವರು ಅಧಿಕಾರಕ್ಕೆ ಬಂದಮೇಲೆ ಮನಸೋಇಚ್ಛೆ ಬಳಸುತ್ತಿದ್ದಾರೆ. ಇಂಗ್ಲೆಂಡಿನಲ್ಲಿ ಈ ಉಗ್ರ ಕಾಯಿದೆಯನ್ನು ತೆಗೆದುಹಾಕಿದ್ದರೂ ಭಾರತದಲ್ಲಿ ಈ ಅನ್ಯಾಯದ ಕಾಯ್ದೆಯನ್ನು ಜೀವಂತ ಇಟ್ಟು, ಮೋದಿ ಸರ್ಕಾರದಂತಹ ಸರ್ಕಾರಗಳು ಅದನ್ನು ದುರ್ಬಳಕೆ ಮಾಡುತ್ತಿವೆ.

ಗಾಂಧೀಜಿಯವರ ಮೇಲೆ ರಾಜದ್ರೋಹ ಆಪಾದನೆ ಹೊರಿಸಿ ನ್ಯಾಯಾಲಯದ ಮುಂದೆ ನಿಲ್ಲಿಸಲಾಗಿತ್ತು. “ನೀವು ರಾಜದ್ರೋಹ ಮಾಡಿದ್ದೀರಿ ಎಂದು ಸರ್ಕಾರ ಖಟ್ಳೆ ಹಾಕಿದೆ, ಇದನ್ನು ನೀವು ಅಲ್ಲೆಗಳೆಯುತ್ತೀರಾ” ಎಂದು ಕೇಳಿದಾಗ, ಗಾಂಧೀಜಿ ಹೌದು ನಾನು ರಾಜದ್ರೋಹ ಕೆಲಸ ಮಾಡಿದ್ದೇನೆ, ಬ್ರಿಟಿಷರು ಭಾರತ ಬಿಟ್ಟು ತೊಲಗುವವರೆಗೆ ರಾಜದ್ರೋಹ ಭಾಷಣ ಮಾಡುತ್ತಲೇ ಇರುತ್ತೇನೆ ಎಂದು ಉತ್ತರಿಸಿದರು. ನ್ಯಾಯಾಧೀಶರು ಇದು ನಿಮ್ಮ ನಿಲುವಾಗಿದ್ದರೆ, ಪ್ರಚಲಿತ ರಾಜದ್ರೋಹ ಕಾನೂನಿಗನುಸಾರ ನಿಮಗೆ 6 ವರ್ಷ ಕಠಿಣ ಶಿಕ್ಷೆ ವಿಧಿಸಿದ್ದೇನೆ ಎಂದರು. ಈ ಮೊದಲೇ ರಾಜದ್ರೋಹ ಆರೋಪದ ಮೇಲೆ 6 ವರ್ಷಗಳ ಕಠಿಣ ಶಿಕ್ಷೆಗೆ ಒಳಗಾಗಿರುವ ಗೌರವಾನ್ವಿತ ಬಾಲಗಂಗಾಧರ ತಿಲಕ್‌ರವರಿಗೆ ಕೊಟ್ಟಿರುವಷ್ಟು ಶಿಕ್ಷೆಯನ್ನು ನನಗೂ ವಿಧಿಸಿ ನನ್ನನ್ನು ಅವರ ಮಟ್ಟಕ್ಕೆ ಏರಿಸಿದ್ದೀರಿ ಅದಕ್ಕಾಗಿ ನಿಮಗೆ ವಂದನೆಗಳು ಎಂದರು ಗಾಂಧೀಜಿ.

ದೇಶದ್ರೋಹ

ಅಂದಿನ ಬ್ರಿಟಿಷ್ ಸರ್ಕಾರ ತನ್ನ ಮೇಲೆ ಯಾವುದೇ ಭಿನ್ನಾಭಿಪ್ರಾಯ ಸೂಚಿಸಿದರೂ ಅದನ್ನು ರಾಜದ್ರೋಹ ಎಂದು ಭಾವಿಸುತ್ತಿತ್ತು. ಪ್ರತಿರೋಧ ತೋರಿಸುವ ಯಾವುದೇ ಕಾರ್ಯಕ್ರಮವನ್ನು ರಾಜದ್ರೋಹ ಎಂದು ಭಾವಿಸುತ್ತಿತ್ತು. ಸರ್ಕಾರದ ನೀತಿಯನ್ನು ಖಂಡಿಸಿ ಸಭೆ ನಡೆಸುವುದು ಅಥವಾ ಮೆರವಣಿಗೆ ತೆರಳುವುದು ರಾಜದ್ರೋಹದ ಕೆಲಸ ಎಂದು ಬ್ರಿಟಿಷ್ ಸರ್ಕಾರ ಭಾವಿಸುತ್ತಿತ್ತು. ಸರ್ಕಾರದ ಬಗೆಗೆ ಕೋಪ-ದ್ವೇಷ ಮೂಡಿಸುವುದೂ ರಾಜದ್ರೋಹವೆನಿಸಿತ್ತು. ಈ ಕಾನೂನನ್ನೇ ಬ್ರಿಟಿಷರು ಬಾಲಗಂಗಾಧರ ತಿಲಕ್, ಅನಿಬೆಸೆಂಟ್, ಮೌಲಾನ ಅಬ್ದುಲ್ ಕಲಾಂ ಅಜಾದ್, ಅಲಿ ಸಹೋದರರು ಈ ಎಲ್ಲರ ಮೇಲೆ ಹೇರಿತ್ತು. ಮುಕ್ತ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಕಸಿಯಲು ಸರ್ಕಾರ ತೊಡಗುವುದು ಪ್ರಜೆಯ ಮೂಲಭೂತ ಹಕ್ಕನ್ನು ಕಸಿದಂತೆ. ಈ ಬರ್ಬರ ರಾಜದ್ರೋಹ ಕಾನೂನು ನಮ್ಮ ರಾಜ್ಯಾಂಗದ ಆಶಯಗಳಿಗೆ ಕಂಟಕಪ್ರಾಯ.

ರಾಜ್ಯಾಂಗ ಸಭೆಯಲ್ಲಿ ಕೆ.ಎಂ ಮುನ್ಷಿಯವರು, ರಾಜ್ಯಾಂಗದಲ್ಲಿ ನುಸುಳಿದ ರಾಜದ್ರ್ರೋಹದ ಕಲಂ ಅನ್ನು ಕೈಬಿಡಬೇಕೆಂದು ತಿದ್ದುಪಡಿ ಸೂಚಿಸಿದರು. ಈ ತಿದ್ದುಪಡಿಗೆ ಅನುಮೋದನೆ ದೊರೆಯಿತಾದರೂ, ದೇಶದ ಭದ್ರತೆ ಮತ್ತು ಅಖಂಡತೆಯನ್ನು ಕಾಪಾಡುವ ದೃಷ್ಟಿಯಿಂದ ಕೆಲವು ಕ್ಲಾಸ್‌ಗಳನ್ನು ಉಳಿಸಿಕೊಳ್ಳಲಾಯಿತು. ಹೀಗಾಗಿ ರಾಜದ್ರೋಹದ ಕಾನೂನು ಕೆಲವು ಬದಲಾವಣೆಗಳೊಂದಿಗೆ ಹಾಗೇ ಉಳಿದುಹೋಯಿತು.

ರಾಜದ್ರೋಹ ಕಾನೂನಿನ ದುರ್ಬಳಕೆಯಿಂದ ಅನೇಕರ ಜೀವನ ಹಾಳಾಯಿತು. ರಾಜದ್ರೋಹ ಆಪಾದನೆಯಲ್ಲಿ ವಿಚಾರಣೆಯಾಗುತ್ತಿದ್ದು, 2019ನೆ ಇಸವಿಯಲ್ಲಿ ಬಾಕಿ ಇದ್ದ ಕೇಸುಗಳ ಶೇ 9ರಷ್ಟರಲ್ಲಿ ಖಟ್ಳೆಗಳನ್ನು ಕೈಬಿಡಲಾಯಿತು. ಕಾರಣ: ಸಾಕ್ಷ್ಯಾಧಾರಗಳ ಕೊರತೆ ಅಥವಾ ತಪ್ಪಿತಸ್ಥರ ಪರಾರಿಯಾಗಿದ್ದರಿಂದ! 2014ರ ನಂತರ ಸರ್ಕಾರ ನಡೆಸುವವರನ್ನು ಟೀಕೆ ಮಾಡಿದ್ದಕ್ಕಾಗಿ, ಮೋದಿ ಮುಂತಾದ ನಾಯಕರನ್ನು ಟೀಕೆ ಮಾಡಿದ್ದಕ್ಕಾಗಿ ನೂರಾರು ಜನರ ಮೇಲೆ ಕೇಸು ದಾಖಲಾಗಿವೆ.

ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ರಾಜದ್ರೋಹ ಆಪಾದನೆ ಹೊರೆಸುವುದರಲ್ಲಿ ಬಹಳ ಮುಂದಿದ್ದಾರೆ. ಕಳೆದ 4 ವರ್ಷಗಳಲ್ಲಿ ನಾಗರಿಕ (ತಿದ್ದುಪಡಿಯಾದ 2019) ಮಸೂದೆ ವಿರುದ್ಧ ಸೊಲ್ಲೆತ್ತಿದ 90 ಜನರ ಮೇಲೆ ರಾಜದ್ರೋಹ ಆಪಾದನೆ ಖಟ್ಳೆ ಹಾಕಿದ್ದಾರೆ. ಕಾರಣವಿಲ್ಲದೆ ಅವರ ಬಾಯಿ ಮುಚ್ಚಿಸಲು ರಾಜದ್ರೋಹ ಆಪಾದನೆಯನ್ನು ಅವರ ಮೇಲೆ ಹೊರಿಸಲಾಗಿದೆ.

ಸರ್ಕಾರಗಳು ಅನೇಕರ ಮೇಲೆ ರಾಜದ್ರೋಹ ಆಪಾದನೆ ಹೊರಿಸಿ ಸೆರೆಮನೆಗೆ ಕಳುಹಿಸುತ್ತಿರುವುದನ್ನು ಸರ್ವೋಚ್ಚ ನ್ಯಾಯಾಲಯ ಪ್ರಶ್ನಿಸಿದೆ. ದೇಶದ ಇತರ ಭಾಗಗಳಲ್ಲಿರುವ ಅಧೀನ ನ್ಯಾಯಾಲಯಗಳು ರಾಜದ್ರೋಹ ಹೇರುತ್ತಿರುವ ಸರ್ಕಾರದ ಆತುರದ ಕ್ರಮಗಳನ್ನು ಪ್ರಶ್ನಿಸಲು ತೊಡಗಿವೆ. ಅಪಾಯಕಾರಿ ಐಡಿಯಾಲಜಿಗಳು ಭಾರತದ ಐಕ್ಯತೆ ಮತ್ತು ಸಾರ್ವಭೌಮತ್ವವನ್ನು ಅಲ್ಲಗಳೆಯುತ್ತಿವೆ ಎಂದು ಮೋದಿ ಹರಿಹಾಯ್ದಿದ್ದಾರೆ. ಈ ಬಗೆಯ ಹೇಳಿಕೆ ಕೊಡುವ ಬದಲು ಮೋದಿಯವರು ತಮ್ಮ ಗೆಯ್ಮೆ ಸರಿಯೇ ಎಂದು ಆತ್ಮವಿಮರ್ಶೆ ಮಾಡಿಕೊಳ್ಳಬೇಕು.


ಇದನ್ನೂ ಓದಿ: ಸರ್ಕಾರದಿಂದ ದೇಶದ್ರೋಹ ಕಾನೂನು ದುರುಪಯೋಗ, ಅದನ್ನು ರದ್ದುಗೊಳಿಸಬೇಕು : ನಿವೃತ್ತ ಸುಪ್ರೀಂ ನ್ಯಾಯಾಧೀಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...